Just In
- 19 min ago ಟಿವಿಎಸ್ ಐಕ್ಯೂಬ್ಗೆ ನಡುಕ ಶುರು!: ಸದ್ಯದಲ್ಲೇ ಕಡಿಮೆ ಬೆಲೆ ಮಾರುಕಟ್ಟೆಗೆ ಬಜಾಜ್ ಚೇತಕ್ ಎಲೆಕ್ಟ್ರಿಕ್
- 53 min ago ರಾಜ್ಯದಲ್ಲಿ ತಯಾರಾಗುವ ಟೊಯೊಟಾ ಇನ್ನೋವಾ ಹೈಕ್ರಾಸ್ಗೆ ಸೆಲೆಬ್ರಿಟಿಗಳು ಫಿಧಾ: ಈ ಕಾರು ಖರೀದಿಸಿದ ನಟಿ
- 1 hr ago ಹ್ಯುಂಡೈನ ಈ ಕಾರಿಗೆ ಭಾರತದಲ್ಲಿ ಭರ್ಜರಿ ಡಿಸ್ಕೌಂಟ್: ಇದಕ್ಕಿಂತ ಉತ್ತಮ ಆಫರ್ ಸದ್ಯಕ್ಕಿಲ್ಲ!
- 1 hr ago ರೈತರ ವಿಶ್ವಾಸದೊಂದಿಗೆ 40 ಲಕ್ಷ ಟ್ರ್ಯಾಕ್ಟರ್ ಮಾರಾಟ ಮೈಲಿಗಲ್ಲು ಸಾಧಿಸಿದ ಮಹೀಂದ್ರಾ
Don't Miss!
- News Lok Sabha Election 2024: ಈ 6 ಜಿಲ್ಲೆಗಳಲ್ಲಿ 0% ಮತದಾನ-ಎಲ್ಲಿ ಹಾಗೂ ಕಾರಣ ಏನು?
- Technology ಅಗ್ಗದ ಬೆಲೆಯಲ್ಲಿ ಎಂಟ್ರಿ ಕೊಡಲು ಸಜ್ಜಾಗಿದೆ ಐಟೆಲ್ S24 ಸ್ಮಾರ್ಟ್ಫೋನ್!
- Movies ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ; ಸುಮಲತಾ ಅಂಬರೀಶ್ ಪ್ರತಿಕ್ರಿಯೆ
- Lifestyle 5 ನಿಮಿಷದಲ್ಲಿ ಪಾತ್ರೆಯನ್ನು ಹೊಳೆಯುವಂತೆ ಮಾಡಿ..! ಸುಲಭದ ಟಿಪ್ಸ್ ಇಲ್ಲಿದೆ
- Sports LSG vs CSK IPL 2024: ಲಕ್ನೋ vs ಚೆನ್ನೈ ಪಂದ್ಯದ ವರದಿ, ಫ್ಯಾಂಟಸಿ ಡ್ರೀಮ್ ಟೀಂ, ಸಂಭಾವ್ಯ ಆಡುವ 11ರ ಬಳಗ
- Finance n. r. narayana murthy ಐದು ತಿಂಗಳ ಮೊಮ್ಮಗನಿಗೆ 4.2 ಕೋಟಿ ಇನ್ಫೋಸಿಸ್ ಲಾಭ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭೀಕರ ರಸ್ತೆ ಅಪಘಾತದಲ್ಲಿ ಇಬ್ಭಾಗವಾಯ್ತು ಹೊಸ ಎಸ್ಯುವಿ
ಮಧ್ಯಪ್ರದೇಶದಲ್ಲಿ ವೇಗವಾಗಿ ಚಲಿಸುತ್ತಿದ್ದ ಕಿಯಾ ಸೆಲ್ಟೋಸ್ ಎಸ್ಯುವಿಯು ಅಪಘಾತಕ್ಕೀಡಾಗಿದೆ. ವೈರಲ್ ಆಗಿರುವ ಚಿತ್ರಗಳನ್ನು ಗಮನಿಸಿದರೆ ಈ ಅಪಘಾತದ ಭೀಕರತೆ ತಿಳಿದು ಬರುತ್ತದೆ.
ಈ ಭೀಕರ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದ ಚಿಂಧ್ವಾರದಲ್ಲಿರುವ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಚಿತ್ರಗಳು ನೋಡುಗರನ್ನು ಬೆಚ್ಚಿ ಬೀಳಿಸುತ್ತವೆ.
ಅತಿ ವೇಗದಲ್ಲಿ, ಕಿಯಾ ಸೆಲ್ಟೋಸ್ ನಿಯಂತ್ರಣ ಕಳೆದುಕೊಂಡು ಸೇತುವೆಯ ತಡೆ ಗೋಡೆಗೆ ಅಪ್ಪಳಿಸಿದೆ. ಅತಿ ವೇಗವಾಗಿ ಕಾರು ಚಾಲನೆ ಮಾಡಿದ್ದೇ ಈ ಅಪಘಾತಕ್ಕೆಕಾರಣವೆಂದು ತಿಳಿದು ಬಂದಿದೆ.
ಕಾರಿನೊಳಗಿನವರನ್ನು ಹೊರಕ್ಕೆಳೆಯಲು ರಕ್ಷಣಾ ಸಲಕರಣೆಗಳಿಂದ ಕಾರನ್ನು ಎರಡು ಭಾಗಗಳಾಗಿ ತುಂಡರಿಸಿರಬಹುದು ಎಂದು ಹಲವರು ಹೇಳಿದ್ದಾರೆ. ಆದರೆಸೇತುವೆಯ ತಡೆ ಗೋಡೆಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಎರಡು ಭಾಗಗಳಾಗಿ ಮುರಿದು ಬಿದ್ದಿದೆ ಎಂದು ಚಿತ್ರಗಳನ್ನು ಹಂಚಿಕೊಂಡ ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ.
ಆದರೆ ಯಾವ ಕಾರಣಕ್ಕೆ ಈ ಕಾರು ಇಬ್ಭಾಗವಾಯಿತು ಎಂಬ ಸ್ಪಷ್ಟ ಮಾಹಿತಿ ಇನ್ನಷ್ಟೇ ಲಭ್ಯವಾಗ ಬೇಕಾಗಿದೆ. ಕಾರುಗಳು ಎಷ್ಟೇ ಆಧುನಿಕ ಸುರಕ್ಷತಾ ಫೀಚರ್'ಗಳನ್ನು ಹೊಂದಿದ್ದರೂ, ಅತಿ ವೇಗದಲ್ಲಿ ಚಾಲನೆ ಮಾಡಿದಾಗ ನೆರವಿಗೆ ಬರುವುದಿಲ್ಲ. ಈ ಕಾರಿನ ಅಪಘಾತದ ಭೀಕರತೆಯು ಈ ಮಾತಿಗೆ ಪುಷ್ಟಿ ನೀಡುತ್ತದೆ.
ಅತಿ ವೇಗವಾಗಿ ಚಾಲನೆ ಮಾಡುವುದನ್ನು ತಪ್ಪಿಸುವುದು ಮುಖ್ಯ. ಯಾರೇ ಆಗಲಿ ಯಾವ ಸುರಕ್ಷತಾ ಫೀಚರ್'ಗಳೇ ಆಗಲಿ ಅತಿ ವೇಗದಲ್ಲಿ ಚಾಲನೆ ಮಾಡುವವರನ್ನು ಉಳಿಸಲು ಸಾಧ್ಯವಿಲ್ಲ ಎಂಬುದನ್ನು ನೆನಪಿನಲ್ಲಿಡ ಬೇಕು.
ಈ ರೀತಿಯ ಘಟನೆಗಳು ನಿಜಕ್ಕೂ ಆಘಾತವನ್ನುಂಟು ಮಾಡುತ್ತವೆ. ಇಂತಹ ಘಟನೆಗಳಿಂದ ಜನರು ಪಾಠ ಕಲಿತು ಅಪಘಾತಗಳಾಗುವುದನ್ನು ತಪ್ಪಿಸ ಬೇಕು ಎಂಬ ಕಾರಣಕ್ಕೆ ಈ ರೀತಿಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದೇವೆ.
ಅತಿ ವೇಗದ ಚಾಲನೆಯು ನಿಮಗೆ ಮಾತ್ರವಲ್ಲದೆ ಇತರ ವಾಹನ ಸವಾರರಿಗೆ, ಪ್ರಯಾಣಿಕರಿಗೆ, ಪಾದಚಾರಿಗಳ ಪ್ರಾಣಕ್ಕೂ ಕುತ್ತು ತರಬಲ್ಲದು. ಜೊತೆಗೆ ನಿಮ್ಮನ್ನೇ ನಂಬಿಕೊಂಡಿರುವ ಕುಟುಂಬಗಳಿಗೂ ತೊಂದರೆಯನ್ನುಂಟು ಮಾಡುತ್ತದೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.
ಚಿತ್ರ ಕೃಪೆ: ಫೇಸ್ಬುಕ್