Just In
- 11 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 12 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 13 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 14 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- Finance mukesh ambaniಗೆ 67 ವರ್ಷ, ಅವರು ಹೊಂದಿರುವ ದುಬಾರಿ ವಸ್ತುಗಳು ಏನೇನು ಗೊತ್ತಾ?
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿದ ಭಾರತೀಯ ಸೇನೆ
ಕೋವಿಡ್ -19 ವೈರಸ್ ಸದ್ಯ ಇಡೀ ಪ್ರಪಂಚವನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಕರೋನಾ ವೈರಸ್ ಮೊದಲು ಚೀನಾದ ವುಹಾನ್ ನಗರದಲ್ಲಿ ಕಾಣಿಸಿಕೊಂಡಿತು. ಕೋವಿಡ್ -19ನಿಂದಾಗಿ ಚೀನಾ, ಇಟಲಿ, ಅಮೆರಿಕಾ, ಸ್ಪೇನ್, ಇಂಗ್ಲೆಂಡ್ ಹಾಗೂ ಇರಾನ್ ದೇಶಗಳಲ್ಲಿ ಹೆಚ್ಚಿನ ಪ್ರಮಾಣದ ಹಾನಿಯುಂಟಾಗಿದೆ.
ಕೋವಿಡ್ -19 ವೈರಸ್ ವಿಶ್ವದಾದ್ಯಂತ 34,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ. 7 ಲಕ್ಷಕ್ಕೂ ಹೆಚ್ಚು ಜನರು ಸೋಂಕಿತರಾಗಿದ್ದಾರೆ. ಕೋವಿಡ್ -19 ವೈರಸ್ ಭಾರತದಲ್ಲಿಯೂ ವೇಗವಾಗಿ ಹರಡುತ್ತಿದೆ. ಭಾರತದಲ್ಲಿ ಈವರೆಗೆ 1,071 ಜನರು ಕೋವಿಡ್ -19 ವೈರಸ್ ಸೋಂಕಿಗೆ ಒಳಗಾಗಿದ್ದು, 29 ಜನರು ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಹೆಚ್ಚಿನ ಜನರು ಕೋವಿಡ್ -19 ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಕೋವಿಡ್ -19 ವೈರಸ್ ಹರಡುವುದನ್ನು ತಡೆಗಟ್ಟಲು ಭಾರತದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತೆಗಳನ್ನು ಸಜ್ಜುಗೊಳಿಸಲಾಗಿದೆ.
ಭಾರತೀಯ ಸೇನೆಯು ಸಹ ಈ ಮಹಾಮಾರಿ ವೈರಸ್ ವಿರುದ್ಧ ಹೋರಾಡಲು ಕೈಜೋಡಿಸಿದೆ. ಭಾರತೀಯ ಸೇನೆಯು ವಿಶೇಷ ರೀತಿಯ ಬಸ್ ಅನ್ನು ಅಭಿವೃದ್ಧಿಪಡಿಸಿದೆ. ಕರೋನಾ ವೈರಸ್ ರೋಗಲಕ್ಷಣಗಳನ್ನು ಹೊಂದಿರುವವರಿಗೆ ಚಿಕಿತ್ಸೆ ನೀಡಲು ಭಾರತೀಯ ಸೇನೆಯು ಈ ಬಸ್ ಅನ್ನು ಅಭಿವೃದ್ಧಿಪಡಿಸಿದೆ.
ಈ ಬಸ್ ಅನ್ನು ಭಾರತೀಯ ಸೇನೆಯ ವೆಸ್ಟರ್ನ್ ಕಮಾಂಡ್ ತಯಾರಿಸಿದೆ. ಈ ಬಗ್ಗೆ ಭಾರತೀಯ ಸೇನೆಯ ಸಾಮಾನ್ಯ ಮಾಹಿತಿಯ ಹೆಚ್ಚುವರಿ ಮಹಾನಿರ್ದೇಶಕರು ಟ್ವೀಟ್ ಮಾಡಿದ್ದಾರೆ. ಈ ಬಸ್ಸಿನಲ್ಲಿ ಕೇವಲ ಒಂದು ಡೋರ್ ಅನ್ನು ನೀಡಲಾಗಿದೆ.
ಈ ಬಸ್ ಕೋವಿಡ್ -19 ರೋಗಿಗಳಿಗೆ ಚಿಕಿತ್ಸೆ ನೀಡುವ ಸೌಲಭ್ಯಗಳನ್ನು ಹೊಂದಿದೆ. ಬಸ್ಸಿನಲ್ಲಿ ವೆಂಟಿಲೇಟರ್ಗಳನ್ನು ನೀಡಲಾಗಿದೆ. ಕರೋನಾ ವೈರಸ್ ನಿಂದಾಗಿ ಉಸಿರಾಟಕ್ಕೆ ತೊಂದರೆಯಾಗುತ್ತದೆ. ಈ ಕಾರಣಕ್ಕೆ ಪ್ರಪಂಚದಾದ್ಯಂತ ವೆಂಟಿಲೇಟರ್ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಉತ್ಪಾದಿಸಲಾಗುತ್ತಿದೆ.
ವಿವಿಧ ದೇಶಗಳ ಸರ್ಕಾರಗಳು ವೆಂಟಿಲೇಟರ್ಗಳನ್ನು ತಯಾರಿಸಿ, ಪೂರೈಸಲು ಆಟೋಮೊಬೈಲ್ ಕಂಪನಿಗಳನ್ನು ಕೋರಿವೆ. ಟೆಸ್ಲಾ, ಫೋರ್ಡ್, ಜನರಲ್ ಮೋಟಾರ್ಸ್ ಹಾಗೂ ಮಹೀಂದ್ರಾ ಸೇರಿದಂತೆ ಬಹುತೇಕ ಆಟೋಮೊಬೈಲ್ ಕಂಪನಿಗಳು ವೆಂಟಿಲೇಟರ್ ಉತ್ಪಾದನೆಯಲ್ಲಿ ತೊಡಗಿವೆ.
MOST READ: ವಾಹನ ಉತ್ಪಾದನೆ ಸ್ಥಗಿತದಿಂದಾಗಿ ಸಾವಿರಾರು ಕೋಟಿ ನಷ್ಟ
ಈ ಬಸ್ ಅನ್ನು ಚಾಲಕ ಹಾಗೂ ಸಹ-ಚಾಲಕ ಪ್ರತ್ಯೇಕವಾಗಿರುವಂತೆ ಮಾಡಿಫೈಗೊಳಿಸಲಾಗಿದೆ. ರೈಲ್ವೆ ಇಲಾಖೆಯೂ ಸಹ ಅನೇಕ ಕ್ರಮಗಳನ್ನು ಕೈಗೊಂಡಿದೆ. ಇದಕ್ಕಾಗಿ ರೈಲು ಬೋಗಿಗಳನ್ನು ಐಸೊಲೇಷನ್ ವಾರ್ಡ್ ಗಳನ್ನಾಗಿ ಬದಲಿಸಲಾಗಿದೆ.
MOST READ:ವಾಹನ ಸವಾರರ ಕಾಲಿಗೆ ಬೀಳುತ್ತೇನೆಂದ ಸಂಚಾರಿ ಪೊಲೀಸ್, ಕಾರಣವೇನು ಗೊತ್ತಾ?
ಅಂದರೆ ರೈಲು ಬೋಗಿಗಳನ್ನು ಕರೋನಾ ರೋಗಿಗಳಿಗೆ ಚಿಕಿತ್ಸೆ ನೀಡುವ ವಾರ್ಡ್ಗಳಾಗಿ ಬದಲಿಸಲಾಗಿದೆ. ಈಗ ಭಾರತೀಯ ಸೇನೆಯು ಸಹ ಕರೋನಾ ವೈರಸ್ ವಿರುದ್ಧ ಹೋರಾಡಲು ಕೈಜೋಡಿಸಿದೆ.
MOST READ: ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಅಮೆರಿಕಾದಂತಹ ದೇಶಗಳು ಕೋವಿಡ್ -19 ವೈರಸ್ ನಿಂದಾಗಿ ತತ್ತರಿಸಿವೆ. ಭಾರತದಲ್ಲಿ ಹೆಚ್ಚು ಜನರು ಬಾಧಿತರಾದರೆ, ಹೆಚ್ಚು ಪರಿಣಾಮಗಳಾಗುವ ಸಾಧ್ಯತೆಗಳಿವೆ. ಭಾರತೀಯ ಸೇನೆಯ ಈ ಕಾರ್ಯವು ನಿಜಕ್ಕೂ ಶ್ಲಾಘನೀಯ.