Just In
- 1 hr ago Triber: 7 ಜನ ಹೋಗಬಹುದಾದ ರೆನಾಲ್ಟ್ ಟ್ರೈಬರ್ ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 14 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 17 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 17 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
Don't Miss!
- News Gold Rates Today: ನಿನ್ನೆಗಿಂತ ಕೊಂಚ ಇಳಿಕೆಯಾದ ಚಿನ್ನದ ಬೆಲೆ, ಯಾವ ನಗರದಲ್ಲಿ ಎಷ್ಟು?
- Finance ನೂಡಲ್ಸ್ ಪ್ಯಾಕೆಟ್ ಒಳಗಿತ್ತು ವಜ್ರಗಳ ರಾಶಿ, ಬರೋಬ್ಬರಿ 6.46 ಕೋಟಿ ರೂ. ಮೌಲ್ಯದ ಚಿನ್ನ, ಡೈಮಂಡ್ ವಶ!
- Technology ಇಂದು ವಿವೋ T3x 5G ಸ್ಮಾರ್ಟ್ಫೋನ್ ಫಸ್ಟ್ ಸೇಲ್; ಬೆಲೆ 13,499ರೂ.!
- Lifestyle ಹೋಟೆಲ್ ರುಚಿಯ ಪನೀರ್ ಪೆಪ್ಪರ್ ಫ್ರೈ ಮನೆಯಲ್ಲೇ ಮಾಡಿ..! 10 ನಿಮಿಷದಲ್ಲಿ ರೆಡಿ..!
- Sports CSK vs LSG IPL 2024: ಐಪಿಎಲ್ನಲ್ಲಿ ಈ ದಾಖಲೆ ಮಾಡಿದ ಮೊದಲ ಸಿಎಸ್ಕೆ ನಾಯಕ ರುತುರಾಜ್ ಗಾಯಕ್ವಾಡ್
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಸ್ತೆ ಅಪಘಾತದಲ್ಲಿ ಯುವಕನ ಪ್ರಾಣ ಉಳಿಸಿದ ಗುಣಮಟ್ಟದ ಹೆಲ್ಮೆಟ್
ದ್ವಿಚಕ್ರ ವಾಹನ ಸವಾರರಿಗೆ ಹಾಗೂ ಹಿಂಬದಿಯ ಸವಾರರಿಗೆ ಹೆಲ್ಮೆಟ್ ಕಡ್ಡಾಯಗೊಳಿಸಿ ಹಲವು ವರ್ಷಗಳು ಕಳೆದಿವೆ. ಹೆಲ್ಮೆಟ್ ಧರಿಸದೇ ದ್ವಿಚಕ್ರ ವಾಹನ ಚಾಲನೆ ಮಾಡುವವರಿಗೆ ದಂಡ ವಿಧಿಸಲಾಗುತ್ತದೆ.
ಎಷ್ಟೇ ನಿಯಮಗಳು ಬಂದರೂ ಪೊಲೀಸರು ಎಷ್ಟೇ ದಂಡ ವಿಧಿಸಿದರೂ ಕೆಲವರು ಹೆಲ್ಮೆಟ್ ಧರಿಸುವುದರ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ. ಇನ್ನೂ ಕೆಲವರು ಪೊಲೀಸರು ದಂಡ ವಿಧಿಸುವುದರಿಂದ ತಪ್ಪಿಸಿಕೊಳ್ಳಲು ಟೋಪಿಯ ರೀತಿಯಲ್ಲಿ ಕಾಣುವ ಕಳಪೆ ಹೆಲ್ಮೆಟ್ ಧರಿಸುತ್ತಾರೆ.
ಗುಣಮಟ್ಟದ ಹೆಲ್ಮೆಟ್ ಧರಿಸಿದರೆ ಹೇಗೆ ಪ್ರಾಣಾಪಾಯದಿಂದ ಪಾರಾಗಬಹುದು ಎಂಬುದಕ್ಕೆ ಪುಷ್ಟಿ ನೀಡುವಂತಹ ಘಟನೆಯೊಂದು ವರದಿಯಾಗಿದೆ. ತಲೆಯ ಮೇಲೆ ಬಸ್ ಚಕ್ರ ಹರಿದರೂ ಯುವಕನೊಬ್ಬ ಬದುಕುಳಿದಿದ್ದಾನೆ.
MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್ಟಿಒ ಫಾರಂಗಳಿವು!
ಆತ ಸಣ್ಣಪುಟ್ಟ ಗಾಯಗಳೊಂದಿಗೆ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ವರದಿಗಳು ತಿಳಿಸಿವೆ. ಅತ್ಯುತ್ತಮ ಗುಣಮಟ್ಟದ ಹೆಲ್ಮೆಟ್ ಧರಿಸಿದ ಕಾರಣದಿಂದಲೇ ಯುವಕನ ಪ್ರಾಣ ಉಳಿದಿದೆ ಎಂಬುದು ಗಮನಾರ್ಹ.
ಈ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಅರಿಯಲೂರು ಜಿಲ್ಲೆಯ ಸುಂದಕುಡಿ ಪಂಚಾಯತ್ ಮೂಲದ ಸತ್ಯ ಸೀಲನ್ ಎಂಬಾತನೇ ಪವಾಡ ಸದೃಶ ರೀತಿಯಲ್ಲಿ ಪಾರಾದ ಯುವಕ. ಐಟಿ ಉದ್ಯೋಗಿಯಾದ ಆತ ತನ್ನ ದ್ವಿಚಕ್ರ ವಾಹನದಲ್ಲಿ ಹೊರಗೆ ಹೋಗಿದ್ದ.
MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು
ಈ ವೇಳೆ ಅನಿರೀಕ್ಷಿತವಾಗಿ ರಸ್ತೆಯ ಎದುರು ಭಾಗದಲ್ಲಿದ್ದ ಮಿನಿ ಬಸ್ ಆತನ ಬೈಕಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ ಆತನ ಬೈಕ್ ಮಿನಿ ಬಸ್ಸಿನ ಕೆಳಗೆ ಹೋಗಿದೆ. ಸತ್ಯ ಸೀಲನ್ ಬಸ್ನ ಹಿಂಬದಿ ಚಕ್ರಕ್ಕೆ ಸಿಲುಕಿದ್ದಾನೆ.
ಬಸ್ಸಿನ ಒಂದು ಚಕ್ರ ಬೈಕಿನ ಮೇಲೆ ಹಾಗೂ ಮತ್ತೊಂದು ಚಕ್ರ ಸತ್ಯ ಸೀಲನ್ ತಲೆ ಮೇಲೆ ಹರಿದಿದೆ. ಘಟನೆ ನಡೆದಾಗ ಬಸ್ಸಿನಲ್ಲಿದ್ದ ಪ್ರಯಾಣಿಕರು ಒಂದು ಕ್ಷಣಆಘಾತಕ್ಕೊಳಗಾಗಿದ್ದಾರೆ.
MOST READ:10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್
ಸತ್ಯ ಸೀಲನ್ ಬಳಸಿದ ಗುಣಮಟ್ಟದ ಹೆಲ್ಮೆಟ್'ನಿಂದಾಗಿ ಆತನ ಪ್ರಾಣ ಉಳಿದಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರು ಸತ್ಯ ಸೀಲನ್'ನನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ಆತನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಚೇತರಿಸಿಕೊಳ್ಳುತ್ತಿದ್ದಾನೆ ಎಂದು ತಿಳಿದು ಬಂದಿದೆ.
ಸುಂದಕುಡಿಯಲ್ಲಿ ನಡೆದ ಘಟನೆ ಆ ಭಾಗದ ಜನರಲ್ಲಿ ಆಘಾತವನ್ನುಂಟು ಮಾಡಿತ್ತು. ಈ ರೀತಿಯ ಅನಿರೀಕ್ಷಿತ ಘಟನೆಗಳು ಸಂಭವಿಸುವುದರಿಂದ ದ್ವಿಚಕ್ರ ವಾಹನ ಸವಾರರಿಗೆ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಲಾಗಿದೆ.
MOST READ:ವರ್ಷಗಳ ಕಾಲ ಉಪ್ಪು ನೀರಿನಲ್ಲಿದ್ದರೂ ಹಡಗುಗಳ ಆಂಕರ್ಗಳಿಗೆ ತುಕ್ಕು ಹಿಡಿಯದಿರಲು ಕಾರಣಗಳಿವು
ಭಾರತೀಯ ಮೋಟಾರು ವಾಹನ ಕಾಯ್ದೆಯು ದ್ವಿಚಕ್ರ ವಾಹನ ಸವಾರರಿಗೆ ಮಾತ್ರವಲ್ಲದೆ ಹಿಂಬದಿಯ ಸವಾರರಿಗೂ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯಗೊಳಿಸಿದೆ. ದ್ವಿಚಕ್ರ ವಾಹನಗಳಲ್ಲಿ ಪ್ರಯಾಣಿಸುವ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯಗೊಳಿಸಲಾಗಿದೆ.