Just In
- 42 min ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 1 hr ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 2 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 3 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies Swathi Royal; ಒಂಬತ್ತನೇ ಕ್ಲಾಸ್ ನಲ್ಲೇ ಲವ್ವಲ್ಲಿ ಬಿದ್ದ ಅಮೃತಧಾರೆ ಅಪರ್ಣಾ..!
- Sports DC vs GT IPL 2024: ಡೆಲ್ಲಿ ಕೋಟೆಯಲ್ಲಿ ವಿಜಯದ ಪತಾಕೆ ಹಾರಿಸುತ್ತಾ ಗುಜರಾತ್?; ಟಾಸ್ ವರದಿ, ಆಡುವ ಬಳಗ
- News ಲೋಕಸಭಾ ಚುನಾವಣೆ 2024: ಮತದಾನಕ್ಕೆ ಸಕಲ ಮಂಡ್ಯ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ
- Lifestyle 5 ಸೆಕೆಂಡ್ನಲ್ಲಿ ಈ ಚಿತ್ರದಲ್ಲಿರುವ ಮೇಕೆ ಮಾಲೀಕನ ಹುಡುಕಿ..! ಎಲ್ಲಿದ್ದಾನೆ ಗೊತ್ತಾ?
- Technology Bengaluru: ಆ ಆಪ್ ಇನ್ಸ್ಟಾಲ್ ಮಾಡಿದ್ದೇ ತಡ 5.2 ಕೋಟಿ ರೂ. ಮಾಯ.. ನೀವು ಎಚ್ಚರ
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಫ್ಲೈಒವರ್ನಿಂದ ಕೆಳಗೆ ಹಾರಿದ ಕಾರು..!
ವಾಹನಗಳನ್ನು ಚಲಾಯಿಸುವಾಗ ತೆಗೆದುಕೊಳ್ಳಬೇಕಾದ ಮುಂಜಾಗರೂಕತೆಯ ಬಗ್ಗೆ ಎಷ್ಟೇ ಪ್ರಚಾರ ಮಾಡಿದರೂ, ಜನರು ಅವುಗಳನ್ನು ಗಂಭೀರವಾಗಿ ತೆಗೆದುಕೊಳ್ಳುತ್ತಿಲ್ಲ. ಕೆಲವರು ಮಿತ ವೇಗದಲ್ಲಿ ವಾಹನಗಳನ್ನು ಚಲಾಯಿಸಿದರೆ, ಇನ್ನೂ ಕೆಲವರು ವೇಗದ ಬಗ್ಗೆ ತಲೆ ಕೆಡಿಸಿಕೊಳ್ಳುತ್ತಿಲ್ಲ.
ಅತಿ ವೇಗವೂ ಸಹ ಭಾರತದಲ್ಲಿ ಉಂಟಾಗುವ ಅಪಘಾತದ ಕಾರಣಗಳಲ್ಲಿ ಒಂದಾಗಿದೆ. ಭಾರತದಲ್ಲಿ ನಡೆಯುವ ರಸ್ತೆ ಅಪಘಾತಗಳಲ್ಲಿ ಪ್ರತಿ ವರ್ಷ ಒಂದೂವರೆ ಲಕ್ಷಕ್ಕೂ ಅಧಿಕ ಜನರು ಸಾವನ್ನಪ್ಪುತ್ತಿದ್ದಾರೆ. ಇವುಗಳಲ್ಲಿ ಅತಿವೇಗವಾಗಿ ವಾಹನ ಚಲಾಯಿಸಿ ಸಾಯುತ್ತಿರುವವರ ಸಂಖ್ಯೆಯು ಅಧಿಕವಾಗಿದೆ.
ಈ ಕಾರಣಕ್ಕೆ ಸರ್ಕಾರ ಹಾಗೂ ಪೊಲೀಸ್ ಇಲಾಖೆಯು ವೇಗವಾಗಿ ವಾಹನ ಚಲಾಯಿಸುವ ಸವಾರರ ವಿರುದ್ಧ ದಂಡ ವಿಧಿಸುವಂತಹ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಭಾನುವಾರ ಹೈದರಾಬಾದ್ನಲ್ಲಿ ನಡೆದ ಅಪಘಾತವೊಂದು ವಾಹನ ಸವಾರರು ಹೇಗೆ ವಾಹನಗಳನ್ನು ಅತಿ ವೇಗವಾಗಿ ಚಲಾಯಿಸಿ ಅಪಘಾತಕ್ಕೆ ಕಾರಣರಾಗುತ್ತಾರೆ ಎಂಬುದನ್ನು ತೋರಿಸುತ್ತದೆ.
ಫ್ಲೈ ಒವರ್ ಮೇಲಿಂದ ಕಾರು ಕೆಳಗೆ ಬಿದ್ದ ಕಾರಣ, ಫ್ಲೈ ಒವರ್ ಕೆಳಗೆ ನಿಂತಿದ್ದ ಮಹಿಳೆ ಸಾವನ್ನಪ್ಪಿದ್ದಾರೆ. ಕಲ್ಕಾವಂದಲಾ ಕೃಷ್ಣ ಮಿಲನ್ ರಾವ್ ಎಂಬುವವರೇ ಈ ಅಪಘಾತಕ್ಕೆ ಕಾರಣರಾದ ವ್ಯಕ್ತಿ. ಇವರು ತಮ್ಮ ಕಾರ್ ಅನ್ನು ಫ್ಲೈಒವರ್ ಮೇಲೆ ಅತಿ ವೇಗವಾಗಿ ಚಲಾಯಿಸಿದ್ದಾರೆ.
ಭಾನುವಾರ ತಮ್ಮ ಕಾರಿನಲ್ಲಿ ಹೈದರಾಬಾದಿನಲ್ಲಿರುವ ಬಯೊ ಡೈವರ್ಸಿಟಿ ಫ್ಲೈಒವರ್ ಮೇಲೆ ಅತಿ ವೇಗವಾಗಿ ಬಂದಿದ್ದಾರೆ. ಈ ಫ್ಲೈ ಒವರ್ ಬಗ್ಗೆ ಅವರಿಗೆ ಅಷ್ಟಾಗಿ ಪರಿಚಯವಿರಲಿಲ್ಲವೆಂದು ಕಾಣುತ್ತದೆ. ವರದಿಗಳ ಪ್ರಕಾರ ತಮ್ಮ ಕಾರಿನಲ್ಲಿ ಮೊದಲ ಬಾರಿಗೆ ಈ ಫ್ಲೈ ಒವರ್ ಮೇಲೆ ಬಂದಿದ್ದಾರೆ.
ತಮ್ಮ ಕಾರ್ ಅನ್ನು ಪ್ರತಿ ಗಂಟೆಗೆ 104 ಕಿ.ಮೀ ವೇಗದಲ್ಲಿ ಚಲಾಯಿಸಿಕೊಂಡು ಬಂದಿದ್ದಾರೆ. ಕೃಷ್ಣ ಮಿಲನ್ ರಾವ್ರವರು ಜುಬಿಲಿ ಹಿಲ್ಸ್ ನಲ್ಲಿರುವ ತಮ್ಮ ಮನೆಯಿಂದ ಮೀನಾಕ್ಷಿ ಟವರ್ನಲ್ಲಿದ್ದ ಕಚೇರಿಯಲ್ಲಿ ನಡೆಯುತ್ತಿದ್ದ ಸಭೆಯಲ್ಲಿ ಭಾಗವಹಿಸಲು ತೆರಳುತ್ತಿದ್ದರು.
ಅವರು ಕೆಂಪು ಬಣ್ಣದ ಫೋಕ್ಸ್ವ್ಯಾಗನ್ ಕಾರ್ ಅನ್ನು ಚಲಾಯಿಸುತ್ತಿದ್ದರು. ಕಾರಿನ ವೇಗವು ಹೆಚ್ಚಾಗುತ್ತಿದ್ದಂತೆ ಕಾರಿನ ಮೇಲೆ ನಿಯಂತ್ರಣವನ್ನು ಕಳೆದು ಕೊಂಡಿದ್ದಾರೆ. ಇದರ ಪರಿಣಾಮ ಕಾರು ಫ್ಲೈ ಒವರ್ ಮೇಲಿಂದ ಕೆಳಕ್ಕೆ ಬಿದ್ದಿದೆ.
MOST READ: ಡಿಸೆಂಬರ್ 1ರಿಂದ ಜಾರಿಗೆ ಬರಲಿರುವ ಫಾಸ್ಟ್ಟ್ಯಾಗ್ ಬಗ್ಗೆ ನಿಮಗೆಷ್ಟು ಗೊತ್ತು?
ಕಾರು ಕೆಳಗೆ ಬಿದ್ದಿದ್ದರಿಂದ ಫ್ಲೈ ಒವರ್ ಕೆಳಗಿದ್ದ ಬಸ್ ಸ್ಟಾಂಡಿನಲ್ಲಿದ್ದ ಸತ್ಯವೇಣಿ ಎಂಬ ಮಹಿಳೆ ಸಾವನ್ನಪ್ಪಿದ್ದಾರೆ. ಇದರ ಜೊತೆಗೆ ಪ್ರಣೀತಾ, ಆಟೋ ಚಾಲಕ ಬಾಲು ನಾಯಕ್ ಹಾಗೂ ಸಾಫ್ಟ್ ವೇರ್ ಎಂಜಿನಿಯರ್ ಕುಬೇರ ಎಂಬುವವರು ಗಾಯಗೊಂಡಿದ್ದಾರೆ.
MOST READ: ಬಡ ದೇಶದ ರಾಜನಿಗೆ 15 ಮಡದಿಯರು, 19 ದುಬಾರಿ ಕಾರುಗಳು..!
ಆದರೆ ಕಾರಿನಿಲ್ಲಿದ್ದ ಏರ್ಬ್ಯಾಗ್ ತೆರೆದುಕೊಂಡ ಕಾರಣ ಕಾರ್ ಅನ್ನು ಚಾಲನೆ ಮಾಡುತ್ತಿದ್ದ ಕೃಷ್ಣ ಮಿಲನ್ ರಾವ್ರವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಅವರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ತಕ್ಷಣವೇ ಹತ್ತಿರದಲ್ಲಿದ್ದ ಆಸ್ಪತ್ರೆಗೆ ದಾಖಲಿಸಲಾಗಿದೆ.
MOST READ: ಹುಡುಗಿಯರಿಗೆ ಗೇರ್ ಬದಲಿಸಲು ಬಿಟ್ಟು ಡಿಎಲ್ ಕಳೆದುಕೊಂಡ ಡ್ರೈವರ್..!
ಕೃಷ್ಣ ಮಿಲನ್ ರಾವ್ರವರು ಜನಪ್ರಿಯ ಕಂಪನಿಯಾದ ಎಂಪವರ್ ಲ್ಯಾಬ್ಸ್ ನ ಸಿಇಒ ಹಾಗೂ ಸಹ ಸ್ಥಾಪಕರಾಗಿದ್ದಾರೆ. ಜೊತೆಗೆ ಅವರು ತೆಲಂಗಾಣದ ಸಚಿವರೊಬ್ಬರ ಸಂಬಂಧಿಯೆಂದು ತಿಳಿದು ಬಂದಿದೆ. ಸಚಿವರು ತಮ್ಮ ಸಂಬಂಧಿಯಾದ ಕೃಷ್ಣ ಮಿಲನ್ ರಾವ್ರವರನ್ನು ರಕ್ಷಿಸಲು ಯತ್ನಿಸುತ್ತಿದ್ದಾರೆ ಎಂಬ ಆರೋಪಗಳು ಕೇಳಿ ಬಂದಿವೆ.