Just In
- 3 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 5 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 5 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 6 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ಸಂಯುಕ್ತಾ ಹೊರನಾಡು ತೆರೆದಿದ್ದ ಆರ್ಟ್ ರೂಮ್ ಈಗ ಹೇಗಿದೆ?
- News Rain Alert: ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ: ಈ ಜಿಲ್ಲೆಗಳಲ್ಲಿ ಭಾರಿ ಬಿಸಿಲು
- Sports DC vs GT IPL 2024: ಅಕ್ಷರ್, ಪಂತ್ ಭರ್ಜರಿ ಬ್ಯಾಟಿಂಗ್; ಗುಜರಾತ್ಗೆ ಸವಾಲಿನ ಗುರಿ ನೀಡಿದ ಡೆಲ್ಲಿ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಾಡಿಗೆ ಸೈಕಲ್ ರಿಕ್ಷಾನೇ ಈ ದಂಪತಿಗಳ ಪಾಲಿನ ಆಂಬ್ಯುಲೆನ್ಸ್
ಲಾಕ್ ಡೌನ್ ಅವಧಿಯಲ್ಲಿ ಸಾರ್ವಜನಿಕ ಸಾರಿಗೆ ವಾಹನಗಳಾದ ಬಸ್, ಆಟೋ ಹಾಗೂ ಟ್ಯಾಕ್ಸಿಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿತ್ತು. ಈ ಕಾರಣಕ್ಕೆ ಹಲವಾರು ಜನರು ಸೈಕಲ್ ಹಾಗೂ ದ್ವಿಚಕ್ರ ವಾಹನಗಳ ಮೂಲಕ ಸಾವಿರಾರು ಕಿ.ಮೀ ಸಂಚರಿಸಿದರು.
ಸೈಕಲ್ ಹಾಗೂ ದ್ವಿಚಕ್ರ ವಾಹನಗಳಿಲ್ಲದವರು ಕಾಲ್ನಡಿಗೆಯ ಮೂಲಕವೇ ತಮ್ಮ ಊರುಗಳನ್ನು ಸೇರಿಕೊಂಡರು. ಈಗ ಲಾಕ್ ಡೌನ್ ತೆಗೆದು ಹಾಕಲಾಗಿದ್ದರೂ ಪರಿಸ್ಥಿತಿಯು ಇನ್ನೂ ಸಹಜ ಸ್ಥಿತಿಗೆ ಬಂದಿಲ್ಲ. ತನ್ನ ಅನಾರೋಗ್ಯ ಪೀಡಿತ ಪತ್ನಿಯನ್ನು ಪತಿಯೊಬ್ಬ 90 ಕಿ.ಮೀ ದೂರ ಸೈಕಲ್ ರಿಕ್ಷಾದಲ್ಲಿ ಕರೆದೊಯ್ದು ಆಸ್ಪತ್ರೆಗೆ ದಾಖಲಿಸಿರುವ ಘಟನೆ ವರದಿಯಾಗಿದೆ.
ಒಡಿಶಾದ ಪುರಿ ಜಿಲ್ಲೆಯ ಸಾಹಿಗೋಪಾಲ್ ಮೂಲದ ಕಬೀರ್ ಬೂಯಿನ್ ಎಂಬುವವರೇ ತಮ್ಮ ಪತ್ನಿಯನ್ನು ಸೈಕಲ್ ನಲ್ಲಿ ಆಸ್ಪತ್ರೆಗೆ ಕರೆದೊಯ್ದವರು. ಅವರ ಪತ್ನಿ ಸುಕಂತಿ ಯವರ ಆರೋಗ್ಯವು ಎರಡು ವಾರಗಳ ಹಿಂದೆ ಹದಗೆಟ್ಟಿತ್ತು. ಅವರನ್ನು ಜಿಲ್ಲಾ ಜನರಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ದಿನದಿಂದ ದಿನಕ್ಕೆ ಅವರ ಆರೋಗ್ಯ ಹದಗೆಡುತ್ತಿತ್ತು.
MOSTREAD: ಟ್ರ್ಯಾಕ್ಟರ್ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್ಗಳಿರಲು ಕಾರಣಗಳಿವು
ಈ ಕಾರಣಕ್ಕೆ ಸುಕಂತಿಯವರನ್ನು ಕಟಕ್ನ ಎಸ್ಸಿಬಿ ಆಸ್ಪತ್ರೆಗೆ ಕರೆದೊಯ್ಯುವಂತೆ ವೈದ್ಯರು ಸೂಚಿಸಿದ್ದಾರೆ. ಆದರೆ ಸುಕಂತಿಯವರನ್ನು ಆ ಆಸ್ಪತ್ರೆಗೆ ಕರೆದೊಯ್ಯುವಷ್ಟು ಹಣ ಕಬೀರ್ ಬೂಯಿನ್ ರವರ ಬಳಿಯಿರಲಿಲ್ಲ. ಆದ್ದರಿಂದ ತಮ್ಮ ಪತ್ನಿಯನ್ನು ಮನೆಗೆ ಕರೆತಂದಿದ್ದಾರೆ.
ಮನೆಗೆ ಬಂದ ನಂತರ ಸುಕಂತಿಯ ಆರೋಗ್ಯವು ಮತ್ತಷ್ಟು ಹದಗೆಟ್ಟಿತು. ಕಬೀರ್ ಬೂಯಿನ್ ದಿನಕ್ಕೆ 50 ರೂಪಾಯಿಗಳ ಲೆಕ್ಕದಲ್ಲಿ ಸೈಕಲ್ ರಿಕ್ಷಾವನ್ನು ಬಾಡಿಗೆಗೆ ಪಡೆದಿದ್ದಾರೆ. ಆ ಸೈಕಲ್ ರಿಕ್ಷಾದಲ್ಲಿ ತಮ್ಮ ಹೆಂಡತಿಯೊಂದಿಗೆ ಕಟಕ್ಗೆ ಬಂದಿದ್ದಾರೆ. ಕಟಕ್ ಕಬೀರ್ ರವರ ಊರಿನಿಂದ ಸುಮಾರು 90 ಕಿ.ಮೀ ದೂರದಲ್ಲಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್
ಅವರು ಕಟಕ್ಗೆ ಬಂದ ನಂತರ ಅಲ್ಲಿದ್ದ ಕೆಲವು ಸಾಮಾಜಿಕ ಕಾರ್ಯಕರ್ತರು ಹಾಗೂ ಪತ್ರಕರ್ತರು ಅವರ ನೆರವಿಗೆ ಧಾವಿಸಿದ್ದಾರೆ. ಅವರ ಸ್ಥಿತಿ ಕೇಳಿ ಸುಕಂತಿಯವರನ್ನು ಎಸ್ಸಿಬಿ ಆಸ್ಪತ್ರೆಗೆ ದಾಖಲಿಸಲು ಸಹಾಯ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಕಬೀರ್ ಬೂಯಿನ್, ನಾನು ನನ್ನ ಹೆಂಡತಿಯನ್ನು ಕಟಕ್ ಗೆ ಕರೆತರಲು ಆಟೋ ರಿಕ್ಷಾ ಬಾಡಿಗೆಗೆ ಪಡೆಯಲು ನೋಡಿದೆ. ಅವರು ಕಟಕ್ಗೆ ಬರಲು ರೂ.1,200 ರೂಪಾಯಿ ಕೇಳಿದರು. ಅಷ್ಟೊಂದು ಹಣ ನನ್ನ ಬಳಿ ಇಲ್ಲದ ಕಾರಣ ಸೈಕಲ್ ರಿಕ್ಷಾ ಬಾಡಿಗೆಗೆ ಪಡೆದು ನನ್ನ ಹೆಂಡತಿಯನ್ನು ಆಸ್ಪತ್ರೆಗೆ ಕರೆತಂದೆ ಎಂದು ಹೇಳಿದ್ದಾರೆ.
MOSTREAD: ಲಾಕ್ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ
ಸುಕಂತಿ ಒಂದು ವರ್ಷದಿಂದ ಅನಾರೋಗ್ಯ ಪೀಡಿತಳಾಗಿದ್ದಾಳೆ. ಆಕೆಯನ್ನು ಆಸ್ಪತ್ರೆಗೆ ಕರೆ ತರುವಾಗ ಸಾಕಷ್ಟು ಸಂಕಷ್ಟಗಳನ್ನು ಎದುರಿಸಿದೆ. ಆಕೆಗೆ ಎಸ್ಸಿಪಿ ಆಸ್ಪತ್ರೆಯಲ್ಲಿ ಒಳ್ಳೆಯ ಚಿಕಿತ್ಸೆ ದೊರೆಯುವ ಭರವಸೆ ಇದೆ ಎಂದು ಹೇಳಿದ್ದಾರೆ. ಈ ಘಟನೆಯ ಬಗ್ಗೆ ಒಡಿಶಾ ಟಿವಿ ವರದಿ ಮಾಡಿದೆ.