Just In
- 16 min ago ಭಾರತದಲ್ಲಿ ಎಪ್ರಿಲಿಯಾ ಶ್ರೇಣಿಯ ನವೀಕರಣ... ಸೂಪರ್ ಬೈಕ್ ಸಂಸ್ಕೃತಿಗೆ ಅಡಿಪಾಯ
- 46 min ago ಫ್ಯಾಮಿಲಿ ಕಾರಾಗಿ ಜನರ ಮನಗೆದ್ದ ಇನ್ನೋವಾ ಹೈಕ್ರಾಸ್ನ ಹೊಸ ರೂಪಾಂತರದ ವಿಶೇಷತೆಗಳೇನು?
- 1 hr ago Bengaluru: ಇಂದಿನಿಂದ ಹೆಬ್ಬಾಳ ಮೇಲ್ಸೇತುವೆ ಮೇಲೆ ಈ ವಾಹನಗಳ ಸಂಚಾರ ಬಂದ್.. ಪರ್ಯಾಯ ಮಾರ್ಗಗಳಾವುವು?
- 3 hrs ago ಮಹೀಂದ್ರಾ ಬೊಲೆರೋ ನಿಯೋ ಪ್ಲಸ್ 9-ಸೀಟರ್ ಎಸ್ಯುವಿ ಬೆಲೆ, ವಿಶೇಷತೆಗಳು!
Don't Miss!
- Finance ಬೆಂಗಳೂರಿನಲ್ಲಿ ನಮ್ಮ ಯಾತ್ರಿ ಕ್ಯಾಬ್ ಸೇವೆ ಪ್ರಾರಂಭ, ಶೂನ್ಯ ಕಮಿಷನ್ ಭರವಸೆ
- Sports RCB: ಇದೇ ಆರ್ಸಿಬಿ ಸಮಸ್ಯೆ ಮೂಲ; ವಿದೇಶಿ ಕೋಚಿಂಗ್ ಸ್ಟಾಫ್ ವಿರುದ್ಧ ಸಿಡಿಮಿಡಿಗೊಂಡ ವೀರೇಂದ್ರ ಸೆಹ್ವಾಗ್
- Lifestyle ಸಲ್ಮಾನ್ ಹತ್ಯೆಗೆ ಪದೇ ಪದೇ ಯತ್ನ ಆಗುತ್ತಿರೋದೇಕೆ..? ಬಿಷ್ಣೋಯ್ ಗ್ಯಾಂಗ್ ದಶಕಗಳ ವೈರತ್ವವೇನು?
- News ಕಾಂಗ್ರೆಸ್ ಬಿಗ್ ಶಾಕ್ : ಮಾಜಿ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಬಿಜೆಪಿ ಸೇರ್ಪಡೆ
- Technology ಇದೇ ಏಪ್ರಿಲ್ 22 ರಂದು ರಿಯಲ್ಮಿ ಈ ಹೊಸ ಫೋನ್ ಸೇಲ್ ಪ್ರಾರಂಭ!
- Movies ದ್ವಾರಕೀಶ್ ನಿಧನಕ್ಕೆ ಪಿಎಂ ಮೋದಿ ಸಂತಾಪ.. ಶಿವಣ್ಣ ಅಂತಿಮ ದರ್ಶನ; ಇಲ್ಲಿದೆ 'ಪ್ರಚಂಡ ಕುಳ್ಳ'ನ ಅಂತ್ಯಕ್ರಿಯೆ ಡಿಟೈಲ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಂತಾರಾಜ್ಯ ಪ್ರಯಾಣಕ್ಕೆ ಹೊಸ ಮಾರ್ಗಸೂಚಿ ಬಿಡುಗಡೆಗೊಳಿಸಿದ ಐಸಿಎಂಆರ್
ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಅಂತರರಾಜ್ಯ ಪ್ರಯಾಣಕ್ಕಾಗಿ ಆರ್ಟಿ-ಪಿಸಿಆರ್ ಪರೀಕ್ಷೆ ತೆಗೆದುಕೊಳ್ಳುವ ಅಗತ್ಯವಿಲ್ಲವೆಂದು ತಿಳಿಸಿದೆ. ಆದರೆ ಈ ನಿಯಮವು ಕೇವಲ ಸಂಪೂರ್ಣವಾಗಿ ಆರೋಗ್ಯವಾಗಿರುವವರಿಗೆ ಮಾತ್ರ ಅನ್ವಯವಾಗುತ್ತದೆ.
ಕರೋನಾ ವೈರಸ್ ಎರಡನೇ ಅಲೆಯ ಹಿನ್ನೆಲೆಯಲ್ಲಿ ಲ್ಯಾಬ್'ಗಳು ಜನರಿಂದ ತುಂಬಿ ಹೋಗಿವೆ. ಲ್ಯಾಬ್'ಗಳಲ್ಲಿ ಜನದಟ್ಟಣೆ ಉಂಟಾಗುವುದನ್ನು ತಪ್ಪಿಸಲು ಈ ಸಲಹೆ ನೀಡಲಾಗಿದೆ. ಒಮ್ಮೆಆರ್ಟಿ-ಪಿಸಿಆರ್ ಟೆಸ್ಟ್'ನಲ್ಲಿ ಪಾಸಿಟಿವ್ ಬಂದ ವ್ಯಕ್ತಿಯನ್ನು ಮತ್ತೆ ಪರೀಕ್ಷಿಸಬಾರದು ಎಂದು ಐಸಿಎಂಆರ್ ಸಲಹೆ ನೀಡಿದೆ.
ಇದರಿಂದ ಕೋವಿಡ್ 19 ಪರೀಕ್ಷೆ ನಡೆಸುವ ಲ್ಯಾಬ್'ಗಳಲ್ಲಿ ಜನ ದಟ್ಟಣೆ ಕಡಿಮೆಯಾಗಿ ಸಮಯಕ್ಕೆ ಸರಿಯಾಗಿ ಪರೀಕ್ಷಾ ವರದಿಗಳು ಜನರ ಕೈ ಸೇರಲಿವೆ.ಇದರಿಂದ ಅಂತರರಾಜ್ಯ ಪ್ರಯಾಣ ಕೈಗೊಳ್ಳುವವರಿಗೆ ಅನುಕೂಲವಾಗಲಿದೆ ಎಂದು ಹೇಳಲಾಗಿದೆ.
MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್ಟಿಒ ಫಾರಂಗಳಿವು!
ಹೊಸ ಆದೇಶದ ಪ್ರಕಾರ, ಕರೋನಾ ರೋಗ ಲಕ್ಷಣಗಳನ್ನು ಹೊಂದಿರದ ವ್ಯಕ್ತಿಗಳು ಕರೋನಾ ಪರೀಕ್ಷೆಗೆ ಒಳಗಾಗಬೇಕಾಗಿಲ್ಲ. ಬಸ್, ರೈಲು ಹಾಗೂ ವಿಮಾನಗಳಲ್ಲಿ ಸಂಚರಿಸುವ ಪ್ರಯಾಣಿಕರಿಗೆ ಈ ನಿಯಮ ಅನ್ವಯವಾಗುತ್ತದೆ.
ಐಸಿಎಂಆರ್ ಅನಗತ್ಯವಾಗಿ ಅಂತರರಾಜ್ಯ ಪ್ರಯಾಣವನ್ನು ಕೈಗೊಳ್ಳಬಾರದೆಂದು ಸಲಹೆ ನೀಡಿದೆ. ಅದರಲ್ಲೂ ಜ್ವರ ಸೇರಿದಂತೆ ಕರೋನಾ ರೋಗ ಲಕ್ಷಣಗಳನ್ನುಹೊಂದಿರುವವರು ಪ್ರಯಾಣಿಸಬಾರದು ಎಂದು ಹೇಳಿದೆ.
MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು
ಎಲ್ಲಾ ಪ್ರಯಾಣಿಕರು ಕೋವಿಡ್ ಸುರಕ್ಷತಾ ನಿಯಮಗಳನ್ನು ಪಾಲಿಸಬೇಕು ಎಂದು ಹೇಳಿದೆ. ಈ ನಡುವೆ ಕೆಲವು ರಾಜ್ಯಗಳು ಲಾಕ್ಡೌನ್ ಅವಧಿಯಲ್ಲಿ ಪ್ರಯಾಣಿಸಲು ಇ-ಪಾಸ್'ಗಳನ್ನು ಕಡ್ಡಾಯಗೊಳಿಸಿವೆ.
ಭಾರತ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಡಿಸ್ಚಾರ್ಜ್ ನೀತಿಯ ಪ್ರಕಾರ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗುವಾಗ ಕೋವಿಡ್ 19 ರೋಗಿಗಳನ್ನು ಪರೀಕ್ಷಿಸುವ ಅಗತ್ಯವಿಲ್ಲ.
MOST READ:10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್
ಸದ್ಯಕ್ಕೆ ಭಾರತದಲ್ಲಿ ಆರ್ಟಿ-ಪಿಸಿಆರ್, ಟ್ರೂನಾಟ್, ಸಿಬಿಎನ್ಎಟಿ ಸೇರಿದಂತೆ ಒಟ್ಟು 2,506 ಪರೀಕ್ಷಾ ಲ್ಯಾಬ್'ಗಳಿವೆ. ಈ ಲ್ಯಾಬ್'ಗಳು ಪ್ರತಿ ನಿತ್ಯ ಮೂರು ಶಿಫ್ಟ್ ಕಾರ್ಯಾಚರಣೆ ನಡೆಸಿ ಪ್ರತಿ ದಿನ 1.5 ಮಿಲಿಯನ್ ಪರೀಕ್ಷೆಗಳನ್ನು ಮಾಡಬಹುದು.
ಪ್ರತಿ ದಿನ ಸೋಂಕಿತ ಪ್ರಕರಣಗಳು ಹೆಚ್ಚಾಗುತ್ತಿರುವುದರಿಂದ ಸಮಯೋಚಿತ ವರದಿಗಳನ್ನು ನೀಡಲು ಲ್ಯಾಬ್'ಗಳ ಮೇಲೆ ಒತ್ತಡ ಹೆಚ್ಚುತ್ತಿದೆ. ಪರೀಕ್ಷೆಗಳನ್ನು ಹೆಚ್ಚಿಸಲು ಐಸಿಎಂಆರ್ ಶಿಫಾರಸು ಮಾಡಿದೆ. ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಆರೋಗ್ಯ ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲು ಅನುಮತಿ ನೀಡುವಂತೆ ಹೇಳಿದೆ.