Just In
- 9 min ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 1 hr ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 2 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 3 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Darshan: ಡಿ.ಕೆ. ಸುರೇಶ್ ಪರ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ
- Lifestyle ನೀವು ಸಹ ಈ ಶರ್ಬತ್ನ ರುಚಿ ಸವಿದಿದ್ದೀರಾ..? ಮರೆಯಾಯ್ತು ಈ ಹಳೆಯ ನೆನಪು
- Sports LSG vs CSK IPL 2024: ಲಕ್ನೋ vs ಚೆನ್ನೈ ಮಹಾಕದನ; ಟಾಸ್ ವರದಿ, ಆಡುವ 11ರ ಬಳಗ
- Movies 3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪಶುಪತಿ ದೇವಾಲಯಕ್ಕೆ ಎಲೆಕ್ಟ್ರಿಕ್ ವಾಹನ ನೀಡಿದ ಭಾರತ ಸರ್ಕಾರ
ಭಾರತ ಸರ್ಕಾರವು ಬುಧವಾರದಂದು ಎರಡು ಎಲೆಕ್ಟ್ರಿಕ್ ವಾಹನಗಳನ್ನು ನೇಪಾಳದಲ್ಲಿರುವ ಪಶುಪತಿ ಕ್ಷೇತ್ರ ವಿಕಾಸ್ ಟ್ರಸ್ಟ್ (ಪಿಎಡಿಟಿ)ಗೆ ಕಾಣಿಕೆಯಾಗಿ ನೀಡಿದೆ. ಈ ವಾಹನಗಳನ್ನು ದೇವಾಲಯಕ್ಕೆ ಭೇಟಿ ನೀಡುವ ಹಿರಿಯ ಹಾಗೂ ವಿಶೇಷ ಚೇತನರಿಗೆಂದು ನೀಡಲಾಗಿದೆ.
ಭಾರತದ ಗಯಂ ಮೋಟಾರ್ ವರ್ಕ್ಸ್ ತಯಾರಿಸಿರುವ ಈ ಎರಡು ಎಲೆಕ್ಟ್ರಿಕ್ ವಾಹನಗಳನ್ನು ನೀಡಿದ ನಂತರ ಮಾತನಾಡಿದ ಕಠ್ಮಂಡುವಿನ ಭಾರತೀಯ ಮಹಿಳಾ ಸಂಘದ ಅಧ್ಯಕ್ಷರಾದ ನಮ್ರಿತಾ ಪುರಿರವರು, ಈ ವಾಹನಗಳಿಂದ ಇಬ್ಬರು ಮಹಿಳೆಯರಿಗೆ ಉದ್ಯೋಗ ದೊರಕಲಿದೆ ಎಂದು ಹೇಳಿದರು.
ಈ ಎಲೆಕ್ಟ್ರಿಕ್ ವಾಹನಗಳು ಭಾರತ ಹಾಗೂ ನೇಪಾಳದ ನಡುವಿನ ಸಾಂಸ್ಕೃತಿಕ ಹಾಗೂ ಧಾರ್ಮಿಕ ಭಾಂದವ್ಯವನ್ನು ಮತ್ತಷ್ಟು ಬಲಗೊಳಿಸಲಿವೆ ಎಂದು ನಮ್ರಿತಾ ಪುರಿರವರು ಹೇಳಿದರು.
ಭಾರತದ ರಾಯಭಾರಿ ಕಚೇರಿಯಡಿಯಲ್ಲಿ ಬರುವ ಭಾರತೀಯ ಮಹಿಳಾ ಸಂಘವು ನೇಪಾಳದಲ್ಲಿ ನೆಲೆಸಿರುವ ಭಾರತೀಯ ಮಹಿಳೆಯರಿಗೆ ಸಾಮಾನ್ಯವಾದ ಹಾಗೂ ಸ್ನೇಹಪರವಾದ ವಾತಾವರಣವನ್ನು ಉಂಟುಮಾಡುವ ಹೊಣೆಯನ್ನು ಹೊತ್ತಿದೆ.
ಇದು ನೇಪಾಳಿ ಮಹಿಳೆಯರೊಂದಿಗೆ ಸಂವಹನ ನಡೆಸಲು ಒಂದು ವೇದಿಕೆಯನ್ನು ಒದಗಿಸುತ್ತದೆ. ಇದರ ಜೊತೆಗೆ ಭಾರತೀಯರು ಹಾಗೂ ನೇಪಾಳಿ ಸಮುದಾಯದ ನಡುವೆ ಸಾಮರಸ್ಯ ಹಾಗೂ ಸ್ನೇಹವನ್ನು ಉತ್ತೇಜಿಸುವ ಕೆಲಸ ಮಾಡುತ್ತದೆ.
ಲಿಥಿಯಂ-ಐಯಾನ್ ಬ್ಯಾಟರಿಗಳಲ್ಲಿ ಚಲಿಸುವ ಎರಡು 8 ಸೀಟುಗಳ ಈ ಎಲೆಕ್ಟ್ರಿಕ್ ವಾಹನಗಳನ್ನು ಪಶುಪತಿ ಕ್ಷೇತ್ರ ವಿಕಾಸ್ ಟ್ರಸ್ಟ್ನ ಅಧ್ಯಕ್ಷ ಪ್ರದೀಪ್ ಧಕಲ್ ಅವರಿಗೆ ಹಸ್ತಾಂತರಿಸಲಾಯಿತು.
MOST READ: ಹುಡುಗಿಯರಿಗೆ ಗೇರ್ ಬದಲಿಸಲು ಬಿಟ್ಟು ಡಿಎಲ್ ಕಳೆದುಕೊಂಡ ಡ್ರೈವರ್..!
ಪಶುಪತಿನಾಥ ದೇವಾಲಯ ಹಾಗೂ ಸುತ್ತಮುತ್ತಲಿನ ಪ್ರದೇಶದ ಸಂರಕ್ಷಣೆಗಾಗಿ ಹಾಗೂ ಕಾರ್ಯಾಚರಣೆಗಾಗಿ ಪಿಎಡಿಟಿ ಸ್ಥಾಪಿಸಲಾಗಿದೆ. ಪಶುಪತಿನಾಥ ದೇವಾಲಯವನ್ನು ಯುನೆಸ್ಕೋ ವಿಶ್ವ ಪರಂಪರೆಯ ತಾಣವೆಂದು ಪಟ್ಟಿ ಮಾಡಲಾಗಿದೆ.
MOST READ: ಬಡ ದೇಶದ ರಾಜನಿಗೆ 15 ಮಡದಿಯರು, 19 ದುಬಾರಿ ಕಾರುಗಳು..!
ಡ್ರೈವ್ಸ್ಪಾರ್ಕ್ ಅಭಿಪ್ರಾಯ
ಭಾರತೀಯ ಮಹಿಳಾ ಸಂಘವು ನೇಪಾಳದಲ್ಲಿ ವಿತರಿಸಿರುವ ಎಲೆಕ್ಟ್ರಿಕ್ ವಾಹನಗಳಿಂದಾಗಿ ಎರಡು ದೇಶಗಳ ಜನರ ನಡುವೆ ಪರಸ್ಪರ ಸಾಮರಸ್ಯ ಹಾಗೂ ಸ್ನೇಹದ ವಾತಾವರಣ ಏರ್ಪಡಲಿದೆ. ಈ ಕ್ರಮವು ಉಭಯ ದೇಶಗಳ ನಡುವೆ ಎಲೆಕ್ಟ್ರಿಕ್ ವಾಹನಗಳ ಬಳಕೆಗೆ ಸಕಾರಾತ್ಮಕ ಉಪಕ್ರಮವನ್ನು ಪ್ರಾರಂಭಿಸಬಹುದು.