Just In
- 3 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 4 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 6 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 6 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- News RCB: ಆರ್ಸಿಬಿ ಫ್ರಾಂಚೈಸ್ನಿಂದ ಬೆಂಗಳೂರಿನ ಮೂರು ಕೆರೆಗಳ ಪುನಶ್ಚೇತನ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಈ ಎರಡು ನಗರಗಳ ನಡುವೆ ಆರಂಭವಾಗಲಿದೆ ಭಾರತದ ಮೊದಲ ಎಲೆಕ್ಟ್ರಿಕ್ ಹೆದ್ದಾರಿ
ರಸ್ತೆಗಳು ದೇಶದ ಪ್ರಗತಿಯಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ಈ ಕಾರಣಕ್ಕೆ ಬಹುತೇಕ ದೇಶಗಳಲ್ಲಿ ಹೆದ್ದಾರಿಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತದೆ. ಭಾರತದಲ್ಲಿಯೂ ಹಲವು ನಗರಗಳ ನಡುವೆ ಹೆದ್ದಾರಿಗಳನ್ನು ನಿರ್ಮಿಸಲಾಗಿದೆ. ಈ ಹೆದ್ದಾರಿಗಳು ನಗರಗಳ ನಡುವಿನ ಸಂಚಾರ ಅವಧಿಯನ್ನು ಕಡಿಮೆ ಮಾಡುತ್ತವೆ.
ಭಾರತದ ಮೊದಲ ಎಲೆಕ್ಟ್ರಿಕ್ ಹೆದ್ದಾರಿ ಶೀಘ್ರದಲ್ಲೇ ದೆಹಲಿ ಹಾಗೂ ಜೈಪುರ ನಗರಗಳ ನಡುವೆ ಆರಂಭವಾಗಲಿದೆ. ಕೇಂದ್ರ ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಸಚಿವರಾದ ನಿತಿನ್ ಗಡ್ಕರಿ ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದ್ದಾರೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ ಇಲಾಖೆಯ ಅಧಿಕಾರಿಗಳು ದೆಹಲಿ - ಜೈಪುರ ನಗರಗಳ ನಡುವೆ ಎಲೆಕ್ಟ್ರಿಕ್ ಹೆದ್ದಾರಿ ಸ್ಥಾಪಿಸಲು ವಿದೇಶಿ ಕಂಪನಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ನಿತಿನ್ ಗಡ್ಕರಿ ಹೇಳಿದ್ದಾರೆ.
ದೆಹಲಿ - ಜೈಪುರ ನಗರಗಳು ಮಾತ್ರವಲ್ಲದೆ ದೆಹಲಿ - ಮುಂಬೈ ನಗರಗಳ ನಡುವೆಯೂ ಎಲೆಕ್ಟ್ರಿಕ್ ಹೆದ್ದಾರಿಯನ್ನು ನಿರ್ಮಿಸಲು ನಿರ್ಧರಿಸಲಾಗಿದೆ. ರಸ್ತೆ ಸಾರಿಗೆ ಹಾಗೂ ಹೆದ್ದಾರಿ ಇಲಾಖೆ ಅಧಿಕಾರಿಗಳು ಈ ನಿಟ್ಟಿನಲ್ಲಿ ಸ್ವೀಡಿಷ್ ಕಂಪನಿಯೊಂದಿಗೆ ಮಾತುಕತೆ ನಡೆಸುತ್ತಿದ್ದಾರೆ ಎಂದು ವರದಿಯಾಗಿದೆ. ಕೇಂದ್ರ ಸಾರಿಗೆ ಸಚಿವರಾದ ನಿತಿನ್ ಗಡ್ಕರಿ ಭಾರತದ ಹೆದ್ದಾರಿ ವಲಯದಲ್ಲಿ ವಿದೇಶಿ ಹೂಡಿಕೆಗೆ ಹೆಚ್ಚು ಒತ್ತು ನೀಡುತ್ತಿದ್ದಾರೆ.
ಭಾರತದಲ್ಲಿ ಎಲೆಕ್ಟ್ರಿಕ್ ಹೆದ್ದಾರಿಗಳನ್ನು ನಿರ್ಮಿಸಲು ಈ ಹಿಂದೆ ನಿತಿನ್ ಗಡ್ಕರಿರವರು ಯುರೋಪಿಯನ್ ಒಕ್ಕೂಟಕ್ಕೆ ಆಹ್ವಾನ ನೀಡಿದ್ದರು ಎಂಬುದು ಗಮನಾರ್ಹ. ದೆಹಲಿ - ಜೈಪುರ ನಗರಗಳ ನಡುವೆ ಎಲೆಕ್ಟ್ರಿಕ್ ಹೆದ್ದಾರಿ ನಿರ್ಮಿಸುವುದು ನನ್ನ ಕನಸು ಎಂದು ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ. ಇದು ಉದ್ದೇಶಿತ ಯೋಜನೆಯಾಗಿದೆ. ಈ ನಿಟ್ಟಿನಲ್ಲಿ ನಾವು ವಿದೇಶಿ ಕಂಪನಿಯೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ ಎಂದು ನಿತಿನ್ ಗಡ್ಕರಿ ಹೇಳಿದರು.
ನಿತಿನ್ ಗಡ್ಕರಿರವರು ಪೆಟ್ರೋಲ್ ಹಾಗೂ ಡೀಸೆಲ್ ವಾಹನಗಳ ಬಳಕೆಯನ್ನು ಕಡಿಮೆ ಮಾಡಲು ಬಯಸಿದ್ದಾರೆ. ಬಸ್ಸುಗಳಂತಹ ಸಾರ್ವಜನಿಕ ಸಾರಿಗೆ ವಾಹನಗಳನ್ನು ಶೀಘ್ರವೇ ಎಲೆಕ್ಟ್ರಿಕ್ ವಾಹನಗಳಾಗಿ ಪರಿವರ್ತಿಸಲು ಬಯಸುವುದಾಗಿ ಅವರು ತಿಳಿಸಿದ್ದಾರೆ. ಸಚಿವ ನಿತಿನ್ ಗಡ್ಕರಿರವರು ಹಲವು ವರ್ಷಗಳಿಂದ ಪರ್ಯಾಯ ಇಂಧನಗಳ ಅಗತ್ಯದ ಬಗ್ಗೆ ಹೇಳುತ್ತಿದ್ದಾರೆ.
ಪೆಟ್ರೋಲ್, ಡೀಸೆಲ್ ಬದಲಿಗೆ ಸಿಎನ್ಜಿ ಹಾಗೂ ಎಥೆನಾಲ್ ನಂತಹ ಪರ್ಯಾಯ ಇಂಧನಗಳನ್ನು ಬಳಸುವ ಮೂಲಕ ವಿದೇಶದಿಂದ ಆಮದು ಮಾಡಿಕೊಳ್ಳುವ ಕಚ್ಚಾ ತೈಲದ ಪ್ರಮಾಣವನ್ನು ಕಡಿಮೆ ಮಾಡುವಂತೆ ನಿತಿನ್ ಗಡ್ಕರಿರವರು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದಾರೆ. ಇದರಿಂದ ಭಾರತದ ಆರ್ಥಿಕ ಪರಿಸ್ಥಿತಿ ಸುಧಾರಿಸುತ್ತದೆ ಎಂಬುದು ಅವರ ಅಭಿಪ್ರಾಯ.
ಈಗ ಭಾರತದಲ್ಲಿ ಎಥೆನಾಲ್ ಮಿಶ್ರಿತ ಪೆಟ್ರೋಲ್ ಬಳಕೆ ಪ್ರಮಾಣವು ನಿಧಾನವಾಗಿ ಹೆಚ್ಚಾಗುತ್ತಿದೆ. ಬ್ರೆಜಿಲ್ ನಂತಹ ಕೆಲವು ದೇಶಗಳಲ್ಲಿ ಎಥೆನಾಲ್ ಇಂಧನದ ಬಳಕೆ ಈಗಾಗಲೇ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಾಗಿದೆ. ಭಾರತವು ಈ ನಿಟ್ಟಿನಲ್ಲಿ ಆರಂಭಿಕ ಹಂತದಲ್ಲಿದೆ. ಭಾರತದಲ್ಲಿಯೂ ಎಥೆನಾಲ್ ಇಂಧನದ ಬಳಕೆ ಪ್ರಮಾಣ ಶೀಘ್ರದಲ್ಲಿಯೇ ಹೆಚ್ಚಾಗುವ ನಿರೀಕ್ಷೆಗಳಿವೆ.
ಕೇಂದ್ರ ಸರ್ಕಾರವು ತೆಗೆದುಕೊಳ್ಳುತ್ತಿರುವ ಕ್ರಮಗಳಿಂದಾಗಿ ಸಿಎನ್ಜಿ ಹಾಗೂ ಎಥೆನಾಲ್ನಂತಹ ಪರ್ಯಾಯ ಇಂಧನಗಳ ಬಳಕೆ ಪ್ರಮಾಣ ಹೆಚ್ಚಾಗುವ ಸಾಧ್ಯತೆಗಳಿವೆ. ಇದರಿಂದ ಕಚ್ಚಾ ತೈಲ ಆಮದು ಪ್ರಮಾಣವನ್ನು ಕಡಿಮೆ ಮಾಡಬಹುದು. ಜೊತೆಗೆ ಪರಿಸರ ಮಾಲಿನ್ಯವಾಗುವುದನ್ನು ಸಹ ತಡೆಯಬಹುದು. ಸಿಎನ್ಜಿ ವಾಹನಗಳು ಭಾರತದಲ್ಲಿ ನಿಧಾನವಾಗಿ ಜನಪ್ರಿಯವಾಗುತ್ತಿವೆ.
ಪೆಟ್ರೋಲ್ ಹಾಗೂ ಡೀಸೆಲ್ ಗೆ ಹೋಲಿಸಿದರೆ ಸಿಎನ್ಜಿ ಇಂಧನದ ಬೆಲೆ ಕಡಿಮೆ ಎಂಬುದು ಇದಕ್ಕೆ ಪ್ರಮುಖ ಕಾರಣ. ಇದರಿಂದ ಸಿಎನ್ಜಿ ವಾಹನಗಳ ನಿರ್ವಹಣಾ ವೆಚ್ಚವೂ ಕಡಿಮೆಯಾಗಲಿದೆ. ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಾಗುತ್ತಿರುವುದರಿಂದ ಭಾರತದಲ್ಲಿ ಎಲೆಕ್ಟ್ರಿಕ್ ವಾಹನಗಳ ಬಳಕೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ.
ಕೇಂದ್ರ ಸರ್ಕಾರ ಹಾಗೂ ಕೆಲವು ರಾಜ್ಯ ಸರ್ಕಾರಗಳು ಜನರನ್ನು ಎಲೆಕ್ಟ್ರಿಕ್ ವಾಹನಗಳಿಗೆ ಬದಲಾಯಿಸಲು ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿವೆ. ಕೇಂದ್ರ ಸರ್ಕಾರವು ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ತನ್ನ ಫೇಮ್ 2 ಯೋಜನೆಯಡಿಯಲ್ಲಿ ಸಬ್ಸಿಡಿ ನೀಡುತ್ತದೆ. ಜೊತೆಗೆ ಕೆಲವು ರಾಜ್ಯ ಸರ್ಕಾರಗಳೂ ಸಹ ಎಲೆಕ್ಟ್ರಿಕ್ ವಾಹನಗಳ ಖರೀದಿಗೆ ಸಬ್ಸಿಡಿ ಸೇರಿದಂತೆ ವಿವಿಧ ಕೊಡುಗೆಗಳನ್ನು ನೀಡುತ್ತವೆ.
ದೆಹಲಿ, ಗುಜರಾತ್ ನಂತಹ ರಾಜ್ಯ ಸರ್ಕಾರಗಳು ಎಲೆಕ್ಟ್ರಿಕ್ ವಾಹನಗಳಿಗಾಗಿಯೇ ಪ್ರತ್ಯೇಕ ನೀತಿಯನ್ನು ಜಾರಿಗೊಳಿಸಿವೆ. ಇದರಿಂದ ಈ ರಾಜ್ಯಗಳಲ್ಲಿ ಎಲೆಕ್ಟ್ರಿಕ್ ಸ್ಕೂಟರ್ ಗಳ ಬೆಲೆ ಉಳಿದ ರಾಜ್ಯಗಳಿಗೆ ಹೊಲಿಸಿದರೆ ತೀರಾ ಕಡಿಮೆ ಎಂದೇ ಹೇಳಬಹುದು. ದೆಹಲಿ ಸರ್ಕಾರವು 2020 ರ ಆಗಸ್ಟ್ ತಿಂಗಳಿನಲ್ಲಿ ತನ್ನ ಎಲೆಕ್ಟ್ರಿಕ್ ವಾಹನ ನೀತಿಯನ್ನು ಜಾರಿಗೊಳಿಸಿತು. ಈ ನೀತಿ ಜಾರಿಗೆ ಬಂದ ನಂತರ ದೆಹಲಿಯಲ್ಲಿ ಎಲೆಕ್ಟ್ರಿಕ್ ವಾಹನಗಳು ಹೆಚ್ಚಿನ ಸಂಖ್ಯೆಯಲ್ಲಿ ಮಾರಾಟವಾಗಿವೆ. ಇದರ ಜೊತೆಗೆ ದೆಹಲಿಯ ಹಲವು ಇಲಾಖೆಗಳ ಅಧಿಕಾರಿಗಳು ತಮ್ಮ ಪ್ರಯಾಣಕ್ಕಾಗಿ ಎಲೆಕ್ಟ್ರಿಕ್ ವಾಹನಗಳನ್ನೇ ಬಳಸುತ್ತಿದ್ದಾರೆ.
ಗಮನಿಸಿ: ಈ ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.