Just In
- 36 min ago HSRP ನಂಬರ್ ಪ್ಲೇಟ್ನಲ್ಲಿ ನಡೆಯುತ್ತಿದೆ ಭಾರೀ ಮೋಸ: ಬುಕ್ ಮಾಡದವರು ಇದನ್ನು ಗಮನಿಸಿ!
- 40 min ago Nissan Magnite: ಕಾಮಧೇನುವಾದ ನಿಸ್ಸಾನ್ ಮ್ಯಾಗ್ನೈಟ್.. 6 ಲಕ್ಷ ಬೆಲೆ, 20 ಕಿ.ಮೀ ಮೈಲೇಜ್
- 1 hr ago ಬೈಕಿನಂತೆ ಮೈಲೇಜ್, ಹಿಂದೆಗಿಂತಲೂ ಬಲಿಷ್ಠವಾಗಿ ಸ್ವಿಫ್ಟ್ ಅಖಾಡಕ್ಕೆ: ಖರೀದಿಸಲು ಕ್ಯೂ ನಿಲ್ಲಲು ರೆಡಿಯಾಗಿರಿ!
- 1 hr ago Tata: ಒಬ್ಬರೇ ಬಂದು 2 ಸಾವಿರ ಟಾಟಾ ಎಲೆಕ್ಟ್ರಿಕ್ ಕಾರುಗಳನ್ನು ಖರೀದಿಸಿ ಹೋಗಿಬಿಟ್ಟರು!
Don't Miss!
- Lifestyle ಎಲೆಕೋಸಿಗೆ ಕೆಮಿಕಲ್ ಮಿಶ್ರಣ ಮಾಡ್ತಾರೆ ಹುಷಾರ್..! ವಿಡಿಯೋ ವೈರಲ್..!
- News ಉಚಿತ ಉಪಹಾರದಿಂದ ಉಚಿತ ದಂತ ತಪಾಸಣೆವರೆಗೆ; ಮತದಾನ ಮಾಡಿದವರಿಗೆ ಭರ್ಜರಿ ಆಫರ್ ಕೊಟ್ಟ ಮೈಸೂರು ವ್ಯಾಪಾರಸ್ಥರು
- Technology Sennheiser: ಭಾರತದಲ್ಲಿ ಸೆನ್ಹೈಸರ್ ಮೊಮೆಂಟಮ್ ಟ್ರೂ ವೈರ್ಲೆಸ್ 4 ಲಾಂಚ್! ಬೆಲೆ 20 ಸಾವಿರ
- Movies Lok Sabha Election 2024: ಕನ್ನಡ ತಾರೆಯರು ನಾಳೆಏಪ್ರಿಲ್ 26 ಎಲ್ಲೆಲ್ಲಿ ತಮ್ಮ ಹಕ್ಕು ಚಲಾಯಿಸುತ್ತಾರೆ?
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ವಿದ್ಯಾರ್ಥಿಗಳಿಂದ ಕಾರ್ ರೇಸ್- ಭೀಕರ ಅಪಘಾತದಲ್ಲಿ ಓರ್ವ ದುರ್ಮರಣ
ಪೋಷಕರು ತಮ್ಮ ಮಕ್ಕಳಿಗೆ ಕಾರು ಚಾಲನೆಗೆ ಅವಕಾಶ ನೀಡುವ ಮುನ್ನ ಹತ್ತಾರು ಬಾರಿ ಯೋಚನೆ ಮಾಡಬೇಕು. ಇಲ್ಲವಾದ್ರೆ ಅದು ಮತ್ತೊಂದು ಅನಾಹುತಕ್ಕೆ ಎಡೆಮಾಡಿ ಕೊಡುವುದಲ್ಲಿ ಯಾವುದೇ ಅನುಮಾನವಿಲ್ಲ.
ಪೋಷಕರು ತಮ್ಮ ಮಕ್ಕಳಿಗೆ ಕಾರು ಚಾಲನೆಗೆ ಅವಕಾಶ ನೀಡುವ ಮುನ್ನ ಹತ್ತಾರು ಬಾರಿ ಯೋಚನೆ ಮಾಡಬೇಕು. ಇಲ್ಲವಾದ್ರೆ ಅದು ಮತ್ತೊಂದು ಅನಾಹುತಕ್ಕೆ ಎಡೆಮಾಡಿ ಕೊಡುವುದಲ್ಲಿ ಯಾವುದೇ ಅನುಮಾನವಿಲ್ಲ. ಯಾಕೇಂದ್ರೆ ಬೆಂಗಳೂರಿನ ನಡೆದ ಅಪಘಾತ ಪ್ರಕರಣವೊಂದರಲ್ಲಿ ವಿರ್ದ್ಯಾರ್ಥಿ ಓರ್ವ ದುರಂತವಾಗಿ ಸಾವನ್ನಪ್ಪಿದ್ದಾನೆ.
ಬೆಂಗಳೂರಿನ ಹೊಸೂರು ರಸ್ತೆಯ ಸಿಲ್ಕ್ ಬೋರ್ಡ್ ಫ್ಲೈ ಓವರ್ನಲ್ಲಿ ನಿನ್ನೇಯಷ್ಟೇ ಈ ಭೀಕರ ಸರಣಿ ಅಪಘಾತ ನಡೆದಿದ್ದು, ವೇಗದ ಕಾರು ಚಾಲನೆ ಸಂದರ್ಭದಲ್ಲಿ ಹಾಲಿನ ಟ್ಯಾಂಕರ್ಗೆ ಕಾರು ಡಿಕ್ಕಿ ಹೊಡೆದಿದೆ. ಈ ವೇಳೆ ಇನೋವಾದಲ್ಲಿದ್ದ ವಿದ್ಯಾರ್ಥಿಗೆ ತೀವ್ರವಾದ ಗಾಯಗಳಾದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಘಟನೆಗೂ ಮುನ್ನ ಇನ್ನೋವಾ, ಸ್ಕೋಡಾ, ಎಸ್ ಕ್ರಾಸ್ ಕಾರಿನ ಮಧ್ಯೆ ರೇಸ್ ನಡೆಸಿದ್ದ ವಿದ್ಯಾರ್ಥಿಗಳು, ಹೊಸರು ರೋಡ್ ಬಳಿ ಬರುತ್ತಿದ್ದಂತೆ ಹಾಲಿನ ಟ್ಯಾಂಕರ್ ಹಿಂದಿಕ್ಕಲು ಮುಂದಾಗಿದ್ದರು. ಆದ್ರೆ ಈ ವೇಳೆ ನಿಯಂತ್ರಣ ತಪ್ಪಿದ ಇನೋವಾ ಕಾರು, ರಸ್ತೆ ವಿಭಜಕ್ಕೆ ಗುದ್ದಿ ನಂತರ ಹಾಲಿನ ಟ್ಯಾಂಕರ್ ಹಿಂಬದಿಗೆ ಡಿಕ್ಕಿ ಹೊಡೆದಿದೆ.
ತೀವ್ರವಾಗಿ ಗಾಯಗೊಂಡಿದ್ದ 17 ವರ್ಷದ ಅರ್ಫಾನ್ ಸಲೀಂ ಸ್ಥಳದಲ್ಲೇ ಉಸಿರು ಚೆಲ್ಲಿದರೆ ಇನ್ನುಳಿದ ಇಬ್ಬರು ವಿದ್ಯಾರ್ಥಿಗಳು ಘಟನೆ ನಂತರ ಪರಾರಿಯಾಗಿದ್ದರು. ಆದ್ರೆ ಕೆಲವೇ ಗಂಟೆಗಳಲ್ಲಿ ಯಶಸ್ವಿ ಕಾರ್ಯಾಚರಣೆ ಮಾಡಿದ ಪೊಲೀಸರು, ಬಾಲಾಪರಾಧಿಗಳನ್ನು ಬಂಧಿಸಿ ರಿಮ್ಯಾಂಡ್ ಹೋಂ ವಶದಲ್ಲಿರಿಸಿದ್ದಾರೆ.
Recommended Video
ಅಪಘಾತದ ಸಂದರ್ಭದಲ್ಲಿ ಇನೋವಾ ಕಾರು 150 ಕಿಲೊ ಮೀಟರ್ ವೇಗದಲ್ಲಿತ್ತು ಎನ್ನಲಾಗಿದ್ದು, ಕಾರ್ ರೇಸ್ ಮಾಡುತ್ತಿದ್ದ ಮತ್ತೊಬ್ಬ ವಿದ್ಯಾರ್ಥಿ ಅನಿರುದ್ಧನ ಕಾರು ಸಹ ವಾಹನವೊಂದಕ್ಕೆ ಡಿಕ್ಕಿ ಹೊಡೆದು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾನೆ.
ಇನ್ನು ಘಟನೆ ನಂತರ ಬಾಲಾಪಾಧಿಗಳ ಪೋಷಕರನ್ನು ಕೂಡಾ ನ್ಯಾಯಾಂಗ ಬಂಧನ ಮಾಡಲಾಗಿದ್ದು, ಅಪ್ರಾಪ್ತರಿಗೆ ಕಾರು ಚಾಲನೆ ಮಾಡಲು ಅವಕಾಶ ಕೊಟ್ಟಿದ್ದಕ್ಕಾಗಿ ಐಟಿ ಉದ್ಯೋಗಿಯಾಗಿರುವ ಗೋವಿಂದ ರಾಜ್ ಮತ್ತು ಕೃಷ್ಣಮೂರ್ತಿ ಜೈಲು ಕಂಬಿ ಏಣಿಸುವಂತಾಗಿದೆ.
ಸದ್ಯದ ವರದಿಗಳ ಪ್ರಕಾರ ಜಾಮೀನು ಮೇಲೆ ಗೋವಿಂದ ರಾಜ್ ಮತ್ತು ಕೃಷ್ಣಮೂರ್ತಿ ಬಿಡುಗೊಂಡಿದ್ದಾರೆ ಎನ್ನಲಾಗಿದ್ದು, ಭೀಕರ ಕಾರು ಅಪಘಾತಕ್ಕೆ ಕಾರಣವಾದ ವಿದ್ಯಾರ್ಥಿಗಳು ಪ್ರತಿಷ್ಠಿತ ಕಾಲೇಜು ಒಂದರಲ್ಲಿ ಪ್ರಥಮ ಪಿಯುಸಿ ಓದುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ.
ಆದ್ರೆ ಅದೇನೇ ಇರಲಿ ಪೋಷಕರು ತಮ್ಮ ಮಕ್ಕಳಿಗೆ ಒಣ ಪ್ರತಿಷ್ಠೆಗಾಗಿ ಕಾರು ನೀಡುವ ಮುನ್ನ ಎಚ್ಚರ ವಹಿಸುವುದು ಒಳಿತು. ಇಲ್ಲವಾದ್ರೆ ಅವರ ಜೀವಕ್ಕೆ ಅಷ್ಟೇ ಅಲ್ಲದೇ ಇತರರ ಜೀವಕ್ಕೂ ಕುತ್ತು ತರುವುದರಲ್ಲಿ ಯಾವುದೇ ಸಂದೇಹವಿಲ್ಲ ಎನ್ನಬಹುದು.