Just In
- 4 hrs ago ಭಾರತದಲ್ಲಿ 80 ಲಕ್ಷ ಸ್ಕೂಟರ್ ಮಾರಿದ ಜಪಾನ್ ಕಂಪನಿ: ವಿಶ್ವಗುರು ಭಾರತದಲ್ಲಿ ಎಲ್ಲವೂ ಸಾಧ್ಯ!
- 4 hrs ago ಎಲೆಕ್ಟ್ರಿಕ್ ಅವತಾರದಲ್ಲಿ ಬರಲಿದೆ ಹೋಂಡಾ ಆಕ್ಟಿವಾ: ಎಲೆಕ್ಟ್ರಿಕ್ ಸ್ಕೂಟರ್ಗಳ ರಾಜ ಆಗುತ್ತಾ?
- 4 hrs ago ಪ್ರೇರಣಾತ್ಮಕ ಕಥೆ: ಮನೆ ಕೆಲಸದಾಕೆಗೆ 'ಸೈಕಲ್' ಖರೀದಿಸಲು ಸಹಾಯ ಮಾಡಿದ ಮಾಲೀಕ.. ವಿಡಿಯೋ ವೈರಲ್
- 6 hrs ago ಸಣ್ಣ ಕುಟುಂಬಗಳಿಗೆ ಬೆಸ್ಟ್ ಕಾರು... 5.36 ಲಕ್ಷ ರೂ. ಬೆಲೆ... 34 ಕಿ.ಮೀ ಮೈಲೇಜ್!
Don't Miss!
- News ಕಲೆ ಮತ್ತು ಕಲೆಗಾರ! ಪ್ರಧಾನಿ ನರೇಂದ್ರ ಮೋದಿ ಕಾಲೆಳೆದ ಸಿಎಂ ಸಿದ್ದರಾಮಯ್ಯ
- Sports IPL 2024: ಹೈದರಾಬಾದ್-ಡೆಲ್ಲಿ ನಡುವೆ ಮೆಗಾ ಫೈಟ್; ಟಾಸ್, ಆಡುವ 11ರ ಬಳಗದ ವರದಿ
- Movies ರಾಜಕೀಯ ಆಯಾಮ ಬೇಡ, ಜನಸಾಮಾನ್ಯರ ಕೈಗೆ ಒಪ್ಪಿಸಿ ಎಂದ ರಚಿತಾ ರಾಮ್ ; #JusticeForNeha ಎಂದ ರಿಷಬ್ ಶೆಟ್ಟಿ..!
- Technology 6000mAh ಬ್ಯಾಟರಿಯ ಈ ಫೋನ್ ಶೀಘ್ರದಲ್ಲೇ ಖರೀದಿಗೆ ಲಭ್ಯ!..ಬೆಲೆ ಎಷ್ಟು?
- Lifestyle 2 ಬಗೆಯ ಮಜ್ಜಿಗೆ ಸಾರು ರೆಸಿಪಿ: ಕಾಯಿ ಹಾಕಿದ, ಕಾಯಿ ಹಾಕದ ಸಾರಿನ ರೆಸಿಪಿ
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ ಡೌನ್ ಉದ್ದೇಶವನ್ನೇ ಮರೆತ ಶಾಸಕ..!
ಕೋವಿಡ್ -19, ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. ವಿಶ್ವಾದ್ಯಂತ, 7 ಲಕ್ಷಕ್ಕೂ ಹೆಚ್ಚು ಜನರು ಕೋವಿಡ್ -19 ವೈರಸ್ ಸೋಂಕಿಗೆ ಒಳಗಾಗಿದ್ದಾರೆ. 33 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಚೀನಾ, ಇಟಲಿ, ಅಮೆರಿಕಾ, ಇಂಗ್ಲೆಂಡ್ ಹಾಗೂ ಇರಾನ್ ದೇಶಗಳು ಕೋವಿಡ್ -19ನಿಂದಾಗಿ ಹೆಚ್ಚು ಹಾನಿಗೊಳಗಾಗಿವೆ.
ಭಾರತದಲ್ಲಿ ಕೋವಿಡ್ -19 ವೈರಸ್ ಹರಡುವುದನ್ನು ತಡೆಗಟ್ಟಲು 21 ದಿನಗಳ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಬಸ್, ರೈಲು ಸೇವೆಗಳನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ. ಅಗತ್ಯ ವಸ್ತುಗಳನ್ನು ಸಾಗಿಸುವ ಟ್ರಕ್ಗಳಂತಹ ವಾಹನಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಜನ ಮನೆ ಬಿಟ್ಟು ಹೊರಗೆ ಬರದಂತೆ ನಿರ್ಬಂಧ ವಿಧಿಸಲಾಗಿದೆ.
ಆದರೆ ತುರ್ತು ಸೇವೆಯ ಕೆಲಸದಲ್ಲಿ ಇರುವವರು ಮನೆಗಳಿಂದ ಹೊರಬರಬಹುದು. ಹಲವರು ಈ ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ. ಜನರ ಸಂಚಾರವಿಲ್ಲದೇ ರಸ್ತೆಗಳು ನಿರ್ಜನವಾಗಿದ್ದು, ಬಿಕೋ ಎನ್ನುತ್ತಿವೆ. ಇದನ್ನು ದುರ್ಬಳಕೆ ಮಾಡಿಕೊಂಡಿರುವ ಕೆಲವರು ತಮ್ಮ ಕಾರು ಹಾಗೂ ಬೈಕುಗಳಲ್ಲಿ ಸುತ್ತಾಡುತ್ತಿದ್ದಾರೆ.
ಇದರಿಂದಾಗಿ ಲಾಕ್ ಡೌನ್ ನ ಉದ್ದೇಶವೇ ವ್ಯರ್ಥವಾಗಿದೆ. ಈ ಕಾರಣಕ್ಕೆ ವಿನಾಕಾರಣ ರಸ್ತೆಗಳಲ್ಲಿ ಅಡ್ಡಾಡುತ್ತಿರುವವರ ವಿರುದ್ಧ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಕೆಲವರಿಗೆ ದಂಡ ವಿಧಿಸಿದರೆ, ಇನ್ನೂ ಕೆಲವರ ಮೇಲೆ ಕೇಸುಗಳನ್ನು ಹಾಕಲಾಗುತ್ತಿದೆ.
ಸಾಮಾನ್ಯ ಜನ ನಿಯಮಗಳನ್ನು ಉಲ್ಲಂಘಿಸಿದಾಗ, ಜನಪ್ರತಿನಿಧಿಗಳು ಅವರನ್ನು ಎಚ್ಚರಿಸಬೇಕು. ಆದರೆ ಜನರನ್ನು ಎಚ್ಚರಿಸಬೇಕಾದವರೇ ನಿಯಮಗಳನ್ನು ಉಲ್ಲಂಘಿಸಿದರೆ ಹೇಗೆ ? ಜನಪ್ರತಿನಿಧಿಯೊಬ್ಬರು ಲಾಕ್ ಡೌನ್ ನ ಉದ್ದೇಶವನ್ನೇ ಉಲ್ಲಂಘಿಸಿ ತಮ್ಮ ಮೊಮ್ಮಗನೊಂದಿಗೆ ಸಾರ್ವಜನಿಕ ರಸ್ತೆಯಲ್ಲಿ ಆಟವಾಡಿದ್ದಾರೆ. ಈ ವೇಳೆ ಅವರಾಗಲಿ, ಅವರ ಮೊಮ್ಮಗನಾಗಲಿ ಮುಖಕ್ಕೆ ಮಾಸ್ಕ್ ಧರಿಸಿರಲಿಲ್ಲ.
ಭಾರತದಲ್ಲಿರುವ ರಾಜಕಾರಣಿಗಳು ನಿಯಮಗಳನ್ನು ಉಲ್ಲಂಘಿಸುವುದು ಹೊಸ ವಿಷಯವಲ್ಲ. ಆದರೆ ಕರೋನಾ ವೈರಸ್ ಹರಡುವುದನ್ನು ತಡೆಯಲು ವಿಧಿಸಲಾಗಿರುವ ಲಾಕ್ ಡೌನ್ ಉದ್ದೇಶವನ್ನೇ ಹಾಳುಗೆಡವಲಾಗಿದೆ. ಕರೋನಾ ವೈರಸ್ನ ಗಂಭೀರತೆಯನ್ನು ಜನ ಪ್ರತಿನಿಧಿಗಳೇ ಅರ್ಥಮಾಡಿಕೊಳ್ಳದಿದ್ದರೆ ಇನ್ನೂ ಸಾಮಾನ್ಯ ಜನರು ಹೇಗೆ ಅರ್ಥಮಾಡಿಕೊಳ್ಳುತ್ತಾರೆ?
MOST READ: ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಅಂದ ಹಾಗೆ ತಮ್ಮ ಮೊಮ್ಮಗನೊಂದಿಗೆ ಸಾರ್ವಜನಿಕ ರಸ್ತೆಯಲ್ಲಿ ಆಟವಾಡಿ ಲಾಕ್ ಡೌನ್ ಉದ್ದೇಶವನ್ನು ಹಾಳು ಮಾಡಿದ ಜನಪ್ರತಿನಿಧಿಯ ಹೆಸರು ಎಸ್.ಆರ್.ಶ್ರೀನಿವಾಸ್. ಇವರು ಗುಬ್ಬಿ ಕ್ಷೇತ್ರದ ಶಾಸಕರು. ಈ ಹಿಂದಿನ ಸರ್ಕಾರದಲ್ಲಿ ಸಚಿವರಾಗಿದ್ದರು.
MOST READ: ವಾಹನ ಸವಾರರ ಕಾಲಿಗೆ ಬೀಳುತ್ತೇನೆಂದ ಸಂಚಾರಿ ಪೊಲೀಸ್, ಕಾರಣವೇನು ಗೊತ್ತಾ?
ಎಸ್.ಆರ್ ಶ್ರೀನಿವಾಸ್ ರವರು ತಮ್ಮ ಮೊಮ್ಮಗನೊಂದಿಗೆ ರಿಮೋಟ್ ಕಂಟ್ರೋಲ್ ಆಟಿಕೆ ಕಾರಿನಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಆಟವಾಡುತ್ತಿರುವ ವೀಡಿಯೊ ಈಗ ವೈರಲ್ ಆಗಿದೆ. ಕಳೆದ ಕೆಲವು ದಿನಗಳಿಂದ, ವಿನಾ ಕಾರಣ ಸಾರ್ವಜನಿಕ ರಸ್ತೆಗಳಲ್ಲಿ ಓಡಾಡುವ ಜನರಿಗೆ ಲಾಠಿ ರುಚಿ ತೋರಿಸುತ್ತಿದ್ದಾರೆ. ಅಗತ್ಯ ಕೆಲಸಕ್ಕಾಗಿ ಹೊರಬಂದ ಹಲವರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ.
MOSTREAD: ವಾಹನ ಉತ್ಪಾದನೆ ಸ್ಥಗಿತದಿಂದಾಗಿ ಸಾವಿರಾರು ಕೋಟಿ ನಷ್ಟ
ಆದರೆ ನಿಯಮಗಳನ್ನು ಉಲ್ಲಂಘಿಸಿ ತನ್ನ ಮೊಮ್ಮಗನೊಂದಿಗೆ ಆಟವಾಡಿದ ಜನಪ್ರತಿನಿಧಿಯ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ. ಇದಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದೇ ಎಂಬುದನ್ನೂ ಕಾದು ನೋಡಬೇಕಿದೆ.