Just In
- 8 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 11 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 11 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 12 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ ಡೌನ್ ಹಿನ್ನೆಲೆ: ಬಡವರ ಹಸಿವು ನೀಗಿಸಿದ ಖ್ಯಾತ ಟಯರ್ ಕಂಪನಿ
ಮೊದಲಿಗೆ ಚೀನಾದ ವುಹಾನ್ನಲ್ಲಿ ಕಂಡು ಬಂದ ಕರೋನಾ ವೈರಸ್ ಈಗ ಪ್ರಪಂಚದಾದ್ಯಂತ ಹರಡುತ್ತಿದೆ. ಈ ವೈರಸ್ ನ ಹಾವಳಿಯಿಂದಾಗಿ ಪ್ರಪಂಚದ ಎಲ್ಲಾ ದೇಶಗಳು ತತ್ತರಿಸಿವೆ. ಇದರಿಂದ ಭಾರತವೂ ಹೊರತಾಗಿಲ್ಲ.
ಕೇಂದ್ರ ಸರ್ಕಾರವು ಕರೋನಾ ವೈರಸ್ ಸೋಂಕು ಹರಡದಂತೆ ತಡೆಯಲು ಏಪ್ರಿಲ್ 14ರವರೆಗೆ ಲಾಕ್ ಡೌನ್ ಜಾರಿಗೊಳಿಸಿದೆ. ಈ ಲಾಕ್ ಡೌನ್ ಬಡವರ ಹಾಗೂ ಕೂಲಿ ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರಿದೆ. ತಮ್ಮ ಊರು ಬಿಟ್ಟು ಬೇರೆ ಊರುಗಳಿಗೆ ಬಂದಿದ್ದ ಕಾರ್ಮಿಕರು ಹೆಚ್ಚು ತೊಂದರೆಯನ್ನು ಅನುಭವಿಸುತ್ತಿದ್ದಾರೆ.
ಇವರು ತಮ್ಮ ಸ್ವಂತ ಊರುಗಳಿಗೆ ತೆರಳಲು ಯಾವುದೇ ಸಾರಿಗೆ ಸೌಲಭ್ಯವಿಲ್ಲದ ಕಾರಣಕ್ಕೆ ಈಗ ಇರುವ ಜಾಗದಲ್ಲೇ ಇರುವಂತೆ ತಿಳಿಸಲಾಗಿದೆ. ಆದರೆ ಯಾವುದೇ ಕೆಲಸವಿಲ್ಲದೇ, ಹಣವಿಲ್ಲದೇ, ನೆಲೆಸಲು ಜಾಗವಿಲ್ಲದೇ ಪರದಾಡುತ್ತಿದ್ದಾರೆ.
ಇವರಿಗೆ ನೆಲೆ ನೀಡಿ, ಊಟದ ವ್ಯವಸ್ಥೆ ಮಾಡಬೇಕಿದ್ದ ಮಾಲೀಕರು ಕೈಚೆಲ್ಲಿದ್ದಾರೆ. ಈ ಕಾರಣ ಇಂತಹವರಿಗಾಗಿ ನೆರವಾಗಲು ಹಲವಾರು ಜನರು ಮುಂದೆ ಬಂದಿದ್ದಾರೆ. ಅವುಗಳಲ್ಲಿ ಖ್ಯಾತ ಟಯರ್ ಕಂಪನಿಯಾದ ಜೆಕೆ ಟಯರ್ ಸಹ ಒಂದು.
ಕಂಪನಿಯು ಕೆಲವು ಖಾಸಗಿ ಚಾರಿಟಿಗಳೊಂದಿಗೆ ಸೇರಿ ತನ್ನ ಉತ್ಪಾದನಾ ಘಟಕಗಳ ಮೂಲಕ ಅಗತ್ಯವಿರುವವರಿಗೆ ಹಾಗೂ ನಿರ್ಗತಿಕರಿಗೆ ಆಹಾರವನ್ನು ಒದಗಿಸುವುದಾಗಿ ತಿಳಿಸಿದೆ. ಕಂಪನಿಯು ದಿನಕ್ಕೆ 10 ಸಾವಿರ ಜನರಿಗೆ ಆಹಾರವನ್ನು ನೀಡಲು ಯೋಜಿಸಿದೆ.
ಆರೋಗ್ಯ ಕಾರ್ಯಕರ್ತರು ಹಾಗೂ ಪೊಲೀಸರಿಗೆ ಆಹಾರ, ನೀರು ನೀಡಲಾಗುವುದೆಂದು ಎಂದು ಜೆಕೆ ಟಯರ್ಸ್ ತಿಳಿಸಿದೆ. ಈಗಾಗಲೇ, ಕಂಪನಿಯು ಗ್ರಾಮೀಣ ಪ್ರದೇಶದಲ್ಲಿರುವ 50ಕ್ಕೂ ಹೆಚ್ಚು ವೈದ್ಯಕೀಯ ಶಿಬಿರಗಳಿಗೆ ವೈದ್ಯಕೀಯ ಸೌಲಭ್ಯವನ್ನು ಒದಗಿಸುತ್ತಿದೆ.
ಇದರ ಜೊತೆಗೆ ಅಲ್ಲಿ ಕೋವಿಡ್ 19 ವೈರಸ್ ಹಾಗೂ ಅದರ ಅಪಾಯಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಇದಕ್ಕಾಗಿ ದೇಶಾದ್ಯಂತ ಸುಮಾರು 5 ಸಾವಿರ ಜೆಕೆ ಟಯರ್ ಉದ್ಯೋಗಿಗಳನ್ನು ನಿಯೋಜಿಸಲಾಗಿದೆ ಎಂದು ಕಂಪನಿ ತಿಳಿಸಿದೆ.
ಗ್ರಾಮೀಣ ಪ್ರದೇಶದಲ್ಲಿರುವ ಬಡವರು ಹಾಗೂ ಕೂಲಿ ಕಾರ್ಮಿಕರಿಗೆ ಆಹಾರ ನೀಡುವ ಯೋಜನೆಯನ್ನು ಸಹ ಆರಂಭಿಸಲಾಗಿದೆ. ಅನೇಕ ರಾಜ್ಯಗಳಲ್ಲಿ ಸರ್ಕಾರಗಳು ನೀಡುವ ಆಹಾರವು ಕಳಪೆಯಾಗಿದೆ ಎಂಬ ದೂರುಗಳು ಕೇಳಿ ಬಂದಿವೆ. ಜೆಕೆ ಟಯರ್ ಗುಣಮಟ್ಟದ ಆಹಾರವನ್ನು ನೀಡುವ ನಿರೀಕ್ಷೆಗಳಿವೆ.
ಜೆಕೆ ಟಯರ್ ಈ ಸೇವೆಯನ್ನು ದೇಶದ ಒಂದು ಭಾಗದಲ್ಲಿ ಮಾತ್ರವಲ್ಲದೆ, ಎಲ್ಲಾ ಭಾಗಗಳಲ್ಲಿಯೂ ನೀಡಲಿದೆ. ಊಟದ ಜೊತೆಗೆ 150ಕ್ಕೂ ಹೆಚ್ಚು ಹಳ್ಳಿಗಳಿಗೆ ಕರೋನಾ ವೈರಸ್ನಿಂದ ರಕ್ಷಿಸಿಕೊಳ್ಳಲು ಆಂಟಿಸೆಪ್ಟಿಕ್ ಹಾಗೂ ಮಾಸ್ಕ್ ಗಳನ್ನು ನೀಡಲಾಗಿದೆ ಎಂದು ಜೆಕೆ ಟಯರ್ಸ್ ಹೇಳಿದೆ.
ಕರೋನಾ ವೈರಸ್ ಹರಡದಂತೆ ತಡೆಯುವ ಉದ್ದೇಶದಿಂದ ಈ ಲಾಕ್ ಡೌನ್ ಜಾರಿಯಲ್ಲಿದೆ ಎಂದು ಸರ್ಕಾರ ಹೇಳಿದೆ. ಕರೋನಾ ವೈರಸ್ ಹರಡುತ್ತಿರುವ ತೀವ್ರತೆಯನ್ನು ಗಮನಿಸಿದರೆ, ಲಾಕ್ ಡೌನ್ ಅನ್ನು ಮತ್ತಷ್ಟು ದಿನಗಳವರೆಗೆ ವಿಸ್ತರಿಸುವ ಸಾಧ್ಯತೆಗಳಿವೆ.