Just In
- 6 hrs ago ಟಾಟಾ ಕಾರುಗಳಂತೆಯೇ ಗರಿಷ್ಠ ಸುರಕ್ಷತೆ ತೋರಿದ ಸ್ವಿಫ್ಟ್: ಕ್ರ್ಯಾಶ್ ಟೆಸ್ಟ್ನಲ್ಲಿ 4 ಸ್ಟಾರ್
- 7 hrs ago ಕಂಪನಿಗೆ 140ರ ಸಂಭ್ರಮ: ಕೇವಲ 140 ವಿಶೇಷ ಆವೃತ್ತಿಗಳು ನಿರ್ಮಾಣ: ಬುಕಿಂಗ್ ಆರಂಭ
- 8 hrs ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 9 hrs ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
Don't Miss!
- News Rain Alert: ರಾಜ್ಯಾದ್ಯಂತ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆ; ಜಿಲ್ಲಾವಾರು ಮಳೆ ವಿವರ
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Movies ಡಿ. ಕೆ ಸುರೇಶ್ ಪರ ನಟ ದರ್ಶನ್ ಪ್ರಚಾರ; ಆ 2 ವಿಧಾನಸಭಾ ಕ್ಷೇತ್ರಗಳಲ್ಲಿ ಮತಬೇಟೆ
- Sports ಆರ್ಸಿಬಿಗೆ ಸಹಿ ಹಾಕಲು ವಿರಾಟ್ ಕೊಹ್ಲಿ ಕೇಳಿದ್ದೇಗೆ?; ಕುತೂಹಲಕಾರಿ ಕಥೆ ಬಿಚ್ಚಿಟ್ಟ ಕೆಎಲ್ ರಾಹುಲ್
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೆಟ್ರೋಲ್ ಬಂಕ್ಗಳಲ್ಲಿ ಕೈದಿಗಳನ್ನು ನಿಯೋಜಿಸಿದ ಸರ್ಕಾರ
ಜೈಲುಗಳಲ್ಲಿರುವ ಕೈದಿಗಳು ಇನ್ನು ಮುಂದೆ ಪೆಟ್ರೋಲ್ ಬಂಕ್ ಉದ್ಯೋಗಿಗಳಾಗಿ ಕೆಲಸ ಮಾಡಲಿದ್ದಾರೆ. ಜೊತೆಗೆ ಸಂಬಳವನ್ನು ಪಡೆಯಲಿದ್ದಾರೆ. ಕೇರಳ ಸರ್ಕಾರವು ಇಂಡಿಯನ್ ಆಯಿಲ್ ಕಾರ್ಪೋರೇಶನ್ ಸಹಯೋಗದಲ್ಲಿ ಜೈಲು ಆವರಣದಲ್ಲಿ ಪೆಟ್ರೋಲ್ ಬಂಕ್ ಗಳನ್ನು ತೆರೆದಿದೆ.
ಈ ಪೆಟ್ರೋಲ್ ಬಂಕ್ ಗಳಲ್ಲಿ ಜೈಲಿನಲ್ಲಿರುವ ಕೈದಿಗಳು ಗ್ರಾಹಕರ ವಾಹನಗಳಿಗೆ ಪೆಟ್ರೋಲ್ ತುಂಬಿಸಲಿದ್ದಾರೆ. ಕೇರಳ ಸರ್ಕಾರವು ಕೈದಿಗಳನ್ನು ನೇಮಿಸಿಕೊಳ್ಳುವ ಹಲವಾರು ಯೋಜನೆಗಳನ್ನು ಆರಂಭಿಸಿದೆ. ಪ್ರತಿ ಪೆಟ್ರೋಲ್ ಬಂಕ್ ನಲ್ಲಿ 15 ಜೈಲು ಕೈದಿಗಳನ್ನು ನಿಯೋಜಿಸಲಾಗುವುದು.
ತಿರುವನಂತಪುರಂ, ವೆಯೂರ್ ಹಾಗೂ ಚೆಮಿನಿ ಜೈಲುಗಳಲ್ಲಿರುವ ಪೆಟ್ರೋಲ್ ಬಂಕ್ ಗಳು ಈಗಾಗಲೇ ಕಾರ್ಯಾಚರಣೆಯನ್ನು ಆರಂಭಿಸಿವೆ. ಕೈದಿಗಳಿಗೆ ಉದ್ಯೋಗ ಒದಗಿಸಲು, ಇಂಡಿಯನ್ ಆಯಿಲ್ ಕಾರ್ಪೋರೇಶನ್ ರಾಜ್ಯದ ವಿವಿಧ ಜೈಲು ಆವರಣದಲ್ಲಿ ರೂ.9.4 ಕೋಟಿ ವೆಚ್ಚದಲ್ಲಿ ನಾಲ್ಕು ಪೆಟ್ರೋಲ್ ಬಂಕ್ ಗಳನ್ನು ತೆರೆದಿದೆ.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ
ಕೈದಿಗಳು ತಪ್ಪಿಸಿಕೊಳ್ಳುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಜೈಲು ಆಡಳಿತವು ಕೈದಿಗಳಿಗೆ ತರಬೇತಿ ನೀಡಲಾಗಿದೆ. ಕೈದಿಗಳ ಅನುಭವ ಹಾಗೂ ಸಾಮರ್ಥ್ಯಕ್ಕೆ ಅನುಗುಣವಾಗಿ ಅವರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದೆ.
ಕೈದಿಗಳು ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳುವುದು ಜೈಲು ಆಡಳಿತದ ಜವಾಬ್ದಾರಿಯಾಗಿದೆ. ರಾಜ್ಯದ ವಿವಿಧ ಜೈಲು ಕೈದಿಗಳು ರಾಜ್ಯದಲ್ಲಿ 5 ಕೆಫೆಟೇರಿಯಾಗಳನ್ನು ನಡೆಸುತ್ತಿದ್ದಾರೆ ಎಂದು ಜೈಲು ಆಡಳಿತವು ತಿಳಿಸಿದೆ.
MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್
ಇದರ ಜೊತೆಗೆ ಅನೇಕ ಕೈದಿಗಳು ಫುಡ್ ಪ್ಯಾಕೆಟ್ಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ಕೈದಿಗಳಿಗೆ ನೀಡಲಾಗುತ್ತಿರುವ ಸಂಬಳದ ಜೊತೆಗೆ ಜೈಲು ಆಡಳಿತವು ಅವರಿಗೆ ಪ್ರತಿದಿನವೂ ಸಂಬಳ ನೀಡುತ್ತಿದೆ ಎಂದು ಹೇಳಲಾಗಿದೆ.
ಪ್ರತಿ ಕೈದಿಗೆ ದಿನಕ್ಕೆ 220 ರೂಪಾಯಿ ನೀಡಲಾಗುವುದು. ಕರೋನಾ ವೈರಸ್ ಸಂಕಷ್ಟದ ಸಂದರ್ಭದಲ್ಲಿ ಕೆಲವು ಕೈದಿಗಳು ಶ್ಲಾಘನೀಯ ಕೆಲಸ ಮಾಡುತ್ತಿದ್ದು, ಜನರಿಗೆ ನೆರವಾಗುತ್ತಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ
ಜೈಲು ಆವರಣದಲ್ಲಿ ನಾಲ್ಕು ಪೆಟ್ರೋಲ್ ಬಂಕ್ ಗಳನ್ನು ತೆರೆಯಲು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸುಮಾರು ರೂ.9.4 ಕೋಟಿ ವೆಚ್ಚ ಮಾಡಿದೆ. ಇದರ ಜೊತೆಗೆ ಜೈಲು ಇಲಾಖೆಯು ರೂ.30 ಲಕ್ಷ ವೆಚ್ಚ ಮಾಡಿದೆ. ಈ ಮೂರು ಬಂಕ್ ಗಳ ಜೊತೆಗೆ ಶೀಘ್ರದಲ್ಲಿಯೇ ಕಣ್ಣೂರು ಜೈಲಿನಲ್ಲಿಯೂ ಮತ್ತೊಂದು ಪೆಟ್ರೋಲ್ ಬಂಕ್ ತೆರೆಯಲಾಗುವುದು.