Just In
- 2 min ago Ola: ಓಲಾದಿಂದ ಕಡಿಮೆ ಬೆಲೆಯ 'ಎಸ್1 ಎಕ್ಸ್' ಎಲೆಕ್ಟ್ರಿಕ್ ಸ್ಕೂಟರ್ ಬಗ್ಗೆ ದೊಡ್ಡ ಘೋಷಣೆ.. ಏನದು?
- 1 hr ago ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- 2 hrs ago ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- 4 hrs ago ಹ್ಯುಂಡೈ ವೆರ್ನಾ ಕಾರಿಗೆ ಭಾರೀ ಡಿಸ್ಕೌಂಟ್: ರಾಶಿ ಫೀಚರ್ನ ಕಾರಿಗೆ ಇಷ್ಟು ಆಫರ್ ಯಾಕೆಂದ ನೆಟ್ಟಿಗರು!
Don't Miss!
- News Ballari Lok Sabha Election: ಶ್ರೀರಾಮುಲು ಪತ್ನಿ ನಾಮಪತ್ರ ವಾಪಸ್, ಅಂತಿಮ ಕಣದಲ್ಲಿ 10 ಅಭ್ಯರ್ಥಿಗಳು
- Technology ನಾಳೆ ವಿವೋದ ಈ ಹೊಸ ಫೋನ್ ಫಸ್ಟ್ ಸೇಲ್!..ಬಜೆಟ್ ಬೆಲೆಗೆ ಲಭ್ಯ!
- Movies ಕಲರ್ಫುಲ್ ಲೈಟು.. ಡಿಂಪಲ್ ಸ್ಮೈಲು.. 'ಸಂಜು ವೆಡ್ಸ್ ಗೀತಾ 2' ಒಂದು ಹಾಡಿನ ಸೆಟ್ಟಿಗೆ ಬರೋಬ್ಬರಿ ₹50 ಲಕ್ಷ!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬೆಂಗಳೂರು ಮತ್ತು ಚೆನ್ನೈ ನಡುವೆ ಹೈ ಸ್ಪೀಡ್ ರೈಲ್ವೆ ಕಾರಿಡಾರ್ ನಿರ್ಮಿಸಲಿದೆ ಚೀನಾ...
ಭಾರತ ಮತ್ತು ಚೀನಾ ನಡುವಿನ ಆರ್ಥಿಕ ಸಂಬಂಧಗಳು ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಇದರ ಬೆನ್ನಲ್ಲೇ ಆರ್ಥಿಕ ಸಮ್ಮೇಳನದಲ್ಲಿ ಚರ್ಚಿಸಲಾದ ಬೆಂಗಳೂರು-ಚೆನ್ನೈ ನಡುವಿನ ಹೈ ಸ್ಪೀಡ್ ಕಾರಿಡಾರ್ ನಿರ್ಮಾಣಕ್ಕೆ ಸಮ್ಮತಿಸಿದೆ.
ಬೀಜಿಂಗ್ನಲ್ಲಿ ನಡೆದ ವಿಶ್ವ ಆರ್ಥಿಕ ಶೃಂಗಸಭೆಯ ನಂತರ ಭಾರತ ಮತ್ತು ಚೀನಾ ನಡುವಿನ ಆರ್ಥಿಕ ಸಂಬಂಧಗಳು ಸಹಜ ಸ್ಥಿತಿಯತ್ತ ಮರಳುತ್ತಿದ್ದು, ಇದರ ಬೆನ್ನಲ್ಲೇ ಆರ್ಥಿಕ ಸಮ್ಮೇಳನದಲ್ಲಿ ಚರ್ಚಿಸಲಾದ ಪ್ರಮುಖ ಯೋಜನೆಗಳಲ್ಲಿ ಒಂದಾದ ಬೆಂಗಳೂರು-ಚೆನ್ನೈ ನಡುವಿನ ಹೈ ಸ್ಪೀಡ್ ಕಾರಿಡಾರ್ ನಿರ್ಮಾಣಕ್ಕೆ ಚೀನಾ ಸಮ್ಮತಿ ಸೂಚಿಸಿದೆ.
ವರದಿಗಳ ಪ್ರಕಾರ, ಬೆಂಗಳೂರು ಮತ್ತು ಚೆನ್ನೈ ನಡುವಿನ ಪ್ರಯಾಣದ ಅವಧಿಯನ್ನು ತಗ್ಗಿಸುವ ಉದ್ದೇಶದಿಂದ ಹೈ ಸ್ಪೀಡ್ ರೈಲ್ವೆ ಕಾರಿಡಾರ್ ಯೋಜನೆಯ ಅನುಷ್ಠಾನಕ್ಕಾಗಿ ಭಾರತವು ಚೀನಾವನ್ನು ಸಂಪರ್ಕಿಸಿದ್ದು, ಭಾರತದ ಮಹತ್ವಾಂಕ್ಷಿ ಯೋಜನೆಯನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವುದಾಗಿ ಚೀನಾ ಭರವಸೆ ನೀಡಿದೆ ಎನ್ನಲಾಗಿದೆ.
ಕೇವಲ ಬೆಂಗಳೂರು ಟು ಚೆನ್ನೈ ಅಷ್ಟೇ ಅಲ್ಲದೇ ಆಗ್ರಾ ಟು ಝಾನ್ಸಿ ನಡುವಿನ ಹೈ ಸ್ಪೀಡ್ ರೈಲ್ವೆ ಕಾರಿಡಾರ್ ನಿರ್ಮಾಣಕ್ಕೂ ಸಮ್ಮತಿ ಸೂಚಿಸಿರುವ ಚೀನಾ ಸುಧಾರಿತ ತಂತ್ರಜ್ಞಾನ ಪ್ರೇರಣೆಯೊಂದಿಗೆ ರೈಲುಗಳು ಸಂಚಾರ ಅವಧಿಯನ್ನು ಪರಿಣಾಮಕಾರಿ ತಗ್ಗಿಸಲಿದೆ.
ಈ ಬಗ್ಗೆ ನೀತಿ ಆಯೋಗದ ರಾಜೀವ್ ಕುಮಾರ್ ಮಾತನಾಡಿದ್ದು, ಮೊದಲ ಹಂತದಲ್ಲಿ ಬೆಂಗಳೂರು ಟು ಚೆನ್ನೈ ಹಾಗೂ ತದನಂತರ ಆಗ್ರಾ ಟು ಝಾನ್ಸಿ ಹೈ ಸ್ಪೀಡ್ ರೈಲ್ವೆ ಕಾರಿಡಾರ್ ನಿರ್ಮಾಣಕ್ಕಾಗಿ ಚೀನಾ ಸಮ್ಮತಿಸಿದೆ ಎಂದಿದ್ದಾರೆ.
ಇದಕ್ಕಾಗಿ ಇನ್ನು ಕೆಲವೇ ದಿನಗಳಲ್ಲಿ ಹೊಸ ಯೋಜನೆಯನ್ನು ಕಾರ್ಯರೂಪಕ್ಕೆ ತರಲಿರುವ ಚೀನಾ, ಯೋಜನೆಯ ಬಗ್ಗೆ ಅಧ್ಯಯನ ಕೈಗೊಳ್ಳಲಿದೆ. ಜೊತೆಗೆ ಭಾರತದಲ್ಲಿ ಅತಿ ವೇಗದ ರೈಲು ಕಾರಿಡಾರ್ಗಳನ್ನು ಅಭಿವೃದ್ಧಿಪಡಿಸುವಲ್ಲಿ ಆಸಕ್ತಿ ಹೊಂದಿರುವ ಚೀನಾ, ಬೆಂಗಳೂರು ಟು ಚೆನ್ನೈ ನಡುವಿನ ಪ್ರಯಾಣ ಅವಧಿಯನ್ನು 90 ನಿಮಿಷಗಳಿಗೆ ತಗ್ಗಿಸುವ ನೀರಿಕ್ಷೆಯಿದೆ.
ಯಾಕೇಂದ್ರೆ ಈ ಹಿಂದೆಯೇ ಈ ಬಗ್ಗೆ ಜರ್ಮನ್ ಮತ್ತು ಚೀನಾ ಅಧ್ಯಯನ ನಡೆಸಿದ್ದಲ್ಲೇ ಕಾರಣಾಂತರ ಮಹತ್ವದ ಯೋಜನೆಯನ್ನು ಅಲ್ಲಿಗೆ ಕೈಬಿಟ್ಟಿದ್ದವು. ಆದರೇ, ಭಾರತ ಮತ್ತು ಚೀನಾ ನಡುವಿನ ಆರ್ಥಿಕ ಒಪ್ಪಂದದ ಫಲವಾಗಿ ಮಹತ್ವಾಂಕ್ಷಿ ಯೋಜನೆಗೆ ಮರುಜೀವ ಬಂದಿದೆ.
ಹೀಗಾಗಿ ಬೆಂಗಳೂರು ಟು ಚೆನ್ನೈ ನಡುವಿನ ಒಟ್ಟು 340 ಕಿಮಿ ನಡುವಿನ ಪ್ರಯಾಣದ ಅವಧಿಯು 5 ಗಂಟೆಯಿಂದ 90 ನಿಮಿಷಗಳಿಗೆ ತಗ್ಗಲಿದ್ದು, ಈ ಭಾಗದಲ್ಲಿ ಅತಿಹೆಚ್ಚು ವೇಗವಾಗಿ ಪ್ರಯಾಣಿಸುವ ಜನ್ ಶತಾಬ್ದಿ ರೈಲಿಗಿಂತಲೂ ಹೊಸ ಕಾರಿಡಾರ್ನಲ್ಲಿ ಓಡಾಡುವ ರೈಲುಗಳು ಮತ್ತಷ್ಟು ವೇಗ ಪಡೆದುಕೊಳ್ಳಲಿವೆ.
ಇಲ್ಲಿ ಮತ್ತೊಂದು ಪ್ರಮುಖ ವಿಚಾರ ಅಂದ್ರೆ ಹೈ ಸ್ಪೀಡ್ ರೈಲ್ವೆ ಕಾರಿಡಾರ್ಗಳಲ್ಲಿ ರೈಲುಗಳು ವೇಗವನ್ನು ಪ್ರತಿ ಗಂಟೆಗೆ 200ಕಿಮಿ ಹೆಚ್ಚಿಸಲು ಬಗ್ಗೆ ಚೀನಾ ಎದುರು ನೋಡುತ್ತಿದ್ದರು, ಭಾರತದಲ್ಲಿ ಅಂತಹ ವಾತಾರಣ ಇಲ್ಲದಿರುವುದು ಸಹ ಮಹತ್ವದ ಯೋಜನೆಗೆ ಹಿನ್ನೆಡೆಯಾಗುತ್ತಿದೆ.
ಇದಕ್ಕೆ ಹಲವಾರು ಕಾರಣಗಳಿದ್ದು, ಅಸಮರ್ಪಕ ರೈಲ್ವೆ ಕ್ರಾಸಿಂಗ್ಗಳು, ಗುಣಮಟ್ಟದ ರೈಲ್ವೆ ಹಳಿಗಳು ಇಲ್ಲದಿರುವುದು ಮತ್ತು ವಿವಿಧ ಬಗೆಯ ತಾಂತ್ರಿಕ ಕಾರಣಗಳು ಸಹ ಹೈ ಸ್ಪೀಡ್ ರೈಲ್ವೆಗಳನ್ನು ಪರಿಚಯಿಸಲು ಹಿನ್ನೆಡೆಯಾಗುತ್ತಿದೆ. ಹೀಗಾಗಿಯೇ ಭಾರತದಲ್ಲಿ ಸದ್ಯ ಪ್ರತಿ ಗಂಟೆಗೆ 120 ಕಿಮಿ ವೇಗದಲ್ಲಿ ಚಲಿಸುವ ಶತಾಬ್ದಿ ಎಕ್ಸ್ಪ್ರೆಸ್ ಹೊರತುಪಡಿಸಿ ಇನ್ನಿತರೆ ರೈಲುಗಳು ಅಷ್ಟಾಗಿ ವೇಗ ಹೊಂದಿಲ್ಲ ಎನ್ನಬಹುದು.
ಇದರಿಂದಾಗಿ ಉದ್ದೇಶಿತ ಬೆಂಗಳೂರು ಟು ಚೆನ್ನೈ ಮತ್ತು ಆಗ್ರಾ ಟು ಝಾನ್ಸಿ ನಡುವಿನ ಹೈ ಸ್ಪೀಡ್ ರೈಲ್ಪೆ ಕಾರಿಡಾರ್ಗಳನ್ನು ಅನುಷ್ಠಾನಗೊಂಡಲ್ಲಿ ಮಹಾನಗರಗಳ ವಾಣಿಜ್ಯ ಚಟುವಟಿಕೆಗಳನ್ನು ಮತ್ತಷ್ಟು ಗದಿಗೆದರಲಿದೆ ಎನ್ನಬಹುದು.