Just In
- 5 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 6 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 7 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 7 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ನಟ ದರ್ಶನ್ ಕಾರು ಅಪಘಾತ- ಪೊಲೀಸರಿಂದ ಸುಮೊಟೊ ಕೇಸ್..!
ನಟ ದರ್ಶನ್ ಕಾರು ಅಪಘಾತ- ಪೊಲೀಸರಿಂದ ಸುಮೊಟೊ ಕೇಸ್..!
ಚಾಲೆಂಜಿಗ್ ಸ್ಟಾರ್ ದರ್ಶನ್ ಅವರಿದ್ದ ಕಾರು ಅಪಘಾತಕ್ಕೀಡಾದ ಪರಿಣಾಮ ದರ್ಶನ್ ಸೇರಿದಂತೆ ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದ್ದು, ಅಪಘಾತ ಪ್ರಕರಣವು ಇದೀಗ ಹೊಸ ತಿರುವು ಪಡೆದುಕೊಳ್ಳುತ್ತಿದೆ.
ಬೆಳಗಿನ ಜಾವ 3 ಗಂಟೆಗೆ ಮೈಸೂರಿನಿಂದ ಬೆಂಗಳೂರಿಗೆ ಬರುತ್ತಿದ್ದ ನಟ ದರ್ಶನ್ ಅವರ ಕಾರು ಡಿವೈಡರ್ ಗುದ್ದಿದ ಪರಿಣಾಮ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು, ತಡರಾತ್ರಿಯಿಂದಲೇ ಶುರುವಾಗಿದ್ದ ಜಿಟಿ ಜಿಟಿ ಮಳೆ ಪರಿಣಾಮ ಕಾರು ನಿಯಂತ್ರಣ ತಪ್ಪಿ ಈ ಅವಘಡ ಸಂಭವಿಸಿರಬಹುದು ಎನ್ನಲಾಗಿತ್ತು.
ಮೈಸೂರಿನ ಹೊರ ವಲಯದ ಹಿನಕಲ್ ಬಳಿಯ ರಿಂಗ್ ರಸ್ತೆಯಲ್ಲೇ ಈ ಅವಘಡ ಸಂಭವಿಸಿದ್ದು, ಕಾರಿನಲ್ಲಿದ್ದ ನಟ ದರ್ಶನ್, ದೇವರಾಜ್, ಪ್ರಜ್ವಲ್ ದೇವರಾಜ್ ಹಾಗೂ ದರ್ಶನ್ ಆಪ್ತ ಸ್ನೇಹಿತ ರಾಯ್ ಆಂಟೋನಿ ಸೇರಿ ಒಟ್ಟು ನಾಲ್ಕು ಜನ ಈ ಕಾರಿನಲ್ಲಿ ಪ್ರಯಾಣ ಮಾಡುತ್ತಿದ್ದರು.
ಬಹುನೀರಿಕ್ಷಿತ ಓಡೆಯ ಸಿನಿಮಾದ ಶೂಟಿಂಗ್ ಪ್ರಕ್ರಿಯೆ ನಿನ್ನೆ ಮೈಸೂರಿನಲ್ಲಿ ಮುಗಿದಿತ್ತು. ಇಂದಿನಿಂದ ಬೆಂಗಳೂರಿನಲ್ಲಿ ನಡೆಯಬೇಕಿದ್ದ ಕಾರಣ ರಾತ್ರಿ ತಮ್ಮ ಆಪ್ತರೊಬ್ಬರ ಮನೆಯಲ್ಲಿ ಊಟ ಮಾಡಿ ಬೆಂಗಳೂರಿನತ್ತ ಬರುತ್ತಿದ್ದಾಗ ವೇಳೆ ಈ ಘಟನೆ ನೆಡೆದಿದೆ.
ಈ ವೇಳೆ ವೇಗದಲ್ಲಿದ್ದ ಕಾರು ಸಡನ್ ಆಗಿ ಡಿವೈಡರ್ಗೆ ಗುದ್ದಿದ್ದು, ನಟ ದರ್ಶನ್ ಅವರ ಬಲಗೈ ನ ಮೂಳೆ ಫ್ರಾಕ್ಚರ್ ಆಗಿದೆ. ಸದ್ಯ ಮೈಸೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ದರ್ಶನ್ ಅವರು ಚಿಕಿತ್ಸೆ ಪಡೆಯುತ್ತಿದ್ದು, ಶಸ್ತ್ರ ಚಿಕಿತ್ಸೆ ನಂತರ ಕೈಗೆ ಪ್ಲೇಟ್ ಹಾಕಲಾಗಿದೆ.
ಎರಡು ವಾರಗಳ ಕಾಲ ವಿಶ್ರಾಂತಿಗೆ ಸೂಚನೆ
ಶಸ್ತ್ರ ಚಿಕಿತ್ಸೆ ನಂತರ ತಮ್ಮ ಆಪ್ತರ ಜೊತೆಗೆ ನಗುತ್ತಲೇ ಮಾತನಾಡಿದ ದರ್ಶನ್ ಅವರು ತನಗೆ ಏನೂ ಆಗಿಯೇ ಇಲ್ಲ ಎನ್ನುವಂತೆ ಪ್ರತಿಕ್ರಿಯೆಸುತ್ತಾ, ಒಂದು ಅಥವಾ ಎರಡು ವಾರದಲ್ಲಿ ಎಲ್ಲಾ ಸರಿ ಹೊಗುತ್ತೆ. ದೇವರ ದಯೆಯಿಂದ ಯಾರಿಗೂ ಅಂತದ್ದೇನೂ ಆಗಿಲ್ಲ ಎಂದಿದ್ದಾರೆ.
ಈ ಬಗ್ಗೆ ಖಾಸಗಿ ವಾಹಿನಿಯೊಂದಕ್ಕೆ ಮಾತನಾಡಿರುವ ದರ್ಶನ್ ಅವರು ಆತಂಕದಲ್ಲಿರುವ ಅಭಿಮಾನಿಗಳಿಗೆ ಮನವಿಯೊಂದನ್ನು ಮಾಡಿದ್ದಾರೆ. ಯಾವುದೇ ಕಾರಣಕ್ಕೂ ಆಸ್ಪತ್ರೆ ಬಳಿ ಬರಬೇಡಿ. ನಮ್ಮಿಂದ ಬೇರೆಯವರಿಗೆ ತೊಂದರೆಯಾಗಬಾರದು ಎಂದಿರುವ ದರ್ಶನ್ ಅವರು ನಾಳೆ ನಾನೇ ನಿಮ್ಮ ಮುಂದೆ ಬರುವೆ ಎಂದಿದ್ದಾರೆ.
MOST READ: ನಟ ದರ್ಶನ್ ದುಬಾರಿ ಬೆಲೆಯ ಸೂಪರ್ ಕಾರಿನ ನಂಬರ್ ಪ್ಲೇಟ್ ಅಸಲಿಯತ್ತು ಏನು?
ಇನ್ನು ದರ್ಶನ್ ಜೊತೆಗಿದ್ದ ದೇವರಾಜ್ ಅವರ ಬೆರಳಿಗೂ ಪೆಟ್ಟು ಬಿದ್ದಿದ್ದು, ಪ್ರಜ್ವಲ್ ದೇವರಾಜ್ ಹಣೆಗೆ ಸಣ್ಣ ಗಾಯವಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಪಾಯ ಸಂಭವಿಸಿಲ್ಲ ಎನ್ನುವುದೇ ಸಮಾಧಾನಕರ ಸಂಗತಿ.
ಕಾರು ಚಾಲನೆ ವೇಳೆ ನೀರ್ಲಕ್ಷ್ಯ.!?
ಘಟನೆ ವೇಳೆ ಕಾರು ಚಾಲನೆ ಮಾಡುತ್ತಿದ್ದ ದರ್ಶನ್ ಅವರ ಸ್ನೇಹಿತ ಜಿಟಿ ಜಿಟಿ ಮಳೆ ಮಧ್ಯೆಯು ವೇಗವಾಗಿ ಚಾಲನೆ ಮಾಡುತ್ತಿದ್ದ ಕಾರಣಕ್ಕೆ ಡಿವೈಡರ್ಗೆ ಗುದ್ದಿರಬಹುದು ಎನ್ನಲಾಗಿದ್ದು, ಘಟನೆಯ ಪೂರ್ಣ ವಿವರ ಇನ್ನಷ್ಟೇ ತಿಳಿಯಬೇಕಾಗಿದೆ.
ಪ್ರಕರಣ ಮುಚ್ಚಿ ಹಾಕುವ ಯತ್ನ?
ಅಪಘಾತದ ನಂತರ ಜಖಂಗೊಂಡಿದ್ದ ಆಡಿ ಕಾರನ್ನು ದರ್ಶನ್ ಅವರು ಅಜ್ಞಾತ ಸ್ಥಳದಲ್ಲಿ ಇರಿಸಲು ಯತ್ನಿಸಿದ್ದು, ಕಾರಿನಲ್ಲಿ ನಂಬರ್ ಪ್ಲೇಟ್ ಕೂಡಾ ಇಲ್ಲದಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಸುಮೊಟೊ ಕೇಸ್ ದಾಖಲು!
ದರ್ಶನ್ ಅವರ ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಯಾವುದೇ ದೂರು ದಾಖಲಾಗದ ಕಾರಣ ಮೈಸೂರಿನ ವಿ.ವಿ.ಪುರಂ ಪೊಲೀಸರು ಸುಮೊಟೊ ಕೇಸ್(ಸ್ವಯಂ ಪ್ರೇರಿತ) ದಾಖಲಿಸಿಕೊಂಡು ಘಟನೆ ಕುರಿತು ಮಾಹಿತಿ ಕಲೆಹಾಕುತ್ತಿದ್ದು, ಅಜ್ಞಾತ ಸ್ಥಳದಲ್ಲಿ ಇರಿಸಲಾಗಿದ್ದ ಕಾರುನ್ನು ಪೊಲೀಸ್ ವಶಕ್ಕೆ ತಗೆದುಕೊಳ್ಳಲಾಗಿದೆ.
ಇನ್ನು ದರ್ಶನ್ ಚಾಲನೆ ಮಾಡುತ್ತಿದ್ದ ಆಡಿ ಕ್ಯೂ 7 ಕಾರಿನಲ್ಲಿ ಎಲ್ಲಾ ಮಾದರಿಯ ಗರಿಷ್ಠ ಮಟ್ಟದ ಸುರಕ್ಷಾ ಸೌಲಭ್ಯಗಳಿದ್ದು, ಅಪಘಾತದ ವೇಳೆ ದರ್ಶನ್ ಅವರು ಗಂಭೀರ ಗಾಯಗಳಿಂದ ಪಾರಾಗಲು ಇವು ಕೂಡಾ ಸಹಕಾರಿಯಾಗಿದ್ದವು ಎನ್ನುಬಹುದು.
MOST READ: ಬರ್ತ್ ಡೇ ಸ್ಪೆಷಲ್- ನಟ ದರ್ಶನ್ಗೆ ಸಿಕ್ತು ಭರ್ಜರಿ ಉಡುಗೊರೆ..!!
ಒಟ್ಟಿನಲ್ಲಿ ಆಗಬಹುದಾದ ದುರಂತವೊಂದರಿಂದ ದರ್ಶನ್, ದೇವರಾಜ್ ಮತ್ತು ಪ್ರಜ್ವಲ್ ದೇವರಾಜ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದು, ರಾತ್ರಿ ವೇಳೆ ಕಾರಿನಲ್ಲಿ ಪ್ರಯಾಣ ಮಾಡುವಾಗ ಮುನ್ನೆಚ್ಚೆರಿಕೆ ಕ್ರಮಗಳೊಂದಿಗೆ ಚಾಲನೆ ಮಾಡುವುದು ಒಳಿತು.