Just In
- 1 hr ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 2 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 2 hrs ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 2 hrs ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
Don't Miss!
- News ಬೆಂಗಳೂರಲ್ಲಿ ನಿತ್ಯ 10 mld ಸಂಸ್ಕರಿಸಿದ ನೀರು ಪೂರೈಕೆ: BWSSB
- Sports Rishabh Pant: ಟಿ20 ವಿಶ್ವಕಪ್ಗೆ ರಿಷಭ್ ಪಂತ್ ಭಾರತ ತಂಡದಲ್ಲಿರಬೇಕು
- Movies 3ನೇ ಬಾರಿ ಜೊತೆಯಾದ್ರು ಶಿವಣ್ಣ- ಜಾಕಿ ಭಾವನಾ; ಯಾವ ಸಿನಿಮಾ ಗೊತ್ತಾ?
- Lifestyle ಸೌರಮಂಡಲದಲ್ಲಿದೆ 9ನೇ ಗ್ರಹ..! ಯಾವುದದು..? ಎಲ್ಲಿದೆ..?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಜಂಟಿ ಕಾರ್ಯಾಚರಣೆ ಮೂಲಕ ಉದ್ಯಮಿಯನ್ನು ಅಪಹರಣಕಾರರಿಂದ ರಕ್ಷಿಸಿದ ಪೊಲೀಸರು
ಅಪಹರಣಕ್ಕೀಡಾಗಿದ್ದ ಉದ್ಯಮಿಯೊಬ್ಬರನ್ನು ಕರ್ನಾಟಕ ಹಾಗೂ ಕೇರಳ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ರಕ್ಷಿಸಿದ್ದಾರೆ. ಪೊಲೀಸರು ರಸ್ತೆಯಲ್ಲಿ ಟ್ರಕ್ ಅನ್ನು ಅಡ್ಡ ನಿಲ್ಲಿಸಿ ಒತ್ತೆಯಾಳನ್ನು ಅಪಹರಣಕಾರರಿಂದ ರಕ್ಷಿಸಿದ್ದಾರೆ.
ಅಪಹರಣ ನಡೆದ 16 ಗಂಟೆಗಳಲ್ಲಿ ಪೊಲೀಸರು ಉದ್ಯಮಿಯನ್ನು ರಕ್ಷಿಸಿದ್ದಾರೆ. ಮಲಪ್ಪುರಂ ನಿವಾಸಿಯಾದ 35 ವರ್ಷದ ಅನ್ವರ್ ಎಂಬುವವರನ್ನು ಕಾಸರಗೋಡು ಜಿಲ್ಲೆಯ ಉಡುಮಾದಲ್ಲಿರುವ ಲಾಡ್ಜ್ನ ಹೊರಗಿನಿಂದ ನಾಲ್ವರು ಅಪಹಾರಣಕಾರರಿದ್ದ ತಂಡವು ಅಪಹರಿಸಿತ್ತು.
ಈ ಬಗ್ಗೆ ಮಾಹಿತಿ ಪಡೆದ ಸ್ಥಳೀಯ ಪೊಲೀಸರು ಕರ್ನಾಟಕ ಪೊಲೀಸರ ನೆರವಿನಿಂದ ಕಾರ್ಯಾಚರಣೆ ನಡೆಸಿದ್ದಾರೆ. ಅನ್ವರ್, ಕರಿಪುರದ ನಿವಾಸಿಯಾದ ತಮ್ಮ ಬಾಸ್ ನಜರ್ ಎಂಬುವವರೊಂದಿಗೆ ಉದುಮಾಕ್ಕೆ ಭೇಟಿ ನೀಡಿದ್ದರು.
ನಜರ್ ರಸಗೊಬ್ಬರ ಕಂಪನಿಯನ್ನು ಹೊಂದಿದ್ದಾರೆ. ರಸಗೊಬ್ಬರಗಳಿಗೆ ಕಚ್ಚಾ ಸಾಮಗ್ರಿಯಾಗಿ ಬಳಸಲು ಅವರಿಬ್ಬರು ಜಿಲ್ಲೆಯ ಕ್ಷೌರಿಕ ಅಂಗಡಿಗಳಿಂದ ಕೂದಲನ್ನು ಸಂಗ್ರಹಿಸಿ ಲಾಡ್ಜ್ ನಲ್ಲಿ ತಂಗಿದ್ದರು.
ಅವರ ಬಳಿ ಅಪಾರ ಪ್ರಮಾಣದ ಹಣವಿದೆ ಎಂದು ತಿಳಿದ ಲಾಡ್ಜ್'ನ ಸಹಾಯಕ ಅಪಹರಣಕಾರರಿಗೆ ಮಾಹಿತಿ ನೀಡಿದ್ದಾನೆ. ಅಪಹರಣಕಾರರ ಗ್ಯಾಂಗ್ ಅವರನ್ನು ಅಪಹರಿಸಲು ಬಂದಾಗ ನಜರ್ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ.
ಆದರೆ ಅನ್ವರ್ ಅಪಹರಣಕಾರರ ಕೈಗೆ ಸಿಕ್ಕಿ ಬಿದ್ದಿದ್ದಾರೆ. ಅವರ ಬಳಿ ಯಾವುದೇ ಹಣವಿಲ್ಲವೆಂದು ತಿಳಿದ ಅಪಹರಣಕಾರರು ಅವರನ್ನು ಬಿಡುಗಡೆಗೊಳಿಸಲು ರೂ. 2 ಲಕ್ಷ ನೀಡಬೇಕೆಂದು ಅನ್ವರ್'ರವರ ಪತ್ನಿಗೆ ಅನ್ವರ್'ರವರ ಮೊಬೈಲ್'ನಿಂದಲೇ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ.
ಕೂಡಲೇ ಅನ್ವರ್'ರವರ ಪತ್ನಿ ಕಾಸರಗೋಡು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಅಪಹರಣಕಾರರು ಇರುವ ಸ್ಥಳವನ್ನು ತಿಳಿಯಲು ಪೊಲೀಸರು ಮೊಬೈಲ್ ಫೋನ್ ಅನ್ನು ಟ್ರ್ಯಾಕ್ ಮಾಡಿದ್ದಾರೆ.
ಅಪಹರಣದ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಜೊತೆಗೆ ನಜರ್ ಸಹ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಅಪಹರಣಕಾರರು ಮಂಗಳೂರಿನಲ್ಲಿರುವುದನ್ನು ಪತ್ತೆ ಹಚ್ಚಿದ್ದಾರೆ.
ಕಾಸರಗೋಡು ಪೊಲೀಸರ ಜೊತೆಗೆ ಜಂಟಿ ಕಾರ್ಯಾಚರಣೆಗೆ ಇಳಿದ ಮಂಗಳೂರು ಪೊಲೀಸರು ಅಪಹರಣಕಾರರನ್ನು ಹಿಡಿಯಲು ವಿವಿಧ ಸ್ಥಳಗಳಲ್ಲಿ ಬ್ಯಾರಿಕೇಡ್ಗಳನ್ನು ಹಾಕಿದ್ದಾರೆ.
ಆದರೆ ಹ್ಯುಂಡೈ ಕ್ರೆಟಾ ಕಾರಿನಲ್ಲಿ ಸಾಗುತ್ತಿದ್ದ ಅಪಹರಣಕಾರರ ಗ್ಯಾಂಗ್ ಬ್ಯಾರಿಕೇಡ್ಗಳಿಂದ ತಪ್ಪಿಸಿಕೊಳ್ಳಲು ಯಶಸ್ವಿಯಾಗಿದ್ದಾರೆ. ರಸ್ತೆಯಲ್ಲಿದ್ದ ಹಲವಾರು ಬ್ಯಾರಿಕೇಡ್ಗಳಿಗೆ ಗುದ್ದಿದ್ದಾರೆ.
ಅವರನ್ನು ತಡೆಯಲು ಸಾಧ್ಯವಾಗದ ಪೊಲೀಸರು ಕೊನೆಗೆ ದೊಡ್ಡ ಬ್ಯಾರಿಕೇಡ್ಗಳನ್ನು ಬಳಸಲು ನಿರ್ಧರಿಸಿ ರಸ್ತೆಯನ್ನು ಟ್ರಕ್ ಮೂಲಕ ಬ್ಲಾಕ್ ಮಾಡಿದ್ದಾರೆ. ಹ್ಯುಂಡೈ ಕ್ರೆಟಾ ಟ್ರಕ್ಕಿನ ಮುಂದೆ ಚಲಿಸಲು ಸಾಧ್ಯವಾಗದೇ ಯು ಟರ್ನ್ ತೆಗೆದುಕೊಳ್ಳುವುದನ್ನು ವೀಡಿಯೊದಲ್ಲಿ ಕಾಣಬಹುದು.
ಕಾರು ನಿಧಾನವಾದಾಗ, ಪೊಲೀಸ್ ಅಧಿಕಾರಿಯೊಬ್ಬರು ಕಾರಿನ ಹಿಂದಿನ ಬಾಗಿಲು ತೆರೆದು ಅನ್ವರ್ರವರಿಗೆ ಅಪಹರಣಕಾರರಿಂದ ತಪ್ಪಿಸಿಕೊಳ್ಳಲು ನೆರವಾಗಿದ್ದಾರೆ. ಕ್ರೆಟಾ ಕಾರಿನಲ್ಲಿ ಕೆಲವು ಕಿ.ಮೀ ಸಾಗಿದ ಅಪಹರಣಕಾರರು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಪೊಲೀಸರು ಅವರನ್ನು ಬಂಧಿಸಲು ಬಲೆ ಬೀಸಿದ್ದಾರೆ.
ಗಮನಿಸಿ: ಕೊನೆಯ ಮೂರು ಚಿತ್ರಗಳನ್ನು ರೆಫರೆನ್ಸ್'ಗಾಗಿ ಬಳಸಲಾಗಿದೆ.