Just In
- 8 min ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 30 min ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 1 hr ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
- 3 hrs ago ಯುವಕರಿಗೆ ಸಿಹಿಸುದ್ದಿ: ಕೈಗೆಟುಕುವ ಬೆಲೆ, ಮಾಸ್ ಲುಕ್ನಲ್ಲಿ ಬರುತ್ತಿದೆ ಹೊಸ ಬಜಾಜ್ ಪಲ್ಸರ್ 400 ಬೈಕ್
Don't Miss!
- Sports IPL 2024: ಮುಂಬೈ ಇಂಡಿಯನ್ಸ್ ವಿರುದ್ಧ ಶತಕ; ರೋಹಿತ್, ಕೊಹ್ಲಿಗೆ ಕ್ರೆಡಿಟ್ ನೀಡಿದ ಯಶಸ್ವಿ ಜೈಸ್ವಾಲ್!
- Technology Itel: ಭಾರತದಲ್ಲಿ ಐಟೆಲ್ S24 ಲಾಂಚ್! 108MP ಕ್ಯಾಮೆರಾ.. ಬೆಲೆ ಇಷ್ಟೇ
- News ದಲಿತರ ಅಭಿವೃದ್ಧಿಯನ್ನು ಬಿಜೆಪಿ ಮಾಡಿಲ್ಲ; ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಸಂಯುಕ್ತ ಪಾಟೀಲ್
- Lifestyle ಪ್ರವಾಹಕ್ಕೆ ಕಾರಣವಾಗೋದು ಮಳೆಯಲ್ಲ ಬೇಸಿಗೆಯ ಬಿಸಿಲು..! ನಂಬಲು ಸಾಧ್ಯವಿಲ್ಲ ಅಂದ್ರೆ ಈ ವಿಡಿಯೋ ನೋಡಿ..!
- Finance ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 10 ಹಳದಿ ಅನಕೊಂಡ ಸಹಿತ ವ್ಯಕ್ತಿ ಬಂಧನ
- Movies Sathya : ತಾಜ್ ಮಹಲ್ ಎದುರು ನಿಂತ ಸತ್ಯಾ, ಪತಿ ಜೊತೆ ಗೌತಮಿ ಪ್ರವಾಸ...!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಸಂಕಷ್ಟದ ಸಮಯದಲ್ಲಿ ಸಹೊದ್ಯೋಗಿಗಳಲ್ಲಿ ವಿಶ್ವಾಸ ಮೂಡಿಸಿದ ಪೈಲಟ್
ದೇಶದಲ್ಲಿ 21 ದಿನಗಳ ಲಾಕ್ಡೌನ್ ಜಾರಿಗೊಳಿಸಿರುವ ಕಾರಣ ಎಲ್ಲಾ ದೇಶೀಯ ಹಾಗೂ ಅಂತರರಾಷ್ಟ್ರೀಯ ವಿಮಾನಗಳನ್ನು ಸ್ಥಗಿತಗೊಳಿಸಲಾಗಿದೆ. ತುರ್ತು ಸೇವೆಯ ವಿಮಾನಗಳು ಹಾಗೂ ಸರಕು ವಿಮಾನಗಳು ಮಾತ್ರ ಹಾರಾಟ ನಡೆಸುತ್ತಿವೆ.
ಭಾರತದ ವಿಮಾನಯಾನ ಕ್ಷೇತ್ರವು ಸಂಪೂರ್ಣ ಸ್ಥಗಿತಗೊಂಡಿದೆ. ವಿಮಾನಯಾನ ಕ್ಷೇತ್ರವು ಮತ್ತೆ ಆರಂಭವಾಗುವುದೋ ಇಲ್ಲವೋ ಎಂಬ ಆತಂಕ ಪೈಲಟ್ಗಳಲ್ಲಿ ಹಾಗೂ ವಿಮಾನದ ಸಿಬ್ಬಂದಿಗಳಲ್ಲಿ ಉಂಟಾಗಿದೆ. ಮತ್ತೆ ಯಾವಾಗ ಕೆಲಸಕ್ಕೆ ಹಿಂತಿರುಗಲು ಸಾಧ್ಯವಾಗುತ್ತದೆ. ಸಾಧ್ಯವಾಗದಿದ್ದರೆ ಕೆಲಸ ಕಳೆದುಕೊಳ್ಳಬೇಕಾಗಬಹುದು ಎಂಬುದು ಅವರ ಚಿಂತೆಗೆ ಕಾರಣವಾಗಿದೆ.
ಇಂತಹ ಕಠಿಣ ಸನ್ನಿವೇಶದಲ್ಲಿ ಇಂಡಿಗೊ ವಿಮಾನದ ಪೈಲಟ್ ಪ್ರದೀಪ್ ಕೃಷ್ಣನ್, ಇತರ ಪೈಲಟ್ಗಳ ಜೊತೆ ಸೇರಿ ನೌಕರರಲ್ಲಿ ವಿಶ್ವಾಸವನ್ನು ಮೂಡಿಸುವ ವೀಡಿಯೋವೊಂದನ್ನು ನಿರ್ಮಿಸಿದ್ದು, ಆ ವೀಡಿಯೊದಲ್ಲಿ ವಿಮಾನಗಳು ಮತ್ತೆ ಹಾರಾಟ ನಡೆಸಲಿವೆ ಎಂದು ಹೇಳಿದ್ದಾರೆ.
ಇತರ ವಿಮಾನ ಸಿಬ್ಬಂದಿಗಳ ಉತ್ಸಾಹವನ್ನು ಉತ್ತೇಜಿಸಲು ಅವರು ಈ ವೀಡಿಯೊವನ್ನು ನಿರ್ಮಿಸಿದ್ದು, ಈ ಕಠಿಣ ಪರಿಸ್ಥಿತಿಯಲ್ಲಿಯೂ ಸಹ ಸಂಯಮದಿಂದ ಕೆಲಸ ಮಾಡಬಹುದು ಎಂದು ಹೇಳಿದ್ದಾರೆ.
View this post on InstagramA post shared by Pradeep Krishnan (@capt_pradeepkrishnan) on
ಮೂಲಗಳ ಪ್ರಕಾರ, 2020-21ರ ಆರ್ಥಿಕ ವರ್ಷದಲ್ಲಿ, ಭಾರತದ ವಿಮಾನಯಾನ ಕಂಪನಿಗಳು ಸುಮಾರು 5 ಕೋಟಿ ಪ್ರಯಾಣಿಕರನ್ನು ಕಳೆದುಕೊಳ್ಳಲಿವೆ. ಈ ಹಣಕಾಸು ವರ್ಷದಲ್ಲಿ, 8-9 ಮಿಲಿಯನ್ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸುವ ಸಾಧ್ಯತೆಗಳಿವೆ. 2019ರಲ್ಲಿ 14 ಕೋಟಿ ಪ್ರಯಾಣಿಕರು ವಿಮಾನದಲ್ಲಿ ಪ್ರಯಾಣಿಸಿದ್ದರು.
ಅಂತರರಾಷ್ಟ್ರೀಯ ವಿಮಾನಗಳಲ್ಲಿ ಪ್ರಯಾಣಿಸುವ ಪ್ರಯಾಣಿಕರ ಸಂಖ್ಯೆಯಲ್ಲಿಯೂ ಭಾರಿ ಕುಸಿತವಾಗಲಿದೆ. 2020ರ ಆರ್ಥಿಕ ವರ್ಷದಲ್ಲಿ 3 ಕೋಟಿ ಪ್ರಯಾಣಿಕರು ಅಂತರರಾಷ್ಟ್ರೀಯ ವಿಮಾನಗಳಲ್ಲಿ ಪ್ರಯಾಣಿಸಲಿದ್ದಾರೆ. ಕಳೆದ ಹಣಕಾಸು ವರ್ಷದಲ್ಲಿ 7 ಕೋಟಿ ಪ್ರಯಾಣಿಕರು ಪ್ರಯಾಣಿಸಿದ್ದರು.
ಕರೋನಾ ವೈರಸ್ನಿಂದ ಉಂಟಾಗಿರುವ ನಷ್ಟದಿಂದ ಹೊರಬರಲು ವಿಮಾನಯಾನ ಕಂಪನಿಗಳಿಗೆ ಹಲವಾರು ವರ್ಷಗಳು ಬೇಕಾಗುತ್ತವೆ. ಪ್ರಯಾಣಿಕರ ಸಂಖ್ಯೆಯಲ್ಲಿನ ಇಳಿಕೆಯಿಂದಾಗಿ ಅನೇಕ ಕಂಪನಿಗಳ ವ್ಯವಹಾರವು ಸಂಕಷ್ಟಕ್ಕೆ ಸಿಲುಕುವ ಸಾಧ್ಯತೆಗಳಿವೆ.