Just In
- 59 min ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
- 1 hr ago ಅತ್ಯಾಧುನಿಕ ಅಡಾಸ್ನೊಂದಿಗೆ ಬರಲಿದೆ ಈ ಕಿಯಾ ಕಾರು: ಟಾಟಾ ಪಂಚ್ಗೆ ಇನ್ನು ದೇವರೇ ಗತಿ!
- 1 hr ago ಸಾಯಿಬಾಬಾ ಭಕ್ತರಿಗೆ ಸಿಹಿಸುದ್ದಿ: ಇಲ್ಲಿಂದ ಶಿರಡಿಗೆ ಪಲ್ಲಕ್ಕಿ ಬಸ್.. ಕಡಿಮೆ ಖರ್ಚಿನಲ್ಲಿ ಹೋಗಬಹುದು!
- 3 hrs ago Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
Don't Miss!
- Lifestyle ಹೌಸ್ವೈಫ್ ಆಗಿರುವ ಈ ಮಹಿಳೆ ದಿನದಲ್ಲಿ 2 ಗಂಟೆ ಕೆಲಸ ಮಾಡಿ ಲಕ್ಷ ಗಳಿಸುತ್ತಿದ್ದಾರಂತೆ!
- Movies ಕನ್ನಡ ಚಿತ್ರರಂಗಕ್ಕೆ ಬಂದ ಕಾಲಿವುಡ್ನ ಕಿನ್ನರಿ ; ಡಾಲಿಯ 'ಉತ್ತರಕಾಂಡ'ಕ್ಕೆ ಇವರೇ ನಾಯಕಿ..?
- News ಜಲ ಜೀವನ್ ಮಿಷನ್ ಯೋಜನೆ ವ್ಯರ್ಥ: ಈ ವೃದ್ದೆಗೆ ಕಣ್ಣೀರೇ ಗತಿ
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Finance ಅಂಬುಜಾ ಸಿಮೆಂಟ್ ಮೇಲೆ ಅದಾನಿ ಗ್ರೂಪ್ನಿಂದ 8,339 ಕೋಟಿ ರೂ. ಹೂಡಿಕೆ
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇನ್ಮುಂದೆ ಬಂಕ್ಗಳಲ್ಲಿ ಬಾಟಲ್ಗಳಿಗೆ ಪೆಟ್ರೋಲ್ ಹಾಕಲ್ಲ..!
ವಾಹನಗಳಲ್ಲಿ ಏಕಾಏಕಿ ಪೆಟ್ರೋಲ್ ಅಥವಾ ಡೀಸೆಲ್ ಖಾಲಿಯಾದಾಗ ಪೆಟ್ರೋಲ್ ಬಂಕ್ಗಳವರೆಗೆ ವಾಹನಗಳನ್ನು ತಳ್ಳಿಕೊಂಡು ಹೋಗುವುದು ಯಾರಿಗೆ ಆಗಲಿ ತ್ರಾಸದಾಯಕ ಕೆಲಸ. ಈ ಕಾರಣಕ್ಕೆ ತಕ್ಷಣಕ್ಕೆ ನೆನಪಾಗುವುದು ಖಾಲಿ ವಾಟರ್ ಬಾಟಲ್ಗಳು.
ಖಾಲಿ ವಾಟರ್ ಬಾಟಲ್ಗಳನ್ನು ತೆಗೆದುಕೊಂಡು ಹೋದರೆ ಹಿಂದೆ ಮುಂದೆ ನೋಡದ ಪೆಟ್ರೋಲ್ ಬಂಕ್ನವರು ಆ ಬಾಟಲ್ಗಳಲ್ಲಿ ಪೆಟ್ರೋಲ್, ಡೀಸೆಲ್ ಹಾಕುತ್ತಾರೆ. ಆದರೆ ಇನ್ನು ಮುಂದೆ ಹೀಗೆ ಖಾಲಿ ವಾಟರ್ ಬಾಟಲ್ ಹಿಡಿದು ಪೆಟ್ರೋಲ್ ಬಂಕಿಗೆ ಹೋದರೆ, ಪೆಟ್ರೋಲ್ - ಡೀಸೆಲ್ ಸಿಗುವುದಿಲ್ಲ.
ತಮಿಳುನಾಡಿನ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೆಷನ್ನವರು ಇನ್ನು ಮುಂದೆ ತಮಿಳುನಾಡಿನಲ್ಲಿ ವಾಟರ್ ಬಾಟಲ್ಗಳಿಗೆ ಪೆಟ್ರೋಲ್ - ಡೀಸೆಲ್ ಹಾಕದಂತೆ ಕರೆ ನೀಡಿದ್ದಾರೆ. ಇನ್ನು ಮುಂದೆ ವಾಹನಗಳನ್ನು ಬಂಕ್ಗಳಿಗೆ ತಂದರೆ ಮಾತ್ರ ಪೆಟ್ರೋಲ್ ನೀಡುವಂತೆ ತಿಳಿಸಲಾಗಿದೆ.
ತಮಿಳುನಾಡು ಪೆಟ್ರೋಲ್ ಡೀಲರ್ಸ್ ಅಸೋಸಿಯೆಷನ್ನವರು ಈ ರೀತಿ ಏಕಾಏಕಿ ಈ ನಿರ್ಧಾರ ಕೈಗೊಳ್ಳಲು ಕಾರಣ, ಕಳೆದ ವಾರ ನಡೆದ ಹೈದರಾಬಾದ್ನ ಪಶುವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ.
ಕಳೆದ ವಾರ ಹೈದರಾಬಾದ್ನ ಪಶುವೈದ್ಯೆಯನ್ನು ಸಾಮೂಹಿಕ ಅತ್ಯಾಚಾರವೆಸಗಿ, ನಂತರ ಪೆಟ್ರೋಲ್ ಸುರಿದು ಕೊಲೆ ಮಾಡಲಾಗಿತ್ತು. ಈ ಘಟನೆಯು ದೇಶಾದ್ಯಂತ ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆಯ ಸಂಬಂಧ ನಾಲ್ವರನ್ನು ಬಂಧಿಸಿದ್ದ ಪೊಲೀಸರು ಸ್ಥಳ ಮಹಜರು ವೇಳೆ ಎನ್ಕೌಂಟರ್ ಮಾಡಿದ್ದರು.
ಅತ್ಯಾಚಾರವೆಸಗಿದ ಬಳಿಕ ಬಾಟಲ್ನಲ್ಲಿದ್ದ ಪೆಟ್ರೋಲ್ ಅನ್ನು ಪಶುವೈದ್ಯೆಯ ಮೇಲೆ ಸುರಿದು ಕೊಲೆ ಮಾಡಿರುವುದಾಗಿ ಆರೋಪಿಗಳು ತನಿಖೆಯಲ್ಲಿ ಬಾಯಿ ಬಿಟ್ಟಿದ್ದರು. ಈ ಕಾರಣಕ್ಕೆ ವಾಟರ್ ಬಾಟಲ್ಗಳಲ್ಲಿ ಪೆಟ್ರೋಲ್ ಮಾರಾಟ ಮಾಡುವುದನ್ನು ನಿಷೇಧಿಸಬೇಕೆಂದು ದೇಶಾದ್ಯಂತ ಒತ್ತಾಯಿಸಲಾಗುತ್ತಿದೆ.
ಈ ಒತ್ತಾಯಕ್ಕೆ ಮಣಿದಿರುವ ತಮಿಳುನಾಡು ಪೆಟ್ರೋಲ್ ಡೀಲರ್ಸ್ ಅಸೋಸಿಯೇಷನ್ ಇನ್ನು ಮುಂದೆ ತಮಿಳುನಾಡಿನಲ್ಲಿ ವಾಟರ್ ಬಾಟಲ್ಗಳಿಗೆ ಪೆಟ್ರೋಲ್ ಹಾಕದಂತೆ ಕರೆ ನೀಡಿದೆ. ಇದರ ಜೊತೆಗೆ ತಮಿಳುನಾಡು ಸರ್ಕಾರವೂ ಸಹ ಬಾಟಲ್ಗಳಲ್ಲಿ ಪೆಟ್ರೋಲ್ ಹಾಕಿ ಮಾರಾಟ ಮಾಡದಂತೆ ಸೂಚಿಸಿದೆ.
MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ
ಆದರೆ ಕೆಲವರು ಈ ನಿಷೇಧವನ್ನು ತೆಗೆದು ಹಾಕುವಂತೆ ಸಾಮಾಜಿಕ ಜಾಲತಾಣಗಳ ಮೂಲಕ ಒತ್ತಾಯಿಸುತ್ತಿದ್ದಾರೆ. ಏಕಾಏಕಿ ಪೆಟ್ರೋಲ್ ಖಾಲಿಯಾದರೆ ಪೆಟ್ರೋಲ್ ಬಂಕ್ಗಳವರೆಗೆ ವಾಹನಗಳನ್ನು ತಳ್ಳಿಕೊಂಡು ಹೋಗುವುದು ಕಷ್ಟವಾಗುವ ಕಾರಣ ಈ ನಿಷೇಧವನ್ನು ತೆಗೆದುಹಾಕುವಂತೆ ಒತ್ತಾಯಿಸಲಾಗುತ್ತಿದೆ.
MOST READ: ಬೈಕುಗಳಲ್ಲಿ ಡೀಸೆಲ್ ಎಂಜಿನ್ ಏಕೆ ಬಳಸಲ್ಲ ಗೊತ್ತಾ?
ಕೆಲವು ಪೆಟ್ರೋಲ್ ಬಂಕ್ಗಳಲ್ಲಿ ಪೆಟ್ರೋಲ್ - ಡೀಸೆಲ್ ಅನ್ನು ಬಾಟಲ್ಗಳಿಗೆ ತುಂಬಿಸಿ ಮಾರಾಟ ಮಾಡುವುದಿಲ್ಲ. ಬಾಟಲ್ಗಳಿಗೆ ತುಂಬಿಸಿದರೆ ಎಷ್ಟು ಲೀಟರ್ ಪೆಟ್ರೋಲ್ ಹಾಕಲಾಗಿದೆ ಎಂಬುದು ತಿಳಿದು ಬರುವ ಕಾರಣಕ್ಕೆ ಪೆಟ್ರೋಲ್ ಬಂಕ್ನವರೇ ವಾಟರ್ ಬಾಟಲ್ಗಳಿಗೆ ಪೆಟ್ರೋಲ್ ಹಾಕಲು ಹಿಂದೇಟು ಹಾಕುತ್ತಾರೆ.
MOST READ: ಹುಡುಗಿಯರಿಗೆ ಗೇರ್ ಬದಲಿಸಲು ಬಿಟ್ಟು ಡಿಎಲ್ ಕಳೆದುಕೊಂಡ ಡ್ರೈವರ್..!
ತಮಿಳುನಾಡು ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ನವರ ಈ ನಿರ್ಧಾರಕ್ಕೆ ಕೆಲವರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಯಾವುದೇ ವಾಹನ ಮಾಲೀಕರು ತಮ್ಮ ವಾಹನಗಳನ್ನು ಹೊರತೆಗೆಯುವ ಮುನ್ನ ವಾಹನದಲ್ಲಿ ಎಷ್ಟು ಪ್ರಮಾಣದ ಪೆಟ್ರೋಲ್ ಇದೆ ಎಂಬುದನ್ನು ಖಚಿತಪಡಿಸಿಕೊಂಡು ವಾಹನ ಹೊರತೆಗೆದರೆ ಪೆಟ್ರೋಲ್ ಖಾಲಿಯಾದಾಗ ಪೆಟ್ರೋಲ್ ಬಂಕ್ಗಳವರೆಗೆ ತಳ್ಳಿಕೊಂಡು ಹೋಗುವುದು ತಪ್ಪುತ್ತದೆ.