Just In
- 7 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 8 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 9 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 10 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಹಿಮಪಾತದಲ್ಲಿ ಸಿಕ್ಕಿಬಿದ್ದ ಉಪಜಿಲ್ಲಾಧಿಕಾರಿ ರಕ್ಷಣೆಗೆ ಧಾವಿಸಿದ ಭಾರತೀಯ ಸೇನೆ..!
ಬೊಲೆರೊ, ಮಹೀಂದ್ರಾ ಕಂಪನಿಯ ಜನಪ್ರಿಯ ಕಾರುಗಳಲ್ಲಿ ಒಂದು. ಈ ಕಾರ್ ಅನ್ನು ಸಾರ್ವಜನಿಕರು ಹಾಗೂ ಸರ್ಕಾರಿ ಇಲಾಖೆಗಳು ಹೆಚ್ಚಿನ ಸಂಖ್ಯೆಯಲ್ಲಿ ಬಳಸುತ್ತವೆ. ಪೊಲೀಸ್ ಇಲಾಖೆ ಹಾಗೂ ಭಾರತೀಯ ಸೇನೆಯು ಈ ಕಾರ್ ಅನ್ನು ಹೆಚ್ಚು ಬಳಸುತ್ತವೆ. ಸರ್ಕಾರಿ ಅಧಿಕಾರಿಗಳ ಅಧಿಕೃತ ಬಳಕೆಗಾಗಿಯೂ ಸಹ ಇದೇ ಕಾರ್ ಅನ್ನು ನೀಡಲಾಗುತ್ತದೆ.
ಎಂಯುವಿ ವಾಹನಗಳನ್ನು ಆಫ್-ರೋಡ್ ಹಾಗೂ ಆನ್-ರೋಡ್ಗಳಲ್ಲಿ ಸರಾಗವಾಗಿ ಚಲಿಸುವಂತೆ ಹೆಚ್ಚಿನ ಗ್ರೌಂಡ್ ಕ್ಲಿಯರೆನ್ಸ್ ಹಾಗೂ ಹೆಚ್ಚಿನ ಎಂಜಿನ್ ಸಾಮರ್ಥ್ಯದಿಂದ ನಿರ್ಮಿಸಲಾಗಿರುತ್ತದೆ. ಈ ವಾಹನಗಳು ಗುಡ್ಡಗಾಡು ಹಾಗೂ ಅರಣ್ಯ ಪ್ರದೇಶಗಳ ಒರಟು, ಭೂಪ್ರದೇಶವನ್ನು ಹಾದುಹೋಗುವ ಸಾಮರ್ಥ್ಯವನ್ನು ಹೊಂದಿರುತ್ತವೆ.
ಈ ಕಾರಣಕ್ಕೆ ಸರ್ಕಾರವು ಈ ಕಾರ್ ಅನ್ನು ಖರೀದಿಸುವಂತೆ ತನ್ನ ಉದ್ಯೋಗಿಗಳಿಗೆ ಶಿಫಾರಸು ಮಾಡುತ್ತಿದೆ. ಮಹೀಂದ್ರಾ ಕಂಪನಿಯ ಈ ಅಪ್ರತಿಮ ಬೊಲೆರೊ ಎಂಯುವಿಯು ಕಾರು ಅಪಘಾತಕ್ಕೀಡಾಗಿರುವ ವೀಡಿಯೊವೊಂದು ಟ್ವಿಟರ್ ಹಾಗೂ ಫೇಸ್ಬುಕ್ನಲ್ಲಿ ವೈರಲ್ ಆಗುತ್ತಿದೆ.
MOSTREAD: ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಹೊಸ ದಾಖಲೆ ಬರೆದ ಕೇಂದ್ರ ಸರ್ಕಾರ
ವರದಿಗಳ ಪ್ರಕಾರ, ಈ ಕಾರು ಜಮ್ಮ ಕಾಶ್ಮೀರದ ಕುಪ್ವಾರ ಜಿಲ್ಲೆಯ ಉಪ-ಜಿಲ್ಲಾಧಿಕಾರಿಗಳ ಅಧಿಕೃತ ವಾಹನವಾಗಿತ್ತು. ಈ ಕಾರಿನಲ್ಲಿಉಪ-ಜಿಲ್ಲಾಧಿಕಾರಿಗಳು ಸೇರಿದಂತೆ ಕರ್ನಾ ಪ್ರದೇಶದ ಇಬ್ಬರು ಸರ್ಕಾರಿ ನೌಕರರು ಪ್ರಯಾಣಿಸುತ್ತಿದ್ದರು.
ಉತ್ತರ ಕಾಶ್ಮೀರದಲ್ಲಿರುವ ಶೀತ ವಾತಾವರಣದಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಈ ಬಗ್ಗೆ ಮಾಹಿತಿ ಪಡೆದ ಭಾರತೀಯ ಸೇನೆಯು ಕಾರಿನಲ್ಲಿದ್ದವರನ್ನು ರಕ್ಷಿಸಿದೆ.
MOSTREAD: ಕರೋನಾ ವೈರಸ್ ಎಫೆಕ್ಟ್: ಭಾರೀ ಪ್ರಮಾಣದಲ್ಲಿ ಕುಸಿದ ಇಂಧನ ಮಾರಾಟ
ಈ ಘಟನೆ ಏಪ್ರಿಲ್ 22ರಂದು ನಡೆದಿದೆ ಎಂದು ಹೇಳಲಾಗಿದೆ. ಈ ಕಾರಿನಲ್ಲಿದ್ದ ಉಪ-ಜಿಲ್ಲಾಧಿಕಾರಿಗಳಾದ ಬಿಲಾಲ್ ಮೋಹಿ-ಆಸ್-ದಿನ್ ಹಾಗೂ ಇತರ ಇಬ್ಬರು ಸಹ ಪ್ರಯಾಣಿಕರು ಸಣ್ಣ ಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಈ ಘಟನೆಯಿಂದಾಗಿ ರಸ್ತೆಯಲ್ಲಿ ಸಂಚಾರ ದಟ್ಟಣೆ ಉಂಟಾಗಿತ್ತು.
ಕಾರನ್ನು ಹೊರತೆಗೆದ ನಂತರ ಸೈನಿಕರು ರಸ್ತೆಯನ್ನು ಸರಿಪಡಿಸಿದರು. ಭಾರತದ ಬಹುತೇಕ ಭಾಗಗಳಲ್ಲಿ ಬಿರು ಬಿಸಿಲು ಉಂಟಾಗಿದ್ದರೆ, ಕಾಶ್ಮೀರದ ಕೆಲವು ಭಾಗಗಳಲ್ಲಿ ಇನ್ನೂ ಹಿಮಪಾತವಾಗುತ್ತಿದೆ.
MOSTREAD: ನಟ ವಿಕ್ರಮ್ಗಾಗಿ ತಯಾರಾಯ್ತು ವಿಶೇಷ ಕಾರವ್ಯಾನ್
ಕೆಲ ಪ್ರದೇಶಗಳಲ್ಲಿ ಹವಾಮಾನ ಬದಲಾವಣೆಯಿಂದಾಗಿ ಈ ರೀತಿಯ ಹಿಮಪಾತ ಉಂಟಾಗುತ್ತಿದೆ. ಕಾಶ್ಮೀರದಲ್ಲಿ ಈ ರೀತಿಯ ಘಟನೆಗಳು ಆಗಾಗ್ಗೆ ನಡೆಯುತ್ತಲೇ ಇರುತ್ತವೆ. ಈ ಸಂದರ್ಭದಲ್ಲಿಯೇ ಮಹೀಂದ್ರಾದ ಬೊಲೆರೊ ಕಾರು ಹಿಮದಲ್ಲಿ ಸಿಲುಕಿ ಅಪಘಾತಕ್ಕೀಡಾಗಿದೆ.
ಉಪ-ಜಿಲ್ಲಾಧಿಕಾರಿಗಳು ಕರೋನಾ ವೈರಸ್ ಹರಡುವಿಕೆಯ ಬಗ್ಗೆ ಅಧ್ಯಯನ ನಡೆಸುತ್ತಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಹಿಮ ಕಾರಿನ ಮೇಲೆ ಬಿದ್ದ ಕಾರಣಕ್ಕೆ ಕಾರಿನ ರೂಫ್ಗೆ ಹಾನಿಯಾಗಿದ್ದು, ಮುಂಭಾಗದ ವಿಂಡ್ ಷೀಲ್ಡ್ ಚೂರುಚೂರಾಗಿದೆ.
MOST READ:ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಈ ಘಟನೆಯನ್ನು ಹತ್ತಿರದಿಂದ ನೋಡಿದವರು, ಹಿಮದ ಮೇಲ್ಭಾಗದಲ್ಲಿ ಕಾರು ಸಿಕ್ಕಿಬಿದ್ದ ಕಾರಣಕ್ಕೆ ಕಾರಿನಲ್ಲಿದ್ದವರು ಪಾರಾಗಿದ್ದಾರೆ. ಒಂದು ವೇಳೆ ಅವರ ಕಾರು 500 ಅಡಿ ಆಳದಲ್ಲಿ ಸಿಕ್ಕಿ ಬಿದ್ದಿದ್ದರೆ ದುರ್ಘಟನೆ ನಡೆಯುವ ಸಾಧ್ಯತೆಗಳಿದ್ದವು ಎಂದು ಹೇಳಿದ್ದಾರೆ.