Just In
- 10 hrs ago ಡಿ ಬಾಸ್ ಪತ್ನಿ ಖರೀದಿಸಿದ್ದು ಸಾಮಾನ್ಯ ಕಾರಲ್ಲ: ಬಂಗಲೆಯಂತಹ ಇಂಟೀರಿಯರ್!
- 11 hrs ago ಭಾರತದ ನಂ.1 ಕಾರು... ದಾಖಲೆಯ ಮಾರಾಟ... 5.5 ಲಕ್ಷ ಬೆಲೆ... 34 ಕಿ.ಮೀ ಮೈಲೇಜ್
- 11 hrs ago ಈ ಹ್ಯುಂಡೈ ಕಾರಿಗೆ ಭಾರತದಲ್ಲಿ ಭರ್ಜರಿ ಬೇಡಿಕೆ: ಇದು ನಿಮಗೆ ಬೇಕು ಅಂದ್ರೆ ಕಾಯಲೇಬೇಕು!
- 12 hrs ago ಈ ತಿಂಗಳಲ್ಲಿ ಕೈಗೆಟಕುವ ಬೆಲೆಯ ಎಸ್ಯುವಿಗಳು: ಮಿಸ್ ಮಾಡಬೇಡಿ, ಇಲ್ಲಿದೆ ಕಂಪ್ಲೀಟ್ ಡೀಟೈಲ್ಸ್
Don't Miss!
- Movies 'ಹಿಟ್ಲರ್ ಕಲ್ಯಾಣ' ಧಾರಾವಾಹಿ ಅಂತ್ಯ: ಪ್ರೋತ್ಸಾಹ ನೀಡಿದ ವೀಕ್ಷಕರಿಗೆ ಧನ್ಯವಾದ ಎಂದ ನಟಿ ರಜಿನಿ
- News ರಾತ್ರೋ ರಾತ್ರಿ ಪತ್ರಿಕಾಗೋಷ್ಠಿ ನಡೆಸಿ ವಿ.ಶ್ರೀನಿವಾಸ ಪ್ರಸಾದ್ ಅಳಿಯ ಏನು ಹೇಳಿದ್ರು ಗೊತ್ತಾ?
- Sports IPL 2024: ಮುಂಬೈ ಇಂಡಿಯನ್ಸ್ ತಂಡ ಸೇರಿದ ಮಾಜಿ ನಾಯಕ: ಹಾಲಿ ನಾಯಕನ ಆತಂಕ ದೂರ
- Lifestyle ಫ್ಲ್ಯಾಟ್ನಲ್ಲಿ ವಾಸಿಸಲು ಹೋಗುವಾಗ ಸಮೃದ್ಧಿ, ಆರೋಗ್ಯಕ್ಕಾಗಿ ವಾಸ್ತು ಹೀಗಿದೆಯೇ ಎಂದು ನೋಡಬೇಕು
- Technology ಮಾರುಕಟ್ಟೆಗೆ ಎಂಟ್ರಿ ಕೊಟ್ಟ ಇನ್ಫಿನಿಕ್ಸ್ ನೋಟ್ 40 ಪ್ರೊ ಪ್ಲಸ್ 5G ಫೋನ್: ಫೀಚರ್ಸ್ ಹೇಗಿದೆ?
- Finance ಭಾರತದಲ್ಲಿ ಚಿನ್ನದ ಬೆಲೆ ಇಳಿಕೆ, ನಿಮ್ಮ ನಗರದಲ್ಲಿ 24 ಕ್ಯಾರೆಟ್ ಚಿನ್ನದ ದರ ತಿಳಿಯಿರಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಂಟಿ ಕಾರ್ಯಾಚರಣೆ ಮೂಲಕ ಉದ್ಯಮಿಯನ್ನು ಅಪಹರಣಕಾರರಿಂದ ರಕ್ಷಿಸಿದ ಪೊಲೀಸರು
ಅಪಹರಣಕ್ಕೀಡಾಗಿದ್ದ ಉದ್ಯಮಿಯೊಬ್ಬರನ್ನು ಕರ್ನಾಟಕ ಹಾಗೂ ಕೇರಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಪೊಲೀಸರು ರಸ್ತೆಯಲ್ಲಿ ಟ್ರಕ್ ಅನ್ನು ಅಡ್ಡ ನಿಲ್ಲಿಸಿ ಒತ್ತೆಯಾಳನ್ನು ಅಪಹರಣಕಾರರಿಂದ ರಕ್ಷಿಸಿದ್ದಾರೆ.
ಅಪಹರಣ ನಡೆದ 16 ಗಂಟೆಗಳಲ್ಲಿ ಪೊಲೀಸರು ಉದ್ಯಮಿಯನ್ನು ರಕ್ಷಿಸಿದ್ದಾರೆ. ಮಲಪ್ಪುರಂ ನಿವಾಸಿಯಾದ 35 ವರ್ಷದ ಅನ್ವರ್ ಎಂಬುವವರನ್ನು ಕಾಸರಗೋಡು ಜಿಲ್ಲೆಯ ಉಡುಮಾದಲ್ಲಿರುವ ಲಾಡ್ಜ್ನ ಹೊರಗಿನಿಂದ ನಾಲ್ವರು ಅಪಹಾರಣಕಾರರಿದ್ದ ತಂಡವು ಅಪಹರಿಸಿತ್ತು.
ಈ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಕರ್ನಾಟಕ ಪೊಲೀಸರ ನೆರವಿನಿಂದ ಕಾರ್ಯಾಚರಣೆ ನಡೆಸಿದ್ದಾರೆ. ಅನ್ವರ್, ಕರಿಪುರದ ನಿವಾಸಿಯಾದ ತಮ್ಮ ಬಾಸ್ ನಜರ್ ಎಂಬುವವರೊಂದಿಗೆ ಉದುಮಾಕ್ಕೆ ಭೇಟಿ ನೀಡಿದ್ದರು.
ನಜರ್ ರಸಗೊಬ್ಬರ ಕಂಪನಿಯನ್ನು ಹೊಂದಿದ್ದಾರೆ. ರಸಗೊಬ್ಬರಗಳಿಗೆ ಕಚ್ಚಾ ಸಾಮಗ್ರಿಯಾಗಿ ಬಳಸಲು ಅವರಿಬ್ಬರು ಜಿಲ್ಲೆಯ ಕ್ಷೌರಿಕ ಅಂಗಡಿಗಳಿಂದ ಕೂದಲನ್ನು ಸಂಗ್ರಹಿಸಿ ಲಾಡ್ಜ್ ನಲ್ಲಿ ತಂಗಿದ್ದರು.
ಅವರ ಬಳಿ ಅಪಾರ ಪ್ರಮಾಣದ ಹಣವಿದೆ ಎಂದು ತಿಳಿದ ಲಾಡ್ಜ್'ನ ಸಹಾಯಕ ಅಪಹರಣಕಾರರಿಗೆ ಮಾಹಿತಿ ನೀಡಿದ್ದಾನೆ. ಅಪಹರಣಕಾರರ ಗ್ಯಾಂಗ್ ಅವರನ್ನು ಅಪಹರಿಸಲು ಬಂದಾಗ ನಜರ್ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ.
ಆದರೆ ಅನ್ವರ್ ಅಪಹರಣಕಾರರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಅವರ ಬಳಿ ಯಾವುದೇ ಹಣವಿಲ್ಲವೆಂದು ತಿಳಿದ ಅಪಹರಣಕಾರರು ಅವರನ್ನು ಬಿಡುಗಡೆಗೊಳಿಸಲು ರೂ. 2 ಲಕ್ಷ ನೀಡಬೇಕೆಂದು ಅನ್ವರ್'ರವರ ಪತ್ನಿಗೆ ಅನ್ವರ್'ರವರ ಮೊಬೈಲ್'ನಿಂದಲೇ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ.
ಕೂಡಲೇ ಅನ್ವರ್'ರವರ ಪತ್ನಿ ಕಾಸರಗೋಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಹರಣಕಾರರು ಇರುವ ಸ್ಥಳವನ್ನು ತಿಳಿಯಲು ಪೊಲೀಸರು ಮೊಬೈಲ್ ಫೋನ್ ಅನ್ನು ಟ್ರ್ಯಾಕ್ ಮಾಡಿದ್ದಾರೆ.
ಅಪಹರಣದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ನಜರ್ ಸಹ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಅಪಹರಣಕಾರರು ಮಂಗಳೂರಿನಲ್ಲಿರುವುದನ್ನು ಪತ್ತೆ ಹಚ್ಚಿದ್ದಾರೆ.
ಕಾಸರಗೋಡು ಪೊಲೀಸರ ಜೊತೆಗೆ ಜಂಟಿ ಕಾರ್ಯಾಚರಣೆಗೆ ಇಳಿದ ಮಂಗಳೂರು ಪೊಲೀಸರು ಅಪಹರಣಕಾರರನ್ನು ಹಿಡಿಯಲು ವಿವಿಧ ಸ್ಥಳಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿದ್ದಾರೆ.
ಆದರೆ ಹ್ಯುಂಡೈ ಕ್ರೆಟಾ ಕಾರಿನಲ್ಲಿ ಸಾಗುತ್ತಿದ್ದ ಅಪಹರಣಕಾರರ ಗ್ಯಾಂಗ್ ಬ್ಯಾರಿಕೇಡ್ಗಳಿಂದ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ. ರಸ್ತೆಯಲ್ಲಿದ್ದ ಹಲವಾರು ಬ್ಯಾರಿಕೇಡ್ಗಳಿಗೆ ಗುದ್ದಿದ್ದಾರೆ.
ಅವರನ್ನು ತಡೆಯಲು ಸಾಧ್ಯವಾಗದ ಪೊಲೀಸರು ಕೊನೆಗೆ ದೊಡ್ಡ ಬ್ಯಾರಿಕೇಡ್ಗಳನ್ನು ಬಳಸಲು ನಿರ್ಧರಿಸಿ ರಸ್ತೆಯನ್ನು ಟ್ರಕ್ ಮೂಲಕ ಬ್ಲಾಕ್ ಮಾಡಿದ್ದಾರೆ. ಹ್ಯುಂಡೈ ಕ್ರೆಟಾ ಟ್ರಕ್ಕಿನ ಮುಂದೆ ಚಲಿಸಲು ಸಾಧ್ಯವಾಗದೇ ಯು ಟರ್ನ್ ತೆಗೆದುಕೊಳ್ಳುವುದನ್ನು ವೀಡಿಯೊದಲ್ಲಿ ಕಾಣಬಹುದು.
ಕಾರು ನಿಧಾನವಾದಾಗ, ಪೊಲೀಸ್ ಅಧಿಕಾರಿಯೊಬ್ಬರು ಕಾರಿನ ಹಿಂದಿನ ಬಾಗಿಲು ತೆರೆದು ಅನ್ವರ್ರವರಿಗೆ ಅಪಹರಣಕಾರರಿಂದ ತಪ್ಪಿಸಿಕೊಳ್ಳಲು ನೆರವಾಗಿದ್ದಾರೆ. ಕ್ರೆಟಾ ಕಾರಿನಲ್ಲಿ ಕೆಲವು ಕಿ.ಮೀ ಸಾಗಿದ ಅಪಹರಣಕಾರರು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಅವರನ್ನು ಬಂಧಿಸಲು ಬಲೆ ಬೀಸಿದ್ದಾರೆ.
ಗಮನಿಸಿ: ಕೊನೆಯ ಮೂರು ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.