Just In
- 25 min ago ಪ್ರಸಿದ್ಧ ಪುಣ್ಯಕ್ಷೇತ್ರ ಶೃಂಗೇರಿ ಶಾರದಾಂಬಾ ದರ್ಶನಕ್ಕೆ ತೆರಳಬೇಕೇ.. ಹಾಗಾದರೆ ಈ ಸ್ಟೋರಿ ನೋಡಿ
- 1 hr ago ಭರ್ಜರಿ ಸಿಹಿಸುದ್ದಿ: ಸ್ಕೋಡಾ ಕೊಡಿಯಾಕ್ ಎಸ್ಯುವಿಯ ಮೇಲೆ ಭರ್ಜರಿ ಡಿಸ್ಕೌಂಟ್
- 1 hr ago Maruti: ಜಪಾನ್ನಲ್ಲಿ ಗರಿಷ್ಟ ಗುಣಮಟ್ಟದ ಸ್ವಿಫ್ಟ್ ಕಾರು! ಭಾರತಕ್ಕೆ ಮಾತ್ರ ಕಳಪೆ ಗುಣಮಟ್ಟ ಏಕೆ?
- 2 hrs ago ಹೊಸ ಜೀಪ್ ರಾಂಗ್ಲರ್ ಸಂಪೂರ್ಣ ರಿವ್ಯೂ ವಿಡಿಯೋ: ಆಫ್ರೋಡ್ನಲ್ಲಿ ಇದನ್ನು ಮೀರಿಸುವವರಿಲ್ಲ!
Don't Miss!
- Finance ಒಂದೆರಡಲ್ಲ ಒಂಬತ್ತು ಬಾರಿ ಉದ್ಯಮದಲ್ಲಿ ವಿಫಲತೆ, ಮಾನಸಿಕ ಖಿನ್ನತೆ ಸವಾಲುಗಳನ್ನು ಮೆಟ್ಟಿ ನಿಂತ ಉದ್ಯಮಿ
- Lifestyle ಹನುಮಂತನ ಪವಾಡ: ಈ ದೇವಾಲಯದಲ್ಲಿ ಹನುಮಾನ್ ಮೂರ್ತಿ ವರ್ಷದಿಂದ ವರ್ಷಕ್ಕೆ ಎತ್ತರ ಬೆಳೆಯುತ್ತಿದೆ!
- News ಮೀಸಲಾತಿ ಅಸ್ತ್ರ ಪ್ರಯೋಗಿಸಿದ ಮೋದಿ; ಮುಸ್ಲಿಂ ಸಮುದಾಯಕ್ಕೆ 4% ಮೀಸಲಾತಿ: ಸಿದ್ದರಾಮಯ್ಯ
- Sports IPL 2024: ಎಸ್ಆರ್ಹೆಚ್ ಸಂಘಟಿತ ಆಟಕ್ಕೆ ಬ್ರೇಕ್ ಹಾಕಲು ಆರ್ಸಿಬಿ ಏನು ಮಾಡಬೇಕು?
- Technology Qubo InstaView ವಿಡಿಯೋ ಡೋರ್ ಫೋನ್ ಲಾಂಚ್!..ಬೆಲೆ ಎಷ್ಟು, ಫೀಚರ್ಸ್ ಏನಿವೆ?
- Movies ತಮನ್ನಾ ಪಾಲಿಗೆ 'ದುಬಾರಿ' ಆಯಿತು 'ಪ್ರಚಾರ' ; ಮಿಲ್ಕಿ ಬ್ಯೂಟಿಯನ್ನ ವಿಚಾರಣೆಗೆ ಕರೆದ ಸೈಬರ್ ಇಲಾಖೆ..!
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಪೆಟ್ರೋಲ್ ಬಂಕ್ಗಳಲ್ಲಿ ಕೈದಿಗಳನ್ನು ನಿಯೋಜಿಸಿದ ಸರ್ಕಾರ
ಜೈಲುಗಳಲ್ಲಿರುವ ಕೈದಿಗಳು ಇನ್ನು ಮುಂದೆ ಪೆಟ್ರೋಲ್ ಬಂಕ್ ಉದ್ಯೋಗಿಗಳಾಗಿ ಕೆಲಸ ಮಾಡಲಿದ್ದಾರೆ. ಜೊತೆಗೆ ಸಂಬಳವನ್ನು ಪಡೆಯಲಿದ್ದಾರೆ. ಕೇರಳ ಸರ್ಕಾರವು ಇಂಡಿಯನ್ ಆಯಿಲ್ ಕಾರ್ಪೋರೇಶನ್ ಸಹಯೋಗದಲ್ಲಿ ಜೈಲು ಆವರಣದಲ್ಲಿ ಪೆಟ್ರೋಲ್ ಬಂಕ್ ಗಳನ್ನು ತೆರೆದಿದೆ.
ಈ ಪೆಟ್ರೋಲ್ ಬಂಕ್ ಗಳಲ್ಲಿ ಜೈಲಿನಲ್ಲಿರುವ ಕೈದಿಗಳು ಗ್ರಾಹಕರ ವಾಹನಗಳಿಗೆ ಪೆಟ್ರೋಲ್ ತುಂಬಿಸಲಿದ್ದಾರೆ. ಕೇರಳ ಸರ್ಕಾರವು ಕೈದಿಗಳನ್ನು ನೇಮಿಸಿಕೊಳ್ಳುವ ಹಲವಾರು ಯೋಜನೆಗಳನ್ನು ಆರಂಭಿಸಿದೆ. ಪ್ರತಿ ಪೆಟ್ರೋಲ್ ಬಂಕ್ ನಲ್ಲಿ 15 ಜೈಲು ಕೈದಿಗಳನ್ನು ನಿಯೋಜಿಸಲಾಗುವುದು.
ತಿರುವನಂತಪುರಂ, ವೆಯೂರ್ ಹಾಗೂ ಚೆಮಿನಿ ಜೈಲುಗಳಲ್ಲಿರುವ ಪೆಟ್ರೋಲ್ ಬಂಕ್ ಗಳು ಈಗಾಗಲೇ ಕಾರ್ಯಾಚರಣೆಯನ್ನು ಆರಂಭಿಸಿವೆ. ಕೈದಿಗಳಿಗೆ ಉದ್ಯೋಗ ಒದಗಿಸಲು, ಇಂಡಿಯನ್ ಆಯಿಲ್ ಕಾರ್ಪೋರೇಶನ್ ರಾಜ್ಯದ ವಿವಿಧ ಜೈಲು ಆವರಣದಲ್ಲಿ ರೂ.9.4 ಕೋಟಿ ವೆಚ್ಚದಲ್ಲಿ ನಾಲ್ಕು ಪೆಟ್ರೋಲ್ ಬಂಕ್ ಗಳನ್ನು ತೆರೆದಿದೆ.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ
ಕೈದಿಗಳು ತಪ್ಪಿಸಿಕೊಳ್ಳುವುದಿಲ್ಲವೇ ಎಂಬ ಪ್ರಶ್ನೆಗೆ ಉತ್ತರಿಸಿರುವ ಜೈಲು ಆಡಳಿತವು ಕೈದಿಗಳಿಗೆ ತರಬೇತಿ ನೀಡಲಾಗಿದೆ. ಕೈದಿಗಳ ಅನುಭವ ಹಾಗೂ ಸಾಮರ್ಥ್ಯಕ್ಕೆ ಅನುಗುಣವಾಗಿ ಅವರನ್ನು ನೇಮಕ ಮಾಡಲಾಗಿದೆ ಎಂದು ಹೇಳಿದೆ.
ಕೈದಿಗಳು ತಪ್ಪಿಸಿಕೊಳ್ಳದಂತೆ ನೋಡಿಕೊಳ್ಳುವುದು ಜೈಲು ಆಡಳಿತದ ಜವಾಬ್ದಾರಿಯಾಗಿದೆ. ರಾಜ್ಯದ ವಿವಿಧ ಜೈಲು ಕೈದಿಗಳು ರಾಜ್ಯದಲ್ಲಿ 5 ಕೆಫೆಟೇರಿಯಾಗಳನ್ನು ನಡೆಸುತ್ತಿದ್ದಾರೆ ಎಂದು ಜೈಲು ಆಡಳಿತವು ತಿಳಿಸಿದೆ.
MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್
ಇದರ ಜೊತೆಗೆ ಅನೇಕ ಕೈದಿಗಳು ಫುಡ್ ಪ್ಯಾಕೆಟ್ಗಳನ್ನು ತಯಾರಿಸಿ ಮಾರಾಟ ಮಾಡುತ್ತಿದ್ದಾರೆ. ಕೈದಿಗಳಿಗೆ ನೀಡಲಾಗುತ್ತಿರುವ ಸಂಬಳದ ಜೊತೆಗೆ ಜೈಲು ಆಡಳಿತವು ಅವರಿಗೆ ಪ್ರತಿದಿನವೂ ಸಂಬಳ ನೀಡುತ್ತಿದೆ ಎಂದು ಹೇಳಲಾಗಿದೆ.
ಪ್ರತಿ ಕೈದಿಗೆ ದಿನಕ್ಕೆ 220 ರೂಪಾಯಿ ನೀಡಲಾಗುವುದು. ಕರೋನಾ ವೈರಸ್ ಸಂಕಷ್ಟದ ಸಂದರ್ಭದಲ್ಲಿ ಕೆಲವು ಕೈದಿಗಳು ಶ್ಲಾಘನೀಯ ಕೆಲಸ ಮಾಡುತ್ತಿದ್ದು, ಜನರಿಗೆ ನೆರವಾಗುತ್ತಿದ್ದಾರೆ ಎಂದು ಜೈಲು ಅಧಿಕಾರಿಗಳು ತಿಳಿಸಿದ್ದಾರೆ.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ
ಜೈಲು ಆವರಣದಲ್ಲಿ ನಾಲ್ಕು ಪೆಟ್ರೋಲ್ ಬಂಕ್ ಗಳನ್ನು ತೆರೆಯಲು ಇಂಡಿಯನ್ ಆಯಿಲ್ ಕಾರ್ಪೊರೇಷನ್ ಸುಮಾರು ರೂ.9.4 ಕೋಟಿ ವೆಚ್ಚ ಮಾಡಿದೆ. ಇದರ ಜೊತೆಗೆ ಜೈಲು ಇಲಾಖೆಯು ರೂ.30 ಲಕ್ಷ ವೆಚ್ಚ ಮಾಡಿದೆ. ಈ ಮೂರು ಬಂಕ್ ಗಳ ಜೊತೆಗೆ ಶೀಘ್ರದಲ್ಲಿಯೇ ಕಣ್ಣೂರು ಜೈಲಿನಲ್ಲಿಯೂ ಮತ್ತೊಂದು ಪೆಟ್ರೋಲ್ ಬಂಕ್ ತೆರೆಯಲಾಗುವುದು.