Just In
- 6 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 6 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 7 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 7 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Shobha Shetty ; ನಿಶ್ಚಿತಾರ್ಥದ ಬಗ್ಗೆ ಮಾಹಿತಿ ನೀಡಿದ ನಟಿ ಶೋಭಾ ಶೆಟ್ಟಿ
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಲವು ಕಾರುಗಳನ್ನು ಖರೀದಿಸ ಬಯಸುವವರಿಗೆ ಶಾಕ್ ನೀಡಿದ ಹೈ ಕೋರ್ಟ್ ಆದೇಶ
ಮಹಾರಾಷ್ಟ್ರ ರಾಜ್ಯದಲ್ಲಿ ವಾಹನಗಳ ನಿಲುಗಡೆಗೆ ಸಂಬಂಧಿಸಿದಂತೆ ಸರಿಯಾದ ನಿಯಮಗಳು ಇಲ್ಲದಿರುವ ಬಗ್ಗೆ ಮುಂಬೈ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಮನೆಗಳಲ್ಲಿ ಸಾಕಷ್ಟು ಪಾರ್ಕಿಂಗ್ ಸ್ಥಳಾವಕಾಶವಿಲ್ಲದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಹನಗಳನ್ನು ಖರೀದಿಸಲು ಅಧಿಕಾರಿಗಳು ಅವಕಾಶ ನೀಡಬಾರದು ಎಂದು ಮುಂಬೈ ಹೈಕೋರ್ಟ್ ಹೇಳಿದೆ.
ಒಂದೇ ಒಂದು ಫ್ಲ್ಯಾಟ್ ಹೊಂದಿರುವವರು ಸಾಕಷ್ಟು ಪಾರ್ಕಿಂಗ್ ಸ್ಥಳಾವಕಾಶವಿಲ್ಲದಿದ್ದರೆ 4 ರಿಂದ 5 ಕಾರುಗಳನ್ನು ಖರೀದಿಸಲು ಅಧಿಕಾರಿಗಳು ಅನುಮತಿ ನೀಡಬಾರದು ಎಂದು ಮುಂಬೈ ಹೈಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ ದೀಪ್ ನಗರ ದತ್ತ ಹಾಗೂ ನ್ಯಾಯಮೂರ್ತಿ ಕುಲಕರ್ಣಿ ಅವರನ್ನೊಳಗೊಂಡ ವಿಭಾಗೀಯ ಪೀಠವು ಈ ಆದೇಶ ನೀಡಿದೆ.
ನವಿ ಮುಂಬೈನ ಸಾಮಾಜಿಕ ಕಾರ್ಯಕರ್ತ ಸಂದೀಪ್ ಠಾಕೂರ್ ಎಂಬುವವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ವೇಳೆ ಮುಂಬೈ ಹೈಕೋರ್ಟ್ ಈ ರೀತಿ ಆದೇಶ ನೀಡಿದೆ. ಸಂದೀಪ್ ಠಾಕೂರ್ ತಮ್ಮ ಅರ್ಜಿಯಲ್ಲಿ ಗೃಹ ನಿರ್ಮಾಣ ಕಂಪನಿಗಳು ಹೊಸ ಫ್ಲಾಟ್ ಗಳಲ್ಲಿ ಸಾಕಷ್ಟು ಪಾರ್ಕಿಂಗ್ ಸ್ಥಳವನ್ನು ಒದಗಿಸುತ್ತಿಲ್ಲ ಎಂದು ತಿಳಿಸಿದ್ದಾರೆ.
ಈ ಕಾರಣದಿಂದಾಗಿ ಫ್ಲಾಟ್ ಗಳನ್ನು ಖರೀದಿಸಿದ ನಂತರವೂ ಅನೇಕ ಜನರು ತಮ್ಮ ವಾಹನಗಳನ್ನು ಮನೆಯ ಆವರಣದ ಹೊರಗೆ ನಿಲ್ಲಿಸಬೇಕಾಗಿದೆ ಎಂದು ಸಂದೀಪ್ ಠಾಕೂರ್ ತಮ್ಮ ಅರ್ಜಿಯಲ್ಲಿ ಹೇಳಿದ್ದಾರೆ.
ಅರ್ಜಿಯ ವಿಚಾರಣೆ ನಡೆಸಿದ ಮುಂಬೈ ಹೈಕೋರ್ಟ್, ಹೊಸ ಕಾರುಗಳ ಖರೀದಿಯನ್ನು ಕಡಿಮೆ ಮಾಡುವ ಅವಶ್ಯಕತೆ ಇದೆ. ಕಾರು ಖರೀದಿಸುವುದು ಅವಶ್ಯಕವಾದರೆ ಒಂದು ಕುಟುಂಬಕ್ಕೆ 4 ರಿಂದ 5 ಕಾರುಗಳನ್ನು ಖರೀದಿಸಲು ಅವಕಾಶ ನೀಡಬಾರದು ಎಂದು ಹೇಳಿದೆ.
ಕಾರು ಖರೀದಿಸುವವರಿಗೆ ಸಾಕಷ್ಟು ಪಾರ್ಕಿಂಗ್ ಸ್ಥಳವಿದೆಯೇ ಎಂಬುದನ್ನು ನಾವು ಮೊದಲು ಪರೀಕ್ಷಿಸಬೇಕಾಗಿದೆ ಎಂದು ನ್ಯಾಯ ಪೀಠ ಹೇಳಿದೆ. ಮಳೆಯಿಂದಾಗಿ ಮುಂಬೈನ ಬಹುತೇಕ ಎಲ್ಲಾ ರಸ್ತೆಗಳು ಜಲಾವೃತವಾಗುತ್ತಿವೆ. ಇದರ ಜೊತೆಗೆ ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುವುದು ಈಗ ಸಾಮಾನ್ಯವಾಗಿದೆ.
ರಸ್ತೆಯ 30% ನಷ್ಟು ಭಾಗವು ಎರಡೂ ಬದಿಗಳಲ್ಲಿ ಪಾರ್ಕಿಂಗ್ನಿಂದ ಆಕ್ರಮಿತವಾಗಿದೆ ಎಂದು ಮುಂಬೈ ಹೈಕೋರ್ಟ್ ಹೇಳಿದೆ. ಪಾರ್ಕಿಂಗ್ ಬಗ್ಗೆ ಸ್ಪಷ್ಟ ನೀತಿಯ ಅವಶ್ಯಕತೆ ಇದೆ ಎಂದು ಇದೇ ವೇಳೆ ಮುಂಬೈ ಹೈಕೋರ್ಟ್ ಹೇಳಿದೆ. ಮುಂಬೈ ಹೈಕೋರ್ಟ್ ಹೇಳಿರುವಂತೆ ವಾಸ್ತವವಾಗಿ ಭಾರತೀಯ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಉಂಟಾಗುತ್ತಿದೆ.
ವಾಹನ ಸವಾರರು ಎಲ್ಲೆಂದರಲ್ಲಿ ವಾಹನಗಳನ್ನು ಪಾರ್ಕಿಂಗ್ ಮಾಡುತ್ತಿರುವುದರಿಂದ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಸಮಸ್ಯೆ ಹೆಚ್ಚುತ್ತಿದೆ. ವಾಹನಗಳ ಸಂಖ್ಯೆಗೆ ಅನುಗುಣವಾಗಿ ರಸ್ತೆಗಳನ್ನು ಅಗಲಗೊಳಿಸದಿರುವುದು ಸಹ ಸಂಚಾರ ದಟ್ಟಣೆಗೆ ಪ್ರಮುಖ ಕಾರಣವಾಗಿದೆ.
ಜೊತೆಗೆ ಜನರು ಸಿಕ್ಕ ಸಿಕ್ಕ ಕಡೆಯಲ್ಲೆಲ್ಲಾ ರಸ್ತೆಗಳನ್ನು ಆಕ್ರಮಿಸಿಕೊಳ್ಳುತ್ತಿರುವುದು ಸಹ ಸಂಚಾರ ದಟ್ಟಣೆಗೆ ಕಾರಣವಾಗಿದೆ. ಮುಂಬೈ ಹೈಕೋರ್ಟ್ ಹೇಳಿರುವ ಪ್ರಕಾರ ಬಹುತೇಕ ಜನರು ತಮ್ಮ ವಾಹನಗಳನ್ನು ರಸ್ತೆಯ ಎರಡೂ ಬದಿಗಳಲ್ಲಿ ಪಾರ್ಕಿಂಗ್ ಮಾಡುತ್ತಿದ್ದಾರೆ.
ಇದು ವಾಹನಗಳ ಸಂಚಾರ ನಿರ್ಬಂಧಕ್ಕೆ ಹಾಗೂ ಸಂಚಾರ ದಟ್ಟಣೆಗೆ ಕಾರಣವಾಗುತ್ತದೆ. ಕೆಲವೊಮ್ಮೆ ಆಂಬ್ಯುಲೆನ್ಸ್ಗಳು ಹಾಗೂ ಅಗ್ನಿಶಾಮಕ ವಾಹನಗಳು ಕೂಡ ಈ ಟ್ರಾಫಿಕ್ ಜಾಮ್ನಲ್ಲಿ ಸಿಲುಕಿ ಕೊಳ್ಳುತ್ತವೆ. ಈ ಕಾರಣಕ್ಕೆ ಭಾರತದ ರಸ್ತೆಗಳಲ್ಲಿ ಉಂಟಾಗುತ್ತಿರುವ ಸಂಚಾರ ದಟ್ಟಣೆಯ ಸಮಸ್ಯೆಯನ್ನು ಕಡಿಮೆ ಮಾಡುವ ಅವಶ್ಯಕತೆ ಇದೆ.
ಸಂಚಾರ ದಟ್ಟಣೆಯ ಸಮಸ್ಯೆ ಕಡಿಮೆಯಾಗಬೇಕಾದರೆ ಇರುವ ರಸ್ತೆಗಳನ್ನು ಅಗಲಗೊಳಿಸಬೇಕು ಹಾಗೂ ಪಾರ್ಕಿಂಗ್ ಸಮಸ್ಯೆಯನ್ನು ಬಗೆ ಹರಿಸಬೇಕು. ಜೊತೆಗೆ ಪ್ರತಿಯೊಬ್ಬರೂ ಸಾಧ್ಯವಾದಷ್ಟು ಪ್ರತ್ಯೇಕ ವಾಹನಗಳನ್ನು ಬಳಸುವ ಬದಲು ಸಾರ್ವಜನಿಕ ಸಾರಿಗೆಯನ್ನು ಬಳಸಿದರೆ ಸಂಚಾರ ದಟ್ಟಣೆ ಸಮಸ್ಯೆಯನ್ನು ಕಡಿಮೆ ಮಾಡಬಹುದು.
ಆದರೆ ಕರೋನಾ ಸಾಂಕ್ರಾಮಿಕದ ಕಾರಣ ಜನರು ಸಾರ್ವಜನಿಕ ಸಾರಿಗೆಯನ್ನು ಬಳಸಲು ಹಿಂಜರಿಯುತ್ತಿದ್ದಾರೆ. ಕರೋನಾ ವೈರಸ್ ಹರಡ ಬಹುದೆಂಬ ಭೀತಿಯಿಂದ ಜನರು ತಮ್ಮ ಸ್ವಂತ ದ್ವಿ ಚಕ್ರ ವಾಹನ ಅಥವಾ ಕಾರುಗಳಲ್ಲಿ ಪ್ರಯಾಣಿಸಲು ಆದ್ಯತೆ ನೀಡುತ್ತಿದ್ದಾರೆ. ಇದು ಸಹ ಸಂಚಾರ ದಟ್ಟಣೆ ಸಮಸ್ಯೆಗೆ ಒಂದು ಕಾರಣವಾಗಿದೆ.
ಕರೋನಾ ವೈರಸ್ ಸಮಸ್ಯೆ ಕಡಿಮೆಯಾದ ನಂತರ ಜನರು ಸಾರ್ವಜನಿಕ ಸಾರಿಗೆಗೆ ಹೆಚ್ಚಿನ ಆದ್ಯತೆ ನೀಡಬಹುದು ಎಂದು ನಿರೀಕ್ಷಿಸಲಾಗಿದೆ. ಭಾರತದಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ಬೆಲೆ ಗಗನಕ್ಕೇರಿರುವುದೇ ಇದಕ್ಕೆ ಪ್ರಮುಖ ಕಾರಣವಾಗಿದೆ. ಆರ್ಥಿಕ ಮಿತ ವ್ಯಯದ ಕಾರಣಕ್ಕೆ ಜನರು ಸ್ವಂತ ವಾಹನದಲ್ಲಿ ಪ್ರಯಾಣಿಸುವುದಕ್ಕಿಂತ ಸಾರ್ವಜನಿಕ ಸಾರಿಗೆಯನ್ನು ಹೆಚ್ಚು ಬಳಸುವ ಸಾಧ್ಯತೆಗಳಿವೆ. ಭಾರತೀಯ ಆಟೋಮೊಬೈಲ್ ಅಸೋಸಿಯೇಷನ್ ಅಂಕಿ ಅಂಶಗಳ ಪ್ರಕಾರ ಕರೋನಾ ಸಾಂಕ್ರಾಮಿಕದ ನಂತರ ಪ್ಯಾಸೆಂಜರ್ ವಾಹನಗಳ ಮಾರಾಟದಲ್ಲಿ ಏರಿಕೆ ಕಂಡು ಬಂದಿದೆ. ಅದರಲ್ಲೂ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗುತ್ತಿವೆ.