Just In
- 10 min ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
- 52 min ago Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- 2 hrs ago ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- 2 hrs ago ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
Don't Miss!
- Finance ಇನ್ಮುಂದೆ ನಿಮ್ಮ ಜಮೀನಿನಲ್ಲಿ ನೀವು ಮನೆ ಕಟ್ಟೋದಕ್ಕೂ ಸರ್ಕಾರದ ಅನುಮತಿ ಅಗತ್ಯ, ಏನಿದು ಹೋಸ ನಿಯಮ?
- News ಬಿಜೆಪಿ ಭದ್ರಕೋಟೆಯಲ್ಲಿ ಶೋಭಾ ಕರಂದ್ಲಾಜೆಗೆ ಕಠಿಣ ಸವಾಲು!
- Technology ಜಿಯೋ ನಿವ್ವಳ ಲಾಭದಲ್ಲಿ ಭರ್ಜರಿ ಹೆಚ್ಚಳ: ಇಲ್ಲಿದೆ ವಿವರ
- Lifestyle ಉಪ್ಪು ನೀರಿನಿಂದ ಮುಖ ತೊಳೆದರೆ ಆಗುವ ಲಾಭವೇನು.? ಇದರ ಅನಾನುಕೂಲವೇನು ಗೊತ್ತಾ?
- Sports IPL 2024: ಆರ್ಸಿಬಿ ಕಪ್ ಗೆಲ್ಲದಿರಲು ಅತಿಯಾದ ಪಾರ್ಟಿ ಕಾರಣವೇ?; ರೈನಾ ಬಿಚ್ಚಿಟ್ಟ ಸತ್ಯ
- Movies ಕಲರ್ಫುಲ್ ಲೈಟು.. ಡಿಂಪಲ್ ಸ್ಮೈಲು.. 'ಸಂಜು ವೆಡ್ಸ್ ಗೀತಾ 2' ಒಂದು ಹಾಡಿನ ಸೆಟ್ಟಿಗೆ ಬರೋಬ್ಬರಿ ₹50 ಲಕ್ಷ!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಾಜಸ್ಥಾನದಲ್ಲಿ ಒಂಟೆಗೆ ಡಿಕ್ಕಿ: ಬೆಂಗಳೂರಿನ ಖ್ಯಾತ ಬೈಕ್ ರೈಡರ್ ಸಾವು
ಬೆಂಗಳೂರಿನ ಖ್ಯಾತ ಬೈಕ್ ರೈಡರ್ ಕಿಂಗ್ ರಿಚರ್ಡ್ ಶ್ರೀನಿವಾಸನ್ ಬುಧವಾರ ತಡರಾತ್ರಿ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ರಾಜಸ್ಥಾನದ ಜೈಸಲ್ಮೇರ್ನಲ್ಲಿ ಪ್ರಯಾಣಿಸುವಾಗ ಶ್ರೀನಿವಾಸನ್ ಅವರು ಬೈಕ್ ಒಂಟೆಗೆ ಡಿಕ್ಕಿ ಹೊಡೆದ ಪರಿಣಾಮ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಕಿಂಗ್ ರಿಚರ್ಡ್ ಶ್ರೀನಿವಾಸನ್ ಸ್ನೇಹಿತರೊಂದಿಗೆ ಬೈಕ್ ಟ್ರಿಪ್ ತೆರಳಿದ್ದರು. ಜೈಸಲ್ಮೇರ್ನಲ್ಲಿ ಪ್ರಯಾಣಿಸುವಾಗ ಶ್ರೀನಿವಾಸನ್ ಅವರು ಮುಂಭಾಗದಲ್ಲಿ ಚಲಿಸುತ್ತಿದ್ದರು ಉಳಿದ ಸ್ನೇಹಿತರ ಹಿಂಭಾಗದಲ್ಲಿ ಬರುತ್ತಿದ್ದರು. ಈ ವೇಳೆ ದಿಢೀರನೇ ಅಡ್ಡ ಬಂದ ಒಂಟೆಗೆ ಗುದ್ದಿದ ಪರಿಣಾಮ ಕೆಳಗೆ ಬಿದ್ದಿದ್ದಾರೆ. ಈ ಸಂದರ್ಭದಲ್ಲಿ ತಲೆಗೆ ತೀವ್ರವಾದ ಗಾಯಗಳಾಗಿದೆ. ತಕ್ಷಣವೇ ಅವರನ್ನು ಸ್ಥಳಿಯ ಆಸ್ಪೆತ್ರೆಗೆ ದಾಖಲಿಸಿದ್ದಾರೆ .
ಆದರೆ ತಲೆಯಿಂದ ತೀವ್ರ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ರಾಜಸ್ಥಾನದ ಪೊಲೀಸ್ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಶ್ರೀನಿವಾಸನ್ ಪಾರ್ಥಿವ ಶರೀರವನ್ನು ರಾಜಸ್ಥಾನದ ಪೊಲೀಸರು ಕುಟುಂಬಸ್ಥರಿಗೆ ಹಸ್ತಾಂತರಿಸಿದ್ದಾರೆ.
MOST READ: ಹೊಸ ಬಣ್ಣದ ಆಯ್ಕೆಯನ್ನು ಪಡೆದುಕೊಂಡ 2021ರ ಕವಾಸಕಿ ನಿಂಜಾ 1000 ಎಸ್ಎಕ್ಸ್ ಬೈಕ್
ರಿಚರ್ಡ್ ಶ್ರೀನಿವಾಸ್ ಜೊತೆ ಬೆಂಗಳೂರಿನ ನಾರಾಯಣ, ಚೆನ್ನೈನ ಡಾ. ವಿಜಯ್ ಮತ್ತು ವೇಣುಗೋಪಾಲ್ ಇದ್ದರು. ಇವರ ಬೈಕ್ ಟ್ರಿಪ್ ಜನವರಿ 23ರಂದು ಬೆಂಗಳೂರಿನಲ್ಲಿ ಅಂತ್ಯವಾಗಬೇಕಿತ್ತು. ಆದರೆ ರಾಜಸ್ಥನದಲ್ಲೇ ಭೀಕರ ದುರಂತ ಸಂಭವಿಸಿದೆ.
ಕಿಂಗ್ ರಿಚರ್ಡ್ ಶ್ರೀನಿವಾಸನ್ ಅವರು ಈ ಹಿಂದೆ ಟ್ರಯಂಫ್ ಟೈಗರ್ ಬೈಕಿನಲ್ಲಿ ಬೆಂಗಳೂರಿನಿಂದ ಹೊರಟು ಏಷ್ಯಾ, ಯುರೋಪ್, ಅಮೆರಿಕಾ ಮತ್ತು ಅಸ್ಟೇಲಿಯಾ ಖಂಡಗಳ ವಿವಿಧ ದೇಶಗಳನ್ನು ಸುತ್ತಿ ಬಂದಿದ್ದಾರೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್
ಅಲ್ಲದೇ ಅವರು ಈ ಪ್ರವಾಸವನ್ನು ಮುಗಿಸಿ ನಂತರ ಅಫ್ರಿಕಾಗೂ ಬೈಕ್ ಟ್ರಿಪ್ ಹೋಗುವ ಪ್ಲಾನ್ ಮಾಡಿದ್ದರಂತೆ, ಅದ್ದಕ್ಕಾಗಿ ಅವರು ಇತ್ತೀಚೆಗೆ ಐಷಾರಾಮಿ ಬಿಎಂಡಬ್ಲ್ಯು ಜಿಎಸ್ ಬೈಕನ್ನು ಖರೀದಿಸಿದ್ದರು ಎನ್ನಾಲಾಗಿದೆ.
ಇವರ ಬಳಿ ಇದ್ದ ಟ್ರಯಂಫ್ ಟೈಗರ್ 800 ಬೈಕ್ ಬಗ್ಗೆ ಹೇಳುವುದಾದರೆ, ಇದರಲ್ಲಿ 800 ಸಿಸಿ, ಲಿಕ್ವಿಡ್-ಕೂಲ್ಡ್ ಎಂಜಿನ್ ಅನ್ನು ಹೊಂದಿದೆ. ಈ ಎಂಜಿನ್ 9,500 ಆರ್ಪಿಎಂನಲ್ಲಿ 93.7 ಬಿಒಹೆಚ್ಪಿ ಪವರ್ ಮತ್ತು 8,050 ಆರ್ಪಿಎಂನಲ್ಲಿ 79 ಎನ್ಎಂ ಟಾರ್ಕ್ ಅನ್ನು ಉತ್ಪಾದಿಸುತ್ತದೆ.
ಬೆಂಗಳೂರಿನ ಬೈಕ್ ರೈಡರ್ ರಿಚರ್ಡ್ ಶ್ರೀನಿವಾಸ್ ಭಾರತದ ಜನಪ್ರಿಯ ಬೈಕರ್ಗಳಲ್ಲಿ ಒಬ್ಬರು. ಎಂತಹ ಕಠಿಣ ಹಾದಿಯಲ್ಲಿಯು ಬೈಕ್ ಓಡಿಸಬಲ್ಲ ನಿಸ್ಸೀಮ ಕಿಂಗ್ ರಿಚರ್ಡ್ ಶ್ರೀನಿವಾಸನ್ ಇದೀಗ ಬೈಕ್ ಅಪಘಾತದಲ್ಲಿ ಕೊನೆಯುಸಿರೆಳೆದಿರುವುದು ನಿಜಕ್ಕೂ ದುರಂತ.
Image Courtesy: King Richard/Instagram