Just In
- 7 hrs ago ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- 8 hrs ago ಭಾರತದ ನಂ.1 ಕಾರು... ದಾಖಲೆಯ ಮಾರಾಟ... 5.5 ಲಕ್ಷ ಬೆಲೆ... 34 ಕಿ.ಮೀ ಮೈಲೇಜ್
- 8 hrs ago ಈ ಹ್ಯುಂಡೈ ಕಾರಿಗೆ ಭಾರತದಲ್ಲಿ ಭರ್ಜರಿ ಬೇಡಿಕೆ: ಇದು ನಿಮಗೆ ಬೇಕು ಅಂದ್ರೆ ಕಾಯಲೇಬೇಕು!
- 9 hrs ago ಈ ತಿಂಗಳಲ್ಲಿ ಕೈಗೆಟಕುವ ಬೆಲೆಯ ಎಸ್ಯುವಿಗಳು: ಮಿಸ್ ಮಾಡಬೇಡಿ, ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
Don't Miss!
- Movies 'ಹಿಟ್ಲರ್ ಕಲ್ಯಾಣ' ಧಾರಾವಾಹಿ ಅಂತ್ಯ: ಪ್ರೋತ್ಸಾಹ ನೀಡಿದ ವೀಕ್ಷಕರಿಗೆ ಧನ್ಯವಾದ ಎಂದ ನಟಿ ರಜಿನಿ
- News ರಾತ್ರೋ ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ವಿ.ಶ್ರೀನಿವಾಸ ಪ್ರಸಾದ್ ಅಳಿಯ ಏನು ಹೇಳಿದ್ರು ಗೊತ್ತಾ?
- Sports IPL 2024: ಮುಂಬೈ ಇಂಡಿಯನ್ಸ್ ತಂಡ ಸೇರಿದ ಮಾಜಿ ನಾಯಕ: ಹಾಲಿ ನಾಯಕನ ಆತಂಕ ದೂರ
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಟೋ ಸ್ಪೋಟಗೊಂಡು ದುರಂತ ಅಂತ್ಯಕಂಡ ರಿಕ್ಷಾ ಚಾಲಕ
ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಹೆಚ್ಚಿಸಲು ಕೇಂದ್ರ ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ. ಪ್ರಧಾನ ಮಂತ್ರಿ ನರೇಂದ್ರ ಮೋದಿರವರು ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಹೆಚ್ಚು ಒಲವು ಹೊಂದಿದ್ದಾರೆ. ಎಲೆಕ್ಟ್ರಿಕ್ ವಾಹನಗಳ ಬಳಕೆಯಿಂದಾಗಿ ವಾಯುಮಾಲಿನ್ಯವು ಕಡಿಮೆಯಾಗುವುದರ ಜೊತೆಗೆ ಕಚ್ಚಾ ತೈಲ ಆಮದು ಕೂಡ ಕಡಿಮೆಯಾಗಲಿದೆ.
ಇದರಿಂದ ಭಾರತದ ಆರ್ಥಿಕತೆಗೂ ಹೆಚ್ಚಿನ ಪ್ರಯೋಜನವಾಗಲಿದೆ. ಈ ಎಲ್ಲಾ ಕಾರಣಗಳಿಗಾಗಿ ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಬಳಕೆಯನ್ನು ಉತ್ತೇಜಿಸುತ್ತಿದೆ. ಆದರೆ ಪೆಟ್ರೋಲ್ ಹಾಗೂ ಡೀಸೆಲ್ ಬಂಕ್ ಗಳು ಎಲ್ಲೆಡೆ ಇರುವಂತೆ ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳು ಇಲ್ಲದಿರುವ ಕಾರಣಕ್ಕೆ ಜನರು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಹಿಂದೇಟು ಹಾಕುತ್ತಿದ್ದಾರೆ.
ಎಲೆಕ್ಟ್ರಿಕ್ ವಾಹನಗಳ ಬಗ್ಗೆ ಜನರಿಗೆ ಇರುವ ಮತ್ತೊಂದು ಸಮಸ್ಯೆ ಎಂದರೆ ಅವುಗಳ ಸುರಕ್ಷತೆ. ಎಲೆಕ್ಟ್ರಿಕ್ ವಾಹನಗಳು ಕೆಲವೊಮ್ಮೆ ಸುಟ್ಟುಹೋಗುತ್ತವೆ. ಈ ಬಗ್ಗೆ ಆಗಾಗ್ಗೆ ಸುದ್ದಿಗಳು ಪ್ರಕಟವಾಗುತ್ತಿರುತ್ತವೆ. ಇದರಿಂದಾಗಿ ಜನರು ಎಲೆಕ್ಟ್ರಿಕ್ ವಾಹನಗಳ ಸುರಕ್ಷತೆಯ ಬಗ್ಗೆ ಚಿಂತಿತರಾಗಿದ್ದಾರೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಪಶ್ಚಿಮ ಬಂಗಾಳದಲ್ಲಿ ದುರಂತವೊಂದು ಸಂಭವಿಸಿದೆ. ಈ ಘಟನೆಯಲ್ಲಿ ಎಲೆಕ್ಟ್ರಿಕ್ ರಿಕ್ಷಾ ಸ್ಫೋಟಗೊಂಡು ಅದರ ಚಾಲಕ ಮೃತಪಟ್ಟಿದ್ದಾನೆ. ಈ ಘಟನೆ ಪಶ್ಚಿಮ ಬಂಗಾಳದ ಮಾಲ್ಟಾ ಜಿಲ್ಲೆಯಲ್ಲಿ ನಡೆದಿದೆ. ಮೃತ ಎಲೆಕ್ಟ್ರಿಕ್ ರಿಕ್ಷಾ ಚಾಲಕನ ವಯಸ್ಸು ಕೇವಲ 26 ವರ್ಷ.
ಮಾಲ್ಟಾದ ಇಂಗ್ಲಿಷ್ ಬಜಾರ್ನ ಕೊರಪ್ಪಿರ್-ಕೃಷ್ಣಪ್ಪಳ್ಳಿ ರಸ್ತೆಯಲ್ಲಿ ಸಂಚರಿಸುವ ವೇಳೆ ಎಲೆಕ್ಟ್ರಿಕ್ ರಿಕ್ಷಾ ಇದ್ದಕ್ಕಿದ್ದಂತೆ ಸ್ಫೋಟಗೊಂಡಿದೆ. ಈ ಘಟನೆ ಜುಲೈ 1ರಂದು ನಡೆದಿದೆ. ಎಲೆಕ್ಟ್ರಿಕ್ ರಿಕ್ಷಾದ ಚಾಲಕ ಮೊಹಮ್ಮದ್ ಇಲಿಯಾಸ್ ಈ ಭೀಕರ ಅಪಘಾತದಲ್ಲಿ ದುರಂತ ಸಾವನ್ನಪ್ಪಿದ್ದಾನೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಘಟನೆಯ ಬಗ್ಗೆ ತನಿಖೆ ನಡೆಸಿದ ಅಧಿಕಾರಿಗಳು ವಿದ್ಯುತ್ ರಿಕ್ಷಾದ 4 ಬ್ಯಾಟರಿಗಳಲ್ಲಿ 2 ಬ್ಯಾಟರಿಗಳು ಸ್ಫೋಟಗೊಂಡಿರುವುದಾಗಿ ತಿಳಿಸಿದ್ದಾರೆ. ಎಲೆಕ್ಟ್ರಿಕ್ ರಿಕ್ಷಾ ಸ್ಫೋಟಗೊಂಡ ನಂತರ ಜನರು ಹೊರಗೆ ಓಡಿಬಂದಿದ್ದು, ಸ್ಥಳದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಎಲೆಕ್ಟ್ರಿಕ್ ವಾಹನಗಳು ಸ್ಫೋಟಗೊಂಡು ಸಿಡಿಯುತ್ತಿರುವುದು ಇದೇ ಮೊದಲಲ್ಲ. ವಿಶ್ವದ ಅನೇಕ ಭಾಗಗಳಲ್ಲಿ ಎಲೆಕ್ಟ್ರಿಕ್ ಕಾರುಗಳು ಹಾಗೂ ಎಲೆಕ್ಟ್ರಿಕ್ ದ್ವಿಚಕ್ರ ವಾಹನಗಳು ಇದೇ ರೀತಿ ಸ್ಫೋಟಗೊಂಡಿವೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ಈ ಘಟನೆಯ ಹಿಂದೆ ಪಿತೂರಿ ನಡೆದಿದೆ ಎಂಬ ಅನುಮಾನಗಳಿದ್ದು, ಉತ್ತರ ಮಾಲ್ಟಾದ ಬಿಜೆಪಿ ಸಂಸದ ಕಾಗನ್ ಮುರ್ಮು ಘಟನೆಯ ಬಗ್ಗೆ ತನಿಖೆ ನಡೆಸುವಂತೆ ಎನ್ಐಎಯನ್ನು ಒತ್ತಾಯಿಸಿದ್ದಾರೆ. ವರದಿಗಳ ಪ್ರಕಾರ, ಎನ್ಐಎ ಅಧಿಕಾರಿಗಳು ತನಿಖೆಯನ್ನು ಆರಂಭಿಸಿದ್ದಾರೆ.
ಸೂಚನೆ: ಈ ಚಿತ್ರಗಳನ್ನು ರೆಫರೆನ್ಸ್ ಗಾಗಿ ಬಳಸಲಾಗಿದೆ.