Just In
- 1 hr ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 2 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 4 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 4 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News ಲೋಕಸಭಾ ಚುನಾವಣೆ 2024: ಈ ಆರು ಜಿಲ್ಲೆಗಳಲ್ಲಿ ಬಹುತೇಕ ಶೂನ್ಯ ಮತದಾನ; ಕಾರಣವೇನು?
- Sports LSG vs CSK IPL 2024: ಮತ್ತೊಮ್ಮೆ ಧೋನಿ, ಜಡೇಜಾ ಅಬ್ಬರ; ಲಕ್ನೋ ತಂಡಕ್ಕೆ ಸವಾಲಿನ ಗುರಿ ನೀಡಿದ ಸಿಎಸ್ಕೆ
- Movies Puttakkana Makkalu:ಸ್ನೇಹಾ ಕೈ ಸೇರಿಯೇ ಬಿಡ್ತು ವಿಚ್ಛೇದನದ ಪೇಪರ್; ಮುಂದೇನು?
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ಡೌನ್ ಎಫೆಕ್ಟ್: ನಕಲಿ ಎಂಎಲ್ಎ ಸ್ಟಿಕ್ಕರ್ ಬಳಸಿ ತಗ್ಲಾಕಿಕೊಂಡ ಐನಾತಿ..!
ಕರೋನಾ ವೈರಸ್ ಸೋಂಕು ಹರಡುವುದನ್ನು ತಪ್ಪಿಸುವ ಸಲುವಾಗಿ ದೇಶಾದ್ಯಂತ ಮೇ 3ರವರೆಗೆ ಲಾಕ್ಡೌನ್ ಘೋಷಿಸಲಾಗಿತ್ತು. ಈಗ ಕೇಂದ್ರ ಗೃಹ ಇಲಾಖೆಯು ಲಾಕ್ಡೌನ್ ಅನ್ನು ಮೇ 17ರವರೆಗೆ ವಿಸ್ತರಿಸಿದೆ. ಲಾಕ್ಡೌನ್ 3.0ನಲ್ಲಿ ಕೆಲವು ನಿಯಮಗಳು ಹಾಗೂ ಷರತ್ತುಗಳೊಂದಿಗೆ ಇಡೀ ದೇಶವನ್ನು ಮೂರು ವಲಯಗಳಾಗಿ ವಿಂಗಡಿಸಿ ವಿನಾಯಿತಿ ನೀಡಲಾಗಿದೆ.
ಈ ವಿನಾಯಿತಿಯನ್ನು ಜನರಿಗೆ ನೀಡಲಾಗಿದೆ. ಇದರಿಂದಾಗಿ ಜನರು ತಮ್ಮ ಅಗತ್ಯ ಕೆಲಸಗಳಿಗಾಗಿ ಮನೆಯಿಂದ ಹೊರಬಂದು ಅಗತ್ಯ ವಸ್ತುಗಳನ್ನು ಖರೀದಿಸಬಹುದು. ಲಾಕ್ಡೌನ್ 2.0ನಲ್ಲಿ, ಜನರು ಲಾಕ್ಡೌನ್ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಕಂಡು ಬಂದಿತ್ತು.
ಅನೇಕ ಜನರು ಹೊರಗೆ ಹೋಗಲು ಕಾನೂನುಬಾಹಿರ ಮಾರ್ಗಗಳನ್ನು ಹುಡುಕಿಕೊಂಡಿದ್ದರು. ಮುಂಬೈನಲ್ಲಿ ಇದೇ ರೀತಿಯ ಪ್ರಕರಣವೊಂದು ಬೆಳಕಿಗೆ ಬಂದಿದೆ, ಈ ಘಟನೆಯಲ್ಲಿ 20 ವರ್ಷದ ಯುವಕನೊಬ್ಬ ಲಾಕ್ಡೌನ್ ವೇಳೆಯಲ್ಲಿ ಹೊರಗೆ ಹೋಗಲು ತನ್ನ ಕಾರಿನ ಮೇಲೆ ಎಂಎಲ್ಎ ಸ್ಟಿಕ್ಕರ್ ಅಂಟಿಸಿಕೊಂಡಿದ್ದ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ವರದಿಗಳ ಪ್ರಕಾರ ನಕಲಿ ಸ್ಟಿಕ್ಕರ್ ಬಳಸಿ ಸಿಕ್ಕಿಹಾಕಿಕೊಂಡ ಯುವಕನನ್ನು ಮುಂಬೈನ ಅಂಧೇರಿ ಪ್ರದೇಶದ 20 ವರ್ಷ ವಯಸ್ಸಿನ ಸಬೆತ್ ಅಸ್ಲಂ ಷಾ ಎಂದು ಗುರುತಿಸಲಾಗಿದೆ. ಪೊಲೀಸ್ ಚೆಕ್ ಪಾಯಿಂಟ್ನಿಂದ ತಪ್ಪಿಸಿಕೊಳ್ಳಲು ಆತ ತನ್ನ ಕಾರಿನಲ್ಲಿ ನಕಲಿ ಎಂಎಲ್ಎ ಸ್ಟಿಕ್ಕರ್ ಅನ್ನು ಅಂಟಿಸಿಕೊಂಡಿದ್ದ.
ತಪಾಸಣೆ ವೇಳೆ ಈ ಯುವಕನನ್ನು ಪೊಲೀಸ್ ಪಾಯಿಂಟ್ನಲ್ಲಿ ತಡೆದು ನಿಲ್ಲಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಯುವಕ ಹೋಂಡಾ ಸಿವಿಕ್ ಕಾರಿನಲ್ಲಿ ಪ್ರಯಾಣಿಸುತ್ತಿದ್ದ. ಪೊಲೀಸರು ವೆಸ್ಟರ್ನ್ ಎಕ್ಸ್ಪ್ರೆಸ್ ಹೆದ್ದಾರಿಯಲ್ಲಿರುವ ಶ್ರೀ ಪ್ರಸಾದ್ ಹೋಟೆಲ್ ಬಳಿ ಯುವಕನನ್ನು ತಡೆದು ನಿಲ್ಲಿಸಿದ್ದಾರೆ.
MOST READ:ಮನೆ ತಲುಪಲು 1800 ಕಿ.ಮೀ ಸೈಕಲ್ ತುಳಿದ ಯುವಕ..!
ಈ ಯುವಕನು ಏಕಾಂಗಿಯಾಗಿ ಕಾರು ಚಾಲನೆ ಮಾಡುತ್ತಿರುವುದು ಹಾಗೂ ಕಾರಿನ ಮೇಲೆ ಎಂಎಲ್ಎ ಸ್ಟಿಕ್ಕರ್ ಇರುವುದನ್ನು ಕಂಡ ಪೊಲೀಸರಿಗೆ ಅನುಮಾನ ಬಂದು, ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ವಿಚಾರಣೆಯ ಸಮಯದಲ್ಲಿ, ಆ ಯುವಕನು ತನ್ನ ತಪ್ಪನ್ನು ಒಪ್ಪಿಕೊಂಡಿದ್ದಾನೆ.
ಲಾಕ್ಡೌನ್ನಲ್ಲಿ ಪೊಲೀಸರು ತಪಾಸಣೆ ಮಾಡುವುದರಿಂದ ತಪ್ಪಿಸಿಕೊಳ್ಳುವ ಸಲುವಾಗಿ ಈ ಸ್ಟಿಕ್ಕರ್ ಅನ್ನು ಅಂಟಿಸಿಕೊಳ್ಳಲಾಗಿತ್ತು ಎಂದು ಒಪ್ಪಿಕೊಂಡಿದ್ದಾನೆ. ಐಪಿಸಿ, ವಿಪತ್ತು ನಿರ್ವಹಣಾ ಕಾಯ್ದೆ, ರಾಜ್ಯ ರಾಯಭಾರ ಕಾಯ್ದೆ ಹಾಗೂ ಇತರ ಕಾಯ್ದೆಗಳಡಿ ಯುವಕನ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.