Just In
- 13 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 14 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 14 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 16 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Technology ಇಂದು ಮತ್ತೆ ಮೊಟೊರೊಲಾ ಎಡ್ಜ್ 50 ಪ್ರೊ ಫೋನಿನ ಸ್ಪೆಷಲ್ ಸೇಲ್!..ಡಿಸ್ಕೌಂಟ್ ಎಷ್ಟು?
- News ಐತಿಹಾಸಿಕ ಪ್ರಸಿದ್ಧ ವದ್ದಿಕೆರೆ ಸಿದ್ದಪ್ಪನ ಬಗ್ಗೆ ನಿಮಗೆಷ್ಟು ಗೊತ್ತು?-ಇಲ್ಲಿದೆ ಸಂಪೂರ್ಣ ವಿವರ
- Sports PBKS vs MI IPL 2024: ಮತ್ತೊಮ್ಮೆ ಕೊನೆಯ ಓವರ್ನಲ್ಲಿ ಮುಗ್ಗರಿಸಿದ ಪಂಜಾಬ್ ಕಿಂಗ್ಸ್ ಪ್ಲೇಆಫ್ ಸನ್ನಿವೇಶ ಹೇಗಿದೆ?
- Finance ಕಚ್ಚಾ ತೈಲ ಆಮದು ಗಣನೀಯ ಇಳಿಕೆ, ಪೆಟ್ರೋಲ್ ಡಿಸೇಲ್ ಬೆಲೆ ಹೆಚ್ಚಾಗುತ್ತಾ?
- Lifestyle ಶುಕ್ರವಾರ ವೈಭವ ಲಕ್ಷ್ಮಿ ವ್ರತ ಮಾಡೋದೇಕೆ..? ಹೇಗೆ ಆಚರಿಸಬೇಕು ಎಂಬ ಮಾಹಿತಿ ಇಲ್ಲಿದೆ..!
- Movies 'ಮಾರ್ಟಿನ್' ಚಿತ್ರದ ನಿರ್ಮಾಪಕ- ನಿರ್ದೇಶಕರ ಮಧ್ಯೆ ಕಿರಿಕ್: ಕೊನೆಗೂ ಸಿಕ್ತು ಸ್ಪಷ್ಟನೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಎಫೆಕ್ಟ್: ಮಗನ ಔಷಧಿಗಾಗಿ 300 ಕಿ.ಮೀ ಸೈಕಲ್ ತುಳಿದ ಅಪ್ಪ
ಕೊರೋನಾ ಸೋಂಕಿನ ಆರ್ಭಟ ಹೆಚ್ಚಾಗಿ ಜನರು ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇದರಿಂದ ಕೊರೊನಾ ನಿಯಂತ್ರಿಸಲು ಸರ್ಕಾರ ಲಾಕ್ಡೌನ್ ವಿಧಿಸಿದೆ. ಆದರೆ ಲಾಕ್ಡೌನ್ ಜಾರಿಯಾದ ಕಾರಣ ಕೊರೊನಾ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದರು, ಜನಸಾಮಾನ್ಯರು ಜೀವನ ನಡೆಸಲು ಪರದಾಡುತ್ತಿದ್ದಾರೆ.
ಇಂತಹ ಸಂದರ್ಭದಲ್ಲಿ ತಂದೆಯೊಬ್ಬರು ತನ್ನ ಮಗನಿಗೆ ಔಷಧಿ ತರಲು ಸುಮಾರು 300 ಕಿ.ಮೀ ಸೈಕಲ್ ತುಳಿದಿದ್ದಾರೆ. ಈ ಮನಕಲಕುವ ಘಟನೆ ಮೈಸೂರಿನಲ್ಲಿ ನಡೆದಿದೆ ಎಂದು ವರದಿಯಾಗಿದೆ. ಟಿ.ನರಸೀಪುರ ತಾಲೂಕು ಗಾಣಿಗನಕೊಪ್ಪಲು ಗ್ರಾಮದ ಗಾರೆ ಕೆಲಸಗಾರ ಆನಂದ್ ತಮ್ಮ ಮಗನ ಔಷಧಿಗಾಗಿ ಸತತ ಮೂರು ದಿನಗಳ ಕಾಲ ಸೈಕಲ್ ತುಳಿದಿದ್ದಾರೆ. ಬೆಂಗಳೂರು ನಿಮಾನ್ಸ್ ಆಸ್ಪತ್ರೆಯಲ್ಲಿ ಮಾನಸಿಕ ವಿಶೇಷ ಚೇತನ ಮಗನಿಗೆ ಚಿಕಿತ್ಸೆ ಕೊಡಿಸಿ 10 ವರ್ಷಗಳಿಂದ ಮಾತ್ರೆ ನೀಡುತ್ತಿದ್ದರು.
ಲಾಕ್ಡೌನ್ ಸಂದರ್ಭದಲ್ಲಿ ಮಗನ ಮಾತ್ರೆಗಳು ಮುಗಿದಿದೆ, ಇದನ್ನು ನೀಡಲೇ ಬೇಕಾದ ಅನಿವಾರ್ಯತೆ ಕೂಡ ಎದುರಾಗಿತ್ತು. ಈ ಮಾತ್ರೆಯನ್ನು ಸಾಕಷ್ಟು ಹುಡುಕಾಟ ನಡೆಸಿದರೂ ಮಾತ್ರೆಗಳು ಬೇರೆ ಎಲ್ಲೂ ಸಿಗದ ಕಾರಣ ಅವರು ಬೆಂಗಳೂರಿನ ನಿಮಾನ್ಸ್ಗೆ ತೆರಳಬೇಕಾಯಿತು.
MOST READ: ಕರೋನಾ ವೈರಸ್ ಬಗ್ಗೆ ಜನ ಜಾಗೃತಿ ಮೂಡಿಸಲು ಉಬರ್ ಜೊತೆಗೆ ಕೈಜೋಡಿಸಿದ ಪೊಲೀಸ್ ಇಲಾಖೆ
ಈ ಮಾತ್ರೆಗಳನ್ನು ನೀಡುವುದನ್ನು ಒಮ್ಮೆ ತಪ್ಪಿಸಿದರೆ ಇದರಿಂದ ತೊಂದರೆಯಾಗಲಿದೆ. ಅಲ್ಲದೇ ಮಗ ಗುಣಮುಖ ಆಗಲು 18 ವರ್ಷಗಳ ಕಾಲ ಈ ಮಾತ್ರೆಯನ್ನು ಮಗನಿಗೆ ನೀಡಬೇಕಾಗುತ್ತದೆ. ಇದರಿಂದ ಇವರಿಗೆ ನಿಮಾನ್ಸ್ ಹೋಗಲೇ ಬೇಕಾದ ಅನಿವಾರ್ಯ ಎದುರಾಯಿತು
ಇದರಿಂದ ಲಾಕ್ಡೌನ್ ಸಂಕಷ್ಟದ ನಡುವೆಯೂ ಮಗನ ಔಷಧಿಗಾಗಿ ಬೆಂಗಳೂರಿಗೆ ಹೊರಡಲು ಸಿದ್ಧವಾಗಿದ್ದರು. ಇದಕ್ಕಾಗಿ ಕಾರುಗಳು ಸೇರಿದಂತೆ ಇತರೆ ವಾಹನಗಳನ್ನು ಬಾಡಿಗೆಗೆ ಪಡೆಯಲು ಹಲವು ಕಡೆಗಳಲ್ಲಿ ಕೇಳಿ ನೋಡಿದ್ದಾರೆ.
MOST READ: ಬಿಡುಗಡೆಯಾಯ್ತು ಹೊಸ ಕವಾಸಕಿ ವಲ್ಕನ್ ಎಸ್ ಬೈಕ್
ಆದರೆ ಅವರಿಗೆ ಯಾವುದೇ ವಾಹನಗಳು ಬಾಡಿಗೆಗೆ ಲಭಿಸುವುದಿಲ್ಲ. ಕೊನೆಗೆ ಅವರು ತಮ್ಮ ಸ್ನೇಹಿತ ಜೊತೆ ಮತ್ತು ಪರಿಚಯಸ್ಥರ ಬಳಿಯು ಬೈಕ್ ನೀಡುವಂತೆ ಸಹಾಯ ಕೇಳಿದರು. ಆದರೆ ಲಾಕ್ಡೌನ್ ನಿಂದ ಬೈಕ್ ಸೀಜ್ ಅಗುತ್ತೆ ಅನ್ನುವ ಭಯದಲ್ಲಿ ಯಾವ ಸ್ನೇಹಿತರು ಕೂಡ ಸಹಾಯ ಮಾಡಲು ಹಿಂಡೇಟು ಹಾಕಿದ್ದಾರೆ.
ಕೊನೆಗೆ ದಿಕ್ಕು ತೋಚದೆ ಅವರು ಮಗನಿಗಾಗಿ ತಮ್ಮ ಗ್ರಾಮದಿಂದ ಬೆಂಗಳೂರಿಗೆ ಸೈಕಲ್ನಲ್ಲಿಯೇ ಹೋಗಲು ನಿರ್ಧಾರ ಮಾಡಿದ್ದಾರೆ. ಇವರು ಭಾನುವಾರ ಬೆಂಗಳೂರಿಗೆ ಪ್ರಯಾಣವನ್ನು ಆರಂಭಿಸುತ್ತಾರೆ. ಆನಂದ್ ನಿತ್ಯ 70 ಕಿ.ಮೀಗೂ ಹೆಚ್ಚು ಸೈಕಲ್ ತುಳಿದಿದ್ದಾರೆ.
MOST READ: ಹೊಸ ಹೀರೋ ಎಕ್ಸ್ಟ್ರಿಮ್ 160ಆರ್ 100 ಮಿಲಿಯನ್ ಎಡಿಷನ್ ಬಿಡುಗಡೆ
ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯಲ್ಲಿ ಈ ಔಷಧಗಳನ್ನು ಉಚಿತವಾಗಿ ನೀಡುತ್ತಾರೆ. ಹೀಗಾಗಿ ಪ್ರತಿ ಎರಡು ತಿಂಗಳಿಗೊಮ್ಮೆ ಬೆಂಗಳೂರಿಗೆ ಹೋಗಿ ಪಡೆಯುತ್ತಿದೆ. ಇನ್ನು ಬುಧವಾರ ವೇಳೆಗೆ ಔಷಧಗಳು ಖಾಲಿಯಾಗುತ್ತೆ ಎಂದು ನಾನು ಭಾನುವಾರ ನನ್ನ ಪ್ರಯಾಣವನ್ನು ಆರಂಭಿಸಿದೆ. ನಂತರ ನಿಮಾನ್ಸ್ ಆಸ್ಪತ್ರೆಗೆ ಹೋಗಿ ಮಾತ್ರೆ ಪಡೆದು ಮಂಗಳವಾರ ಊರು ತಲುಪಿದೆ ಎಂದು ಆನಂದ್ ಹೇಳಿದ್ದಾರೆ.