Just In
- 8 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 9 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 11 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 11 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಸ್ಪತ್ರೆ ಆವರಣದಲ್ಲಿ ಸಿಗರೇಟ್ ಸೇವನೆ- ಪ್ರಶ್ನಿಸಿದ ಯುವಕನ ಮೇಲೆ ಕಾರು ಹರಿಸಿ ಕೊಲೆ.!!
ಮಧ್ಯಸೇವನೆ ಮಾಡಿ ಆಸ್ಪತ್ರೆಯ ಆವರಣದಲ್ಲಿ ಧೂಮಪಾನ ಮಾಡುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ 21 ವರ್ಷದ ಯುವಕನನ್ನು ಕಾರು ಹರಿಸಿ ಹತ್ಯೆ ಮಾಡಿರುವ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದ್ದು, ಘಟನೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.
ಮಧ್ಯಸೇವನೆ ಮಾಡಿ ಆಸ್ಪತ್ರೆಯ ಆವರಣದಲ್ಲಿ ಧೂಮಪಾನ ಮಾಡುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ್ದಕ್ಕೆ 21 ವರ್ಷದ ಯುವಕನನ್ನು ಕಾರು ಹರಿಸಿ ಹತ್ಯೆ ಮಾಡಿರುವ ಘಟನೆ ರಾಜಧಾನಿ ದೆಹಲಿಯಲ್ಲಿ ನಡೆದಿದ್ದು, ಘಟನೆಯ ಪೂರ್ಣ ಮಾಹಿತಿ ಇಲ್ಲಿದೆ ಓದಿ.
ಆತನಿಗೆ ಇನ್ನು 21 ವರ್ಷ. ಹೆಸರು ಗುರ್ಪ್ರೀತ್ ಸಿಂಗ್. ಮೂಲತಃ ಪಂಜಾಬ್ ರಾಜ್ಯದಿಂದ ಬಂದಿದ್ದ ಆ ಯುವಕ ಓದಿನ ಜೊತೆ ಪ್ರತಿಷ್ಠಿತ ಆಸ್ಪತ್ರೆಯೊಂದರಲ್ಲಿ ಅರೆಕಾಲಿಕ ಉದ್ಯೋಗಿ ಕಾರ್ಯನಿರ್ವಹಿಸುತ್ತಿದ್ದು. ಆದ್ರೆ ಆತ ಕೆಲಸ ಮಾಡುತ್ತಿದ್ದ ಆಸ್ಪತ್ರೆ ಆವರಣದಲ್ಲಿ ಸಿಗರೇಟು ಸೇವನೆ ಮಾಡುತ್ತಿದ್ದ ವ್ಯಕ್ತಿಯನ್ನು ಪ್ರಶ್ನಿಸಿದ್ದೇ ತಪ್ಪಾಗಿ ಹೊಯ್ತು.
ಇದು ಆಸ್ಪತ್ರೆ ಆವರಣ. ಇಲ್ಲಿ ಸಿಗರೇಟು ಸೇವೆನೆ ಮಾಡುವುದು ಅಪರಾಧ. ಹೀಗಂತಾ ಸಿಗರೇಟು ಸೇದುತ್ತಿದ್ದ ವ್ಯಕ್ತಿಗೆ ಗುಪ್ರೀರ್ತ್ ಸಿಂಗ್ ಬುದ್ಧಿವಾದ ಹೇಳಿದ್ದ. ಆದ್ರೆ ವೃತ್ತಿಯಲ್ಲಿ ವಕೀಲನಾಗಿದ್ದ ಆ ವ್ಯಕ್ತಿ ಗುರ್ಪ್ರೀತ್ ಸಿಂಗ್ ಪ್ರಾಣವನ್ನೇ ತೆಗೆದುಬಿಟ್ಟಿದ್ದಾನೆ.
Recommended Video
ಈ ಘಟನೆಗೂ ಮುನ್ನ ಸಿಗರೇಟು ಸೇವನೆ ವಿಚಾರಕ್ಕೆ ಇಬ್ಬರ ಮಧ್ಯೆ ಜಗಳವಾಗಿದ್ದು, ಗುರ್ಪ್ರೀತ್ ಸಿಂಗ್ ಮಾತಿಗೆ ವಕೀಲ ಕುಪಿತಗೊಂಡಿದ್ದಾನೆ. ಈ ವೇಳೆ ವಕೀಲನ ವಿರುದ್ಧ ದೂರು ದಾಖಲಿಸಲು ಮುಂದಾಗುತ್ತಿದ್ದಂತೆ ರಾಯಲ್ ಎನ್ಫೀಲ್ಡ್ನಲ್ಲಿ ಚಲಿಸುತ್ತಿದ್ದ ಗುರ್ಪ್ರೀತ್ ಸಿಂಗ್ ಹಿಂಬದಿಯಿಂದ ಬಂದ ವಕೀಲ ವೇಗವಾಗಿ ಕಾರು ಗುದ್ದಿಸಿದ್ದಾನೆ.
ಕಾರು ಗುದ್ದಿದ ರಭಸಕ್ಕೆ ತೀವ್ರ ಗಾಯಗೊಂಡಿದ್ದ ಗುರ್ಪ್ರೀತ್ ಸಿಂಗ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಕಾರು ಗುದ್ಧಿಸಿ ಹತ್ಯೆ ಮಾಡಿದ ಆರೋಪಿ ರೋಹಿತ್ ಕೃಷ್ಣ ಮಹಾಂತ್ ಜೈಲು ಸೇರಿದ್ದಾನೆ.
ಇನ್ನು ಆರೋಪಿ ರೋಹಿತ್ ಕೃಷ್ಣ ಮಹಾಂತ್ ದೆಹಲಿಯ ಡಿಫೆನ್ಸ್ ಕಾಲೋನಿ ನಿವಾಸಿಯಾಗಿದ್ದು, ಅಸ್ಸಾಂ ಸರ್ಕಾರದ ಸ್ಥಾಯಿ ಕೌನ್ಸಿಲ್ನೊಂದಿಗೆ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಆದ್ರೆ ಸಾರ್ವಜನಿಕ ಸ್ಥಳದಲ್ಲಿ ಧೂಮಪಾನ ಮಾಡಿದ್ದಲ್ಲದೇ ಅಮಾಯಕ ವಿದ್ಯಾರ್ಥಿಯ ಜೀವವನ್ನೇ ಬಲಿತೆಗೆದುಕೊಂಡಿದ್ದಾನೆ.
ಸದ್ಯ ಐಪಿಸಿ ಸೆಕ್ಷನ್ 304, 279 ಮತ್ತು 277 ಅಡಿ ರೋಹಿತ್ ಕೃಷ್ಣ ಮಹಾಂತ್ ವಿರುದ್ಧ ಪ್ರಕರಣ ದಾಖಲಿಸಿ ತನಿಖೆ ಕೈಗೊಂಡಿರುವ ದೆಹಲಿ ಪೊಲೀಸರು, ಪ್ರಾಥಮಿಕ ತನಿಖೆ ವೇಳೆ ಆರೋಪಿ ವಕೀಲ ರೋಹಿತ್ ಕೃಷ್ಣ ಮಹಾಂತ್ ಅತಿಯಾದ ಡ್ರಗ್ಸ್ ಸೇವನೆ ಮಾಡಿದ್ದ ಎನ್ನಲಾಗಿದೆ.