Just In
- 4 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 5 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 7 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 8 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೊಲೀಸರ ಚಟುವಟಿಕೆ ಮೇಲೆ ನಿಗಾ ವಹಿಸಲು ಬರಲಿವೆ ಹೊಸ ಸಾಧನಗಳು
ಗುರುಗ್ರಾಮ ಪೊಲೀಸರು ತಮ್ಮ ಎಲ್ಲಾ ಪಿಸಿಆರ್ ವಾಹನಗಳಲ್ಲಿ ಜಿಪಿಎಸ್ ಹಾಗೂ ಜಿಯೋ ಫೆನ್ಸಿಂಗ್ ಗಳನ್ನು ಅಳವಡಿಸಲಿದ್ದಾರೆ ಎಂದು ವರದಿಯಾಗಿದೆ. ಪೊಲೀಸರು ಬಳಸುವ ವಾಹನಗಳಲ್ಲಿ ಈ ಸಾಧನಗಳನ್ನು ಅಳವಡಿಸುವ ಮೂಲಕ ಪೊಲೀಸರ ಎಲ್ಲಾ ಚಟುವಟಿಕೆಗಳ ಮೇಲೆ ನಿಗಾ ಇಡಲಾಗುವುದು ಎಂದು ಹೇಳಲಾಗಿದೆ.
ಪೊಲೀಸರ ಮೇಲ್ವಿಚಾರಣೆ ಮಾಡಲು ಅಳವಡಿಸಲಾಗುವ ಈ ಸಾಧನಗಳು, ಅವುಗಳ ವ್ಯಾಪ್ತಿ, ಕರೆಗಳನ್ನು ಸ್ವೀಕರಿಸಲು ಎಷ್ಟು ಸಮಯ ತೆಗೆದುಕೊಳ್ಳಲಾಗುತ್ತದೆ ಸೇರಿದಂತೆ ಎಲ್ಲಾ ಮಾಹಿತಿಯನ್ನು ಪಡೆಯುತ್ತವೆ. ಇದರ ಜೊತೆಗೆ ಪೊಲೀಸರು ಬಳಸುವ ಎಲ್ಲಾ ವಾಹನಗಳಲ್ಲಿ ಡಿಜಿಟಲ್ ರೆಕಾರ್ಡ್ ಸಾಧನಗಳನ್ನು ಅಳವಡಿಸಲಾಗುವುದು. ಪೊಲೀಸರ ಎಲ್ಲಾ ಕ್ರಮಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಈ ಸಾಧನಗಳು ನೆರವಾಗಲಿವೆ.
ಈ ಹೊಸ ಸಾಧನಗಳು, ಪಿಸಿಆರ್ ವಾಹನಗಳು ನಿಗದಿತ ಮಿತಿಯನ್ನು ಹೇಗೆ ದಾಟಬೇಕು. ದೀರ್ಘಕಾಲದವರೆಗೆ ಒಂದೇ ಸ್ಥಳದಲ್ಲಿ ಉಳಿಯುವುದು ಹೇಗೆ ಎಂದು ತಿಳಿಯಲು ಸಹಾಯ ಮಾಡುತ್ತವೆ. 100ನಂತಹ ತುರ್ತು ಕರೆ ಹಾಗೂ ಸಿಸಿಟಿವಿ ಕ್ಯಾಮೆರಾಗಳನ್ನು ಮೇಲ್ವಿಚಾರಣೆ ಮಾಡುವ ನಿಯಂತ್ರಣ ಕೊಠಡಿಯಲ್ಲಿ ಎಲ್ಲಾ ಪೊಲೀಸ್ ಕಾರ್ಯಾಚರಣೆಗಳನ್ನು ಮೇಲ್ವಿಚಾರಣೆ ಮಾಡಲಾಗುತ್ತದೆ.
MOSTREAD: ಮದುವೆ ಉಂಗುರದ ಶೋಧಕ್ಕಾಗಿ ಚೆಲ್ಲಾಪಿಲ್ಲಿಯಾದ ಕಾರಿನ ಇಂಟಿರಿಯರ್
24x7 ಕಣ್ಗಾವಲು ನಡೆಸಲಾಗುವುದರಿಂದ ಪೊಲೀಸರು ಇನ್ನು ಮುಂದೆ ಒಂದೇ ಸ್ಥಳದಲ್ಲಿ ನಿಲ್ಲಲು ಸಾಧ್ಯವಿಲ್ಲ. ನಿಯಮ ಉಲ್ಲಂಘಿಸಿದರೆ ಈ ಸಾಧನಗಳು ಎಲ್ಲಾ ಮಾಹಿತಿಯನ್ನು ಸಂಗ್ರಹಿಸುತ್ತವೆ. ಇದರಿಂದ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗೆ ತೊಂದರೆಯುಂಟಾಗಬಹುದು.
ಹೆಚ್ಚುತ್ತಿರುವ ಅಪರಾಧ ಪ್ರಮಾಣವನ್ನು ಕಡಿಮೆ ಮಾಡಲು ಪೊಲೀಸರ ಮೇಲೆ ಒತ್ತಡ ಉಂಟಾಗಿದೆ. ಕರ್ತವ್ಯ ನಿರ್ವಹಿಸುವಾಗ ಪೊಲೀಸರು ಒಂದೇ ಸ್ಥಳದಲ್ಲಿರುತ್ತಾರೆ. ಇದರಿಂದಾಗಿ ಅಪರಾಧಗಳು ಸಂಭವಿಸುತ್ತಿವೆ ಎಂದು ಹೇಳಲಾಗಿದೆ. ಕೆಲ ಪೊಲೀಸರು ನಡೆಸುವ ಈ ಕೃತ್ಯದಿಂದ ಎಲ್ಲಾ ಪೊಲೀಸರಿಗೆ ತೊಂದರೆಯಾಗುತ್ತಿದೆ.
MOSTREAD: ಬೀದಿ ನಾಯಿಯೇ ಈ ಶೋರೂಂನ ರಿಸೆಪ್ಶನಿಸ್ಟ್
ಇದನ್ನು ತಡೆಗಟ್ಟುವುದಕ್ಕಾಗಿ ಪೊಲೀಸರು ಗಸ್ತು ತಿರುಗುವ ವಾಹನಗಳಲ್ಲಿ ಜಿಯೋ-ಫೆನ್ಸಿಂಗ್ ಹಾಗೂ ಜಿಪಿಎಸ್ ಕಣ್ಗಾವಲು ಉಪಕರಣಗಳನ್ನು ಅಳವಡಿಸಲಾಗುತ್ತಿದೆ. ಇದರಿಂದಾಗಿ ಅಪರಾಧ ಪ್ರಮಾಣವು ಗಮನಾರ್ಹವಾಗಿ ಕಡಿಮೆಯಾಗುತ್ತದೆ ಎಂದು ಹೇಳಲಾಗಿದೆ.
ಈ ಕಾರಣಕ್ಕಾಗಿಯೇ ಗುರುಗ್ರಾಮ ಪೊಲೀಸರು, ಪಿಸಿಆರ್ ವಾಹನಗಳಲ್ಲಿ ಹೊಸ ತಾಂತ್ರಿಕ ಸಾಧನಗಳನ್ನು ಅಳವಡಿಸುವ ಕಾರ್ಯವನ್ನು ಆರಂಭಿಸಿದ್ದಾರೆ. ಈ ಉಪಕರಣಗಳು ಪೊಲೀಸರನ್ನು ಸಕ್ರಿಯಗೊಳಿಸುತ್ತವೆ ಎನ್ನಲಾಗಿದೆ.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು
ಪ್ರತಿ ವಾಹನದಲ್ಲಿ ಜೋಡಿಸಲಾದ ಜಿಪಿಎಸ್ ಉಪಕರಣವು ವಾಹನವಿರುವ ಸ್ಥಳವನ್ನು ಗುರುತಿಸುತ್ತದೆ. ಯಾವುದೇ ವಾಹನ ನಿಗದಿಪಡಿಸಿರುವ ಡಿಜಿಟಲ್ ಮಿತಿಯನ್ನು ಮೀರಿದರೆ ತಕ್ಷಣವೇ ನಿಯಂತ್ರಣ ಕೊಠಡಿಗೆ ಸಂದೇಶ ತಲುಪುತ್ತದೆ ಎಂದು ಗುರುಗ್ರಾಮದ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.
ವಾಹನಗಳನ್ನು ಯಾವಾಗಲೂ ಮೇಲ್ವಿಚಾರಣೆ ಮಾಡುವುದರಿಂದ ಅವುಗಳು ಸಕ್ರಿಯವಾಗಿರುವಂತೆ ಮಾಡಬಹುದು ಎಂದೂ ಅವರು ಹೇಳಿದರು. ಅನೇಕ ಪಿಸಿಆರ್ ವ್ಯಾನ್ಗಳು ಹಾಗೂ ಬೈಕ್ಗಳು ಗಸ್ತು ತಿರುಗದೇ ನಿಂತಲ್ಲೆ ನಿಂತಿವೆ.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ
ನಗರದಲ್ಲಿ ಗಸ್ತು ತಿರುಗುತ್ತಿರುವ ಪೊಲೀಸರ ಸಂಖ್ಯೆ ಹಿಂದೆಂದಿಗಿಂತಲೂ ಹೆಚ್ಚಾಗಿದೆ ಎಂದು ಹಿರಿಯ ಅಧಿಕಾರಿಗಳು ಹೇಳಿದ್ದಾರೆ. ಕೊಲೆ, ಕೊಲೆ ಯತ್ನದಂತಹ ಅಪರಾಧಗಳು ಹಿಂದಿಗಿಂತ ಗಮನಾರ್ಹವಾಗಿ ಕಡಿಮೆಯಾಗಿವೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಕಳೆದ ವರ್ಷದ ಆಗಸ್ಟ್ ತಿಂಗಳಿಗೆ ಹೋಲಿಸಿದರೆ, ಈ ವರ್ಷದ ಆಗಸ್ಟ್ ತಿಂಗಳಿನಲ್ಲಿ ಅಪರಾಧ ಪ್ರಮಾಣವು 23.4%ನಷ್ಟು ಕುಸಿತ ಕಂಡಿದೆ. 2019ರ ಆಗಸ್ಟ್ ತಿಂಗಳಿನಲ್ಲಿ 78 ಕೊಲೆ ಪ್ರಕರಣಗಳು ವರದಿಯಾಗಿದ್ದರೆ, ಈ ವರ್ಷ ಈ ಸಂಖ್ಯೆ 58ಕ್ಕೆ ಇಳಿದಿದೆ.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ
ದರೋಡೆ ಪ್ರಕರಣಗಳ ಸಂಖ್ಯೆ 48.3%ರಷ್ಟು ಕುಸಿದಿದೆ. ವಾಹನ ಕಳ್ಳತನ 61.9%ರಷ್ಟು ಕಡಿಮೆಯಾಗಿದೆ. ಅಕ್ರಮ ಶಸ್ತ್ರಾಸ್ತ್ರ ಪ್ರಕರಣಗಳ ಸಂಖ್ಯೆ 11%ರಷ್ಟು ಕುಸಿದಿದೆ. ಪೊಲೀಸ್ ವ್ಯವಸ್ಥೆಯನ್ನು ಬಲಪಡಿಸಲು ಗುರುಗ್ರಾಮವನ್ನು ಪೂರ್ವ, ಪಶ್ಚಿಮ, ದಕ್ಷಿಣ ಹಾಗೂ ಮನೇಸರ್ ಗಳೆಂದು ನಾಲ್ಕು ವಲಯಗಳಾಗಿ ವಿಂಗಡಿಸಲಾಗಿದೆ.
ಹೆಚ್ಚಿನ ಪಿಸಿಆರ್ ವ್ಯಾನ್ಗಳು ಹಾಗೂ ಬೈಕ್ಗಳು ಅಪರಾಧ ಪ್ರಕರಣಗಳು ಹೆಚ್ಚಾಗಿರುವ ಪ್ರದೇಶದಲ್ಲಿ ಗಸ್ತು ತಿರುಗುತ್ತಿವೆ. ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಪೊಲೀಸರು ಪ್ರಮುಖ ಪಾತ್ರ ವಹಿಸುತ್ತಾರೆ.
MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್
ಗುರುಗ್ರಾಮ ಪೊಲೀಸರ ಈ ಕ್ರಮದಿಂದಾಗಿ ಸಾರ್ವಜನಿಕರಿಗೆ ಪೊಲೀಸರ ಬಗ್ಗೆ ವಿಶ್ವಾಸ ಮೂಡಲು ಸಹಾಯವಾಗುತ್ತದೆ ಎಂದು ಹೇಳಲಾಗಿದೆ.