Just In
- 11 hrs ago ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- 11 hrs ago ಭಾರತದ ನಂ.1 ಕಾರು... ದಾಖಲೆಯ ಮಾರಾಟ... 5.5 ಲಕ್ಷ ಬೆಲೆ... 34 ಕಿ.ಮೀ ಮೈಲೇಜ್
- 11 hrs ago ಈ ಹ್ಯುಂಡೈ ಕಾರಿಗೆ ಭಾರತದಲ್ಲಿ ಭರ್ಜರಿ ಬೇಡಿಕೆ: ಇದು ನಿಮಗೆ ಬೇಕು ಅಂದ್ರೆ ಕಾಯಲೇಬೇಕು!
- 12 hrs ago ಈ ತಿಂಗಳಲ್ಲಿ ಕೈಗೆಟಕುವ ಬೆಲೆಯ ಎಸ್ಯುವಿಗಳು: ಮಿಸ್ ಮಾಡಬೇಡಿ, ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
Don't Miss!
- Movies 'ಹಿಟ್ಲರ್ ಕಲ್ಯಾಣ' ಧಾರಾವಾಹಿ ಅಂತ್ಯ: ಪ್ರೋತ್ಸಾಹ ನೀಡಿದ ವೀಕ್ಷಕರಿಗೆ ಧನ್ಯವಾದ ಎಂದ ನಟಿ ರಜಿನಿ
- News ರಾತ್ರೋ ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ವಿ.ಶ್ರೀನಿವಾಸ ಪ್ರಸಾದ್ ಅಳಿಯ ಏನು ಹೇಳಿದ್ರು ಗೊತ್ತಾ?
- Sports IPL 2024: ಮುಂಬೈ ಇಂಡಿಯನ್ಸ್ ತಂಡ ಸೇರಿದ ಮಾಜಿ ನಾಯಕ: ಹಾಲಿ ನಾಯಕನ ಆತಂಕ ದೂರ
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಮಾಲಿನ್ಯ ತಡೆಗೆ ಹೊಸ ಉಪಕರಣ ಅಭಿವೃದ್ಧಿಪಡಿಸಿದ ಐಐಟಿ ಎಂಜಿನಿಯರ್
ವಾಹನಗಳು ಹೆಚ್ಚಿದಂತೆಲ್ಲಾ ವಾಯು ಮಾಲಿನ್ಯ ಪ್ರಮಾಣವು ಸಹ ಹೆಚ್ಚಾಗುತ್ತಿದೆ. ಸರ್ಕಾರವು ಹಲವಾರು ಕ್ರಮಗಳನ್ನು ಕೈಗೊಳುತ್ತಿದ್ದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ವಾಯು ಮಾಲಿನ್ಯವು ಹೆಚ್ಚಾಗುತ್ತಿದೆಯೆ ಹೊರತು ಕಡಿಮೆಯಾಗುತ್ತಿಲ್ಲ.
ಸರ್ಕಾರವು ಮಾಲಿನ್ಯ ನಿಯಂತ್ರಣಕ್ಕಾಗಿ ವಾಹನಗಳ ಎಂಜಿನ್ಗಳನ್ನು ಬಿಎಸ್ 4ನಿಂದ ಬಿಎಸ್ 6ಗೆ ಬದಲಾಯಿಸುತ್ತಿದೆ. ಇದರ ಜೊತೆಗೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಉತ್ತೇಜನವನ್ನು ನೀಡುತ್ತಿದ್ದು, ಡೀಸೆಲ್ - ಪೆಟ್ರೋಲ್ ವಾಹನಗಳ ರಿಜಿಸ್ಟ್ರೇಷನ್ ಮೇಲೆ ಭಾರೀ ಪ್ರಮಾಣದ ಶುಲ್ಕವನ್ನು ವಿಧಿಸುವ ಯೋಜನೆಯನ್ನು ಹೊಂದಿದೆ.
ಹೊಸದಾಗಿ ಎಲೆಕ್ಟ್ರಿಕ್ ವಾಹನಗಳನ್ನು ಖರೀದಿಸುವವರಿಗೆ ರಿಜಿಸ್ಟ್ರೇಷನ್ ಶುಲ್ಕದಿಂದ ವಿನಾಯಿತಿ ಸೇರಿದಂತೆ ಹಲವಾರು ಸೌಲಭ್ಯಗಳನ್ನು ನೀಡಲಾಗುತ್ತಿದೆ. ದೆಹಲಿಯಲ್ಲಿನ ವಾಯು ಮಾಲಿನ್ಯವನ್ನು ಕಡಿಮೆ ಮಾಡುವ ಉದ್ದೇಶದಿಂದ ಅಲ್ಲಿನ ರಾಜ್ಯ ಸರ್ಕಾರವು ಮೂರನೇ ಬಾರಿಗೆ ಸಮ ಬೆಸ ನಿಯಮವನ್ನು ಜಾರಿಗೆ ತರುತ್ತಿದೆ.
ವಾಹನಗಳಿಂದ ಉಂಟಾಗುವ ವಾಯು ಮಾಲಿನ್ಯವನ್ನು ನಿಯಂತ್ರಿಸುವ ಉದ್ದೇಶದಿಂದ ಖರಗಪುರ್ ಐಐಟಿಯ ಪದವಿಧರರೊಬ್ಬರು ಉಪಕರಣವೊಂದನ್ನು ಕಂಡು ಹಿಡಿದಿದ್ದಾರೆ. ಈ ಉಪಕರಣವನ್ನು ವಾಹನಗಳಿಗೆ ಅಳವಡಿಸಿದರೆ ವಾಯು ಮಾಲಿನ್ಯವು ಕಡಿಮೆಯಾಗಲಿದೆ ಎಂದು ಹೇಳಲಾಗಿದೆ.
ಈ ಉಪಕರಣಕ್ಕೆ ಪಿಎಂ 2.5 ಎಂಬ ಹೆಸರಿಡಲಾಗಿದೆ. ಈ ಉಪಕರಣವನ್ನು ದೆಬಾಯನ್ ಸಹಾರವರು ಅಭಿವೃದ್ಧಿಪಡಿಸಿದ್ದಾರೆ. ಅವರು ಸ್ಟಾನ್ಫರ್ಡ್ ಯೂನಿವರ್ಸಿಟಿಯಲ್ಲಿ ಗ್ಲೋಬಲ್ ಬಯೊಡಿಸೈನ್ ಫೆಲೊ ಆಗಿಯೂ ಕೆಲಸ ನಿರ್ವಹಿಸುತ್ತಿದ್ದಾರೆ.
ಈ ಉಪಕರಣವನ್ನು ವಾಹನಗಳ ಎಕ್ಸಾಸ್ಟ್ ಸಿಸ್ಟಂಗಳಿಗೆ ಅಳವಡಿಸಬೇಕಾಗುತ್ತದೆ. ಪಿಎಂ 2.5 ಉಪಕರಣವನ್ನು ಒಂದು ಕಾರಿಗೆ ಅಳವಡಿಸಿದರೆ, 10 ಕಾರುಗಳಲ್ಲಿ ಉಂಟಾಗುವಷ್ಟು ಮಾಲಿನ್ಯವನ್ನು ನಿಯಂತ್ರಿಸುತ್ತದೆ.
ಈ ಬಗ್ಗೆ ಮಾತನಾಡಿರುವ ಅವರು ಪಿಎಂ 2.5ನಲ್ಲಿರುವ ಟೆಕ್ನಾಲಜಿಯು ಎಲೆಕ್ಟ್ರಿಕ್ ಎನರ್ಜಿ ಹಾಗೂ ವೇವ್ ಎನರ್ಜಿಯನ್ನು ಬಳಸುತ್ತದೆ. ಇದರಿಂದಾಗಿ ಅವು ಮ್ಯಾಗ್ನೆಟ್ನಂತೆ ವರ್ತಿಸಿ, ವಾತಾವರಣದಲ್ಲಿರುವ ಇತರ ಮಾಲಿನ್ಯಕಾರಕ ಅಂಶಗಳನ್ನು ಆಕರ್ಷಿಸುತ್ತವೆ. ಅವು ಗಾತ್ರದಲ್ಲಿ ದೊಡ್ಡದಾಗುತ್ತಿದ್ದಂತೆ ಅವುಗಳ ತೂಕವು ಹೆಚ್ಚಾಗಿ ನೆಲದ ಮೇಲೆ ಬೀಳುತ್ತವೆ ಎಂದು ಹೇಳಿದರು.
MOST READ: ಜೆಸಿಬಿ ಯಂತ್ರವು ಹಳದಿ ಬಣ್ಣದಲ್ಲೇ ಏಕಿರುತ್ತೆ?
ಪಿಎಂ 2.5 ಅನ್ನು ಹೊಂದಲಿರುವ ಒಂದು ಕಾರು ತನ್ನ ಸುತ್ತಲಿರುವ ಮಾಲಿನ್ಯವನ್ನು ನಿವಾರಿಸುತ್ತದೆ. ತನ್ನ ಸುತ್ತಮುತ್ತಲಿನ 10 ಕಾರುಗಳು ಹೊರಹಾಕುವ ಮಾಲಿನ್ಯವನ್ನು ತಟಸ್ಥಗೊಳಿಸುತ್ತದೆ. ಪಿಎಂ 2.5 ಉಪಕರಣವು ಚಿಕ್ಕ ಗಾತ್ರವನ್ನು ಹೊಂದಿದ್ದರೂ ಶ್ವಾಸಕೋಶ ಹಾಗೂ ರಕ್ತಪ್ರವಾಹಕ್ಕೆ ಪ್ರವೇಶಿಸುವ ವಾಯುಮಾಲಿನ್ಯವನ್ನು ತಡೆಗಟ್ಟುತ್ತದೆ ಎಂದು ಸಹಾರವರು ಹೇಳಿದರು.
MOST READ: ವಿಮಾನಗಳಲ್ಲಿ ಬಿಳಿ ಬಣ್ಣವನ್ನೇ ಬಳಕೆ ಮಾಡುವುದರ ಹಿಂದಿನ ಕಾರಣವೇನು?
ಸಹಾರವರು ಈ ಉಪಕರಣವನ್ನು ವಾಣಿಜ್ಯೀಕರಿಸಲು ಯೋಜಿಸಿದ್ದು, ಈಗಾಗಲೇ ಹಲವಾರು ಕಂಪನಿಗಳೊಂದಿಗೆ ಮಾತುಕತೆ ನಡೆಸಿದ್ದಾರೆ. ಇತ್ತೀಚಿನ ಸಂಶೋಧನೆಗಳ ಪ್ರಕಾರ ವಾಯುಮಾಲಿನ್ಯವು ಜನರಲ್ಲಿರುವ ಜ್ಞಾಪಕ ಶಕ್ತಿಯನ್ನು ಹಾನಿಗೊಳಿಸುತ್ತದೆ. ಮೆದುಳಿಗೆ 10 ವರ್ಷ ಹೆಚ್ಚು ವಯಸ್ಸಾಗುತ್ತದೆ.
MOST READ: ಮೈಲಿಗಲ್ಲುಗಳ ಬಣ್ಣದ ಹಿಂದಿರುವ ಕಾರಣಗಳೇನು ಗೊತ್ತಾ?
ಪ್ರಮುಖ ಸಂಶೋಧಕರೊಬ್ಬರು ಮಾತನಾಡಿ, ಪದಗಳ ಸರಮಾಲೆಯನ್ನು ನೆನಪಿಸಿಕೊಳ್ಳುವಾಗ, ಕಲುಷಿತ ವಾತಾವರಣದಲ್ಲಿರುವ 50 ವರ್ಷ ವಯಸ್ಸಿನವರು 60 ವರ್ಷದವರ ರೀತಿ ವರ್ತಿಸುತ್ತಾರೆ ಎಂದು ಹೇಳೀದ್ದಾರೆ. ದೆಹಲಿಯಲ್ಲಿನ ಗಾಳಿಯ ಗುಣಮಟ್ಟವು ಗಣನೀಯವಾಗಿ ಕುಸಿದಿದೆ.
ಕೇಂದ್ರ ಸರ್ಕಾರದ ಅಡಿಯಲ್ಲಿ ಬರುವ ಸಿಸ್ಟಂ ಆಫ್ ಏರ್ ಕ್ವಾಲಿಟಿ ಹಾಗೂ ವೆದರ್ ಫೊರ್ ಕಾಸ್ಟಿಂಗ್ ಅಂಡ್ ರಿಸರ್ಚ್ (ಸಫರ್) ಜನರಿಗೆ ಬೆಳಿಗ್ಗೆಯ ವಾಯುವಿಹಾಗ ಹಾಗೂ ಇತರ ಹೊರಾಂಗಣ ಚಟುವಟಿಕೆಗಳನ್ನು ಮಾಡದಂತೆ ಸಲಹೆ ನೀಡಿದೆ. ವಾಯು ಮಾಲಿನ್ಯದಲ್ಲಿನ ಹೆಚ್ಚಳದಿಂದಾಗಿ ಜನರಲ್ಲಿ ಉಸಿರಾಟ ಹಾಗೂ ಕಣ್ಣಿನ ಉರಿಯುವಿಕೆ ಸಮಸ್ಯೆಗಳು ಗಣನೀಯವಾಗಿ ಹೆಚ್ಚಿವೆ.
Source: Indiatimes