Just In
- 29 min ago ಸಾಟಿಯಿಲ್ಲದ ಮೈಲೇಜ್: ಈ ಮಾರುತಿ ಕಾರುಗಳು ಫುಲ್ ಟ್ಯಾಂಕ್ನಲ್ಲಿ 1200 ಕಿ.ಮೀ ಚಲಿಸುತ್ತೆ
- 1 hr ago KTM Duke 125 ಬೆಲೆಗೆ ಯಾವೆಲ್ಲಾ ಬೈಕ್ಗಳು ಸಿಗುತ್ತೆ ಗೊತ್ತಾ?: ಪಲ್ಸರ್ನಿಂದ ಹಿಡಿದು MT 15 ವರೆಗೆ
- 2 hrs ago ಅಡ್ವೆಂಚರ್ ಬೈಕ್ ಪ್ರಿಯರಿಗೆ ಸಿಹಿಸುದ್ದಿ: ಬಿಡುಗಡೆಗೆ ಸಜ್ಜಾದ ಸುಜುಕಿ V-Strom 800 DE ಬೈಕ್
- 2 hrs ago Maruti Suzuki: 2024ರ ಮಾರುತಿ ಸ್ವಿಫ್ಟ್ ವಿಶೇಷತೆಗಳು: ಸನ್ರೂಫ್, 35 ಕಿ.ಮೀ ಮೈಲೇಜ್!
Don't Miss!
- Lifestyle ಕಂಡ ಕಂಡಲ್ಲಿ ಏಕೆ ಉಗುಳಬಾರದು ಗೊತ್ತಾ? ಈ ವಿಡಿಯೋ ನೋಡಿ..!
- Movies ಅರ್ಜುನ್ ಮಹಾಕ್ಷಯ್ ಅಡ್ಡಾದಲ್ಲೂ ಆಯುಧ ಪೂಜೆ; 'ಮ್ಯಾಕ್ಸ್' ಕ್ರೇಜಿ ಅಪ್ಡೇಟ್
- News ಮಂಡ್ಯದ ‘ಹಲವು ಸುಮಲತಾ’ ತಂತ್ರ ಬೆಂಗಳೂರು ಗ್ರಾಮಾಂತದಲ್ಲೂ ಬಂತಾ? ಮತ್ತೊಬ್ಬ ಡಾ ಸಿಎನ್ ಮಂಜುನಾಥ್ ಕಣಕ್ಕೆ!
- Sports IPL 2024: ರಾಜಸ್ಥಾನ್ ರಾಯಲ್ಸ್ vs ಡೆಲ್ಲಿ ಕ್ಯಾಪಿಟಲ್ಸ್ ರೋಚಕ ಪಂದ್ಯದ ಟಾಸ್ ವರದಿ, ಆಡುವ 11ರ ಬಳಗ
- Finance ಷೇರು ಮಾರುಕಟ್ಟೆಯಲ್ಲಿ ಬಂಪರ್ ಲಾಟರಿ: ಹೂಡಿಕೆದಾರರಿಗೆ ಲಾಭವೋ ಲಾಭ!
- Technology Oppo: ಭಾರತದಲ್ಲಿ ಒಪ್ಪೋ F25 ಪ್ರೊ ಸ್ಮಾರ್ಟ್ಫೋನ್ ಹೊಸ ಕಲರ್ ವೇರಿಯಂಟ್ನಲ್ಲಿ! ಬೆಲೆ ಎಷ್ಟು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಕಾರಿಗೆ ಸಗಣಿಯ ಲೇಪನ ನೀಡಿದ ಕಾರು ಮಾಲೀಕ
ಭಾರತವು ಅತಿ ಹೆಚ್ಚು ಉಷ್ಣತೆ ಇರುವ ದೇಶಗಳಲ್ಲಿ ಒಂದಾಗಿದೆ. ದೇಶದಲ್ಲಿ ಬೇಸಿಗೆಯ ಬಿಸಿ ಆರಂಭವಾಗಿದೆ. ಬಿಸಿಲ ಬೇಗೆಯಿಂದ ತಪ್ಪಿಸಿಕೊಳ್ಳಲು ಜನರು ವಿವಿಧ ವಿಧಾನಗಳನ್ನು ಅನುಸುತ್ತಿದ್ದಾರೆ. ಈಗ ವ್ಯಕ್ತಿಯೊಬ್ಬರು ಮಾಡಿರುವ ವಿಶಿಷ್ಟ ಕ್ರಮವು ಎಲ್ಲರ ಗಮನ ಸೆಳೆಯುತ್ತಿದೆ.
ಅವರು ತಮ್ಮ ಕಾರನ್ನು ಹಸು ಸಗಣಿಯಿಂದ ಲೇಪಿಸಿದ್ದಾರೆ. ತಮ್ಮ ಕಾರ್ ಅನ್ನು ತಂಪಾಗಿಡಲು ಅವರು ಈ ರೀತಿ ಮಾಡಿದ್ದಾರೆ. ಅವರ ಈ ಕಾರ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗುತ್ತಿದೆ. ತಮ್ಮ ಕಾರ್ ಅನ್ನು ಸಗಣಿಯಿಂದ ಲೇಪಿಸಿರುವವರು ಕರ್ನಾಟಕದವರು ಎಂಬುದು ವಿಶೇಷ.
ಅವರು ತಿರುಮಲೈ ದೇವಸ್ಥಾನಕ್ಕೆ ದರ್ಶನಕ್ಕಾಗಿ ತೆರಳಿದ್ದಾಗ ಅವರ ಕಾರನ್ನು ಹಸುವಿನ ಸಗಣಿಯಿಂದ ಲೇಪಿಸಲಾಗಿತ್ತು. ದೇವಸ್ಥಾನಕ್ಕೆ ಆಗಮಿಸಿದ್ದ ಇತರ ಭಕ್ತರು ಕಾರನ್ನು ನೋಡಿ ಆಶ್ಚರ್ಯ ಚಕಿತರಾಗಿದ್ದಾರೆ.
MOST READ:ರಿಕ್ಷಾ ಕಳೆದುಕೊಂಡವನಿಗೆ ಹೊಸ ರಿಕ್ಷಾ ಕೊಡಿಸಿದ ಆಪದ್ಭಾಂಧವ
ಹಸುವಿನ ಸಗಣಿಯನ್ನು ಕಾರಿಗೆ ಲೇಪನ ಮಾಡುವುದರಿಂದ ಕಾರನ್ನು ತಂಪಾಗಿಡಬಹುದು. ಬೇಸಿಗೆಯ ಬಿಸಿಲನ್ನು ಎದುರಿಸಲು ಇದು ನೆರವಾಗುತ್ತದೆ ಎಂಬುದು ಅವರ ಅಭಿಪ್ರಾಯ. ಹ್ಯುಂಡೈ ಕಾರನ್ನು ಹಸುವಿನ ಸಗಣಿಯಿಂದ ಲೇಪನ ಮಾಡಲಾಗಿದೆ.
ದೇವಸ್ಥಾನಕ್ಕೆ ಆಗಮಿಸಿದ್ದವರು ಕಾರಿನ ಫೋಟೋ ತೆಗೆದು ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡಿದ್ದಾರೆ. ಇನ್ನೂ ಕೆಲವರು ಕಾರಿನ ಜೊತೆಗೆ ಸೆಲ್ಫಿ ತೆಗೆದುಕೊಂಡಿದ್ದಾರೆ. ಈ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.
MOST READ:ಶೋಚನೀಯ ಸ್ಥಿತಿಯಲ್ಲಿವೆ ದುಬಾರಿ ಬೆಲೆಯ ಐಷಾರಾಮಿ ರೋಲ್ಸ್ ರಾಯ್ಸ್ ಕಾರುಗಳು
ಸಮಯಂ ಪತ್ರಿಕೆ ಈ ಬಗ್ಗೆ ವರದಿ ಪ್ರಕಟಿಸಿದೆ. ಕಾರುಗಳನ್ನು ಸಗಣಿಯಿಂದ ಲೇಪನ ಮಾಡುತ್ತಿರುವುದು ಇದೇ ಮೊದಲ ಬಾರಿಯಲ್ಲ.ಭಾರತದಲ್ಲಿ ಈ ಹಿಂದೆಯೂ ಹಲವಾರು ಜನರು ತಮ್ಮ ಕಾರನ್ನು ಈ ರೀತಿ ಸಗಣಿಯಿಂದ ಲೇಪನ ಮಾಡಿದ್ದಾರೆ.
ಈ ಹಿಂದೆ ಅಹಮದಾಬಾದ್ನ ಮಹಿಳೆಯೊಬ್ಬರು ತಮ್ಮ ಕಾರನ್ನು ಹಸುವಿನ ಸಗಣಿಯಿಂದ ಲೇಪನ ಮಾಡಿದ್ದರು. ಈ ವೇಳೆ ಮಾತನಾಡಿದ್ದ ಅವರು ಕಾರಿಗೆ ಸಗಣಿ ಲೇಪಿಸಿರುವುದರಿಂದ ಎಸಿ ಇಲ್ಲದೆ ಕಾರು ತಂಪಾಗಿದೆ ಎಂದು ಹೇಳಿದ್ದರು.
MOSTREAD: ಇನ್ನು ಮುಂದೆ ಈ ನಗರಗಳಲ್ಲಿ ಡೀಸೆಲ್ ವಾಹನಗಳನ್ನು ಮಾರಾಟ ಮಾಡುವಂತಿಲ್ಲ
ಮಹಾರಾಷ್ಟ್ರದ ವೈದ್ಯರೊಬ್ಬರು ಸಹ ತಮ್ಮ ಕಾರನ್ನು ಹಸುವಿನ ಸಗಣಿಯಿಂದ ಲೇಪಿಸಿದ್ದರು. ಅವರು ತಮ್ಮ ಮಗಳ ಮದುವೆಯ ಕಾರನ್ನು ಹಸುವಿನ ಸಗಣಿಯಿಂದ ಲೇಪಿಸಿದ್ದರು ಎಂಬುದು ಗಮನಾರ್ಹ. ಸಗಣಿಯಿಂದ ಲೇಪಿತವಾಗಿದ್ದ ಟೊಯೊಟಾ ಇನೋವಾ ಕಾರ್ ಅನ್ನು ಮದುವೆಗೆ ಬಂದಿದ್ದ ಸಂಬಂಧಿಕರು ನೋಡಿ ಅಚ್ಚರಿ ವ್ಯಕ್ತಪಡಿಸಿದ್ದರು.
ಸಾಮಾನ್ಯವಾಗಿ ಕಾರ್ ಕ್ಯಾಬಿನ್ ಒಳಗಿನ ತಾಪಮಾನವು ಹೊರಗಿನ ತಾಪಮಾನಕ್ಕಿಂತ ಹೆಚ್ಚಾಗಿರುತ್ತದೆ. ಅದರಲ್ಲೂ ಬೇಸಿಗೆ ಕಾಲದಲ್ಲಿ ಎಸಿ ಇಲ್ಲದೆ ಕಾರಿನಲ್ಲಿ ಕುಳಿತುಕೊಳ್ಳಲು ಸಾಧ್ಯವಿಲ್ಲ. ಇದರಿಂದ ತಪ್ಪಿಸಿಕೊಳ್ಳಲು ಕಾರುಗಳ ಮಾಲೀಕರು ಹಸುವಿನ ಸಗಣಿಯನ್ನು ಲೇಪನ ಮಾಡುತ್ತಾರೆ.