Just In
- 4 hrs ago Honda: ಬಡವರ ಕನಸು ನನಸು.. ಕಡಿಮೆ ಬೆಲೆಗೆ ಸಿಗುತ್ತವೆ ಈ ಬೈಕ್ಗಳು
- 5 hrs ago ಬಹುಕೋಟಿ ಬೆಲೆಯ ಕಾರುಗಳಿದ್ದರೂ ಸಾಮಾನ್ಯ ಮಾರುತಿ ಕಾರಿನಲ್ಲಿ ಓಡಾಡಿದ ರೋಹಿತ್ ಶರ್ಮಾ: ಕಾರಣವೇನು?
- 6 hrs ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 6 hrs ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
Don't Miss!
- Movies Mrunal Thakur:"ಸರಿಯಾದ ಸಂಗಾತಿ ಸಿಗೋದು ಕಷ್ಟ; ಸೇಫ್ಟಿಗೆ ಅಂಡಾಣು ಶೇಖರಿಸಿ ಇಟ್ಕೊಳೋಣ ಅಂತಿದೀನಿ"
- Sports IPL 2024 :ಬಲಿಷ್ಠ ಹೈದರಾಬಾದ್ ಬಗ್ಗು ಬಡಿದ ಆರ್ಸಿಬಿ: ಕಮಿನ್ಸ್ ಪಡೆಗೆ ಹೀನಾಯ ಸೋಲು
- News ಸಿಯಾಚಿನ್ ಬಳಿ ಚೀನಾ ಆಕ್ರಮಿತ ಕಾಶ್ಮೀರದಲ್ಲಿ ಹೊಸ ರಸ್ತೆ ನಿರ್ಮಾಣ; ಖಚಿತಪಡಿಸಿದ ಉಪಗ್ರಹ ಚಿತ್ರಗಳು
- Lifestyle ಪುಟ್ಟ ಕಂದಮ್ಮಗಳ ಮುಖದಲ್ಲಿ ನಗು ತರಿಸಲು ಟೀಚರ್ ಮಾಡಿದ ಕೆಲಸ ನೋಡಿ, ಮಕ್ಕಳ ಪಾಲಿನ ದೇವತೆ ಇವರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕರೋನಾ ವೈರಸ್ ವಿರುದ್ಧ ಹೋರಾಟಕ್ಕಾಗಿ ಕೈಜೋಡಿಸಿದ ಜಾವಾ ಮೋಟಾರ್ಸೈಕಲ್
ಮಹಾಮಾರಿ ಕರೋನಾ ವೈರಸ್ ಮಟ್ಟಹಾಕುವುದಕ್ಕಾಗಿ ಲಾಕ್ ಡೌನ್ ವಿಧಿಸಿರುವ ಕೇಂದ್ರ ಸರ್ಕಾರವು ವೈರಸ್ ಹರಡದಂತೆ ಹಲವು ಕಠಿಣ ಕ್ರಮಗಳನ್ನು ಕೈಗೊಂಡಿದ್ದು, ಈ ಹಿನ್ನಲೆಯಲ್ಲಿ ವಾಣಿಜ್ಯ ಚಟುವಟಿಕೆಗಳು ಸಂಪೂರ್ಣವಾಗಿ ಸ್ತಬ್ಧಗೊಂಡಿವೆ.
ವೈರಸ್ ಹರಡದಂತೆ ವಿಧಿಸಲಾಗಿರುವ ಲಾಕ್ ಡೌನ್ನಿಂದಾಗಿ ದುಡಿದು ತಿನ್ನುವಂತಹ ವರ್ಗದ ಕೋಟ್ಯಾಂಟರ ಜನರ ಬದುಕು ದುಸ್ತರವಾಗಿದ್ದು, ದಿನದ ಒಂದು ಹೊತ್ತಿನ ಆಹಾರಕ್ಕೂ ಪರದಾಟುವಂತಹ ಶೋಚನೀಯ ಪರಿಸ್ಥಿತಿ ಎದುರಾಗಿದೆ. ಹೀಗಿರುವಾಗ ಬಡವರ ಹಸಿವು ತಣಿಸಲು ಮುಂದಾಗಿರುವ ಜಾವಾ ಮೋಟಾರ್ಸೈಕಲ್ ಕಂಪನಿಯು ಬೈಕ್ ಉತ್ಪಾದನಾ ಘಟಕದಲ್ಲೇ ವೈದ್ಯಕೀಯ ಉಪಕರಣಗಳ ಅಸೆಂಬ್ಲಿ ಜೊತೆಗೆ ಬಡವರ ಹಸಿವು ನೀಗಿಸಲು ದಿನಂಪ್ರತಿ 1 ಸಾವಿರ ಆಹಾರ ಪೊಟ್ಟಣಗಳನ್ನು ಸಿದ್ದಪಡಿಸಿ ಅಗತ್ಯವಿರುವ ಜನತೆಗೆ ವಿತರಣೆ ಮಾಡುತ್ತಿದೆ.
ಮಧ್ಯಪ್ರದೇಶದಲ್ಲಿರುವ ಪ್ರೀತಂಪುರ ಬೈಕ್ ಉತ್ಪಾದನಾ ಘಟಕದಲ್ಲಿ ವೈದ್ಯಕೀಯ ಉಪಕರಣಗಳ ಅಸೆಂಬ್ಲಿ ಆರಂಭಿಸಿರುವ ಜಾವಾ ಕಂಪನಿಯು ಮೊದಲ ಹಂತವಾಗಿ ಫೇಸ್ ಶೀಲ್ಡ್ ಸಿದ್ದಪಡಿಸುತ್ತಿದ್ದು, ಮಾತೃ ಸಂಸ್ಥೆಯಾದ ಮಹೀಂದ್ರಾ ಕೂಡಾ ಈಗಾಗಲೇ ವೆಂಟಿಲೆಟರ್ಗಳ ಉತ್ಪಾದನೆಯನ್ನು ಶುರು ಮಾಡಿದೆ.
MOST READ: ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಉಚಿತ ಕ್ಯಾಬ್ ಸೌಲಭ್ಯವನ್ನು ಆರಂಭಿಸಿದ ಮಹೀಂದ್ರಾ
ಇದಲ್ಲದೇ ಮಾಹಾಮಾರಿ ಕರೋನಾ ವೈರಸ್ ವಿರುದ್ಧದ ಹೋರಾಟಕ್ಕಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ದೇಣಿಗೆ ಸಂಗ್ರಹ ಅಭಿಯಾನಕ್ಕೆ ಸ್ಪಂದಿಸಿರುವ ಆಟೋ ಉತ್ಪಾದನಾ ಕಂಪನಿಗಳು ಭಾರೀ ಪ್ರಮಾಣದ ಧನಸಹಾಯ ಮತ್ತು ವೈದ್ಯಕೀಯ ಉಪಕರಣಗಳ ಉತ್ಪಾದನೆಗೆ ಚಾಲನೆ ನೀಡಿವೆ.
ಕರೋನಾ ವೈರಸ್ ಅಟ್ಟಹಾಸ ಹೆಚ್ಚಾಗುತ್ತಿದ್ದಂತೆ ಇಡೀ ದೇಶವನ್ನೇ ಲಾಕ್ ಡೌನ್ ಮಾಡಲಾಗಿದ್ದು, ಅಗತ್ಯ ಸೇವೆಗಳನ್ನು ಹೊರತುಪಡಿಸಿ ಬಹುತೇಕ ವಾಣಿಜ್ಯ ಚಟುವಟಿಕೆಗಳನ್ನು ಸ್ಥಗಿತಗೊಂಡಿವೆ. ಈ ಹಿನ್ನಲೆಯಲ್ಲಿ ಸರ್ಕಾರದ ಆರ್ಥಿಕ ಪರಿಸ್ಥಿತಿ ಶೋಚನೀಯ ಸ್ಥಿತಿ ತಲುಪಿದ್ದು, ಕರೋನಾ ವಿರುದ್ಧ ಹೋರಾಟಕ್ಕೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ದೇಣಿಗೆ ಸಂಗ್ರಹ ಅಭಿಯಾನವನ್ನು ಕೈಗೊಂಡಿವೆ.
MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕೆ ಭಾರೀ ಪ್ರಮಾಣದ ದೇಣಿಗೆ ನೀಡಿದ ಟಿವಿಎಸ್ ಮೋಟಾರ್
ದೇಣಿಗೆ ಸಂಗ್ರಹ ಅಭಿಯಾನಕ್ಕೆ ಈಗಾಗಲೇ ಭಾರೀ ಪ್ರಮಾಣದ ನೆರವು ಹರಿದು ಬಂದಿದ್ದು, ಉದ್ಯಮಿಗಳು, ಚಿತ್ರ ನಟರು, ಸರ್ಕಾರಿ ಅಧಿಕಾರಿಗಳು ಮತ್ತು ಜನಸಾಮಾನ್ಯರು ಸಹ ತಮ್ಮ ಕೈಲಾದಷ್ಟು ದೇಣಿಗೆ ನೀಡಿ ಕರೋನಾ ವಿರುದ್ಧದ ಸರ್ಕಾರದ ಹೋರಾಟಕ್ಕೆ ಶಕ್ತಿ ತುಂಬುತ್ತಿದ್ದಾರೆ.
ಅದರಲ್ಲೂ ಆಟೋ ಉತ್ಪಾದನಾ ಕಂಪನಿಗಳು ಕರೋನಾ ವಿರುದ್ದ ಹೋರಾಟಕ್ಕಾಗಿ ಸಂಕಷ್ಟದ ಸಮಯದಲ್ಲೂ ಸರ್ಕಾರದ ಜೊತೆ ನಿಂತಿರುವುದಲ್ಲದೆ ವೈದ್ಯಕೀಯ ಉಪಕರಣಗಳ ತಯಾರಿಕೆಯ ಜೊತೆಗೆ ಧನಸಹಾಯವನ್ನು ಕೂಡಾ ಮಾಡುತ್ತಿವೆ.
MOST READ: ಕರೋನಾ ವೈರಸ್ ವಿರುದ್ದದ ಹೋರಾಟಕ್ಕಾಗಿ ರೂ.100 ಕೋಟಿ ದೇಣಿಗೆ ನೀಡಿದ ಬಜಾಜ್ ಗ್ರೂಪ್
ಕರೋನಾ ವಿರುದ್ಧ ಹೋರಾಟಕ್ಕಾಗಿ ಅಗತ್ಯ ವೈದ್ಯಕೀಯ ಉಪಕರಣಗಳ ಕೊರತೆ ಎದುರಾಗಿದ್ದು, ಸದ್ಯ ಆಟೋ ಉತ್ಪಾದನಾ ಪ್ರಕ್ರಿಯೆ ಸ್ಥಗಿತಗೊಂಡಿರುವುದರಿಂದ ಪ್ರಮುಖ ವಾಹನ ಕಂಪನಿಗಳು ವೈದ್ಯಕೀಯ ಉಪಕರಣಗಳ ತಯಾರಿಕೆ ಮತ್ತು ಅಸೆಂಬ್ಲಿಗಾಗಿ ಕೈಜೋಡಿಸಿವೆ.
ಮಹೀಂದ್ರಾ ಮಾತ್ರವಲ್ಲದೇ ಮಾರುತಿ ಸುಜುಕಿಯು ಸಹ ಪ್ರತಿ ತಿಂಗಳು 10 ಸಾವಿರ ವೆಂಟಲೆಟರ್ ಸಿದ್ದಪಡಿಸುವ ಯೋಜನೆ ಚಾಲನೆ ನೀಡಿದ್ದು, ವೈದ್ಯಕೀಯ ಉಪಕರಣಗಳ ಜೊತೆ ಜೊತೆಗೆ ಬಡವರ ಹಸಿವು ನೀಗಿಸಲು ಸಾಕಷ್ಟು ಶ್ರಮವಹಿಸುವ ಮೂಲಕ ಜನರ ಮೆಚ್ಚುಗೆಗೆ ಕಾರಣವಾಗಿವೆ.