Just In
- 54 min ago Honda: ಹೊಸ ಮೈಲಿಗಲ್ಲು: ಈ ಭಾಗಗಳಲ್ಲಿ ಹೋಂಡಾ ದ್ವಿಚಕ್ರ ವಾಹನಗಳ ಅಬ್ಬರ
- 14 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 15 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 16 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
Don't Miss!
- Finance ಆರ್ಬಿಐ ಡೆಪ್ಯುಟಿ ಗವರ್ನರ್ ರಬಿ ಶಂಕರ್ ಸೇವಾವಧಿ ವಿಸ್ತರಣೆ
- News ಮತ ಹಾಕದಿದ್ದರೆ ನನ್ನ ಅಂತ್ಯಸಂಸ್ಕಾರಕ್ಕಾದರೂ ಬನ್ನಿ. ಮಲ್ಲಿಕಾರ್ಜುನ್ ಖರ್ಗೆ ಭಾವನಾತ್ಮಕ ಮಾತು
- Sports 2024ರ ಟಿ20 ವಿಶ್ವಕಪ್ ರಾಯಭಾರಿಯಾಗಿ ಒಲಿಂಪಿಕ್ ಐಕಾನ್ ಉಸೇನ್ ಬೋಲ್ಟ್ ನೇಮಕ
- Technology ರೆಡ್ಮಿ ಸಂಸ್ಥೆಯ ಈ ಅಗ್ಗದ ಫೋನಿನ ಆಫರ್ ಬೆಲೆ ತಿಳಿದ್ರೆ, ನೀವು ವಾವ್ ಅಂತೀರಾ!
- Lifestyle ಮಲೆನಾಡ ಶೈಲಿನ ಮೃದುವಾದ ಕಡುಬು ಮಾಡೋದು ಹೇಗೆ.? ಸಿಂಪಲ್ ತಿಂಡಿ ರೆಸಿಪಿ
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಲಾಕ್ ಡೌನ್ ಉದ್ದೇಶವನ್ನೇ ಮರೆತ ಶಾಸಕ..!
ಕೋವಿಡ್ -19, ಪ್ರಪಂಚದಾದ್ಯಂತ ವೇಗವಾಗಿ ಹರಡುತ್ತಿದೆ. ವಿಶ್ವಾದ್ಯಂತ, 7 ಲಕ್ಷಕ್ಕೂ ಹೆಚ್ಚು ಜನರು ಕೋವಿಡ್ -19 ವೈರಸ್ ಸೋಂಕಿಗೆ ಒಳಗಾಗಿದ್ದಾರೆ. 33 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಚೀನಾ, ಇಟಲಿ, ಅಮೆರಿಕಾ, ಇಂಗ್ಲೆಂಡ್ ಹಾಗೂ ಇರಾನ್ ದೇಶಗಳು ಕೋವಿಡ್ -19ನಿಂದಾಗಿ ಹೆಚ್ಚು ಹಾನಿಗೊಳಗಾಗಿವೆ.
ಭಾರತದಲ್ಲಿ ಕೋವಿಡ್ -19 ವೈರಸ್ ಹರಡುವುದನ್ನು ತಡೆಗಟ್ಟಲು 21 ದಿನಗಳ ಲಾಕ್ ಡೌನ್ ಜಾರಿಗೊಳಿಸಲಾಗಿದೆ. ಬಸ್, ರೈಲು ಸೇವೆಗಳನ್ನು ಸಂಪೂರ್ಣವಾಗಿ ರದ್ದುಪಡಿಸಲಾಗಿದೆ. ಅಗತ್ಯ ವಸ್ತುಗಳನ್ನು ಸಾಗಿಸುವ ಟ್ರಕ್ಗಳಂತಹ ವಾಹನಗಳು ಮಾತ್ರ ಕಾರ್ಯನಿರ್ವಹಿಸುತ್ತಿದ್ದು, ಜನ ಮನೆ ಬಿಟ್ಟು ಹೊರಗೆ ಬರದಂತೆ ನಿರ್ಬಂಧ ವಿಧಿಸಲಾಗಿದೆ.
ಆದರೆ ತುರ್ತು ಸೇವೆಯ ಕೆಲಸದಲ್ಲಿ ಇರುವವರು ಮನೆಗಳಿಂದ ಹೊರಬರಬಹುದು. ಹಲವರು ಈ ಲಾಕ್ ಡೌನ್ ಅನ್ನು ಕಟ್ಟುನಿಟ್ಟಾಗಿ ಅನುಸರಿಸುತ್ತಿದ್ದಾರೆ. ಜನರ ಸಂಚಾರವಿಲ್ಲದೇ ರಸ್ತೆಗಳು ನಿರ್ಜನವಾಗಿದ್ದು, ಬಿಕೋ ಎನ್ನುತ್ತಿವೆ. ಇದನ್ನು ದುರ್ಬಳಕೆ ಮಾಡಿಕೊಂಡಿರುವ ಕೆಲವರು ತಮ್ಮ ಕಾರು ಹಾಗೂ ಬೈಕುಗಳಲ್ಲಿ ಸುತ್ತಾಡುತ್ತಿದ್ದಾರೆ.
ಇದರಿಂದಾಗಿ ಲಾಕ್ ಡೌನ್ ನ ಉದ್ದೇಶವೇ ವ್ಯರ್ಥವಾಗಿದೆ. ಈ ಕಾರಣಕ್ಕೆ ವಿನಾಕಾರಣ ರಸ್ತೆಗಳಲ್ಲಿ ಅಡ್ಡಾಡುತ್ತಿರುವವರ ವಿರುದ್ಧ ಪೊಲೀಸರು ಕಠಿಣ ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಕೆಲವರಿಗೆ ದಂಡ ವಿಧಿಸಿದರೆ, ಇನ್ನೂ ಕೆಲವರ ಮೇಲೆ ಕೇಸುಗಳನ್ನು ಹಾಕಲಾಗುತ್ತಿದೆ.
ಸಾಮಾನ್ಯ ಜನ ನಿಯಮಗಳನ್ನು ಉಲ್ಲಂಘಿಸಿದಾಗ, ಜನಪ್ರತಿನಿಧಿಗಳು ಅವರನ್ನು ಎಚ್ಚರಿಸಬೇಕು. ಆದರೆ ಜನರನ್ನು ಎಚ್ಚರಿಸಬೇಕಾದವರೇ ನಿಯಮಗಳನ್ನು ಉಲ್ಲಂಘಿಸಿದರೆ ಹೇಗೆ ? ಜನಪ್ರತಿನಿಧಿಯೊಬ್ಬರು ಲಾಕ್ ಡೌನ್ ನ ಉದ್ದೇಶವನ್ನೇ ಉಲ್ಲಂಘಿಸಿ ತಮ್ಮ ಮೊಮ್ಮಗನೊಂದಿಗೆ ಸಾರ್ವಜನಿಕ ರಸ್ತೆಯಲ್ಲಿ ಆಟವಾಡಿದ್ದಾರೆ. ಈ ವೇಳೆ ಅವರಾಗಲಿ, ಅವರ ಮೊಮ್ಮಗನಾಗಲಿ ಮುಖಕ್ಕೆ ಮಾಸ್ಕ್ ಧರಿಸಿರಲಿಲ್ಲ.
ಭಾರತದಲ್ಲಿರುವ ರಾಜಕಾರಣಿಗಳು ನಿಯಮಗಳನ್ನು ಉಲ್ಲಂಘಿಸುವುದು ಹೊಸ ವಿಷಯವಲ್ಲ. ಆದರೆ ಕರೋನಾ ವೈರಸ್ ಹರಡುವುದನ್ನು ತಡೆಯಲು ವಿಧಿಸಲಾಗಿರುವ ಲಾಕ್ ಡೌನ್ ಉದ್ದೇಶವನ್ನೇ ಹಾಳುಗೆಡವಲಾಗಿದೆ. ಕರೋನಾ ವೈರಸ್ನ ಗಂಭೀರತೆಯನ್ನು ಜನ ಪ್ರತಿನಿಧಿಗಳೇ ಅರ್ಥಮಾಡಿಕೊಳ್ಳದಿದ್ದರೆ ಇನ್ನೂ ಸಾಮಾನ್ಯ ಜನರು ಹೇಗೆ ಅರ್ಥಮಾಡಿಕೊಳ್ಳುತ್ತಾರೆ?
MOST READ: ಕರೋನಾದಿಂದ ಬೈಕ್ ಕಳೆದುಕೊಂಡ ಯುವಕನಿಗೆ ಸರ್ ಪ್ರೈಸ್ ಗಿಫ್ಟ್ ನೀಡಿದ ಟಿವಿಎಸ್
ಅಂದ ಹಾಗೆ ತಮ್ಮ ಮೊಮ್ಮಗನೊಂದಿಗೆ ಸಾರ್ವಜನಿಕ ರಸ್ತೆಯಲ್ಲಿ ಆಟವಾಡಿ ಲಾಕ್ ಡೌನ್ ಉದ್ದೇಶವನ್ನು ಹಾಳು ಮಾಡಿದ ಜನಪ್ರತಿನಿಧಿಯ ಹೆಸರು ಎಸ್.ಆರ್.ಶ್ರೀನಿವಾಸ್. ಇವರು ಗುಬ್ಬಿ ಕ್ಷೇತ್ರದ ಶಾಸಕರು. ಈ ಹಿಂದಿನ ಸರ್ಕಾರದಲ್ಲಿ ಸಚಿವರಾಗಿದ್ದರು.
MOST READ: ವಾಹನ ಸವಾರರ ಕಾಲಿಗೆ ಬೀಳುತ್ತೇನೆಂದ ಸಂಚಾರಿ ಪೊಲೀಸ್, ಕಾರಣವೇನು ಗೊತ್ತಾ?
ಎಸ್.ಆರ್ ಶ್ರೀನಿವಾಸ್ ರವರು ತಮ್ಮ ಮೊಮ್ಮಗನೊಂದಿಗೆ ರಿಮೋಟ್ ಕಂಟ್ರೋಲ್ ಆಟಿಕೆ ಕಾರಿನಲ್ಲಿ ಸಾರ್ವಜನಿಕ ರಸ್ತೆಯಲ್ಲಿ ಆಟವಾಡುತ್ತಿರುವ ವೀಡಿಯೊ ಈಗ ವೈರಲ್ ಆಗಿದೆ. ಕಳೆದ ಕೆಲವು ದಿನಗಳಿಂದ, ವಿನಾ ಕಾರಣ ಸಾರ್ವಜನಿಕ ರಸ್ತೆಗಳಲ್ಲಿ ಓಡಾಡುವ ಜನರಿಗೆ ಲಾಠಿ ರುಚಿ ತೋರಿಸುತ್ತಿದ್ದಾರೆ. ಅಗತ್ಯ ಕೆಲಸಕ್ಕಾಗಿ ಹೊರಬಂದ ಹಲವರ ಮೇಲೆ ಪೊಲೀಸರು ಹಲ್ಲೆ ನಡೆಸಿದ್ದಾರೆ.
MOSTREAD: ವಾಹನ ಉತ್ಪಾದನೆ ಸ್ಥಗಿತದಿಂದಾಗಿ ಸಾವಿರಾರು ಕೋಟಿ ನಷ್ಟ
ಆದರೆ ನಿಯಮಗಳನ್ನು ಉಲ್ಲಂಘಿಸಿ ತನ್ನ ಮೊಮ್ಮಗನೊಂದಿಗೆ ಆಟವಾಡಿದ ಜನಪ್ರತಿನಿಧಿಯ ವಿರುದ್ಧ ಯಾವುದೇ ಕ್ರಮಕೈಗೊಂಡಿಲ್ಲ. ಇದಕ್ಕೆ ಸಾರ್ವಜನಿಕರಿಂದ ಆಕ್ಷೇಪ ವ್ಯಕ್ತವಾಗಿದೆ. ಮುಂದಿನ ದಿನಗಳಲ್ಲಿ ಅವರ ಮೇಲೆ ಕ್ರಮ ಕೈಗೊಳ್ಳಲಾಗುವುದೇ ಎಂಬುದನ್ನೂ ಕಾದು ನೋಡಬೇಕಿದೆ.