Just In
- 8 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 8 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 10 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 11 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜಸ್ಥಾನದಲ್ಲಿ ಒಂಟೆಗೆ ಡಿಕ್ಕಿ: ಬೆಂಗಳೂರಿನ ಖ್ಯಾತ ಬೈಕ್ ರೈಡರ್ ಸಾವು
ಬೆಂಗಳೂರಿನ ಖ್ಯಾತ ಬೈಕ್ ರೈಡರ್ ಕಿಂಗ್ ರಿಚರ್ಡ್ ಶ್ರೀನಿವಾಸನ್ ಬುಧವಾರ ತಡರಾತ್ರಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಜೈಸಲ್ಮೇರ್ನಲ್ಲಿ ಪ್ರಯಾಣಿಸುವಾಗ ಶ್ರೀನಿವಾಸನ್ ಅವರು ಬೈಕ್ ಒಂಟೆಗೆ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಕಿಂಗ್ ರಿಚರ್ಡ್ ಶ್ರೀನಿವಾಸನ್ ಸ್ನೇಹಿತರೊಂದಿಗೆ ಬೈಕ್ ಟ್ರಿಪ್ ತೆರಳಿದ್ದರು. ಜೈಸಲ್ಮೇರ್ನಲ್ಲಿ ಪ್ರಯಾಣಿಸುವಾಗ ಶ್ರೀನಿವಾಸನ್ ಅವರು ಮುಂಭಾಗದಲ್ಲಿ ಚಲಿಸುತ್ತಿದ್ದರು ಉಳಿದ ಸ್ನೇಹಿತರ ಹಿಂಭಾಗದಲ್ಲಿ ಬರುತ್ತಿದ್ದರು. ಈ ವೇಳೆ ದಿಢೀರನೇ ಅಡ್ಡ ಬಂದ ಒಂಟೆಗೆ ಗುದ್ದಿದ ಪರಿಣಾಮ ಕೆಳಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ತಲೆಗೆ ತೀವ್ರವಾದ ಗಾಯಗಳಾಗಿದೆ. ತಕ್ಷಣವೇ ಅವರನ್ನು ಸ್ಥಳಿಯ ಆಸ್ಪೆತ್ರೆಗೆ ದಾಖಲಿಸಿದ್ದಾರೆ .
ಆದರೆ ತಲೆಯಿಂದ ತೀವ್ರ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ರಾಜಸ್ಥಾನದ ಪೊಲೀಸ್ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಶ್ರೀನಿವಾಸನ್ ಪಾರ್ಥಿವ ಶರೀರವನ್ನು ರಾಜಸ್ಥಾನದ ಪೊಲೀಸರು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್ಎಕ್ಸ್ ಬೈಕ್
ರಿಚರ್ಡ್ ಶ್ರೀನಿವಾಸ್ ಜೊತೆ ಬೆಂಗಳೂರಿನ ನಾರಾಯಣ, ಚೆನ್ನೈನ ಡಾ. ವಿಜಯ್ ಮತ್ತು ವೇಣುಗೋಪಾಲ್ ಇದ್ದರು. ಇವರ ಬೈಕ್ ಟ್ರಿಪ್ ಜನವರಿ 23ರಂದು ಬೆಂಗಳೂರಿನಲ್ಲಿ ಅಂತ್ಯವಾಗಬೇಕಿತ್ತು. ಆದರೆ ರಾಜಸ್ಥನದಲ್ಲೇ ಭೀಕರ ದುರಂತ ಸಂಭವಿಸಿದೆ.
ಕಿಂಗ್ ರಿಚರ್ಡ್ ಶ್ರೀನಿವಾಸನ್ ಅವರು ಈ ಹಿಂದೆ ಟ್ರಯಂಫ್ ಟೈಗರ್ ಬೈಕಿನಲ್ಲಿ ಬೆಂಗಳೂರಿನಿಂದ ಹೊರಟು ಏಷ್ಯಾ, ಯುರೋಪ್, ಅಮೆರಿಕಾ ಮತ್ತು ಅಸ್ಟೇಲಿಯಾ ಖಂಡಗಳ ವಿವಿಧ ದೇಶಗಳನ್ನು ಸುತ್ತಿ ಬಂದಿದ್ದಾರೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್
ಅಲ್ಲದೇ ಅವರು ಈ ಪ್ರವಾಸವನ್ನು ಮುಗಿಸಿ ನಂತರ ಅಫ್ರಿಕಾಗೂ ಬೈಕ್ ಟ್ರಿಪ್ ಹೋಗುವ ಪ್ಲಾನ್ ಮಾಡಿದ್ದರಂತೆ, ಅದ್ದಕ್ಕಾಗಿ ಅವರು ಇತ್ತೀಚೆಗೆ ಐಷಾರಾಮಿ ಬಿಎಂಡಬ್ಲ್ಯು ಜಿಎಸ್ ಬೈಕನ್ನು ಖರೀದಿಸಿದ್ದರು ಎನ್ನಾಲಾಗಿದೆ.
ಇವರ ಬಳಿ ಇದ್ದ ಟ್ರಯಂಫ್ ಟೈಗರ್ 800 ಬೈಕ್ ಬಗ್ಗೆ ಹೇಳುವುದಾದರೆ, ಇದರಲ್ಲಿ 800 ಸಿಸಿ, ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 9,500 ಆರ್ಪಿಎಂನಲ್ಲಿ 93.7 ಬಿಒಹೆಚ್ಪಿ ಪವರ್ ಮತ್ತು 8,050 ಆರ್ಪಿಎಂನಲ್ಲಿ 79 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಬೆಂಗಳೂರಿನ ಬೈಕ್ ರೈಡರ್ ರಿಚರ್ಡ್ ಶ್ರೀನಿವಾಸ್ ಭಾರತದ ಜನಪ್ರಿಯ ಬೈಕರ್ಗಳಲ್ಲಿ ಒಬ್ಬರು. ಎಂತಹ ಕಠಿಣ ಹಾದಿಯಲ್ಲಿಯು ಬೈಕ್ ಓಡಿಸಬಲ್ಲ ನಿಸ್ಸೀಮ ಕಿಂಗ್ ರಿಚರ್ಡ್ ಶ್ರೀನಿವಾಸನ್ ಇದೀಗ ಬೈಕ್ ಅಪಘಾತದಲ್ಲಿ ಕೊನೆಯುಸಿರೆಳೆದಿರುವುದು ನಿಜಕ್ಕೂ ದುರಂತ.
Image Courtesy: King Richard/Instagram