ಕುಡಿದು ವಾಹನ ಚಾಲನೆ ಮಾಡಿದ 40ಕ್ಕೂ ಹೆಚ್ಚು ವಾಹನ ಸವಾರರನ್ನು ಬಂಧಿಸಿದ ಹೈದರಾಬಾದ್ ಪೊಲೀಸರು
ದೇಶದಲ್ಲಿ ಸಂಚಾರ ಉಲ್ಲಂಘನೆ ಪ್ರಕರಣಗಳು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿವೆ. ಸಂಚಾರ ಉಲ್ಲಂಘನೆ ಪ್ರಕರಣಗಳ ಹೆಚ್ಚಳದಿಂದಾಗಿ ಅಪಘಾತಗಳ ಸಂಖ್ಯೆಯೂ ಹೆಚ್ಚುತ್ತಿದೆ. ಸಂಚಾರಿ ನಿಯಮ ಉಲ್ಲಂಘನೆಯೇ ಅಪಘಾತಗಳಿಗೆ ಪ್ರಮುಖ ಕಾರಣವಾಗಿದೆ.

ಈ ಕಾರಣಕ್ಕೆ ಕೇಂದ್ರ ಸರ್ಕಾರ ಹಾಗೂ ರಾಜ್ಯ ಸರ್ಕಾರಗಳು ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿವೆ. ಈಗ ತೆಲಂಗಾಣದ ರಾಜಧಾನಿ ಹೈದರಾಬಾದ್'ನಲ್ಲಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಅನೇಕ ಜನರು ಸಿಕ್ಕಿ ಬಿದ್ದಿದ್ದಾರೆ. ಕುಡಿದು ವಾಹನ ಚಾಲನೆ ಮಾಡಿದ 43 ಯುವಕರನ್ನು ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಪೊಲೀಸ್ ಕಸ್ಟಡಿಯಲ್ಲಿಡಲಾಗಿದೆ ಎಂದು ವರದಿಯಾಗಿದೆ. ಇದರ ಜೊತೆಗೆ ಸಿಕ್ಕಿಬಿದ್ದವರ ಡ್ರೈವಿಂಗ್ ಲೈಸೆನ್ಸ್ ರದ್ದು ಪಡಿಸಲಾಗಿದೆ ಎಂದು ತಿಳಿದು ಬಂದಿದೆ. ಸಂಚಾರ ನಿಯಮಗಳ ಉಲ್ಲಂಘನೆಗೆ ಒಂದು ದಿನದಿಂದ ಒಂದು ವಾರದವರೆಗೆ ಜೈಲು ಶಿಕ್ಷೆಯನ್ನು ವಿಧಿಸಲಾಗುತ್ತದೆ.
MOSTREAD: ಟ್ರ್ಯಾಕ್ಟರ್ಗಳ ಹಿಂಭಾಗದಲ್ಲಿ ದೊಡ್ಡ ಗಾತ್ರದ ಟಯರ್ಗಳಿರಲು ಕಾರಣಗಳಿವು

ಹೈದರಾಬಾದ್ ಪೊಲೀಸರು ಮಂಗಳವಾರ ರಾತ್ರಿವರೆಗೂ 139 ಜನರನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ. ಇವರೆಲ್ಲರನ್ನೂ ನ್ಯಾಯಾಲಯಕ್ಕೆ ಹಾಜರು ಪಡಿಸಲಾಗಿತ್ತು.

ನ್ಯಾಯಾಧೀಶರು ಬಂಧಿತರಿಗೆ ರೂ.7 ಲಕ್ಷಗಳವರೆಗೆ ದಂಡ ವಿಧಿಸಿದ್ದಾರೆ. ಬಂಧಿತರಲ್ಲಿ ಹೆಚ್ಚಿನವರು ಶಂಶಾಬಾದ್ ಪ್ರದೇಶಕ್ಕೆ ಸೇರಿದವರು ಎಂದು ಹೇಳಲಾಗಿದೆ.
MOSTREAD: ಚಿಕ್ಕ ಜಾಗದಲ್ಲಿ ದೊಡ್ಡ ಕಾರನ್ನು ಪಾರ್ಕ್ ಮಾಡಿದ ಅಪ್ರತಿಮ ಚಾಲಕನನ್ನು ಸನ್ಮಾನಿಸಿದ ಟೊಯೊಟಾ ಡೀಲರ್

ಈ ಪ್ರದೇಶದಲ್ಲಿಯೇ ಕುಡಿದು ವಾಹನ ಚಾಲನೆ ಮಾಡುತ್ತಿದ್ದ 70ಕ್ಕೂ ಹೆಚ್ಚು ಜನರನ್ನು ಪೊಲೀಸರು ಬಂಧಿಸಿದ್ದಾರೆ. ಶಟ್'ನಗರದಲ್ಲಿ 29, ಕುಕತ್ಪಲ್ಲಿಯಲ್ಲಿ 21 ಹಾಗೂ ಮಿಯಾಪುರದಲ್ಲಿ 19 ಜನರನ್ನು ವಶಕ್ಕೆ ಪಡೆಯಲಾಗಿದೆ.

ಪ್ರತಿ ಪ್ರದೇಶದಲ್ಲಿ 10ಕ್ಕೂ ಹೆಚ್ಚು ಜನರು ಸಿಕ್ಕಿಬಿದ್ದಿರುವುದು ತೆಲಂಗಾಣದಲ್ಲಿ ದೊಡ್ಡ ಸಂಚಲನವನ್ನುಂಟು ಮಾಡಿದೆ. ಇವುಗಳಲ್ಲಿ ಹಲವರ ಡ್ರೈವಿಂಗ್ ಲೈಸೆನ್ಸ್ ಅಮಾನತು ಪಡಿಸಲಾಗಿದೆ.
MOSTREAD: ಲಾಕ್ಡೌನ್ ನಿಂದ ಕೆಲಸ ಕಳೆದುಕೊಂಡವ ಇಂದು ವಿಶ್ವ ವಿಖ್ಯಾತ ವ್ಯಕ್ತಿ

ಭಾರತದಲ್ಲಿ ಸಂಭವಿಸುವ ರಸ್ತೆ ಅಪಘಾತಗಳಿಗೆ ಪ್ರಮುಖ ಕಾರಣವೆಂದರೆ ಕುಡಿದು ವಾಹನ ಚಾಲನೆ ಮಾಡುವುದು. ಈ ಹಿನ್ನೆಲೆಯಲ್ಲಿ ಪೊಲೀಸರು ಕುಡಿದು ವಾಹನ ಚಾಲನೆ ಮಾಡುವವರ ವಿರುದ್ಧ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿದ್ದಾರೆ.

ಹೈದರಾಬಾದ್ ಪೊಲೀಸರು ಕುಡಿದು ವಾಹನ ಚಾಲನೆ ಮಾಡುವವರನ್ನು ಥಳಿಸುತ್ತಿದ್ದಾರೆ. ಪೊಲೀಸರ ಈ ಕ್ರಮವು ವಾಹನ ಸವಾರರಲ್ಲಿ ತೀವ್ರ ಆಕ್ರೋಶವನ್ನುಂಟು ಮಾಡಿದೆ.
MOSTREAD: 13 ವರ್ಷಗಳಲ್ಲಿ 10 ಲಕ್ಷ ಕಿ.ಮೀ ಸಂಚರಿಸಿದ ಟೊಯೊಟಾ ಇನೋವಾ ಕಾರು
ಮುಂಬರುವ ದಿನಗಳಲ್ಲಿ ಈ ರೀತಿಯ ಇನ್ನಷ್ಟು ತೆಗೆದುಕೊಳ್ಳಲಾಗುವುದಾಗಿ ಪೊಲೀಸರು ತಿಳಿಸಿದ್ದು ಸಂಚಾರ ನಿಯಮಗಳನ್ನು ಉಲ್ಲಂಘಿಸುವವರಲ್ಲಿ ಆತಂಕವನ್ನುಂಟು ಮಾಡಿದೆ.

ಸಂಚಾರ ನಿಯಮಗಳನ್ನು ಉಲ್ಲಂಘಿಸುವವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳುತ್ತಿರುವುದು ಇದೇ ಮೊದಲಲ್ಲ. ಇದರ ಜೊತೆಗೆ ವಾಹನ ಮಾರ್ಪಾಡು ಮಾಡುವವರ ವಿರುದ್ಧವೂ ಸಂಚಾರ ಪೊಲೀಸರು ಕ್ರಮ ಕೈಗೊಳ್ಳುತ್ತಿದ್ದಾರೆ ಎಂಬುದು ಗಮನಾರ್ಹ.
ಚಿತ್ರ ಕೃಪೆ: ಎನ್ಎಕ್ಸ್ 9 ನ್ಯೂಸ್ ನೆಟ್'ವರ್ಕ್


Click it and Unblock the Notifications