Just In
- 10 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 13 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 13 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 15 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಕೈಜೋಡಿಸಿದ ಭಾರತೀಯ ಸೇನೆ
ಕೋವಿಡ್ -19 ವೈರಸ್ ಸದ್ಯ ಇಡೀ ಪ್ರಪಂಚವನ್ನು ಇನ್ನಿಲ್ಲದಂತೆ ಕಾಡುತ್ತಿದೆ. ಕರೋನಾ ವೈರಸ್ ಮೊದಲು ಚೀನಾದ ವುಹಾನ್ ನಗರದಲ್ಲಿ ಕಾಣಿಸಿಕೊಂಡಿತು. ಕೋವಿಡ್ -19ನಿಂದಾಗಿ ಚೀನಾ, ಇಟಲಿ, ಅಮೆರಿಕಾ, ಸ್ಪೇನ್, ಇಂಗ್ಲೆಂಡ್ ಹಾಗೂ ಇರಾನ್ ದೇಶಗಳಲ್ಲಿ ಹೆಚ್ಚಿನ ಪ್ರಮಾಣದ ಹಾನಿಯುಂಟಾಗಿದೆ.
ಕೋವಿಡ್ -19 ವೈರಸ್ ವಿಶ್ವದಾದ್ಯಂತ 34,000ಕ್ಕೂ ಹೆಚ್ಚು ಜನರನ್ನು ಬಲಿ ತೆಗೆದುಕೊಂಡಿದೆ. 7 ಲಕ್ಷಕ್ಕೂ ಹೆಚ್ಚು ಜನರು ಸೋಂಕಿತರಾಗಿದ್ದಾರೆ. ಕೋವಿಡ್ -19 ವೈರಸ್ ಭಾರತದಲ್ಲಿಯೂ ವೇಗವಾಗಿ ಹರಡುತ್ತಿದೆ. ಭಾರತದಲ್ಲಿ ಈವರೆಗೆ 1,071 ಜನರು ಕೋವಿಡ್ -19 ವೈರಸ್ ಸೋಂಕಿಗೆ ಒಳಗಾಗಿದ್ದು, 29 ಜನರು ಸಾವನ್ನಪ್ಪಿದ್ದಾರೆ.
ಮಹಾರಾಷ್ಟ್ರ ಹಾಗೂ ಕೇರಳ ರಾಜ್ಯಗಳಲ್ಲಿ ಹೆಚ್ಚಿನ ಜನರು ಕೋವಿಡ್ -19 ವೈರಸ್ ಸೋಂಕಿಗೆ ಒಳಗಾಗಿದ್ದಾರೆ. ಕೋವಿಡ್ -19 ವೈರಸ್ ಹರಡುವುದನ್ನು ತಡೆಗಟ್ಟಲು ಭಾರತದಲ್ಲಿ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ. ಕರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಆಸ್ಪತೆಗಳನ್ನು ಸಜ್ಜುಗೊಳಿಸಲಾಗಿದೆ.
ಭಾರತೀಯ ಸೇನೆಯು ಸಹ ಈ ಮಹಾಮಾರಿ ವೈರಸ್ ವಿರುದ್ಧ ಹೋರಾಡಲು ಕೈಜೋಡಿಸಿದೆ. ಭಾರತೀಯ ಸೇನೆಯು ವಿಶೇಷ ರೀತಿಯ ಬಸ್ ಅನ್ನು ಅಭಿವೃದ್ಧಿಪಡಿಸಿದೆ. ಕರೋನಾ ವೈರಸ್ ರೋಗಲಕ್ಷಣಗಳನ್ನು ಹೊಂದಿರುವವರಿಗೆ ಚಿಕಿತ್ಸೆ ನೀಡಲು ಭಾರತೀಯ ಸೇನೆಯು ಈ ಬಸ್ ಅನ್ನು ಅಭಿವೃದ್ಧಿಪಡಿಸಿದೆ.
ಈ ಬಸ್ ಅನ್ನು ಭಾರತೀಯ ಸೇನೆಯ ವೆಸ್ಟರ್ನ್ ಕಮಾಂಡ್ ತಯಾರಿಸಿದೆ. ಈ ಬಗ್ಗೆ ಭಾರತೀಯ ಸೇನೆಯ ಸಾಮಾನ್ಯ ಮಾಹಿತಿಯ ಹೆಚ್ಚುವರಿ ಮಹಾನಿರ್ದೇಶಕರು ಟ್ವೀಟ್ ಮಾಡಿದ್ದಾರೆ. ಈ ಬಸ್ಸಿನಲ್ಲಿ ಕೇವಲ ಒಂದು ಡೋರ್ ಅನ್ನು ನೀಡಲಾಗಿದೆ.
ಈ ಬಸ್ ಕೋವಿಡ್ -19 ರೋಗಿಗಳಿಗೆ ಚಿಕಿತ್ಸೆ ನೀಡುವ ಸೌಲಭ್ಯಗಳನ್ನು ಹೊಂದಿದೆ. ಬಸ್ಸಿನಲ್ಲಿ ವೆಂಟಿಲೇಟರ್ಗಳನ್ನು ನೀಡಲಾಗಿದೆ. ಕರೋನಾ ವೈರಸ್ ನಿಂದಾಗಿ ಉಸಿರಾಟಕ್ಕೆ ತೊಂದರೆಯಾಗುತ್ತದೆ. ಈ ಕಾರಣಕ್ಕೆ ಪ್ರಪಂಚದಾದ್ಯಂತ ವೆಂಟಿಲೇಟರ್ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಉತ್ಪಾದಿಸಲಾಗುತ್ತಿದೆ.
ವಿವಿಧ ದೇಶಗಳ ಸರ್ಕಾರಗಳು ವೆಂಟಿಲೇಟರ್ಗಳನ್ನು ತಯಾರಿಸಿ, ಪೂರೈಸಲು ಆಟೋಮೊಬೈಲ್ ಕಂಪನಿಗಳನ್ನು ಕೋರಿವೆ. ಟೆಸ್ಲಾ, ಫೋರ್ಡ್, ಜನರಲ್ ಮೋಟಾರ್ಸ್ ಹಾಗೂ ಮಹೀಂದ್ರಾ ಸೇರಿದಂತೆ ಬಹುತೇಕ ಆಟೋಮೊಬೈಲ್ ಕಂಪನಿಗಳು ವೆಂಟಿಲೇಟರ್ ಉತ್ಪಾದನೆಯಲ್ಲಿ ತೊಡಗಿವೆ.
MOST READ: ವಾಹನ ಉತ್ಪಾದನೆ ಸ್ಥಗಿತದಿಂದಾಗಿ ಸಾವಿರಾರು ಕೋಟಿ ನಷ್ಟ
ಈ ಬಸ್ ಅನ್ನು ಚಾಲಕ ಹಾಗೂ ಸಹ-ಚಾಲಕ ಪ್ರತ್ಯೇಕವಾಗಿರುವಂತೆ ಮಾಡಿಫೈಗೊಳಿಸಲಾಗಿದೆ. ರೈಲ್ವೆ ಇಲಾಖೆಯೂ ಸಹ ಅನೇಕ ಕ್ರಮಗಳನ್ನು ಕೈಗೊಂಡಿದೆ. ಇದಕ್ಕಾಗಿ ರೈಲು ಬೋಗಿಗಳನ್ನು ಐಸೊಲೇಷನ್ ವಾರ್ಡ್ ಗಳನ್ನಾಗಿ ಬದಲಿಸಲಾಗಿದೆ.
MOST READ:ವಾಹನ ಸವಾರರ ಕಾಲಿಗೆ ಬೀಳುತ್ತೇನೆಂದ ಸಂಚಾರಿ ಪೊಲೀಸ್, ಕಾರಣವೇನು ಗೊತ್ತಾ?
ಅಂದರೆ ರೈಲು ಬೋಗಿಗಳನ್ನು ಕರೋನಾ ರೋಗಿಗಳಿಗೆ ಚಿಕಿತ್ಸೆ ನೀಡುವ ವಾರ್ಡ್ಗಳಾಗಿ ಬದಲಿಸಲಾಗಿದೆ. ಈಗ ಭಾರತೀಯ ಸೇನೆಯು ಸಹ ಕರೋನಾ ವೈರಸ್ ವಿರುದ್ಧ ಹೋರಾಡಲು ಕೈಜೋಡಿಸಿದೆ.
MOST READ: ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಅಮೆರಿಕಾದಂತಹ ದೇಶಗಳು ಕೋವಿಡ್ -19 ವೈರಸ್ ನಿಂದಾಗಿ ತತ್ತರಿಸಿವೆ. ಭಾರತದಲ್ಲಿ ಹೆಚ್ಚು ಜನರು ಬಾಧಿತರಾದರೆ, ಹೆಚ್ಚು ಪರಿಣಾಮಗಳಾಗುವ ಸಾಧ್ಯತೆಗಳಿವೆ. ಭಾರತೀಯ ಸೇನೆಯ ಈ ಕಾರ್ಯವು ನಿಜಕ್ಕೂ ಶ್ಲಾಘನೀಯ.