Just In
- 19 min ago ವಿಮಾನದಂತಹ ಸೌಲಭ್ಯ ಹೊಂದಿರುವ ವಂದೇ ಭಾರತ್ ಸರಣಿ ರೈಲುಗಳು ಶೀಘ್ರ ಬರಲಿವೆ.. ಆರಾಮದಾಯಕ ಪ್ರಯಾಣ!
- 23 min ago 'ಬಾಹುಬಲಿ' ಎಸ್ಯುವಿ ಪರಾಕ್ರಮ: ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ವಿಶೇಷತೆಗಳೇನು?
- 25 min ago Honda: ಭಾರತ ನಿರ್ಮಿಸಿದ ಹೋಂಡಾ ಕಾರಿಗೆ ಮುಗಿಬಿದ್ದ ಜಪಾನ್ ಜನ!
- 35 min ago ಮತ್ತೆ ಅಖಾಡಕ್ಕೆ ಅಮೇರಿಕನ್ ಆಫ್ರೋಡ್ ಕಿಂಗ್: 2024 ಜೀಪ್ ರಾಂಗ್ಲರ್ ಫೇಸ್ಲಿಫ್ಟ್ ರಿವ್ಯೂ!
Don't Miss!
- Technology HMD ಪಲ್ಸ್ ಸರಣಿ ಅಡಿಯಲ್ಲಿ 3 ಹೊಸ ಸ್ಮಾರ್ಟ್ಫೋನ್ ಲಾಂಚ್! ಫೀಚರ್ಸ್ ಏನಿವೆ?
- News Tamannaah Bhatia: ಮಿಲ್ಕಿ ಬ್ಯೂಟಿ ತಮನ್ನಾಗೆ ಮುಂಬೈ ಸೈಬರ್ ಪೊಲೀಸರಿಂದ ಸಮನ್ಸ್.!-ಕಾರಣ ಏನು?
- Finance April 25 Gold Rate: ಇಂದಿನ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರ ಎಷ್ಟಿದೆ ತಿಳಿಯಿರಿ
- Lifestyle ಬೆಳ್ಳುಳ್ಳಿ ಕಬಾಬ್ ಅಂದುಕೊಂಡ್ರಾ? ಇದು ಚಿಕನ್ ರುಚಿಯ ಹೂವಿನ ಫ್ರೈ..!
- Sports 2009ರ ಐಪಿಎಲ್ ಫೈನಲ್ನಲ್ಲಿ ಆರ್ಸಿಬಿ ಸೋಲಲು ಕಾರಣ ತಿಳಿಸಿದ ಅನಿಲ್ ಕುಂಬ್ಳೆ
- Movies 'ಯುವ ರಣಧೀರ ಕಂಠೀರವ' ಸಿನಿಮಾ ನಿಂತಿದ್ದೇಕೆ? ಕಥೆಗಾರ ಭಗೀರಥ ಏನಂದ್ರು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಕಾರಿಗೆ ಸಗಣಿಯ ಲೇಪನ ನೀಡಿದ ಕಾರು ಮಾಲೀಕ
ಭಾರತವು ಅತಿ ಹೆಚ್ಚು ಉಷ್ಣತೆ ಇರುವ ದೇಶಗಳಲ್ಲಿ ಒಂದಾಗಿದೆ. ದೇಶದಲ್ಲಿ ಬೇಸಿಗೆಯ ಬಿಸಿ ಆರಂಭವಾಗಿದೆ. ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಜನರು ವಿವಿಧ ವಿಧಾನಗಳನ್ನು ಅನುಸುತ್ತಿದ್ದಾರೆ. ಈಗ ವ್ಯಕ್ತಿಯೊಬ್ಬರು ಮಾಡಿರುವ ವಿಶಿಷ್ಟ ಕ್ರಮವು ಎಲ್ಲರ ಗಮನ ಸೆಳೆಯುತ್ತಿದೆ.
ಅವರು ತಮ್ಮ ಕಾರನ್ನು ಹಸು ಸಗಣಿಯಿಂದ ಲೇಪಿಸಿದ್ದಾರೆ. ತಮ್ಮ ಕಾರ್ ಅನ್ನು ತಂಪಾಗಿಡಲು ಅವರು ಈ ರೀತಿ ಮಾಡಿದ್ದಾರೆ. ಅವರ ಈ ಕಾರ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ತಮ್ಮ ಕಾರ್ ಅನ್ನು ಸಗಣಿಯಿಂದ ಲೇಪಿಸಿರುವವರು ಕರ್ನಾಟಕದವರು ಎಂಬುದು ವಿಶೇಷ.
ಅವರು ತಿರುಮಲೈ ದೇವಸ್ಥಾನಕ್ಕೆ ದರ್ಶನಕ್ಕಾಗಿ ತೆರಳಿದ್ದಾಗ ಅವರ ಕಾರನ್ನು ಹಸುವಿನ ಸಗಣಿಯಿಂದ ಲೇಪಿಸಲಾಗಿತ್ತು. ದೇವಸ್ಥಾನಕ್ಕೆ ಆಗಮಿಸಿದ್ದ ಇತರ ಭಕ್ತರು ಕಾರನ್ನು ನೋಡಿ ಆಶ್ಚರ್ಯ ಚಕಿತರಾಗಿದ್ದಾರೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ
ಹಸುವಿನ ಸಗಣಿಯನ್ನು ಕಾರಿಗೆ ಲೇಪನ ಮಾಡುವುದರಿಂದ ಕಾರನ್ನು ತಂಪಾಗಿಡಬಹುದು. ಬೇಸಿಗೆಯ ಬಿಸಿಲನ್ನು ಎದುರಿಸಲು ಇದು ನೆರವಾಗುತ್ತದೆ ಎಂಬುದು ಅವರ ಅಭಿಪ್ರಾಯ. ಹ್ಯುಂಡೈ ಕಾರನ್ನು ಹಸುವಿನ ಸಗಣಿಯಿಂದ ಲೇಪನ ಮಾಡಲಾಗಿದೆ.
ದೇವಸ್ಥಾನಕ್ಕೆ ಆಗಮಿಸಿದ್ದವರು ಕಾರಿನ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದಾರೆ. ಇನ್ನೂ ಕೆಲವರು ಕಾರಿನ ಜೊತೆಗೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು
ಸಮಯಂ ಪತ್ರಿಕೆ ಈ ಬಗ್ಗೆ ವರದಿ ಪ್ರಕಟಿಸಿದೆ. ಕಾರುಗಳನ್ನು ಸಗಣಿಯಿಂದ ಲೇಪನ ಮಾಡುತ್ತಿರುವುದು ಇದೇ ಮೊದಲ ಬಾರಿಯಲ್ಲ.ಭಾರತದಲ್ಲಿ ಈ ಹಿಂದೆಯೂ ಹಲವಾರು ಜನರು ತಮ್ಮ ಕಾರನ್ನು ಈ ರೀತಿ ಸಗಣಿಯಿಂದ ಲೇಪನ ಮಾಡಿದ್ದಾರೆ.
ಈ ಹಿಂದೆ ಅಹಮದಾಬಾದ್ನ ಮಹಿಳೆಯೊಬ್ಬರು ತಮ್ಮ ಕಾರನ್ನು ಹಸುವಿನ ಸಗಣಿಯಿಂದ ಲೇಪನ ಮಾಡಿದ್ದರು. ಈ ವೇಳೆ ಮಾತನಾಡಿದ್ದ ಅವರು ಕಾರಿಗೆ ಸಗಣಿ ಲೇಪಿಸಿರುವುದರಿಂದ ಎಸಿ ಇಲ್ಲದೆ ಕಾರು ತಂಪಾಗಿದೆ ಎಂದು ಹೇಳಿದ್ದರು.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ
ಮಹಾರಾಷ್ಟ್ರದ ವೈದ್ಯರೊಬ್ಬರು ಸಹ ತಮ್ಮ ಕಾರನ್ನು ಹಸುವಿನ ಸಗಣಿಯಿಂದ ಲೇಪಿಸಿದ್ದರು. ಅವರು ತಮ್ಮ ಮಗಳ ಮದುವೆಯ ಕಾರನ್ನು ಹಸುವಿನ ಸಗಣಿಯಿಂದ ಲೇಪಿಸಿದ್ದರು ಎಂಬುದು ಗಮನಾರ್ಹ. ಸಗಣಿಯಿಂದ ಲೇಪಿತವಾಗಿದ್ದ ಟೊಯೊಟಾ ಇನೋವಾ ಕಾರ್ ಅನ್ನು ಮದುವೆಗೆ ಬಂದಿದ್ದ ಸಂಬಂಧಿಕರು ನೋಡಿ ಅಚ್ಚರಿ ವ್ಯಕ್ತಪಡಿಸಿದ್ದರು.
ಸಾಮಾನ್ಯವಾಗಿ ಕಾರ್ ಕ್ಯಾಬಿನ್ ಒಳಗಿನ ತಾಪಮಾನವು ಹೊರಗಿನ ತಾಪಮಾನಕ್ಕಿಂತ ಹೆಚ್ಚಾಗಿರುತ್ತದೆ. ಅದರಲ್ಲೂ ಬೇಸಿಗೆ ಕಾಲದಲ್ಲಿ ಎಸಿ ಇಲ್ಲದೆ ಕಾರಿನಲ್ಲಿ ಕುಳಿತುಕೊಳ್ಳಲು ಸಾಧ್ಯವಿಲ್ಲ. ಇದರಿಂದ ತಪ್ಪಿಸಿಕೊಳ್ಳಲು ಕಾರುಗಳ ಮಾಲೀಕರು ಹಸುವಿನ ಸಗಣಿಯನ್ನು ಲೇಪನ ಮಾಡುತ್ತಾರೆ.