ವಾಹನವನ್ನು ವಶಕ್ಕೆ ಪಡೆದ ಪೊಲೀಸರ ವಿರುದ್ಧ ಸೇಡು ತೀರಿಸಿಕೊಂಡ ವಿದ್ಯುತ್ ಸರಬರಾಜು ಮಂಡಳಿ ನೌಕರ

ಕುಮಪಟ್ಟಿ ಪೊಲೀಸ್ ಠಾಣೆ ತಮಿಳುನಾಡಿನ ವಿರುಧುನಗರ ಜಿಲ್ಲೆಯ ಶ್ರೀವಿಲ್ಲಿಪುಥೂರ್ ಬಳಿ ಇದೆ. ಇಲ್ಲಿನ ಪೊಲೀಸ್ ಠಾಣೆಯ ಸಬ್ ಇನ್ಸ್‌ಪೆಕ್ಟರ್ ಇತ್ತೀಚೆಗೆ ವಾಹನಗಳ ತಪಾಸಣೆ ನಡೆಸುತ್ತಿದ್ದರು. ಆಗ ಅಲ್ಲಿಗೆ ಬಂದ ದ್ವಿಚಕ್ರ ವಾಹನವೊಂದನ್ನು ತಡೆದು ತಪಾಸಣೆ ನಡೆಸಿದ್ದರು.

ವಾಹನವನ್ನು ವಶಕ್ಕೆ ಪಡೆದ ಪೊಲೀಸರ ವಿರುದ್ಧ ಸೇಡು ತೀರಿಸಿಕೊಂಡ ವಿದ್ಯುತ್ ಸರಬರಾಜು ಮಂಡಳಿ ನೌಕರ

ಈ ವಾಹನವನ್ನು ವಿದ್ಯುತ್ ಸರಬರಾಜು ಮಂಡಳಿಯಲ್ಲಿ ಕೆಲಸ ಮಾಡುವ ಸೈಮನ್ ಎಂಬಾತ ಚಾಲನೆ ಮಾಡುತ್ತಿದ್ದ. ಈ ದ್ವಿಚಕ್ರ ವಾಹನದಲ್ಲಿ ಮೂವರು ಪ್ರಯಾಣಿಸುತ್ತಿದ್ದ ಕಾರಣಕ್ಕೆ ಸಬ್ ಇನ್ಸ್‌ಪೆಕ್ಟರ್ ವಾಹನವನ್ನು ತಡೆದು ಸಂಬಂಧಪಟ್ಟ ದಾಖಲೆಗಳನ್ನು ತೋರಿಸುವಂತೆ ಕೇಳಿದ್ದಾರೆ. ಆದರೆ ಸೈಮನ್ ಯಾವುದೇ ದಾಖಲೆಗಳನ್ನು ತೋರಿಸಿಲ್ಲ. ಈ ಕಾರಣಕ್ಕೆ ಸಬ್ ಇನ್ಸ್‌ಪೆಕ್ಟರ್ ದ್ವಿಚಕ್ರ ವಾಹನವನ್ನು ವಶಕ್ಕೆ ಪಡೆದಿದ್ದಾರೆ.

ವಾಹನವನ್ನು ವಶಕ್ಕೆ ಪಡೆದ ಪೊಲೀಸರ ವಿರುದ್ಧ ಸೇಡು ತೀರಿಸಿಕೊಂಡ ವಿದ್ಯುತ್ ಸರಬರಾಜು ಮಂಡಳಿ ನೌಕರ

ಸೈಮನ್ ಪೊಲೀಸರ ಈ ಕ್ರಮದ ಬಗ್ಗೆ ತನ್ನ ಮೇಲಧಿಕಾರಿಗಳಿಗೆ ದೂರು ನೀಡಿದ್ದಾನೆ. ಆತನ ಮೇಲಾಧಿಕಾರಿಗಳು ಕುಮಪಟ್ಟಿ ಪೊಲೀಸ್ ಠಾಣೆಯ ವಿದ್ಯುತ್ ಸರಬರಾಜನ್ನು ಕಡಿತಗೊಳಿಸುವಂತೆ ಸೂಚಿಸಿದ್ದಾರೆ.

MOSTREAD: ಮದುವೆ ಉಂಗುರದ ಶೋಧಕ್ಕಾಗಿ ಚೆಲ್ಲಾಪಿಲ್ಲಿಯಾದ ಕಾರಿನ ಇಂಟಿರಿಯರ್

ವಾಹನವನ್ನು ವಶಕ್ಕೆ ಪಡೆದ ಪೊಲೀಸರ ವಿರುದ್ಧ ಸೇಡು ತೀರಿಸಿಕೊಂಡ ವಿದ್ಯುತ್ ಸರಬರಾಜು ಮಂಡಳಿ ನೌಕರ

ಇದರಿಂದಾಗಿ ಕುಮಪಟ್ಟಿ ಪೊಲೀಸ್ ಠಾಣೆಯು ವಿದ್ಯುತ್ ಸರಬರಾಜು ಇಲ್ಲದೇ ಸುಮಾರು 2 ಗಂಟೆಗಳ ಕಾಲ ಕತ್ತಲಲ್ಲಿ ಇರುವಂತಾಗಿತ್ತು. 2 ಗಂಟೆಗಳ ನಂತರ ಮತ್ತೆ ವಿದ್ಯುತ್ ಸರಬರಾಜು ನೀಡಲಾಯಿತು. ಈ ಘಟನೆಯ ಬಗ್ಗೆ ಎಎಸ್ ಪಿ ರವರು ಎಸ್ ಪಿ ರವರಿಗೆ ದೂರು ಸಲ್ಲಿಸಿದ್ದಾರೆ.

ವಾಹನವನ್ನು ವಶಕ್ಕೆ ಪಡೆದ ಪೊಲೀಸರ ವಿರುದ್ಧ ಸೇಡು ತೀರಿಸಿಕೊಂಡ ವಿದ್ಯುತ್ ಸರಬರಾಜು ಮಂಡಳಿ ನೌಕರ

ಎಸ್ ಪಿರವರು ಈ ಘಟನೆಯ ತನಿಖೆಯನ್ನು ಆರಂಭಿಸಿದ್ದಾರೆ. ಈ ಘಟನೆಯಿಂದಾಗಿ ಪೊಲೀಸ್ ಇಲಾಖೆ ಹಾಗೂ ವಿದ್ಯುತ್ ಇಲಾಖೆ ನೌಕರರ ನಡುವೆ ಸಂಘರ್ಷವೇರ್ಪಟ್ಟಿದೆ. ಮೂರು ಜನರು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುವುದು ಕಾನೂನುಬಾಹಿರವಾಗಿದೆ. ಇದು ಅಪಘಾತದ ಸಾಧ್ಯತೆಯನ್ನು ಹೆಚ್ಚಿಸುತ್ತದೆ.

MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್

ವಾಹನವನ್ನು ವಶಕ್ಕೆ ಪಡೆದ ಪೊಲೀಸರ ವಿರುದ್ಧ ಸೇಡು ತೀರಿಸಿಕೊಂಡ ವಿದ್ಯುತ್ ಸರಬರಾಜು ಮಂಡಳಿ ನೌಕರ

ಕರೋನಾ ವೈರಸ್ ವೇಗವಾಗಿ ಹರಡುತ್ತಿರುವ ಈ ಸಂದರ್ಭದಲ್ಲಿ ಮೂರು ಜನರು ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸಿದರೆ ಅಪಾಯದ ಸಾಧ್ಯತೆಗಳು ಹೆಚ್ಚು. ಇದನ್ನು ಪ್ರಶ್ನಿಸಿದ ಪೊಲೀಸರ ವಿರುದ್ಧವೇ ಸೇಡು ತೀರಿಸಿಕೊಳ್ಳಲು ಮುಂದಾಗಿರುವುದು ಸರಿಯಲ್ಲ.

ವಾಹನವನ್ನು ವಶಕ್ಕೆ ಪಡೆದ ಪೊಲೀಸರ ವಿರುದ್ಧ ಸೇಡು ತೀರಿಸಿಕೊಂಡ ವಿದ್ಯುತ್ ಸರಬರಾಜು ಮಂಡಳಿ ನೌಕರ

ನ್ಯೂಸ್ 7 ತಮಿಳು ಈ ಕುರಿತು ವರದಿ ಮಾಡಿದೆ. ವಿದ್ಯುತ್ ಸರಬರಾಜು ಮಂಡಳಿಯ ಸಿಬ್ಬಂದಿ ಪೊಲೀಸ್ ಅಧಿಕಾರಿಗಳ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳುತ್ತಿರುವುದು ಇದೇ ಮೊದಲಲ್ಲ. ಇದೇ ರೀತಿಯ ಘಟನೆ 2019ರಲ್ಲಿ ಉತ್ತರಪ್ರದೇಶದಲ್ಲಿ ನಡೆದಿತ್ತು. ಹೆಲ್ಮೆಟ್ ಧರಿಸದ ಕಾರಣ ವಿದ್ಯುತ್ ಸರಬರಾಜು ಮಂಡಳಿಯ ಉದ್ಯೋಗಿಗೆ ಪೊಲೀಸರು ದಂಡ ವಿಧಿಸಿದ್ದರು.

MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು

ವಾಹನವನ್ನು ವಶಕ್ಕೆ ಪಡೆದ ಪೊಲೀಸರ ವಿರುದ್ಧ ಸೇಡು ತೀರಿಸಿಕೊಂಡ ವಿದ್ಯುತ್ ಸರಬರಾಜು ಮಂಡಳಿ ನೌಕರ

ಇದಕ್ಕೆ ಪ್ರತೀಕಾರವಾಗಿ ವಿದ್ಯುತ್ ಸರಬರಾಜು ಮಂಡಳಿಯ ನೌಕರರು ಪೊಲೀಸ್ ಠಾಣೆಗೆ ಸುಮಾರು 4 ಗಂಟೆಗಳ ಕಾಲ ವಿದ್ಯುತ್ ಸರಬರಾಜನ್ನು ಕಡಿತಗೊಳಿಸಿದ್ದರು. ಇದರ ಜೊತೆಗೆ ಸಂಬಂಧಪಟ್ಟ ಪೊಲೀಸ್ ಠಾಣೆ ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿತ್ತು. ಸರ್ಕಾರಿ ನೌಕರರ ನಡುವೆ ಸಂಭವಿಸುವ ಈ ರೀತಿಯ ಘರ್ಷಣೆಗಳು ಜನರಿಗೆ ಆಘಾತವನ್ನುಂಟು ಮಾಡುತ್ತಿವೆ.

Article Published On: Monday, August 31, 2020, 17:46 [IST]
English summary
Electricity board employee took revenge against police. Read in Kannada.
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+