Just In
- 10 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 11 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 12 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 12 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆಕ್ಸಿಜನ್ ಅಗತ್ಯವಿರುವವರಿಗೆ ವರದಾನವಾಗಲಿವೆ ಈ ಆಕ್ಸಿಜನ್ ಬಸ್ಸುಗಳು
ದೇಶಾದ್ಯಂತ ಕರೋನಾ ವೈರಸ್ ಎರಡನೇ ಅಲೆ ಅಟ್ಟಹಾಸ ಮೆರೆಯುತ್ತಿದೆ. ಕರೋನಾ ವೈರಸ್ ಎರಡನೇ ಅಲೆಯಲ್ಲಿ ಜನರು ಉಸಿರಾಟದ ತೊಂದರೆಯನ್ನು ಎದುರಿಸುತ್ತಿದ್ದಾರೆ. ಪ್ರತಿ ನಿತ್ಯ 3 ಲಕ್ಷಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗುತ್ತಿರುವುದರಿಂದ ದೇಶದೆಲ್ಲೆಡೆ ಆಕ್ಸಿಜನ್ ಕೊರತೆ ಎದುರಾಗಿದೆ.
ಸಕಾಲಕ್ಕೆ ಆಕ್ಸಿಜನ್ ದೊರಕದ ಕಾರಣ ಪ್ರತಿ ನಿತ್ಯ ಸಾಕಷ್ಟು ಜನರು ಸಾವನ್ನಪ್ಪುತ್ತಿದ್ದಾರೆ. ಸಂಕಷ್ಟದಲ್ಲಿರುವ ಭಾರತಕ್ಕೆ ನೆರವಾಗಲು ಹಲವಾರು ದೇಶಗಳು ಮುಂದೆ ಬಂದಿವೆ. ಅಮೆರಿಕಾ ಸೇರಿದಂತೆ ಹಲವು ದೇಶಗಳು ಮೆಡಿಕಲ್ ಆಕ್ಸಿಜನ್ ಟ್ಯಾಂಕರ್ಗಳನ್ನು ಹಡಗು ಹಾಗೂ ವಿಮಾನಗಳ ಮೂಲಕ ರವಾನಿಸುತ್ತಿವೆ.
ಕರ್ನಾಟಕದಲ್ಲಿಯೂ ಜನರು ಸಕಾಲಕ್ಕೆ ಆಕ್ಸಿಜನ್ ದೊರೆಯದೇ ಸಾವನ್ನಪ್ಪುತ್ತಿದ್ದಾರೆ. ಅಗತ್ಯವಿರುವವರಿಗೆ ನಿರಂತರವಾಗಿ ಆಕ್ಸಿಜನ್ ಪೂರೈಸಲು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರು ಆಕ್ಸಿಜನ್ ಬಸ್'ಗೆ ಚಾಲನೆ ನೀಡಿದ್ದಾರೆ.
MOST READ:ವಾಹನ ಖರೀದಿಸುವವರಿಗೆ, ಮಾರಾಟ ಮಾಡುವವರಿಗೆ ನೆರವಾಗುವ ಆರ್ಟಿಒ ಫಾರಂಗಳಿವು!
ಸಾರ್ವಜನಿಕ ಬಸ್ಗಳನ್ನು ತಾತ್ಕಾಲಿಕವಾಗಿ ಆಕ್ಸಿಜನ್ ಕೇಂದ್ರಗಳಾಗಿ ಪರಿವರ್ತಿಸಲಾಗಿದೆ. ಪ್ರತಿ ಸೀಟುಗಳ ನಡುವಿನ ಸೀಟುಗಳನ್ನು ತೆಗೆದುಹಾಕಿ ಅವುಗಳ ಹಿಂಭಾಗದಲ್ಲಿ ಆಕ್ಸಿಜನ್ ಸಿಲಿಂಡರ್ಗಳನ್ನು ಅಳವಡಿಸಲಾಗಿದೆ.
ರೋಗಿಗಳು ಆರಾಮವಾಗಿ ಕುಳಿತುಕೊಳ್ಳುವಂತೆ ಸೀಟುಗಳನ್ನು ವಿನ್ಯಾಸಗೊಳಿಸಲಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪನವರು ಈ ಆಕ್ಸಿಜನ್ ಬಸ್ಸುಗಳಿಗೆ ಬೆಂಗಳೂರಿನಲ್ಲಿ ಚಾಲನೆ ನೀಡಿದ್ದಾರೆ.
MOST READ:ಎಲೆಕ್ಟ್ರಿಕ್ ದ್ವಿಚಕ್ರ ವಾಹನ ಖರೀದಿಗೂ ಮುನ್ನ ಪರಿಶೀಲಿಸಬೇಕಾದ ಸಂಗತಿಗಳಿವು
ಆಕ್ಸಿಜನ್ ಸಿಲಿಂಡರ್ ಬಸ್ಗಳ ಬಿಡುಗಡೆಯ ನಂತರ ಮಾತನಾಡಿದ ಯಡಿಯೂರಪ್ಪನವರು, ಕರೋನಾ ವೈರಸ್ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ದೇಶದಲ್ಲಿ ಆಕ್ಸಿಜನ್'ಗೆ ಬೇಡಿಕೆ ಹೆಚ್ಚಾಗಿದೆ.
ರಾಜ್ಯದಲ್ಲಿ ಆಕ್ಸಿಜನ್'ಗೆ ಕೊರತೆ ಉಂಟಾಗದಂತೆ ತಡೆಯಲು ಈ ಆಕ್ಸಿಜನ್ ಬಸ್'ಗಳನ್ನು ಪರಿಚಯಿಸಲಾಗಿದೆ. ಈ ಬಸ್ಸುಗಳು ಆಸ್ಪತ್ರೆಗಳ ಹೊರಗೆ ಆಕ್ಸಿಜನ್ಇಲ್ಲದೇ ಪರದಾಡುವವರಿಗೆ ನೆರವಾಗುತ್ತವೆ ಎಂದು ಹೇಳಿದರು.
MOST READ:10 ಲಕ್ಷ ಬೆಲೆಯ ಕಾರಿಗೆ 20 ಲಕ್ಷದ ಬಿಲ್ ನೀಡಿದ ಸರ್ವೀಸ್ ಸೆಂಟರ್
ಸದ್ಯಕ್ಕೆ ಮೊದಲ ಹಂತದಲ್ಲಿ ಆಕ್ಸಿಜನ್ ಸಿಲಿಂಡರ್ ಹೊಂದಿರುವ ಇಪ್ಪತ್ತು ಬಸ್ಸುಗಳನ್ನು ಪರಿಚಯಿಸಲಾಗುವುದು. ಅವುಗಳನ್ನು ಪ್ರಮುಖ ಆಸ್ಪತ್ರೆಗಳ ಬಳಿ ನಿಲ್ಲಿಸಲಾಗುತ್ತದೆ. ಪ್ರತಿ ಬಸ್ನಲ್ಲಿ 8 ಜನರಿಗೆ ಆಕ್ಸಿಜನ್ ಸೌಲಭ್ಯ ನೀಡಬಹುದು ಎಂದು ಯಡಿಯೂರಪ್ಪನವರು ತಮ್ಮ ಟ್ವಿಟರ್ ಖಾತೆಯ ಮೂಲಕ ಮಾಹಿತಿ ನೀಡಿದ್ದಾರೆ.
ಕರೋನಾ ಸೋಂಕಿತರಿಗೆ ಆಕ್ಸಿಜನ್ ಅತ್ಯಗತ್ಯವಾಗಿದೆ. ಆದರೆ ಭಾರತದಲ್ಲಿ ಆಕ್ಸಿಜನ್ ಉತ್ಪಾದನೆಯು ಬೇಡಿಕೆಗಿಂತ ತೀರಾ ಕಡಿಮೆಯಿದೆ. ಇದರಿಂದಾಗಿ ಕೋವಿಡ್ 19 ಸಾಂಕ್ರಾಮಿಕದ ಸಂದರ್ಭದಲ್ಲಿ ಆಕ್ಸಿಜನ್ ಜೊತೆಗೆ ವೆಂಟಿಲೇಟರ್ ಹಾಗೂ ಬೆಡ್'ಗಳ ಕೊರತೆ ಎದುರಾಗಿದೆ.
MOST READ:ವರ್ಷಗಳ ಕಾಲ ಉಪ್ಪು ನೀರಿನಲ್ಲಿದ್ದರೂ ಹಡಗುಗಳ ಆಂಕರ್ಗಳಿಗೆ ತುಕ್ಕು ಹಿಡಿಯದಿರಲು ಕಾರಣಗಳಿವು
ಆಕ್ಸಿಜನ್ ಕೊರತೆಯನ್ನು ನೀಗಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಾಕಷ್ಟು ಶ್ರಮಿಸುತ್ತಿವೆ. ಆದರೂ ಸಹ ದೇಶಾದ್ಯಂತ ಆಕ್ಸಿಜನ್ ಕೊರತೆಯಿಂದ ಸಾಕಷ್ಟು ಜನರು ಸಾವನ್ನಪ್ಪುತ್ತಿದ್ದಾರೆ. ಈ ಪರಿಸ್ಥಿತಿಯಲ್ಲಿ ಜನರ ಜೀವ ಉಳಿಸಲು ಆಕ್ಸಿಜನ್ ಬಸ್ಸುಗಳನ್ನು ಪರಿಚಯಿಸಲಾಗಿದೆ.