Just In
- 2 hrs ago Tata: ಮಧ್ಯಮ ವರ್ಗದವರಿಗೆ ಸಿಹಿಸುದ್ದಿ.. ಮುಂಬರಲಿರುವ ಟಾಟಾ ಕಾರುಗಳಿವು, ಒಂದಕ್ಕಿಂತ ಒಂದು ಭರ್ಜರಿಯಾಗಿವೆ!
- 2 hrs ago ಯಾವುದೇ ಬೆಟ್ಟ, ಗುಡ್ಡಗಳು ಇದರ ಮುಂದೆ ಲೆಕ್ಕಕ್ಕಿಲ್ಲ: ಫೋರ್ಸ್ ಗೂರ್ಖಾ 5-ಡೋರ್ ಬಿಡುಗಡೆಗೆ ಸಜ್ಜು
- 2 hrs ago 5 ರೂ. ಚಿಲ್ಲರೆ ಕೊಟ್ಟಿಲ್ಲವೆಂದು ರೊಚ್ಚಿಗೆದ್ದ ಪ್ರಯಾಣಿಕ: ಸಾಮಾಜಿಕ ಜಾಲತಾಣದಲ್ಲಿ ಮಾಡಿದ್ದೇನು ಗೊತ್ತಾ?
- 3 hrs ago ಆಕರ್ಷಕ ಯಮಹಾ ಏರಾಕ್ಸ್ 155 ವರ್ಷನ್ ಎಸ್ ಸ್ಕೂಟರ್ ಬಿಡುಗಡೆ
Don't Miss!
- News "ಅಲ್ಲಾ ಹೋ ಅಕ್ಬರ್" ಕೂಗಬೇಕು ಎಂದು ಮುಸ್ಲಿಂ ಗೂಂಡಾಗಳಿಂದ ಧಮ್ಕಿ ; ನಾವು ಪಾಕಿಸ್ತಾನದಲ್ಲಿ ಇದ್ದೇವಾ - ಆರ್.ಅಶೋಕ್
- Movies ಸುಶಾಂತ್ ಸಿಂಗ್ ರಜಪೂತ್ ಸತ್ತಾಗ ಯಾರು ದು:ಖಿಸಲಿಲ್ಲ ; ಜನರಿಗೆ ಬೇಕಿದ್ದಿದ್ದು 'ಮಸಾಲೆಯುಕ್ತ ಗಾಸಿಪ್' ಅಷ್ಟೇ..!
- Finance ನೆಸ್ಲೆಯ ಸೆರೆಲಾಕ್ ಶಿಶು ಹಾಲಿನಲ್ಲಿ ಸಕ್ಕರೆ ಅಂಶ ಪತ್ತೆ: ತನಿಖಾ ವರದಿಯಲ್ಲಿ ಬಹಿರಂಗ
- Technology ಬೋರಿಂಗ್ ಫೋನ್ಗಾಗಿ ಕೈಜೋಡಿಸಿದ HMD, ಹೈನೆಕೆನ್ ಮತ್ತು ಬೊಡೆಗಾ! ಯಾತಕ್ಕಾಗಿ ಈ ಫೋನ್?
- Lifestyle ಆಕಾಶದಲ್ಲಿ ಮತ್ತೆ ಕಾಣಿಸಿಕೊಂಡ ವಿಚಿತ್ರ ವಸ್ತು.! ಸ್ಪಷ್ಟನೆ ಬೇಕೆಂದ ನಿವಾಸಿಗಳು..!
- Sports ಟಿ20 ವಿಶ್ವಕಪ್ ಬಗ್ಗೆ ಸ್ಪಷ್ಟನೆ ಕೇಳಿದ ವಿರಾಟ್ ಕೊಹ್ಲಿ; ಕಹಾನಿ ಮೇ ಟ್ವಿಸ್ಟ್ ನೀಡಿದ ಬಿಸಿಸಿಐ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಕನ್ನಡ ಖ್ಯಾತ ನಟರು ಪ್ರಯಾಣಿಸುತ್ತಿದ್ದ ಐಷಾರಾಮಿ ಕಾರು ಅಪಘಾತ
ನಟರಾದ ಪ್ರಜ್ವಲ್ ದೇವರಾಜ್ ಹಾಗೂ ದಿಗಂತ್ ಪ್ರಯಾಣಿಸುತ್ತಿದ್ದ ಐಷಾರಾಮಿ ಮರ್ಸಿಡಿಸ್ ಬೆಂಝ್ ಎಎಂಜಿ ಜಿ ವ್ಯಾಗನ್ ಕಾರು ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್ನಲ್ಲಿ ಅಪಘಾತಕೀಡಾಗಿದ್ದು, ಇಬ್ಬರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ ಎನ್ನಲಾಗಿ
ನಟರಾದ ಪ್ರಜ್ವಲ್ ದೇವರಾಜ್ ಹಾಗೂ ದಿಗಂತ್ ಪ್ರಯಾಣಿಸುತ್ತಿದ್ದ ಐಷಾರಾಮಿ ಮರ್ಸಿಡಿಸ್ ಬೆಂಝ್ ಎಎಂಜಿ ಜಿ ವ್ಯಾಗನ್ ಕಾರು ಬೆಂಗಳೂರಿನ ಜಯನಗರದ ಸೌತ್ ಎಂಡ್ ಸರ್ಕಲ್ನಲ್ಲಿ ಅಪಘಾತಕೀಡಾಗಿದ್ದು, ಇಬ್ಬರಿಗೂ ಸಣ್ಣ ಪುಟ್ಟ ಗಾಯಗಳಾಗಿವೆ ಎನ್ನಲಾಗಿದೆ.
ಈ ಅಪಘಾತ ನಡೆದ ಸಂದರ್ಭದಲ್ಲಿ ನಟರಿಬ್ಬರ ಜೊತೆ ಆದಿಕೇಶವಲು ಮೊಮ್ಮಗ ವಿಷ್ಣು ಅವರು ಸಹ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿ ಲಭ್ಯವಾಗಿದ್ದು, ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿರುವುದು ಇಷ್ಟೆಲ್ಲಾ ತೊಂದರೆಗೆ ಮುಖ್ಯ ಕಾರಣ ಎಂಬ ವಿಚಾರವನ್ನು ಘಟನೆಯ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಲಾಲ್ ಬಾಗ್ ರಸ್ತೆ ಕಡೆಯಿಂದ ವೇಗವಾಗಿ ಬಂದ ಮರ್ಸಿಡಿಸ್ ಮರ್ಸಿಡಿಸ್ ಬೆಂಝ್ ಎಎಂಜಿ ಜಿ ವ್ಯಾಗನ್ ಕಾರು ಸೌತ್ ಎಂಡ್ ಸರ್ಕಲ್ ಬಳಿ ಬಿಬಿಎಂಪಿ ನಾಮಫಲಕಕ್ಕೆ ಜೋರಾಗಿ ಅಪ್ಪಳಿಸಿದೆ ಎಂಬ ವಿಚಾರ ಮೂಲಗಳಿಂದ ತಿಳಿದುಬಂದಿದೆ.
ಈ ಅಪಘಾತದಲ್ಲಿ ಒಂದು ಓಮ್ನಿ ಕಾರು ಪಲ್ಟಿಯಾಗಿದೆ. ಅದರಲ್ಲಿದ್ದವರು ಗಂಭೀರವಾಗಿ ಗಾಯಗೊಂಡವರು ಸಾಗರ್ ಅಪೊಲೊ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದ್ದು, ಜಿ ವ್ಯಾಗನ್ ಕಾರಿನಲ್ಲಿದ್ದವರು ಸಣ್ಣಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Recommended Video
ಜಯನಗರದ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು ಪೊಲೀಸರು ಅಪಘಾತದ ತನಿಖೆ ನೆಡೆಸುತ್ತಿರುವ ರೀತಿ ಹೆಚ್ಚಿನ ಮಂದಿಗೆ ಅನುಮಾನ ತರಿಸಿದ್ದು, ಗಾಂಜಾದ ನಿಜ ಸಂಗತಿಯನ್ನು ಮರೆಮಾಚುತ್ತಿದ್ದಾರೆ ಎಂದು ಹೇಳಲಾಗಿದೆ.
ಇನ್ನು ಈ ಕಾರಿನ ಬಗ್ಗೆ ಹೇಳುವುದಾದರೆ, ಜರ್ಮನಿ ಮೂಲದ ಐಷಾರಾಮಿ ವಾಹನ ತಯಾರಿಕ ಸಂಸ್ಥೆಯಾಗಿರುವ ಮರ್ಸಿಡಿಸ್ ಬೆಂಝ್ ಸಂಸ್ಥೆಯ ಆಫ್ ರೋಡರ್ ಕಾರು ಎಂಬ ಖ್ಯಾತಿಯನ್ನು ಪಡೆದುಕೊಂಡಿದೆ. ಈ ಕಾರು ಇದು ಎಕ್ಸ್ಟೀರಿಯರ್ ಜೊತೆಗೆ ಇಂಟಿರಿಯರ್ ಅಚ್ಚರಿಗಳನ್ನು ಪಡೆದುಕೊಂಡಿದೆ.
ಕಾರಿನ ಒಳಗಡೆ ಹೆಚ್ಚು ಗುಣಮಟ್ಟ ಹೊಂದಿರುವ ಚರ್ಮದ ಹೋದಿಕೆ, ಎರಡು ವಿಭಿನ್ನ ಒಳಮೈಗಳ ಆಯ್ಕೆ, ಗ್ರಾಹಕರಿಗೆ ಟು ಟೋನ್ ಪೋರ್ಸೆಲೈನ್ ಬ್ಲಾಕ್ ಕಾಂಬಿನೇಷನ್ ಅಥವಾ ಸಿಂಗಲ್ ಟೋನ್ ಬ್ಲ್ಯಾಕ್ ಇಂಟಿರಿಯರ್ ಆಯ್ಕೆ ಮಾಡುವ ಅವಕಾಶವಿರಲಿದೆ.
ಪ್ರಸ್ತುತ ಮರ್ಸಿಡಿಸ್ ಬೆಂಝ್ ಜಿ-ಕ್ಲಾಸ್ ಕಾರು ಪೆಟ್ರೋಲ್ ರೂಪಾಂತರದಲ್ಲಿ ಮಾತ್ರ ಲಯವಿದ್ದು, 7 ಸ್ಪೀಡ್ ಆಟೋಮ್ಯಾಟಿಕ್ ಗೇರ್ ಟ್ರಾನ್ಸ್ಮಿಷನ್ ಆಯ್ಕೆ ಹೊಂದಿದೆ ಹಾಗು 2 ಕೋಟಿ ಎಕ್ಸ್ ಶೋರೂಂ ಬೆಲೆ ಪಡೆದುಕೊಂಡಿದೆ.