Just In
- 2 hrs ago ಎಲೆಕ್ಟ್ರಿಕ್ ಕಾರು ಖರೀದಿಸಿ ಪರಿಸರ ಪ್ರೇಮ ಮೆರೆದ ನಟಿ: ಬೆಲೆ ಕೇಳಿದ್ರೆ ತಲೆ ತಿರುಗುತ್ತೆ!
- 2 hrs ago ಟೊಯೊಟಾದ ಫಾರ್ಚ್ಯೂನರ್ನಲ್ಲೂ ಸಿಗಲಿದೆ ಹೈಬ್ರಿಡ್: ಇದರ ಮೈಲೇಜ್ ಕೇಳಿ ಸುಸ್ತಾದ ಗ್ರಾಹಕರು!
- 3 hrs ago ನಿಜವಾದ ಮಾನವತಾವಾದಿ: ನಟ ರಾಘವ ಲಾರೆನ್ಸ್ರಿಂದ ವಿಶೇಷ ಚೇತನ ಸಾಧಕರಿಗೆ 13 ಟಿವಿಎಸ್ ಸ್ಕೂಟರ್ ಗಿಫ್ಟ್
- 5 hrs ago ಜನ ಕ್ಯೂ ನಿಂತು ಖರೀದಿಸುತ್ತಿದ್ದ ಮಾರುತಿ ಸ್ವಿಫ್ಟ್ ಕಾರು ಮಾರಾಟದಲ್ಲಿ ಕುಸಿತ: ಕಾರಣವೇನು?
Don't Miss!
- Sports PBKS vs MI IPL 2024: ಸೂರ್ಯಕುಮಾರ್ ಶೈನಿಂಗ್; ಪಂಜಾಬ್ಗೆ ಸವಾಲಿನ ಗುರಿ ನೀಡಿದ ಮುಂಬೈ
- News ಒಳರೋಗಿಗಳು ಆಸ್ಪತ್ರೆಯಲ್ಲಿನ ಆಹಾರವನ್ನೇ ಏಕೆ ಸೇವಿಸಬೇಕು? ಇದಕ್ಕೆ ಕಾರಣವೇನು?
- Movies Shrirasthu Shubhamasthu:ಪೂರ್ಣಿಮಾಗೆ ಮಗು ಚಿಂತೆ; ಸತ್ಯ ಹೇಳಲಾಗದೆ ತುಳಸಿ ತೊಳಲಾಟ
- Lifestyle ಊಟದ ರುಚಿ ಹೆಚ್ಚಿಸುತ್ತೆ ಚೌಳಿಕಾಯಿ ಪಲ್ಯ..! ಹೀಗೆ ಮಾಡಿ
- Finance ಬಿಸಿಲ ಬೇಗೆಯಿಂದ ರಕ್ಷಿಸಿಕೊಳ್ಳಲು ಟ್ರಾಫಿಕ್ ಪೊಲೀಸರಿಗೆ ರಿಲಿಫ್: ಬಂತು ಹವಾನಿಯಂತ್ರಿತ ಎಸಿ ಹೆಲ್ಮೆಟ್!
- Technology Samsung: ಸ್ಯಾಮ್ಸಂಗ್ನ ಈ ಸರಣಿ ಫೋನ್ಗಳಲ್ಲಿ ಗ್ರೀನ್ ಲೈನ್ ಸಮಸ್ಯೆ! ವರದಿ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಆ್ಯಂಬುಲೆನ್ಸ್ ಚಲಾಯಿಸಿ ಗಮನ ಸೆಳೆದ ಖಾನಾಪುರ ಶಾಸಕಿ ಅಂಜಲಿ ನಿಂಬಾಳ್ಕರ್
ಕೊರೋನಾ ಸೋಂಕಿನ ಆರ್ಭಟದಿಂದ ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಇಂತಹ ಸಂಕಷ್ಟಕದ ಸಮಯದಲ್ಲಿ ಹಲವು ರಾಜಕೀಯ ಮುಖಂಡರು ಜನರ ನೆರವಿಗೆ ನಿಂತಿದ್ದಾರೆ. ಇದರಲ್ಲಿ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಅವರು ಮುಂಚೂಣಿಯಲ್ಲಿದ್ದಾರೆ.
ಇದೀಗ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಲ್ಕರ್ ಸಹ ಇದೇ ರೀತಿ ಜನರಿಗೆ ನೆರವಾಗುತ್ತಿದ್ದಾರೆ. ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಅನುದಾನದಡಿ ನಾಲ್ಕು ಆ್ಯಂಬುಲೆನ್ಸ್ ಖರೀದಿಸಿ ಖಾನಾಪೂರ ತಾಲೂಕು ಆಸ್ಪತ್ರೆಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಹಸ್ತಾಂತರಿಸಿದರು. ಇದೇ ವೇಳೆ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ಆ್ಯಂಬುಲೆನ್ಸ್ ಚಲಾಯಿಸುವ ಮೂಲಕ ಗಮನ ಸೆಳೆದರು.
ಸದ್ಯ ಬೆಳಗಾವಿಯಲ್ಲಿ ಕೊರೋನಾ ಸೋಂಕಿನ ಪ್ರಮಾಣ ಕೊಂಚ ಮಟ್ಟಿಗೆ ಕಡಿಮೆಯಾಗಿದ್ದು, ಸೋಂಕು ನಿವಾರಣೆಗೆ ಹಲವು ಕ್ರಮ ಕೈಗೊಳ್ಳಲಾಗುತ್ತಿದೆ. ತಮ್ಮ ಕ್ಷೇತ್ರದ ಜನತೆಯ ಕಷ್ಟವನ್ನು ತಿಳಿಯಲು ಶಾಸಕಿ ಅಂಜಲಿ ಆವರು ಈ ಹಿಂದೆ ಖುದ್ದಾಗಿ ಸ್ಕೂಟಿ ಏರಿ ತನ್ನ ಕ್ಷೇತ್ರದ ಗ್ರಾಮಗಳಿಗೆ ಭೇಟಿ ನೀಡಿದ್ದರು.
ಕಳೆದ ವಾರ ಶಾಸಕಿ ಅಂಜಲಿ ತಮ್ಮ ಸ್ವಂತ ಖರ್ಚಿನಲ್ಲಿ 8 ಆಕ್ಸಿಜನ್ ಕಾನ್ಸಟ್ರೇಟರ್ ಖರೀದಿಸಿ ತಾಲೂಕು ಆಸ್ಪತ್ರೆಗೆ ನೀಡಿದ್ದರು. ಹೀಗೆ ಶಾಸಕಿ ಅಂಜಲಿ ನಿಂಬಾಳ್ಕರ್ ಅವರು ತಮ್ಮ ಕ್ಷೇತ್ರದ ಜನರಿಗೆ ನೆರವಾಗುತ್ತಿದ್ದಾರೆ.
ವರದಿಗಳ ಪ್ರಕಾರ, ಖಾನಾಪುರ ಕ್ಷೇತ್ರದಲ್ಲಿ ಎರಡನೇ ಅಲೆಯ ಆರ್ಭಟ ಹೆಚ್ಚಾಗಲು ಮುಖ್ಯ ಕಾರಣ, ನೆರೆಯ ಗೋವಾ ಹಾಗೂ ಮಹಾರಾಷ್ಟ್ರಕ್ಕೆ ಖಾನಾಪುರ ತಾಲೂಕಿನ ಬಹುತೇಕರು ವಲಸೆ ಹೋಗುತ್ತಾರೆ. ಉಭಯ ರಾಜ್ಯಗಳಲ್ಲಿ ಲಾಕ್ಡೌನ್ ಇರುವ ಕಾರಣ ಅವರೆಲ್ಲ ತಮ್ಮೂರಿಗೆ ಮರಳಿದ್ದಾರೆ.
ಹೀಗಾಗಿ ವಲಸಿಗರಿಂದ ಕ್ಷೇತ್ರದ ಗ್ರಾಮೀಣ ಭಾಗಗಳಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದೆ. ಆದರೆ ಕಳೆದ ಕೆಲವು ದಿನಗಳಿಂದ ಖಾನಾಪುರದಲ್ಲಿ ಕರೋನಾ ಸೋಂಕಿನ ಪ್ರಕರಣಗಳು ಇಳಿಕೆಯಾಗುತ್ತಿದೆ.
ಇನ್ನು ದಾವಣಗೆರೆ ಜಿಲ್ಲೆಯ ಹೊನ್ನಾಳಿ ಕ್ಷೇತ್ರದ ಶಾಸಕ ಹಾಗೂ ಸಿಎಂ ಯಡಿಯೂರಪ್ಪರ ರಾಜಕೀಯ ಕಾರ್ಯದರ್ಶಿಯೂ ಆಗಿರುವ ಎಂಪಿ ರೇಣುಕಾಚಾರ್ಯ ಅವರು ತಮ್ಮ ಕ್ಷೇತ್ರದಲ್ಲಿರುವ ಜನರಿಗಾಗಿ ಮತ್ತು ಕರೋನಾ ಸೋಂಕಿತರಿಗಾಗಿ ಹಗಲಿರುಳು ಶ್ರಮಿಸುತ್ತಿದ್ದಾರೆ.
ತಾವೇ ಕೊಡುಗೆಯಾಗಿ ನೀಡಿದ್ದ ಆ್ಯಂಬುಲೆನ್ಸ್ ಚಾಲಕರಾಗಿ ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ಮೃತದೇಹವನ್ನು ಸಾಗಿಸಿ ಅವರ ಕುಟುಂಬಕ್ಕೆ ವೈಯಕ್ತಿಕವಾಗಿ ಧನಸಹಾಯ ಸಹ ಮಾಡಿದ್ದಾರೆ. ಇವರ ಕೆಲಸಕ್ಕೆ ಜನರು ಕೂಡ ಇವರ ಕೆಲಸಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.
ಒಟ್ಟಿನಲ್ಲಿ ತಮ್ಮ ಕ್ಷೇತ್ರದ ಜನರ ಕಷ್ಟಕ್ಕೆ ಹಲವು ನಾಯಕರು ನೆರವಾಗುತ್ತಿದ್ದಾರೆ. ಇನ್ನು ಕಷ್ಟಕ್ಕೆ ನೆರವಾಗದ ನಾಯಕರಿಗೆ ಜನರು ಮುಂದಿನ ಚುನಾವಣೆಗಳಲ್ಲಿ ಪಾಠ ಕಲಿಸಬಹುದು. ಇನ್ನು ರಾಜ್ಯಾದಂತ್ಯ ಕರೋನಾ ಸೋಂಕಿನ ಪ್ರಕರಣಗಳು ಇಳಿಕೆಯಾಗುವುದರಿಂದು ಸಮಾಧಾನಕರ ಸಂಗತಿ.