Just In
- 12 min ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 31 min ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
- 1 hr ago Hero: ಮಧ್ಯಮ ವರ್ಗದವರ ನೆಚ್ಚಿನ ಬೈಕ್.. ರೂ.75 ಸಾವಿರ ಬೆಲೆ.. ಮೈಲೇಜ್ನಲ್ಲಿ ಸರಿ ಸಾಟಿಯಿಲ್ಲ!
- 1 hr ago Hyundai: ಹ್ಯುಂಡೈ ಎಕ್ಸ್ಟರ್ ಮೊದಲ ಅಪಘಾತ: ಮುಗಿಬಿದ್ದು ಖರೀದಿಸಿದವರು ಇದನ್ನೊಮ್ಮೆ ನೋಡಿ
Don't Miss!
- News ಮಳೆ.. ಮಳೆ.. ಭರ್ಜರಿ ಮಳೆ.. ಬೇಸಿಗೆಯಲ್ಲೂ ಮಳೆ!
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Sports ಟಿ20 ವಿಶ್ವಕಪ್ಗೆ 15 ಸದಸ್ಯರ ಭಾರತ ತಂಡದ ಆಯ್ಕೆ ಮಾಡಿದ ಇರ್ಫಾನ್ ಪಠಾಣ್; ಸಂಜು, ರಾಹುಲ್ಗೆ ಸ್ಥಾನವಿಲ್ಲ!
- Movies ಮದುವೆ ಆಗದೇ ಗರ್ಭಿಣಿಯಾಗಿದ್ರಾ ಮಾಧುರಿ ದಿಕ್ಷಿತ್? ವಿವಾದಾತ್ಮಕ ಟ್ವೀಟ್ಗೆ ಫ್ಯಾನ್ಸ್ ಆಕ್ರೋಶ!
- Lifestyle 3ನೇ ಬಾರಿ ಬಾಹ್ಯಾಕಾಶಕ್ಕೆ ಹಾರಲು ಮುಂದಾದ ಸುನೀತಾ ವಿಲಿಯಮ್ಸ್..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇನ್ಮುಂದೆ ಟ್ರಾಫಿಕ್ ಸಿಗ್ನಲ್ಗಳಲ್ಲಿ ಈ ತಪ್ಪು ಮಾಡಿದ್ರೆ 1 ಸಾವಿರ ದಂಡ ಖಾಯಂ..!!
ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿ ಮಾಡುತ್ತಿರುವ ಕೇಂದ್ರ ಸಾರಿಗೆ ಇಲಾಖೆಯು ಈ ಬಾರಿ ಹೊಸ ನಿಯಮ ಒಂದನ್ನು ಜಾರಿ ಮಾಡಲು ಮುಂದಾಗಿದೆ.
Recommended Video
ದೇಶದಲ್ಲಿ ಸಂಚಾರಿ ನಿಯಮ ಉಲ್ಲಂಘನೆಗಳನ್ನು ತಗ್ಗಿಸುವ ಉದ್ದೇಶದಿಂದ ಹಲವಾರು ಕಠಿಣ ಕ್ರಮಗಳನ್ನು ಜಾರಿಗೊಳಿಸಿದ್ದರು ಸಂಚಾರಿ ನಿಯಮಗಳ ಉಲ್ಲಂಘಿಸುವರರ ಸಂಖ್ಯೆ ಮಾತ್ರ ಕಡಿಮೆ ಆಗಿಲ್ಲ. ಹೀಗಾಗಿ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿ ಮಾಡುತ್ತಿರುವ ಕೇಂದ್ರ ಸಾರಿಗೆ ಇಲಾಖೆಯು ಈ ಬಾರಿ ಹೊಸ ನಿಯಮ ಒಂದನ್ನು ಜಾರಿ ಮಾಡಲು ಮುಂದಾಗಿದೆ.
ಕಳೆದ ವರ್ಷ ಮೇ ನಲ್ಲಿ 2016ರ ಮೋಟಾರ್ ವೆಹಿಕಲ್ ಆಕ್ಟ್ ಜಾರಿಗೊಳಿಸಿದ್ದ ಕೇಂದ್ರ ಸರ್ಕಾರವು ಸಂಚಾರಿ ನಿಯಮ ಉಲ್ಲಂಘನೆ ಮಾಡುವರರ ವಿರುದ್ಧ ಭಾರೀ ಪ್ರಮಾಣದ ದಂಡ ವಸೂಲಿ ಮಾಡಲಾಗುತ್ತಿದ್ದು, ಇದೀಗ ಮತ್ತೊಂದು ಕಠಿಣ ನಿಯಮ ಜಾರಿ ಮಾಡುವ ಮೂಲಕ ಟ್ರಾಫಿಕ್ ಸಿಗ್ನಲ್ಗಳಲ್ಲಿ ಕಾರು ಆಕ್ಸೆಸರಿ ಖರೀದಿಸುವವರನ್ನು ದಂಡಿಸಲು ಮುಂದಾಗಿದೆ.
ಹೀಗಾಗಿ ನೀವು ಇನ್ಮುಂದೆ ಟ್ರಾಫಿಕ್ ಸಿಗ್ನಲ್ಗಳಲ್ಲಿ ಚಿಲ್ಲರೆ ಮಾರಾಟಕ್ಕೆ ಲಭ್ಯವಿರುವ ಕಾರು ಆಕ್ಸೆಸರಿಗಳನ್ನು ಖರೀದಿಸುವುದು ಕೂಡಾ ಅಪರಾಧವಾಗಲಿದ್ದು, ಅಪ್ಪಿ ತಪ್ಪಿ ಖರೀದಿಸಿ ಸಿಕ್ಕಿಬಿದ್ರೆ ಬರೋಬ್ಬರಿ 1 ಸಾವಿರ ರೂಪಾಯಿ ದಂಡ ಕಟ್ಟಿಟ್ಟ ಬುತ್ತಿ.
ಇದರ ಜೊತೆಗೆ ಕಾರಿನ ಹಿಂಭಾಗ ಸೀಟುಗಳಲ್ಲಿ ಮಕ್ಕಳ ಮನರಂಜನೆಗಾಗಿ ಹಾಕಲಾಗುವ ಡಿವಿಡಿ ಸ್ಕ್ರೀನ್ಗಳು ಕೂಡಾ ಕಾನೂನು ಉಲ್ಲಂಘನೆಯಾಗಲಿದ್ದು, ಇವುಗಳಿಂದ ಅಪಘಾತಗಳು ಸಂಭವಿಸುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಹೊಸ ನಿಯಮಕ್ಕೆ ಕಾರಣ ಏನು?
ಕೇಂದ್ರ ಸಾರಿಗೆ ಇಲಾಖೆಯು ಹೊಸ ನಿಯಮ ಜಾರಿಗೆ ತರುತ್ತಿರುವುದರ ಹಿಂದೆ ಹಲವಾರು ಕಾರಣಗಳಿದ್ದು, ಟ್ರಾಫಿಕ್ ಸಿಗ್ನಲ್ಗಳಲ್ಲಿ ಉಂಟಾಗುವ ವಾಹನ ದಟ್ಟಣೆ ಮತ್ತು ಕೆಲವು ಅಪಘಾತ ಪ್ರಕರಣಗಳಿಗೆ ಕಾರು ಆಕ್ಸೆಸರಿಗಳನ್ನು ಖರೀದಿಸುವುದೇ ಕಾರಣ ಎನ್ನಲಾಗುತ್ತಿದೆ.
Trending On DriveSpark Kannada:
ಕಾನೂನು ಬಾಹಿರವಾಗಿ ಹ್ಯಾಂಡ್ಲಿಂಗ್ ಚಾರ್ಜ್- ಟಾಟಾ ಡೀಲರ್ಸ್ಗೆ ಕಾದಿತ್ತು ಶಾಕ್..!
ಕಾರಿಗೆ ಅಡ್ಡ ಬಂದ ಬಾಲಕಿ- ದುರಂತ ತಪ್ಪಿಸಲು ಹೋದ ನಿಸ್ಸಾನ್ ಜಿಟಿ ಆರ್ ಸೂಪರ್ ಕಾರು ಪೀಸ್ ಪೀಸ್
ಸದ್ಯ ರಾಜಧಾನಿ ದೆಹಲಿಯಲ್ಲಿ ಪ್ರಾಯೋಗಿಕವಾಗಿ ಈ ನಿಯಮವನ್ನು ಜಾರಿ ಮಾಡಲಾಗಿದ್ದು, ತದನಂತರ ದೇಶದ ಎಲ್ಲಾ ಪ್ರಮುಖ ನಗರಗಳಲ್ಲೂ ಈ ಕಠಿಣ ನಿಯಮ ಜಾರಿಗೆ ಬರಲಿದೆ.
ಈ ಬಗ್ಗೆ ದೆಹಲಿ ಸಂಚಾರಿ ವಿಭಾಗದ ಪೊಲೀಸ್ ಮಾಹಾನಿರ್ದೇಶಕರು ಮಾತನಾಡಿದ್ದು 'ಟ್ರಾಫಿಕ್ ಸಿಗ್ನಲ್ನಲ್ಲಿ ನಡೆಯುವ ಚಿಲ್ಲರೆ ವ್ಯಾಪಾರದಿಂದ ವಾಹನ ಸವಾರರಿಗೆ ಕಿರಿಕಿರಿ ಆಗುವುದಲ್ಲದೇ ರಸ್ತೆ ಮಧ್ಯೆ ವ್ಯಾಪಾರದಿಂದಾಗಿ ವಾಹನ ದಟ್ಟಣೆ ಕೂಡಾ ಆಗುತ್ತಿರುವುದು ಹೊಸ ಸಮಸ್ಯೆ ಸೃಷ್ಟಿಸುತ್ತಿದೆ' ಎಂದಿದ್ದಾರೆ.
ಇದೇ ಕಾರಣಕ್ಕೆ ಹೊಸ ನಿಯಮ ಜಾರಿ ಮಾಡಲಾಗುತ್ತಿದ್ದು, ಕಾರು ಆಕ್ಸೆಸರಿ ಖರೀದಿಸುವರಿಗೆ, ಕಾರಿನ ಹಿಂಭಾಗದ ಸೀಟುಗಳಲ್ಲಿ ಮಕ್ಕಳಿಗಾಗಿ ಹಾಕುವ ಡಿವಿಡಿ ಸ್ಕ್ರೀನ್ ಬಳಕೆ ಮಾಡುವವರಿಗೆ ಮತ್ತು ಟ್ರಾಫಿಕ್ ಸಿಗ್ನಲ್ಗಳಲ್ಲಿ ಭಿಕ್ಷೆ ಹಾಕುವುದು ಕಂಡು ಬಂದಲ್ಲಿ ಅಂತವರ ವಿರುದ್ಧ ಕ್ರಮ ನಿಶ್ಚಿತ ಎಂದಿದ್ದಾರೆ.
Picture credit: Wiki Commons
News Source: Hindustan Times
ಇದಕ್ಕಾಗಿ ವಿಶೇಷ ತಂಡವನ್ನು ಸಿದ್ದಗೊಳಿಸಿರುವ ಟ್ರಾಫಿಕ್ ಪೊಲೀಸರು ವಾಹನ ಸವಾರರ ವಿರುದ್ಧ ಮತ್ತೊಂದು ಗದಪ್ರಹಾರ ನಡೆಸಲು ಮುಂದಾಗಿದ್ದು, ಈ ಮೂಲಕ ಅಪಘಾತ ಪ್ರಕರಣಗಳಿಗೆ ಕಡಿವಾಣ ಹಾಕುವ ಉದ್ದೇಶ ಹೊಂದಲಾಗಿದೆ.
Trending On DriveSpark Kannada: