Just In
- 1 hr ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 2 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 4 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 4 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- News ಚಿನ್ನದ ಬೆಲೆಯಲ್ಲಿ ಭರ್ಜರಿ ಏರಿಕೆ, ಕಾರಣ ಏನು?
- Movies Puttakkana Makkalu:ಸ್ನೇಹಾ ಕೈ ಸೇರಿಯೇ ಬಿಡ್ತು ವಿಚ್ಛೇದನದ ಪೇಪರ್; ಮುಂದೇನು?
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕುಡಿದ ಸೊಕ್ಕಿನಲ್ಲಿ ಯದ್ದಾತದ್ವಾ ಕಾರು ಚಾಲನೆ; 12 ರಿಕ್ಷಾಗಳಿಗೆ ಢಿಕ್ಕಿ, ಓರ್ವ ಬಲಿ
ನೆರೆಯ ಚೆನ್ನೈನಲ್ಲಿ ಮದ್ಯ ಸೇವಿಸಿ ಅಮಲೇರಿದ ಕಾನೂನು ವಿದ್ಯಾರ್ಥಿಯೊಬ್ಬ ಯದ್ದಾತದ್ವಾ ಕಾರು ಓಡಿಸಿರುವ ಪರಿಣಾಮ ಸಂಭವಿಸಿರುವ ಭೀಕರ ಅಪಘಾತದಲ್ಲಿ ಓರ್ವ ಆಟೋ ಚಾಲಕ ಮೃತಪಟ್ಟಿದ್ದಾರೆ. ಘಟನೆಯಲ್ಲಿ 12 ಆಟೋ ರಿಕ್ಷಾಗಳು ಜಖಂಗೊಂಡಿದೆ.
ಕುಡಿದ
ಅಮಲಿನಲ್ಲಿದ್ದ
ವಿದ್ಯಾರ್ಥಿ
ಪೋರ್ಷೆ
ಕಾರು
ಚಾಲನೆ
ಮಾಡುತ್ತಿದ್ದರು.
ಕಾರಿನ
ನಿಯಂತ್ರಣ
ತಪ್ಪಿದ್ದರ
ಪರಿಣಾಮ
ರಸ್ತೆ
ಬದಿಯಲ್ಲಿ
ನಿಲುಗಡೆಗೊಳಿಸಲಾಗಿದ್ದ
ಆಟೋ
ರಿಕ್ಷಾಗಳಿಗೆ
ಢಿಕ್ಕಿ
ಹೊಡೆದಿತ್ತು.
ಸೋಮವಾರ ಬೆಳಗ್ಗಿನ ಜಾವ 3.30ರ ಹೊತ್ತಿಗೆ ಪಾರ್ಟಿ ಮುಗಿಸಿ ಮನೆಗೆ ಹಿಂತಿರುಗುತ್ತಿದ್ದ ಟಿ.ನಗರ ನಿವಾಸಿ ಹಾಗೂ ಕಾನೂನು ವಿದ್ಯಾರ್ಥಿಯಾಗಿರುವ ವಿಕಾಸ್ ವಿಜಯಾನಂದ ಅನಿಯಮಿತ ವೇಗದಲ್ಲಿ ವಾಹನ ಚಾಲನೆ ಮಾಡಿದ್ದರು.
ನಿಯಂತ್ರಣ ತಪ್ಪಿದ ಕಾರು ರಸ್ತೆ ಬದಿಯಲ್ಲಿ ನಿಲುಗಡೆಗೊಳಿಸಿದ್ದ 12 ಆಟೋ ರಿಕ್ಷಾಗಳಿಗೆ ಢಿಕ್ಕಿ ಹೊಡೆದಿತ್ತು. ಪರಿಣಾಮ ಓರ್ವ ಆಟೋ ಚಾಲಕ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿದ್ದಾರೆ.
ಚೆನ್ನೈನ ಕೆಥೆಡ್ರಾಲ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ವಿಜಯಾನಂದ ಚಾಲನೆ ಮಾಡುತ್ತಿದ್ದ ನೀಲಿ ಬಣ್ಣದ ಪೋರ್ಷೆ ಕಾರು ಸಂಪೂರ್ಣವಾಗಿ ನಜ್ಜುಗುಜ್ಜಾಗಿದೆ.
ಮೃತಪಟ್ಟವರು 29 ಹರೆಯದ ಜಿ ಅರ್ಮುಗಮ್ ಎಂದು ಗುರುತಿಸಲಾಗಿದೆ. ಶ್ರೀಮಂತ ಮನೆಯ ಇಂತಹ ಕೆಟ್ಟ ಚಟಗಳಿಗೆ ಜನ ಸಾಮಾನ್ಯರು ಬಲಿಯಾಗುತ್ತಿರುವುದರ ಬಗ್ಗೆ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮುಂಜಾವಿನ ಹೊತ್ತು ಆಗಿರುವುದರಿಂದ ಚಾಲಕರು ಆಟೋದಲ್ಲಿಯೇ ನಿದ್ರಿಸುತ್ತಿದ್ದರು. ಅಂಬುಲೆನ್ಸ್ 20 ನಿಮಿಷಗಳಷ್ಟು ತಡವಾಗಿಯಷ್ಟೇ ಸ್ಥಳಾಕ್ಕಾಗಮಿಸಿತ್ತು.
ಈ ಸಂಬಂಧ ಓದುಗರ ಅನಿಸಿಕೆಗಳನ್ನು ನಮ್ಮ ಜೊತೆ ಹಂಚಿಕೊಳ್ಳಲು ಮರೆಯದಿರಿ.