Just In
- 16 min ago Honda: ಭಾರತದಲ್ಲಿ ಹೋಂಡಾ ಹೊಸ ಮೈಲಿಗಲ್ಲು: ಎಷ್ಟು ಮಂದಿಯ ಬಳಿ ಆಕ್ಟೀವಾ, ಶೈನ್ ಇದೆ ಹೇಳಿ?
- 1 hr ago ಜನಪ್ರಿಯ ಕಂಪನಿಗಳಿಂದ ಮುಂಬರುವ ಪುಟ್ಟ ಕಾರುಗಳಿವು.. ಇವೇ ಮಿಡಲ್ ಕ್ಲಾಸ್ ಜನರ ಫೇವರಿಟ್ ಆಗುವುದು ಪಕ್ಕಾ!
- 3 hrs ago ಬುಕ್ ಮಾಡಿದ ರೈಲಿನ ಸೀಟಿನಲ್ಲಿ ಬೇರೆಯವರು ಕೂತಿದ್ರೆ ಏನ್ ಮಾಡಬೇಕು ಗೊತ್ತಾ? ಸಿಂಪಲ್ ಪರಿಹಾರ
- 3 hrs ago TVS iQube: ಲಕ್ಷಾಂತರ ಭಾರತೀಯರ ನೆಚ್ಚಿನ ಸ್ಕೂಟರ್ನ ಡೌನ್ಪೇಮೆಂಟ್, ಇಎಂಐ, ಲೋನ್ ವಿವರ!
Don't Miss!
- News ಬಿಎಸ್ವೈ ಹಾಗೂ "ಆ" ಮಹಾನ್ ನಾಯಕನಿಂದಲೇ ಮಗನಿಗೆ ಚಿತ್ರದುರ್ಗ ಬಿಜೆಪಿ ಟಿಕೆಟ್ ತಪ್ತು: ಹೊಳಲ್ಕೆರೆ ಶಾಸಕ
- Movies ಗುರುಪ್ರಸಾದ್ಗೆ ತಿರುಗೇಟು ಕೊಟ್ಟ ಶ್ರುತಿ ಹರಿಹರನ್ ; ನನ್ನ ಮೀಟೂ ಕಥೆ ಇನ್ನೂ ಮುಗಿದಿಲ್ಲ ಎಂದ ನಟಿ..!
- Lifestyle ವಿಶ್ವದಲ್ಲೇ ಅತೀ ಹೆಚ್ಚು ಬಾರಿ ಚುನಾವಣೆ ಸೋತ ವ್ಯಕ್ತಿ..! ಯಾರು ಈ ಸೋಲುವ ಸರದಾರ ಗೊತ್ತಾ?
- Finance ನಿಮಗೆ ಗೊತ್ತಲ್ಲದೇ ನಿಮ್ಮ ಹೆಸರಲ್ಲಿ ಖಾತೆ ತೆರೆದಿರ್ತಾರೆ, ಪಿಂಚಣಿ ಯೋಜನೆ ಬಗ್ಗೆ ಹುಷಾರಾಗಿರಿ
- Sports IPL 2024: ಐಪಿಎಲ್ನಲ್ಲಿ ವಿಶಿಷ್ಟ ದಾಖಲೆ ಬರೆದ ಜಯದೇವ್ ಉನಾದ್ಕಟ್; ಈ ಸಾಧನೆ ಮಾಡಿದ ಮೊದಲ ಭಾರತೀಯ
- Technology iPhones: ಬೇಕಿತ್ತಾ ಇದೆಲ್ಲ? ನಕಲಿ ಐಫೋನ್ ಮೂಲಕ ಆಪಲ್ಗೆ ಪಂಗನಾಮ ಹಾಕಿದವನಿಗೆ ಜೈಲೂಟ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಇನ್ಮುಂದೆ ಬಂಕ್ಗಳಲ್ಲಿ ಬಾಟಲ್ಗಳಿಗೆ ಪೆಟ್ರೋಲ್ ಹಾಕಲ್ಲ..!
ವಾಹನಗಳಲ್ಲಿ ಏಕಾಏಕಿ ಪೆಟ್ರೋಲ್ ಅಥವಾ ಡೀಸೆಲ್ ಖಾಲಿಯಾದಾಗ ಪೆಟ್ರೋಲ್ ಬಂಕ್ಗಳವರೆಗೆ ವಾಹನಗಳನ್ನು ತಳ್ಳಿಕೊಂಡು ಹೋಗುವುದು ಯಾರಿಗೆ ಆಗಲಿ ತ್ರಾಸದಾಯಕ ಕೆಲಸ. ಈ ಕಾರಣಕ್ಕೆ ತಕ್ಷಣಕ್ಕೆ ನೆನಪಾಗುವುದು ಖಾಲಿ ವಾಟರ್ ಬಾಟಲ್ಗಳು.
ಖಾಲಿ ವಾಟರ್ ಬಾಟಲ್ಗಳನ್ನು ತೆಗೆದುಕೊಂಡು ಹೋದರೆ ಹಿಂದೆ ಮುಂದೆ ನೋಡದ ಪೆಟ್ರೋಲ್ ಬಂಕ್ನವರು ಆ ಬಾಟಲ್ಗಳಲ್ಲಿ ಪೆಟ್ರೋಲ್, ಡೀಸೆಲ್ ಹಾಕುತ್ತಾರೆ. ಆದರೆ ಇನ್ನು ಮುಂದೆ ಹೀಗೆ ಖಾಲಿ ವಾಟರ್ ಬಾಟಲ್ ಹಿಡಿದು ಪೆಟ್ರೋಲ್ ಬಂಕಿಗೆ ಹೋದರೆ, ಪೆಟ್ರೋಲ್ - ಡೀಸೆಲ್ ಸಿಗುವುದಿಲ್ಲ.
ತಮಿಳುನಾಡಿನ ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೆಷನ್ನವರು ಇನ್ನು ಮುಂದೆ ತಮಿಳುನಾಡಿನಲ್ಲಿ ವಾಟರ್ ಬಾಟಲ್ಗಳಿಗೆ ಪೆಟ್ರೋಲ್ - ಡೀಸೆಲ್ ಹಾಕದಂತೆ ಕರೆ ನೀಡಿದ್ದಾರೆ. ಇನ್ನು ಮುಂದೆ ವಾಹನಗಳನ್ನು ಬಂಕ್ಗಳಿಗೆ ತಂದರೆ ಮಾತ್ರ ಪೆಟ್ರೋಲ್ ನೀಡುವಂತೆ ತಿಳಿಸಲಾಗಿದೆ.
ತಮಿಳುನಾಡು ಪೆಟ್ರೋಲ್ ಡೀಲರ್ಸ್ ಅಸೋಸಿಯೆಷನ್ನವರು ಈ ರೀತಿ ಏಕಾಏಕಿ ಈ ನಿರ್ಧಾರ ಕೈಗೊಳ್ಳಲು ಕಾರಣ, ಕಳೆದ ವಾರ ನಡೆದ ಹೈದರಾಬಾದ್ನ ಪಶುವೈದ್ಯೆ ಮೇಲಿನ ಅತ್ಯಾಚಾರ ಹಾಗೂ ಕೊಲೆ ಪ್ರಕರಣ.
ಕಳೆದ ವಾರ ಹೈದರಾಬಾದ್ನ ಪಶುವೈದ್ಯೆಯನ್ನು ಸಾಮೂಹಿಕ ಅತ್ಯಾಚಾರವೆಸಗಿ, ನಂತರ ಪೆಟ್ರೋಲ್ ಸುರಿದು ಕೊಲೆ ಮಾಡಲಾಗಿತ್ತು. ಈ ಘಟನೆಯು ದೇಶಾದ್ಯಂತ ಜನಾಕ್ರೋಶಕ್ಕೆ ಕಾರಣವಾಗಿತ್ತು. ಈ ಘಟನೆಯ ಸಂಬಂಧ ನಾಲ್ವರನ್ನು ಬಂಧಿಸಿದ್ದ ಪೊಲೀಸರು ಸ್ಥಳ ಮಹಜರು ವೇಳೆ ಎನ್ಕೌಂಟರ್ ಮಾಡಿದ್ದರು.
ಅತ್ಯಾಚಾರವೆಸಗಿದ ಬಳಿಕ ಬಾಟಲ್ನಲ್ಲಿದ್ದ ಪೆಟ್ರೋಲ್ ಅನ್ನು ಪಶುವೈದ್ಯೆಯ ಮೇಲೆ ಸುರಿದು ಕೊಲೆ ಮಾಡಿರುವುದಾಗಿ ಆರೋಪಿಗಳು ತನಿಖೆಯಲ್ಲಿ ಬಾಯಿ ಬಿಟ್ಟಿದ್ದರು. ಈ ಕಾರಣಕ್ಕೆ ವಾಟರ್ ಬಾಟಲ್ಗಳಲ್ಲಿ ಪೆಟ್ರೋಲ್ ಮಾರಾಟ ಮಾಡುವುದನ್ನು ನಿಷೇಧಿಸಬೇಕೆಂದು ದೇಶಾದ್ಯಂತ ಒತ್ತಾಯಿಸಲಾಗುತ್ತಿದೆ.
ಈ ಒತ್ತಾಯಕ್ಕೆ ಮಣಿದಿರುವ ತಮಿಳುನಾಡು ಪೆಟ್ರೋಲ್ ಡೀಲರ್ಸ್ ಅಸೋಸಿಯೇಷನ್ ಇನ್ನು ಮುಂದೆ ತಮಿಳುನಾಡಿನಲ್ಲಿ ವಾಟರ್ ಬಾಟಲ್ಗಳಿಗೆ ಪೆಟ್ರೋಲ್ ಹಾಕದಂತೆ ಕರೆ ನೀಡಿದೆ. ಇದರ ಜೊತೆಗೆ ತಮಿಳುನಾಡು ಸರ್ಕಾರವೂ ಸಹ ಬಾಟಲ್ಗಳಲ್ಲಿ ಪೆಟ್ರೋಲ್ ಹಾಕಿ ಮಾರಾಟ ಮಾಡದಂತೆ ಸೂಚಿಸಿದೆ.
MOST READ: ಖರೀದಿಸಿದ ಬೈಕ್ ಪಡೆಯಲು ಕಾನೂನು ಹೋರಾಟ ಮಾಡಿದ ಉದ್ಯಮಿ
ಆದರೆ ಕೆಲವರು ಈ ನಿಷೇಧವನ್ನು ತೆಗೆದು ಹಾಕುವಂತೆ ಸಾಮಾಜಿಕ ಜಾಲತಾಣಗಳ ಮೂಲಕ ಒತ್ತಾಯಿಸುತ್ತಿದ್ದಾರೆ. ಏಕಾಏಕಿ ಪೆಟ್ರೋಲ್ ಖಾಲಿಯಾದರೆ ಪೆಟ್ರೋಲ್ ಬಂಕ್ಗಳವರೆಗೆ ವಾಹನಗಳನ್ನು ತಳ್ಳಿಕೊಂಡು ಹೋಗುವುದು ಕಷ್ಟವಾಗುವ ಕಾರಣ ಈ ನಿಷೇಧವನ್ನು ತೆಗೆದುಹಾಕುವಂತೆ ಒತ್ತಾಯಿಸಲಾಗುತ್ತಿದೆ.
MOST READ: ಬೈಕುಗಳಲ್ಲಿ ಡೀಸೆಲ್ ಎಂಜಿನ್ ಏಕೆ ಬಳಸಲ್ಲ ಗೊತ್ತಾ?
ಕೆಲವು ಪೆಟ್ರೋಲ್ ಬಂಕ್ಗಳಲ್ಲಿ ಪೆಟ್ರೋಲ್ - ಡೀಸೆಲ್ ಅನ್ನು ಬಾಟಲ್ಗಳಿಗೆ ತುಂಬಿಸಿ ಮಾರಾಟ ಮಾಡುವುದಿಲ್ಲ. ಬಾಟಲ್ಗಳಿಗೆ ತುಂಬಿಸಿದರೆ ಎಷ್ಟು ಲೀಟರ್ ಪೆಟ್ರೋಲ್ ಹಾಕಲಾಗಿದೆ ಎಂಬುದು ತಿಳಿದು ಬರುವ ಕಾರಣಕ್ಕೆ ಪೆಟ್ರೋಲ್ ಬಂಕ್ನವರೇ ವಾಟರ್ ಬಾಟಲ್ಗಳಿಗೆ ಪೆಟ್ರೋಲ್ ಹಾಕಲು ಹಿಂದೇಟು ಹಾಕುತ್ತಾರೆ.
MOST READ: ಹುಡುಗಿಯರಿಗೆ ಗೇರ್ ಬದಲಿಸಲು ಬಿಟ್ಟು ಡಿಎಲ್ ಕಳೆದುಕೊಂಡ ಡ್ರೈವರ್..!
ತಮಿಳುನಾಡು ಪೆಟ್ರೋಲಿಯಂ ಡೀಲರ್ಸ್ ಅಸೋಸಿಯೇಷನ್ನವರ ಈ ನಿರ್ಧಾರಕ್ಕೆ ಕೆಲವರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ. ಯಾವುದೇ ವಾಹನ ಮಾಲೀಕರು ತಮ್ಮ ವಾಹನಗಳನ್ನು ಹೊರತೆಗೆಯುವ ಮುನ್ನ ವಾಹನದಲ್ಲಿ ಎಷ್ಟು ಪ್ರಮಾಣದ ಪೆಟ್ರೋಲ್ ಇದೆ ಎಂಬುದನ್ನು ಖಚಿತಪಡಿಸಿಕೊಂಡು ವಾಹನ ಹೊರತೆಗೆದರೆ ಪೆಟ್ರೋಲ್ ಖಾಲಿಯಾದಾಗ ಪೆಟ್ರೋಲ್ ಬಂಕ್ಗಳವರೆಗೆ ತಳ್ಳಿಕೊಂಡು ಹೋಗುವುದು ತಪ್ಪುತ್ತದೆ.