Just In
- 34 min ago ಫೋಕ್ಸ್ವ್ಯಾಗನ್ ವರ್ಟಸ್ ಕಾರಿಗೆ ಮನಸೋತ ಗ್ರಾಹಕರು: ಭಾರೀ ಬೇಡಿಕೆ
- 1 hr ago ಸಾಮಾನ್ಯರಂತೆ ಹಳ್ಳಿಯಲ್ಲಿರುವ ದೇಶದ 55ನೇ ಶ್ರೀಮಂತ ಶ್ರೀಧರ್ ವೆಂಬು: ಕಚೇರಿಗೆ ಹೋಗಲು ಎಲೆಕ್ಟ್ರಿಕ್ ಆಟೋ ಖರೀದಿ!
- 4 hrs ago ಹ್ಯುಂಡೈ ವೆರ್ನಾ ಕಾರಿಗೆ ಭಾರೀ ಡಿಸ್ಕೌಂಟ್: ರಾಶಿ ಫೀಚರ್ನ ಕಾರಿಗೆ ಇಷ್ಟು ಆಫರ್ ಯಾಕೆಂದ ನೆಟ್ಟಿಗರು!
- 17 hrs ago ಮಾರುಕಟ್ಟೆಯಲ್ಲಿ ಸುನಾಮಿ ಎಬ್ಬಿಸಲು ಹೊಸ ಟೊಯೊಟಾ ಫಾರ್ಚುನರ್ ಲೀಡರ್ ಎಡಿಷನ್ ಅನಾವರಣ
Don't Miss!
- Lifestyle ಪ್ರತಿ ಲೀ ಕತ್ತೆ ಹಾಲಿಗೆ ₹5,000..! 20 ಕತ್ತೆಗಳ ಮೂಲಕ ₹2.5 ಕೋಟಿ ವ್ಯವಹಾರ..!
- News Snake Video: ವಿಮಾನದಲ್ಲಿ ಹಾವು ಬಿಟ್ಟ ವ್ಯಕ್ತಿ: ಬೆಂಗಳೂರಿನಲ್ಲಿ ಬಂಧನ- ಶಿವಪುರಿಯಲ್ಲಿ ಅಪರೂಪದ ಹಾವು ಪತ್ತೆ!
- Sports T20 World Cup 2024: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ಆರಂಭಿಕರನ್ನು ಸೂಚಿಸಿದ ಸೌರವ್ ಗಂಗೂಲಿ
- Technology Airtel: ಏರ್ಟೆಲ್ನಿಂದ ಹೊಸ ಅಂತಾರಾಷ್ಟ್ರೀಯ ರೋಮಿಂಗ್ ಪ್ಲ್ಯಾನ್ಗಳು! ಇವು ಹೇಗೆಲ್ಲಾ ಅನುಕೂಲ?
- Finance Bengaluru Karaga: ಇಂದು ಈ ರಸ್ತೆಗಳಲ್ಲಿ ಸಂಚಾರ ಬಂದ್, ಬದಲಿ ಮಾರ್ಗ ವಿವರ
- Movies "ರಾಘವೇಂದ್ರ ಸ್ವಾಮಿಗಳು ನನ್ನ ತಾತ"; ರಾಯರ ನೆನೆದು ಭಾವುಕರಾಗಿದ್ದೇಕೆ ಬೇಬಿ ಇಂದಿರಾ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ರಸ್ತೆ ಗುಂಡಿಗಳಲ್ಲಿ ಫೋಟೊ ಶೂಟ್ ಮೂಲಕ ಫೇಮಸ್ ಆದ ದಂಪತಿ..!
ಭಾರತದ ರಸ್ತೆಗಳಲ್ಲಿ ಗುಂಡಿಗಳು ಕಾಮನ್. ಗುಂಡಿಗಳು ಇಲ್ಲದಿದ್ದರೇ ಅದೇ ದೊಡ್ಡ ವಿಷಯ. ನಮ್ಮ ಬೆಂಗಳೂರು ಸಹ ರಸ್ತೆ ಗುಂಡಿಗಳಿಂದ ಹೊರತಾಗಿಲ್ಲ. ರಸ್ತೆ ಗುಂಡಿಯಲ್ಲಿ ಬಿದ್ದು ಹಲವು ಸಾರ್ವಜನಿಕರು ಪ್ರಾಣ ಕಳೆದು ಕೊಂಡ ಘಟನೆಗಳು ಈ ಹಿಂದೆ ವರದಿಯಾಗಿದ್ದವು.
ಕರ್ನಾಟಕ ಹೈಕೋರ್ಟ್ ಇತ್ತೀಚಿಗೆ ಬೆಂಗಳೂರಿನ ರಸ್ತೆಗಳಲ್ಲಿರುವ ರಸ್ತೆ ಗುಂಡಿಗಳನ್ನು ಮುಚ್ಚಲು ಬಿಬಿಎಂಪಿಗೆ ಗಡುವು ನೀಡಿತ್ತು. ಬಿಬಿಎಂಪಿಯವರೂ ಸಹ ಈಗಾಗಲೇ ಹಲವೆಡೆ ರಸ್ತೆ ಗುಂಡಿಗಳನ್ನು ಮುಚ್ಚಿದ್ದಾರೆ.
ರಸ್ತೆ ಗುಂಡಿಗಳ ಬಗ್ಗೆ ಸರ್ಕಾರದ ಗಮನ ಸೆಳೆಯಲು ಯುವ ದಂಪತಿಗಳು ಗುಂಡಿ ಬಿದ್ದ ರಸ್ತೆಗಳಲ್ಲಿಯೇ ಫೋಟೊ ಶೂಟ್ ಮಾಡುವ ಮೂಲಕ ಸರ್ಕಾರದ ಗಮನ ಸೆಳೆಯುವ ಪ್ರಯತ್ನವನ್ನು ಮಾಡಿದ್ದಾರೆ. ಈ ಫೋಟೊಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ.
ಯುವ ದಂಪತಿಗಳ ಈ ಪ್ರಯತ್ನಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದೆ. ರಸ್ತೆ ಅಪಘಾತಗಳು ಕೇವಲ ಸಂಚಾರಿ ನಿಯಮಗಳನ್ನು ಉಲ್ಲಂಘಿಸುವುದರಿಂದ ಮಾತ್ರವೇ ಉಂಟಾಗುವುದಿಲ್ಲ.
ಕೆಟ್ಟ ರಸ್ತೆಗಳು ಹಾಗೂ ರಸ್ತೆ ಗುಂಡಿಗಳಿಂದಲೂ ಉಂಟಾಗುತ್ತವೆ. ಕೆಲ ಪ್ರದೇಶಗಳಲ್ಲಿರುವ ಹದಗೆಟ್ಟ ರಸ್ತೆಗಳಿಂದ ಯಾವುದೇ ತೊಂದರೆಯಾಗದಿದ್ದರೂ, ಬೇರೆ ಪ್ರದೇಶಗಳಲ್ಲಿರುವ ಹದಗೆಟ್ಟ ರಸ್ತೆಗಳು ಜನರ ಜೀವನವನ್ನು ನರಕವನ್ನಾಗಿಸುತ್ತವೆ.
ಹದಗೆಟ್ಟ ರಸ್ತೆಗಳನ್ನು ಸರಿಪಡಿಸುವುದು ಸರ್ಕಾರದ ಹಾಗೂ ಸಂಬಂಧಪಟ್ಟ ಪ್ರಾಧಿಕಾರದ ಜವಾಬ್ದಾರಿಯಾಗಿದೆ. ಆದರೆ ಸಂಬಂಧಪಟ್ಟವರು ಈ ಬಗ್ಗೆ ತಲೆ ಕೆಡಿಸಿಕೊಳ್ಳದ ಕಾರಣಕ್ಕೆ ಸಾರ್ವಜನಿಕರೇ ಸಂಬಂಧಪಟ್ಟವರ ಗಮನ ಸೆಳೆಯಲು ನಾನಾ ರೀತಿಯ ತಂತ್ರಕ್ಕೆ ಮೊರೆ ಹೋಗುತ್ತಾರೆ.
ಬೆಂಗಳೂರಿನಲ್ಲಿ ಹದಗೆಟ್ಟ ರಸ್ತೆಗಳ ಬಗ್ಗೆ ಗಮನ ಸೆಳೆಯಲು ಅಂತರಿಕ್ಷಾ ಯಾತ್ರಿಕರ ಉಡುಪು ಧರಿಸಿ ಅಲ್ಲಿ ಚಂದ್ರ ಲೋಕದ ಮೇಲೆ ನಡೆದಂತೆ ನಡೆಯಲಾಗಿತ್ತು. ಈ ತಂತ್ರವು ಸಾಕಷ್ಟು ಜನರ ಗಮನ ಸೆಳೆದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಇದಾದ ನಂತರ ಆ ರಸ್ತೆಯನ್ನು ಸರಿಪಡಿಸಲಾಯಿತು.
MOST READ: ಕೈಕೊಟ್ಟ ದುಬಾರಿ ಬೆಲೆಯ ಕಾರಿನ ಬ್ರೇಕ್..!
ಈಗ ಹೊಸ ರೀತಿಯ ತಂತ್ರಕ್ಕೆ ಹಾವೇರಿ ಜಿಲ್ಲೆಯ ಬ್ಯಾಡಗಿಯ ದಂಪತಿ ಮುಂದಾಗಿದ್ದಾರೆ. ಹದಗೆಟ್ಟ ರಸ್ತೆಗಳ ಗಮನ ಸೆಳೆಯಲು ಹಾಳಾದ ರಸ್ತೆಗಳಲ್ಲಿಯೇ ಫೋಟೊಶೂಟ್ ಮಾಡಿದ್ದಾರೆ. ಈ ಫೋಟೊಶೂಟ್ ಅನ್ನು ತಾವು ವಾಸಿವಿದ್ದ ಪ್ರದೇಶದಲ್ಲಿ ಸಂಪೂರ್ಣವಾಗಿ ಹಾಳಾಗಿರುವ ರಸ್ತೆಯಲ್ಲಿ ಮಾಡಿದ್ದಾರೆ.
MOST READ: ಬೈಕುಗಳಲ್ಲಿ ಡೀಸೆಲ್ ಎಂಜಿನ್ ಏಕೆ ಬಳಸಲ್ಲ ಗೊತ್ತಾ?
ಹಾಳಾಗಿರುವ ರಸ್ತೆಯ ಮೇಲೆ ಕುಳಿತು ಅದರಲ್ಲಿಯೇ ಫೋಟೊಶೂಟ್ ಮಾಡಿದ್ದಾರೆ. ಈ ಫೋಟೊಗಳನ್ನು ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಶೇರ್ ಮಾಡಿದ್ದಾರೆ. ಈ ಫೋಟೊಗಳಿಗೆ ವ್ಯಾಪಕವಾದ ಪ್ರತಿಕ್ರಿಯೆಗಳು ವ್ಯಕ್ತವಾಗುತ್ತಿವೆ. ಕೆಲವರಂತೂ ಆಕ್ರೋಶ ವ್ಯಕ್ತಪಡಿಸಿ ಈ ರೀತಿಯ ಕೆಟ್ಟ ರಸ್ತೆಗಳು ಎಲ್ಲಾ ಕಡೆಯು ಹೆಚ್ಚಾಗಿವೆ ಎಂದು ಹೇಳಿದ್ದಾರೆ.
MOST READ: ಹಳೆ ವಾಹನವನ್ನು ಗುಜರಿಗೆ ಹಾಕುವ ಮಾಲೀಕರಿಗೆ ಆಫರ್
ಈ ಫೋಟೊಗಳು ಸಂಬಂಧಪಟ್ಟವರಿಗೆ ತಲುಪಿ ಈಗಲಾದರೂ ಈ ಹದಗೆಟ್ಟ ರಸ್ತೆಗಳನ್ನು ಸರಿಪಡಿಸುವರೆಂಬ ಅಭಿಪ್ರಾಯ ಸಾರ್ವಜನಿಕರದ್ದು. ಯಾವುದಾದರೂ ಅನಾಹುತ ಸಂಭವಿಸಿದ ನಂತರವಷ್ಟೇ ಸಂಬಂಧಪಟ್ಟವರು ರಸ್ತೆಗಳನ್ನು ಸರಿಪಡಿಸುತ್ತಿರುವುದು ವಿಪರ್ಯಾಸ.