Just In
- 2 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 2 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 3 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- 5 hrs ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
Don't Miss!
- News ಮಳೆ.. ಮಳೆ.. ಮುಂದಿನ 24 ಗಂಟೆಯಲ್ಲಿ ಭರ್ಜರಿ ಮಳೆ!
- Sports IPL 2024: ಚಹಾಲ್ ಬಿಟ್ಟುಕೊಟ್ಟಿದರ ಬಗ್ಗೆ ಕಾರಣ ತಿಳಿಸಿದ ಆರ್ಸಿಬಿ ಮಾಜಿ ನಿರ್ದೇಶಕ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Lifestyle ಮೊಬೈಲ್ ಬೇಡ..ಗ್ಯಾಜೆಟ್ ಬೇಡ..ಹಸ್ತದಿಂದ ಪೇಮೆಂಟ್ ಮಾಡಿ..! ಇದು ಟಿಜಿಟಲ್ ಕ್ರಾಂತಿ..!
- Movies ಇವತ್ತು ಐಪಿಎಲ್.. ನಾಳೆ ಚುನಾವಣೆ .. ನಾಡಿದ್ದು ವರ್ಲ್ಡ್ ಕಪ್ ; ಇನ್ಯಾವಾಗ ರಿಲೀಸ್ ಮಾಡ್ತೀರಾ..?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
2024ರ ವೇಳೆಗೆ ಅಮೆರಿಕಾ ಮಾದರಿ ರಸ್ತೆ ನಿರ್ಮಾಣ: ಸಚಿವ ನಿತಿನ್ ಗಡ್ಕರಿ ಹೇಳಿಕೆ
2024ರ ವೇಳೆಗೆ ಭಾರತದ ರಸ್ತೆಗಳನ್ನು ಅಮೆರಿಕದ ರಸ್ತೆಗಳಂತೆ ಮಾಡಲು ಯೋಜಿಸಲಾಗಿದೆ ಎಂದು ಕೇಂದ್ರ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಹೇಳಿದ್ದಾರೆ. ರಸ್ತೆಗಳು ದೇಶದ ಸಮೃದ್ಧಿಯೊಂದಿಗೆ ಸಂಪರ್ಕ ಹೊಂದಿವೆ ಮತ್ತು ಉತ್ತಮ ರಸ್ತೆಗಳು ಸಾರಿಗೆ ವೆಚ್ಚ ಮತ್ತು ಸಮಯವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತವೆ, ಇದು ತ್ವರಿತ ಆರ್ಥಿಕ ಬೆಳವಣಿಗೆಗೆ ಕಾರಣವಾಗುತ್ತದೆ ಎಂದು ಗಡ್ಕರಿ ಹೇಳಿದರು.
ಲೋಕಸಭಯಲ್ಲಿ ಸದಸ್ಯರ ಪ್ರಶ್ನೆಗೆ ಉತ್ತರ ನೀಡಿದ ನಿತಿನ್ ಗಡ್ಕರಿ ಅವರು ಡಿಸೆಂಬರ್ 24 ರ ಒಳಗೆ ರಸ್ತೆ ಅಭಿವೃದ್ರಿಗೆ ಒತ್ತು ನೀಡಲಾಗಿದೆ. ಈ ನಿಟ್ಟಿನಲ್ಲಿ ರಸ್ತೆ ಅಭಿವೃದ್ದಿಗೆ ಆದ್ಯತೆ ನೀಡಲಾಗುವುದು ಎಂದ ಅವರು, ಅಮೇರಿಕಾ ಶ್ರೀಮಂತ ದೇಶ ಎಂಬ ಕಾರಣಕ್ಕೆ ಅಮೇರಿಕಾದ ರಸ್ಯೆಗಳು ಉತ್ತಮವಾಗಿಲ್ಲ. ಬದಲಾಗಿ ಅಮೇರಿಕಾದಲ್ಲಿ ರಸ್ತೆಗಳು ಚೆನ್ನಾಗಿರುವ ಹಿನ್ನೆಲೆಯಲ್ಲಿ ಅಮೇರಿಕಾ ಅಭಿವೃದ್ಧಿಯಲ್ಲಿ ಮತ್ತಷ್ಡು ಎತ್ತಕ್ಕೆ ಏರಿದೆ ಎಂದರು.
ಭಾರತವನ್ನು ಸಂಪದ್ಭರಿತವಾಗಿಸಲು 2024ರ ಡಿಸೆಂಬರ್ ಒಳಗೆ ಭಾರತದ ರಸ್ತೆ ಮೂಲಸೌಕರ್ಯವು ಅಮೆರಿಕದಂತೆಯೇ ಇರುವಂತೆ ನೋಡಿಕೊಳ್ಳುತ್ತೇನೆ ಎಂದು ಗಡ್ಕರಿ ಸದನದಲ್ಲಿ ಹೇಳಿದರು. ರಸ್ತೆ ನಿರ್ಮಾಣವನ್ನು ಸುಧಾರಿಸಲು ಸರ್ಕಾರವು ಹೊಸ ತಂತ್ರಜ್ಞಾನಗಳನ್ನು ಅಳವಡಿಸುತ್ತಿದೆ ಎಂದ ಅವರು, ರಸ್ತೆ ನಿರ್ಮಾಣದಲ್ಲಿ ನಾಲ್ಕು ವಿಶ್ವದಾಖಲೆಗಳನ್ನು ಸ್ಥಾಪಿಸುವ ಬಗ್ಗೆ ಸದನಕ್ಕೆ ಮಾಹಿತಿ ನೀಡಿದರು.
ಬ್ಯಾಟರಿಗಳು ಮತ್ತು ಹೊಸ ತಂತ್ರಜ್ಞಾನಗಳ ಮೇಲಿನ ಸಂಶೋಧನೆಯು ಎಲೆಕ್ಟ್ರಿಕ್ ವಾಹನಗಳ ವೆಚ್ಚವನ್ನು ಕಡಿಮೆ ಮಾಡುತ್ತದೆ, ಮುಂದಿನ ಎರಡು ವರ್ಷಗಳಲ್ಲಿ ಅವುಗಳನ್ನು ಪೆಟ್ರೋಲ್ ಚಾಲಿತ ವಾಹನಗಳಿಗೆ ಸಮಾನವಾಗಿ ಮಾಡುತ್ತದೆ ಎಂದು ಹೇಳಿದರು. ದೇಶದಲ್ಲಿ ಪ್ರವಾಸೋದ್ಯಮವನ್ನು ಉತ್ತೇಜಿಸಲು ರಸ್ತೆಗಳ ಉತ್ತಮ ಸಂಪರ್ಕವು ಬಹಳ ಮುಖ್ಯ ಎಂದು ಗಡ್ಕರಿ ಹೇಳಿದರು.
ಧಾರ್ಮಿಕ ಪ್ರವಾಸೋದ್ಯಮವನ್ನು ಉತ್ತೇಜಿಸಲು ಎಲ್ಲಾ ಪ್ರಮುಖ ಧಾರ್ಮಿಕ ಸ್ಥಳಗಳನ್ನು ಉತ್ತಮ ರಸ್ತೆ ಜಾಲದೊಂದಿಗೆ ಸಂಪರ್ಕಿಸಲು ಸರ್ಕಾರವು ವಿವಿಧ ಯೋಜನೆಗಳನ್ನು ಪ್ರಾರಂಭಿಸಿದೆ. ರಸ್ತೆ ಮೂಲಸೌಕರ್ಯ ಮತ್ತು ಹೆದ್ದಾರಿ ಯೋಜನೆಗಳಿಗೆ ಸಂಬಂಧಿಸಿದ ಸಚಿವಾಲಯದ ಕೆಲವು ಸಾಧನೆಗಳನ್ನು ಸದನದಲ್ಲಿ ಪಟ್ಟಿ ಮಾಡಿದರು. ಈಗ ದೆಹಲಿ-ಮೀರತ್ ಎಕ್ಸ್ಪ್ರೆಸ್ವೇನಲ್ಲಿ ದೆಹಲಿಯಿಂದ ಮೀರತ್ಗೆ ಪ್ರಯಾಣದ ಸಮಯವನ್ನು ಕೇವಲ 40 ನಿಮಿಷಗಳಿಗೆ ಇಳಿಸಲಾಗಿದೆ ಎಂದರು. ಮುಂಬರುವ ದೆಹಲಿ-ಮುಂಬೈ ಎಕ್ಸ್ಪ್ರೆಸ್ವೇ ಬಗ್ಗೆ ಮಾತನಾಡಿದ ಗಡ್ಕರಿ, ಈ ಎಕ್ಸ್ಪ್ರೆಸ್ವೇ ಮೂಲಕ ಎರಡು ನಗರಗಳ ನಡುವಿನ ಪ್ರಯಾಣವನ್ನು ಕೇವಲ 12 ಗಂಟೆಗಳಲ್ಲಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಈ ವರ್ಷದ ಅಂತ್ಯದ ವೇಳೆಗೆ ಶ್ರೀನಗರದಿಂದ ಮುಂಬೈಗೆ ಕೇವಲ 20 ಗಂಟೆಗಳಲ್ಲಿ ಪ್ರಯಾಣವನ್ನು ಪೂರ್ಣಗೊಳಿಸಲು ಸಾಧ್ಯವಾಗಲಿದೆ. ಅಲ್ಲದೇ ಕಾಶ್ಮೀರದ ಜೋಜಿಲಾ ಸುರಂಗ ಮಾರ್ಗದ ಕಾಮಗಾರಿಯನ್ನು ಪೂರ್ಣ ವೇಗದಲ್ಲಿ ಕೈಗೊಳ್ಳಲಾಗುತ್ತಿದ್ದು, 2024ರ ವೇಳೆಗೆ ಪೂರ್ಣಗೊಳ್ಳುವ ನಿರೀಕ್ಷೆಯಿದೆ ಎಂದರು. ಪ್ರತಿದಿನ ಸರಾಸರಿ 50 ಕಿ.ಮೀ ರಾಷ್ಟ್ರೀಯ ಹೆದ್ದಾರಿಗಳನ್ನು ನಿರ್ಮಿಸುವ ಗುರಿಯನ್ನು ಸಾಧಿಸಲು ಸರ್ಕಾರ ಬಯಸುತ್ತದೆ ಎಂದು ಗಡ್ಕರಿ ಹೇಳಿದರು. ಪ್ರಸ್ತುತ, ರಾಷ್ಟ್ರೀಯ ಹೆದ್ದಾರಿ ಮತ್ತು ಎಕ್ಸ್ಪ್ರೆಸ್ ರಸ್ತೆಗಳನ್ನು ದಿನಕ್ಕೆ ಸರಾಸರಿ 37 ಕಿ.ಮೀ ವೇಗದಲ್ಲಿ ನಿರ್ಮಿಸಲಾಗುತ್ತಿದೆ.
ರಸ್ತೆಗಳು ಉತ್ತಮವಾಗಿದ್ದರೆ ದೇಶ ತಾನಾಗಿಯೇ ಅಭಿವೃದ್ದಿ ಹೊಂದಲು ಸಹಕಾರಿಯಾಗಲಿದೆ. ಈ ನಿಟ್ಟಿನಲ್ಲಿ ರಸ್ತೆ ಅಭಿವೃದ್ದಿಗೆ ಕೇಂದ್ರ ಸರ್ಕಾರ ಹೆಚ್ಚಿನ ಆದ್ಯತೆ ನೀಡಲಾಗಿದೆ. ದೇಶಾದ್ಯಂತ ರಸ್ತೆ ಮೌಲ ಸೌಕರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ. ಇದರಿಂದ ದೇಶದ ಸರ್ವತೋಮುಖ ಬೆಳವಣಿಗೆಗೆ ಎಲ್ಲಾ ರೀತಿಯಲ್ಲಿ ಸಹಕಾರ ನೀಡುವುದಾಗಿ ಅವರು ತಿಳಿಸಿದ್ದಾರೆ.