Just In
- 11 hrs ago ಪ್ರತಿ ಕಿ.ಮೀ ಚಲಿಸಲು 3.3 ರೂ. ವೆಚ್ಚ: 10 ಜನರು ಪ್ರಯಾಣಿಸುವ ಟಾಟಾ ಮ್ಯಾಜಿಕ್ ಬೈ-ಫ್ಯೂಯಲ್ ಲಗ್ಗೆ
- 13 hrs ago Kia Carens: ಗ್ಲೋಬಲ್ ಎನ್ಸಿಎಪಿ ಸುರಕ್ಷತಾ ಪರೀಕ್ಷೆ.. 3-ಸ್ಟಾರ್ ಪಡೆದ ಕಿಯಾ ಕ್ಯಾರೆನ್ಸ್
- 14 hrs ago ಈ ಬೈಕ್ಗಳನ್ನು ಗ್ರಾಹಕರು ಮುಗಿಬಿದ್ದು ಖರೀದಿಸುತ್ತಿದ್ದಾಗಲೇ ಬೆಲೆ ಏರಿಕೆ ಮಾಡಿ ಶಾಕ್ ಕೊಟ್ಟ ಟ್ರಯಂಫ್
- 15 hrs ago ಅಪ್ಪ-ಮಗಳ ಭಾಂದವ್ಯ.. ಪ್ರೀತಿಯ ಪುತ್ರಿಗೆ ತಂದೆಯಿಂದ 2 ಕೋಟಿಯ ಪೋರ್ಷೆ ಕಾರು ಗಿಫ್ಟ್
Don't Miss!
- Movies 'KGF-2' ಚಿತ್ರದಿಂದ ಸಿಕ್ಕಿದ್ದು 200 ಕೋಟಿ ರೂ.; 'ಟಾಕ್ಸಿಕ್', 'ರಾಮಾಯಣ'ಕ್ಕೆ ಯಶ್ 50-50 ಡೀಲ್!
- Sports CSK vs LSG IPL 2024: ಮಾರ್ಕಸ್ ಸ್ಟೋಯಿನಿಸ್ ಆರ್ಭಟಕ್ಕೆ ಸಿಎಸ್ಕೆ ಥಂಡಾ; ಚೆನ್ನೈಗೆ ನೀರು ಕುಡಿಸಿದ ಲಕ್ನೋ
- News ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ: ಕಾರಣ ತಿಳಿಸಿದ ಚಾಲೆಂಜಿಂಗ್ ಸ್ಟಾರ್ ದರ್ಶನ್
- Lifestyle ಈ ಕಾರಣಕ್ಕೆ ನೀವು ಮಾವಿನ ಹಣ್ಣನ್ನು ನೀರಿನಲ್ಲಿ ನೆನೆಹಾಕಿಯೇ ತಿನ್ನಬೇಕು, ಅದು ನಿಮ್ಮ ತೋಟದಲ್ಲಿ ಬೆಳೆದಿದ್ದೇ ಆಗಿರಲಿ
- Finance ಸಾಲ ತಂದು ನೌಕರರಿಗೆ ಸಂಬಳ ನೀಡಿದ ಬೈಜುಸ್ ಸಂಸ್ಥೆ!
- Technology Realme: ಭಾರತದಲ್ಲಿ ರಿಯಲ್ಮಿ C65 5G ಸ್ಮಾರ್ಟ್ಫೋನ್ ಲಾಂಚ್ಗೆ ದಿನಾಂಕ ಫಿಕ್ಸ್! ಫೀಚರ್ಸ್ ಲೀಕ್..
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಭೀಕರ ರಸ್ತೆ ಅಪಘಾತದಲ್ಲಿ ಇಬ್ಭಾಗವಾಯ್ತು ಹೊಸ ಎಸ್ಯುವಿ
ಮಧ್ಯಪ್ರದೇಶದಲ್ಲಿ ವೇಗವಾಗಿ ಚಲಿಸುತ್ತಿದ್ದ ಕಿಯಾ ಸೆಲ್ಟೋಸ್ ಎಸ್ಯುವಿಯು ಅಪಘಾತಕ್ಕೀಡಾಗಿದೆ. ವೈರಲ್ ಆಗಿರುವ ಚಿತ್ರಗಳನ್ನು ಗಮನಿಸಿದರೆ ಈ ಅಪಘಾತದ ಭೀಕರತೆ ತಿಳಿದು ಬರುತ್ತದೆ.
ಈ ಭೀಕರ ಅಪಘಾತದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಸಾವನ್ನಪ್ಪಿದ್ದಾರೆ. ಮಧ್ಯಪ್ರದೇಶದ ಚಿಂಧ್ವಾರದಲ್ಲಿರುವ ಹೆದ್ದಾರಿಯಲ್ಲಿ ಈ ಅಪಘಾತ ಸಂಭವಿಸಿದೆ. ಅಪಘಾತದ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಈ ಚಿತ್ರಗಳು ನೋಡುಗರನ್ನು ಬೆಚ್ಚಿ ಬೀಳಿಸುತ್ತವೆ.
ಅತಿ ವೇಗದಲ್ಲಿ, ಕಿಯಾ ಸೆಲ್ಟೋಸ್ ನಿಯಂತ್ರಣ ಕಳೆದುಕೊಂಡು ಸೇತುವೆಯ ತಡೆ ಗೋಡೆಗೆ ಅಪ್ಪಳಿಸಿದೆ. ಅತಿ ವೇಗವಾಗಿ ಕಾರು ಚಾಲನೆ ಮಾಡಿದ್ದೇ ಈ ಅಪಘಾತಕ್ಕೆಕಾರಣವೆಂದು ತಿಳಿದು ಬಂದಿದೆ.
ಕಾರಿನೊಳಗಿನವರನ್ನು ಹೊರಕ್ಕೆಳೆಯಲು ರಕ್ಷಣಾ ಸಲಕರಣೆಗಳಿಂದ ಕಾರನ್ನು ಎರಡು ಭಾಗಗಳಾಗಿ ತುಂಡರಿಸಿರಬಹುದು ಎಂದು ಹಲವರು ಹೇಳಿದ್ದಾರೆ. ಆದರೆಸೇತುವೆಯ ತಡೆ ಗೋಡೆಗೆ ಡಿಕ್ಕಿ ಹೊಡೆದ ರಭಸಕ್ಕೆ ಕಾರು ಎರಡು ಭಾಗಗಳಾಗಿ ಮುರಿದು ಬಿದ್ದಿದೆ ಎಂದು ಚಿತ್ರಗಳನ್ನು ಹಂಚಿಕೊಂಡ ಸ್ಥಳೀಯರೊಬ್ಬರು ಮಾಹಿತಿ ನೀಡಿದ್ದಾರೆ.
ಆದರೆ ಯಾವ ಕಾರಣಕ್ಕೆ ಈ ಕಾರು ಇಬ್ಭಾಗವಾಯಿತು ಎಂಬ ಸ್ಪಷ್ಟ ಮಾಹಿತಿ ಇನ್ನಷ್ಟೇ ಲಭ್ಯವಾಗ ಬೇಕಾಗಿದೆ. ಕಾರುಗಳು ಎಷ್ಟೇ ಆಧುನಿಕ ಸುರಕ್ಷತಾ ಫೀಚರ್'ಗಳನ್ನು ಹೊಂದಿದ್ದರೂ, ಅತಿ ವೇಗದಲ್ಲಿ ಚಾಲನೆ ಮಾಡಿದಾಗ ನೆರವಿಗೆ ಬರುವುದಿಲ್ಲ. ಈ ಕಾರಿನ ಅಪಘಾತದ ಭೀಕರತೆಯು ಈ ಮಾತಿಗೆ ಪುಷ್ಟಿ ನೀಡುತ್ತದೆ.
ಅತಿ ವೇಗವಾಗಿ ಚಾಲನೆ ಮಾಡುವುದನ್ನು ತಪ್ಪಿಸುವುದು ಮುಖ್ಯ. ಯಾರೇ ಆಗಲಿ ಯಾವ ಸುರಕ್ಷತಾ ಫೀಚರ್'ಗಳೇ ಆಗಲಿ ಅತಿ ವೇಗದಲ್ಲಿ ಚಾಲನೆ ಮಾಡುವವರನ್ನು ಉಳಿಸಲು ಸಾಧ್ಯವಿಲ್ಲ ಎಂಬುದನ್ನು ನೆನಪಿನಲ್ಲಿಡ ಬೇಕು.
ಈ ರೀತಿಯ ಘಟನೆಗಳು ನಿಜಕ್ಕೂ ಆಘಾತವನ್ನುಂಟು ಮಾಡುತ್ತವೆ. ಇಂತಹ ಘಟನೆಗಳಿಂದ ಜನರು ಪಾಠ ಕಲಿತು ಅಪಘಾತಗಳಾಗುವುದನ್ನು ತಪ್ಪಿಸ ಬೇಕು ಎಂಬ ಕಾರಣಕ್ಕೆ ಈ ರೀತಿಯ ಸುದ್ದಿಗಳನ್ನು ಪ್ರಕಟಿಸುತ್ತಿದ್ದೇವೆ.
ಅತಿ ವೇಗದ ಚಾಲನೆಯು ನಿಮಗೆ ಮಾತ್ರವಲ್ಲದೆ ಇತರ ವಾಹನ ಸವಾರರಿಗೆ, ಪ್ರಯಾಣಿಕರಿಗೆ, ಪಾದಚಾರಿಗಳ ಪ್ರಾಣಕ್ಕೂ ಕುತ್ತು ತರಬಲ್ಲದು. ಜೊತೆಗೆ ನಿಮ್ಮನ್ನೇ ನಂಬಿಕೊಂಡಿರುವ ಕುಟುಂಬಗಳಿಗೂ ತೊಂದರೆಯನ್ನುಂಟು ಮಾಡುತ್ತದೆ ಎಂಬುದನ್ನು ನೆನಪಿನಲ್ಲಿಟ್ಟುಕೊಳ್ಳಬೇಕು.
ಚಿತ್ರ ಕೃಪೆ: ಫೇಸ್ಬುಕ್