Just In
- 9 hrs ago
ಮೇ ತಿಂಗಳಿನಲ್ಲಿ ಅತಿ ಹೆಚ್ಚು ಮಾರಾಟವಾದ ಟಾಪ್-3 ಮಾರುತಿ ಸುಜುಕಿ ಕಾರುಗಳು...
- 12 hrs ago
ಮೇಡ್ ಇನ್ ಇಂಡಿಯಾ ಯುದ್ಧ ವಾಹನಗಳ ಅಬ್ಬರ: ಮತ್ತಷ್ಟು ಬಲಿಷ್ಟಗೊಂಡ ಭಾರತೀಯ ಸೇನೆ!
- 14 hrs ago
ವಾರದ ಸುದ್ದಿಗಳು: ಎಕ್ಸ್ಯುವಿ700 ಮಾದರಿಗೆ ಸೇಫರ್ ಚಾಯ್ಸ್ ಪ್ರಶಸ್ತಿ, ಸುರಕ್ಷತೆಯಲ್ಲಿ ಮುಗ್ಗರಿಸಿದ ಕಿಯಾ ಕಾರೆನ್ಸ್..
- 1 day ago
ಶೀಘ್ರದಲ್ಲಿ ಜಾರಿಗೆ ಬರಲಿದೆ ದೇಶಿಯ ಮಾರುಕಟ್ಟೆಯಲ್ಲಿನ ಕಾರುಗಳಿಗೆ ಭಾರತ್ ಎನ್ಸಿಎಪಿ ಕ್ರ್ಯಾಶ್ ಟೆಸ್ಟ್
Don't Miss!
- Sports
ಐರ್ಲೆಂಡ್-ಭಾರತ ಮೊದಲ ಟಿ20 ಪಂದ್ಯಕ್ಕೆ ಮಳೆ ಅಡ್ಡಿ: ಟಾಸ್ ಗೆದ್ದಿರುವ ಟೀಂ ಇಂಡಿಯಾ
- Movies
ಅಮ್ಮನಿಂದಲೇ ಮಗಳಿಗೆ ಮಹಾ ಮೋಸ!
- News
ಮಹಾ ಬಂಡಾಯ: ಸುಪ್ರೀಂಕೋರ್ಟ್ ಅಂಗಳಕ್ಕೆ 16 ಶಾಸಕರ ಅನರ್ಹತೆ ಚೆಂಡು!
- Finance
Gold Rate Today: ನಿಮ್ಮ ನಗರದಲ್ಲಿ ಜೂ.26ರಂದು ಚಿನ್ನದ ಬೆಲೆ ಎಷ್ಟಿದೆ ನೋಡಿ
- Technology
ಬೇರೆಯವರು ನಿಮ್ಮ ನೆಟ್ಫ್ಲಿಕ್ಸ್ ಖಾತೆ ಬಳಸುತ್ತಿದ್ದರೆ ತಿಳಿಯಲು ಹೀಗೆ ಮಾಡಿ?
- Education
PGCIL Recruitment 2022 : 32 ಡೆಪ್ಯುಟಿ ಮತ್ತು ಸಹಾಯಕ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನ
- Lifestyle
ಜೂನ್ 26 ರಿಂದ ಜುಲೈ 2ರ ವಾರ ಭವಿಷ್ಯ: ಈ ರಾಶಿಯ ವ್ಯಾಪಾರಿಗಳು ಜಾಗರೂಕತೆಯಿಂದ ನಿರ್ಧಾರಗಳನ್ನು ತೆಗೆದುಕೊಳ್ಳಿ
- Travel
ಕರ್ನಾಟಕದಲ್ಲಿರುವ ಈ 5 ಹೆಸರಾಂತ ವಿಷ್ಣುದೇವರ ದೇವಾಲಯಗಳಿಗೆ ಭೇಟಿ ಕೊಟ್ಟು ಧನ್ಯರಾಗಿ!
ವಾಹನ ಸವಾರರಿಗೆ ಬಂಪರ್ ಆಫರ್: ದಂಡ ಮರುಪಾವತಿಗೂ ಸಿಗಲಿದೆ ರಿಯಾಯಿತಿ!
ದೇಶಾದ್ಯಂತ ವಾಹನ ಸಂಖ್ಯೆಯಿಂದ ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಗಳು ಕೂಡಾ ಸಾಕಷ್ಟು ಹೆಚ್ಚಳವಾಗುತ್ತಿದ್ದು, ಟ್ರಾಫಿಕ್ ನಿಯಮ ಉಲ್ಲಂಘನೆಯನ್ನು ತಗ್ಗಿಸಲು ಹಲವಾರು ಕಠಿಣ ಕ್ರಮಗಳನ್ನು ಜಾರಿಗೆ ತಂದಿದೆ.

ಕಠಿಣ ಕಾನೂನು ಕ್ರಮಗಳ ಹೊರತಾಗಿಯೂ ವಾಹನ ಮಾಲೀಕರಲ್ಲಿ ಸರಿಯಾದ ದಾಖಲಾತಿಗಳ ಕೊರತೆ ಅಥವಾ ಡ್ರಂಕ್ ಅಂಡ್ ಡ್ರೈವ್ನಂತಹ ಪ್ರಕರಣಗಳಲ್ಲಿ ಭಾರೀ ದಂಡವನ್ನು ಕಟ್ಟಬೇಕಾಗುತ್ತದೆ. ಪ್ರಸ್ತುತ ಅಂತಹ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಕೆಲವು ಸಂದರ್ಭಗಳಲ್ಲಿ ವಾಹನದ ಮೇಲೆ ದೊಡ್ಡ ಮೊತ್ತದ ದಂಡವನ್ನು ಹಾಕಲಾಗುತ್ತದೆ.

ದಂಡದ ಹೆಚ್ಚಳವಾಗಿರುವುದರಿಂದ ಎಲ್ಲರೂ ಒಂದೇ ಬಾರಿಗೆ ಅದನ್ನು ಕಟ್ಟುವುದು ಅಸಾಧ್ಯವೆಂದೇ ಹೇಳಬಹುದು. ಹೀಗಾಗಿ ದಂಡದ ಬಾಕಿ ಮೊತ್ತವನ್ನು ಸಕಾಲದಲ್ಲಿ ವಸೂಲಿ ಮಾಡಲು ಮುಂದಾಗಿರುವ ಟ್ರಾಫಿಕ್ ಪೊಲೀಸರು ದಂಡ ವಸೂಲಿಗಾಗಿ ವಿನಾಯ್ತಿ ನೀಡಿದ್ದಾರೆ.

ಹೌದು, ತೆಲಂಗಾಣ ರಾಜ್ಯದ ರಾಜಧಾನಿ ಹೈದರಾಬಾದ್ನಲ್ಲಿ ಟ್ರಾಫಿಕ್ ಪೊಲೀಸರು ವಾಹನ ಮಾಲೀಕರಿಂದ ಬಾಕಿ ಇರುವ ದಂಡವನ್ನು ಸಂಪೂರ್ಣವಾಗಿ ತೆರವುಗೊಳಿಸಲು ಬಂಪರ್ ಆಫರ್ ನೀಡಿದ್ದಾರೆ.

ಹೈದರಾಬಾದ್ ಪೊಲೀಸರು ನೀಡಿರುವ ಪ್ರಕಟಣೆಯ ಪ್ರಕಾರ ಮುಂದಿನ ತಿಂಗಳು ಮಾರ್ಚ್ 1 ರಿಂದ ಮಾರ್ಚ್ 31ರ ವರೆಗೆ ಸ್ಪೆಷಲ್ ಡ್ರೈವ್ ನಿರ್ವಹಿಸುತ್ತಿದ್ದಾರೆ. ಹೈದರಾಬಾದ್ ನ ರಾಚಕೊಂಡ, ಸೈಬರಾಬಾದ್ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು ರೂ. 600 ಕೋಟಿಗೂ ಹೆಚ್ಚು ಬಾಕಿ ಇರುವ ಚಲನ್ ಗಳಿಂದ ದಂಡ ವಸೂಲಿಗೆ ಪೊಲೀಸ್ ಇಲಾಖೆಯು ಹೊಸ ಕಾರ್ಯತಂತ್ರ ರೂಪಿಸಿದೆ.

ಮಾರ್ಚ್ 1 ರಿಂದ 31ರ ನಡುವೆ ಬಾಕಿ ಇರುವ ದಂಡವನ್ನು ಪಾವತಿಸಿದವರಿಗೆ ರಿಯಾಯಿತಿಯನ್ನು ಘೋಷಿಸಲಾಗಿದ್ದು, ವಾಹನ ಮಾದರಿಗಳಿಗೆ ಅನುಗುಣವಾಗಿ ದಂಡದಲ್ಲಿ ವಿನಾಯ್ತಿ ನೀಡಲು ನಿರ್ಧರಿಸಲಾಗಿದೆ.

ದ್ವಿಚಕ್ರ ವಾಹನ ಬಳಕೆದಾರರು ಬಾಕಿ ಉಳಿದಿರುವ ದಂಡದ ಮೊತ್ತದಲ್ಲಿ ಶೇ.25 ರಷ್ಟು ಮಾತ್ರ ಪಾವತಿಸಲು ತಿಳಿಸಿದ್ದು, ಉಳಿದ ಮೊತ್ತವನ್ನು ಪೊಲೀಸ್ ಇಲಾಖೆ ಮನ್ನಾ ಮಾಡಲಿದೆ. ಅದೇ ರೀತಿ ಕಾರು ಬಳಕೆದಾರರು ಶೇ.50 ರಷ್ಟು ಮತ್ತು ಆರ್.ಟಿ.ಸಿ ಬಸ್ಸುಗಳು ಶೇ.30 ಪಾವತಿಸಿದರೆ ಸಾಕು ಈ ಹಿಂದಿನ ಎಲ್ಲಾ ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಇತ್ಯರ್ಥ ಗೊಳಿಸುವುದಾಗಿ ಪ್ರಕಟಣೆ ಹೊರಡಿಸಲಾಗಿದೆ.

ವಾಹನ ಮಾಲೀಕರು ಬಾಕಿ ದಂಡದ ಮೊತ್ತವನ್ನು ಆನ್ಲೈನ್ನಲ್ಲಿ ಪಾವತಿಸಬಹುದು ಎಂದು ಪೊಲೀಸ್ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದ್ದು, ಹೈದರಾಬಾದ್ ನಲ್ಲಿ ಪ್ರಸ್ತುತ ರೂ. 600 ಕೋಟಿಯವರೆಗೂ ದಂಡ ಬಾಕಿಯಿದೆ.

ಹೀಗಾಗಿ ಟ್ರಾಫಿಕ್ ಪೊಲೀಸರು ಘೋಷಿಸಿರುವ ಈ ಆಫರ್ ನಿಂದ ಬಾಕಿ ಇರುವ ದಂಡ ಮೊತ್ತವು ಭಾರೀ ಪ್ರಮಾಣದಲ್ಲಿ ಸಂಗ್ರಹವಾಗುವ ಸಾಧ್ಯತೆಗಳ ಬಗೆಗೆ ಹೈದರಾಬಾದ್ ಪೊಲೀಸರು ಮಾಹಿತಿ ಹಂಚಿಕೊಂಡಿದ್ದು, ದಂಡ ಪಾವತಿಸಿ ಹಿಂದಿನ ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಗಳನ್ನು ಇತ್ಯರ್ಥಗೊಳಿಸಲು ಇದೊಂದು ಸುವರ್ಣಾವಕಾಶ ಎಂದು ಹೇಳಬಹುದು.

ಇನ್ನು ಹೈದರಾಬಾದ್ನಲ್ಲಿ ಇತ್ತೀಚೆಗೆ ರಾತ್ರಿ ವೇಳೆ ರಸ್ತೆ ಅಪಘಾತಗಳು ಹೆಚ್ಚಾಗಿ ನಡೆಯುತ್ತಿವೆ. ಇದನ್ನು ತಡೆಗಟ್ಟುವ ಉದ್ದೇಶದಿಂದ ವಾಹನಗಳ ವೇಗವನ್ನು ನಿಯಂತ್ರಿಸಲು ಪೊಲೀಸರು ಸ್ಪೀಡ್ ಗನ್ ಬಳಸಲು ಸಿದ್ಧತೆ ನಡೆಸಿದ್ದಾರೆ. ಇದರಿಂದ ರಾತ್ರಿ ವೇಳೆಯ ರಸ್ತೆ ಅಪಘಾತಗಳನ್ನು ತಗ್ಗಿಸುವ ಗುರಿಹೊಂದಲಾಗಿದ್ದು, ನಗರದಲ್ಲಿ ಹೆಚ್ಚಾಗುತ್ತಿರುವ ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳನ್ನು ನಿಯಂತ್ರಣಕ್ಕೆ ತರಲು ಪೊಲೀಸರು ಕಠಿಣ ಕ್ರಮ ಕೈಗೊಳ್ಳುತ್ತಿದ್ದಾರೆ.

ಪೊಲೀಸರು ತಡ ರಾತ್ರಿಯ ವರೆಗೂ ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳ ನಿಯಂತ್ರಣಕ್ಕಾಗಿ ವಿಶೇಷ ಡ್ರೈವ್ ಆಯೋಜಿಸಲಾಗುತ್ತಿದ್ದು, ಹೈದರಾಬಾದ್ ನಗರದಲ್ಲಿ ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳ ತಡೆಗಾಗಿಯೇ ಪ್ರತಿದಿನ ಅಂದಾಜು 2,500 ಕಾನ್ಸ್ಟೆಬಲ್ ಗಳು ಕಾರ್ಯನಿರ್ವಹಿಸುತ್ತಿದ್ದರೂ ಪ್ರಕರಣಗಳನ್ನು ನಿಯಂತ್ರಣ ಮಾಡಲಾಗುತ್ತಿಲ್ಲ.

ಹೀಗಾಗಿ ಡ್ರಂಕ್ ಅಂಡ್ ಡ್ರೈವ್ ಪ್ರಕರಣಗಳ ತಡೆಗಾಗಿ ಮತ್ತಷ್ಟು ಹೊಸ ಕ್ರಮಗಳನ್ನು ಕೈಗೊಳ್ಳುವುದರ ಜೊತೆಗೆ ಇತರೆ ಟ್ರಾಫಿಕ್ ನಿಯಮ ಉಲ್ಲಂಘನೆ ಪ್ರಕರಣಗಳಿಂದ ಹೆಚ್ಚಿನ ಮಟ್ಟದ ದಂಡ ವಸೂಲಿಗೆ ಇಲಾಖೆಯು ನಿರ್ಧಾರ ಕೈಗೊಂಡಿದ್ದು, ಸ್ಪೆಷಲ್ ಡ್ರೈವ್ ಅನ್ನು ವಾಹನ ಸವಾರರು ಸದುಪಯೋಗ ಪಡಿಸಿಕೊಳ್ಳುವಂತೆ ಪೊಲೀಸ್ ಇಲಾಖೆ ಸಲಹೆ ನೀಡಿದೆ.