Just In
- 16 min ago ಜೀವದ ಗೆಳೆಯನಿಗೆ ಸರ್ಪ್ರೈಸ್ ಆಗಿ 'ಬೈಕ್' ಉಡುಗೊರೆ ನೀಡಿದ ವಧು.. ಆತನ ಸಂತೋಷಕ್ಕೆ ಪಾರವೇ ಇರಲಿಲ್ಲ!
- 2 hrs ago ಇನ್ಮುಂದೆ ಟೋಲ್ ಪ್ಲಾಜಾಗಳು ಕಣ್ಮರೆ: ಖುಷಿ ಪಡುವ ಮುನ್ನ ಈ ಸುದ್ದಿ ನೋಡಿ...
- 3 hrs ago Bullet Train: ಭಾರತದಲ್ಲಿ ಮೊದಲ ಬಾರಿಗೆ ನವೀನ ರೀತಿಯ ಹಳಿ ಬಳಕೆ.. 320 ಕಿ.ಮೀ ವೇಗದಲ್ಲಿ ಓಡುತ್ತೆ ರೈಲು!
- 3 hrs ago ಬ್ರಿಟೀಷ್ ಮಾರುಕಟ್ಟೆಯನ್ನು ಆಳಲು ಹೊರಟ ಭಾರತೀಯ ಬೈಕ್: ಯುಕೆ ನಲ್ಲಿ ಟ್ರಯಂಫ್ಗೆ ನೇರ ಹಣಾಹಣಿ!
Don't Miss!
- Finance 25ನೇ ವಯಸ್ಸಿನಲ್ಲಿ 25,000 ರೂ.ನಿಂದ 7,000 ಕೋಟಿ ಗಳಿಸಿದ ವ್ಯಕ್ತಿ ಬಗ್ಗೆ ತಿಳಿಯಿರಿ
- Movies Yuva Review : ಕ್ಲಾಸ್-ಮಾಸ್; ಸ್ಯಾಂಡಲ್ವುಡ್ನ ಹೊಸ ಪರ್ವ ಈ ಯುವ, ಹೇಗಿದೆ ದೊಡ್ಮನೆ ಕುಡಿಯ ಅಬ್ಬರ?
- Lifestyle ಮೈ ತೂಕ ಕಡಿಮೆಯಾಗಲು ಈ ಪುದೀನಾ ನೀರು ಸಹಕಾರಿಯೇ? ಇದರ ಇತರ ಪ್ರಯೋಜನಗಳೇನು?
- News Poornachandra Tejaswi: ವಿಸ್ಮಯಲೋಕವನ್ನೇ ತೆರೆದಿಡುವ ತೇಜಸ್ವಿಯವರ ಪುಸ್ತಕಗಳು
- Technology ಬಜೆಟ್ ದರದಲ್ಲಿ ಬೆಸ್ಟ್ 5G ಫೋನ್ ಬೇಕಿದ್ರೆ, ಈ ಲಿಸ್ಟ್ ಒಮ್ಮೆ ಗಮನಿಸಿ!
- Sports Kohli vs Gambhir: ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಕೌಂಟರ್ ನೀಡಿದ ದಿನೇಶ್ ಕಾರ್ತಿಕ್
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಬಡವರ ಹಸಿವಿಗೆ ಸ್ಪಂದಿಸಿದ ಬಾಲಕರು, ಮಾಡಿದ್ದೇನು?
ಕರೋನಾ ವೈರಸ್ ಪ್ರಪಂಚದಾದ್ಯಂತ ಅಪಾರ ಪ್ರಮಾಣದ ಸಾವು ನೋವು ಉಂಟು ಮಾಡುತ್ತಿದೆ. ಜಗತ್ತಿನಾದ್ಯಂತ ಈ ಸೋಂಕಿಗೆ ಒಳಗಾದವರ ಸಂಖ್ಯೆ ಹತ್ತು ಲಕ್ಷವನ್ನು ಮೀರಿದೆ.
ಕರೋನಾ ವೈರಸ್ ಭಾರತದಲ್ಲಿಯೂ ವೇಗವಾಗಿ ಹರಡುತ್ತಿದ್ದು, ಸೋಂಕಿತರ ಸಂಖ್ಯೆ 4 ಸಾವಿರದ ಗಡಿ ದಾಟಿದೆ. ಕರೋನಾ ವೈರಸ್ ನಿಂದ ರಕ್ಷಿಸಲು ದೇಶಾದ್ಯಂತ ಲಾಕ್ಡೌನ್ ಘೋಷಿಸಲಾಗಿದೆ. ಇದರಿಂದಾಗಿ ಬಡವರು ಹಾಗೂ ಕಾರ್ಮಿಕರು ಈ ಹೆಚ್ಚು ತೊಂದರೆಗಳನ್ನು ಎದುರಿಸುತ್ತಿದ್ದಾರೆ.
ಕೆಳವರ್ಗದ ಜನರಿಗೆ ಆಹಾರ ಹಾಗೂ ಪಡಿತರದ ಸಮಸ್ಯೆ ಎದುರಾಗಿದೆ. ಇದನ್ನು ಪರಿಹರಿಸಲು ಸರ್ಕಾರಗಳು ಕೈಲಾದಷ್ಟು ಪ್ರಯತ್ನ ಪಡುತ್ತಿವೆ. ಇದರ ಜೊತೆಗೆ ಹಲವಾರು ಜನ ಧನ ಸಹಾಯ ಮಾಡುತ್ತಿದ್ದಾರೆ.
ಆದರೆ ಇಬ್ಬರು ಚಿಕ್ಕ ಮಕ್ಕಳು ತಮ್ಮ ಬಳಿಯಿದ್ದ ಹಣವನ್ನು ಬಡವರಿಗಾಗಿ ಪೊಲೀಸರಿಗೆ ದಾನ ಮಾಡಿದ ಘಟನೆ ಬೆಳಕಿಗೆ ಬಂದಿದೆ.
ಯೂಟ್ಯೂಬ್ನಲ್ಲಿ ಕಿಡ್ಸ್ ಬೈಕ್ ಎಂಬ ಚಾನೆಲ್ ಹೊಂದಿರುವ ಇಬ್ಬರು ಮಕ್ಕಳು ತಾವು ಈ ಚಾನೆಲ್ ನಿಂದ ಗಳಿಸಿದ್ದ 5,000 ರೂಪಾಯಿಗಳನ್ನು ಬಡ ಹಾಗೂ ಹಸಿದ ಜನರಿಗಾಗಿ ದೇಣಿಗೆ ನೀಡಿದ್ದಾರೆ.
ಲಾಕ್ಡೌನ್ ಸಮಯದಲ್ಲಿ, ಈ ಇಬ್ಬರು ಮಕ್ಕಳು ತಮ್ಮ ಪಾಕೆಟ್ ಬೈಕ್ಗಳಲ್ಲಿ ಮನೆಯಿಂದ ಹೊರಬಂದಿದ್ದಾರೆ. ಕೂಡಲೇ ಅಲ್ಲಿಯೇ ಇದ್ದ ಪೊಲೀಸರು ಈ ಮಕ್ಕಳನ್ನು ತಡೆದು ಲಾಕ್ಡೌನ್ನಲ್ಲಿ ಹೊರಬಂದ ಕಾರಣವನ್ನು ಕೇಳಿದ್ದಾರೆ.
ಮಕ್ಕಳು ಯೂಟ್ಯೂಬ್ನಲ್ಲಿ ಕಿಡ್ಸ್ ಬೈಕ್ ಎಂಬ ಚಾನೆಲ್ ಹೊಂದಿರುವ ಬಗ್ಗೆ ಹಾಗೂ ಲಾಕ್ಡೌನ್ನಿಂದಾಗಿ ಬಡವರಿಗೆ ಸರಿಯಾಗಿ ಆಹಾರವನ್ನು ಪಡೆಯಲು ಸಾಧ್ಯವಾಗದೇ ಇರುವುದರ ಬಗ್ಗೆ ಫೇಸ್ಬುಕ್, ಟಿವಿ ಹಾಗೂ ಇತರ ಸಾಮಾಜಿಕ ಜಾಲತಾಣಗಳ ಮೂಲಕ ತಿಳಿದಿದ್ದಾಗಿ ಹೇಳಿದ್ದಾರೆ.
ಈ ಕಾರಣಕ್ಕೆ ತಮ್ಮ ಯೂಟ್ಯೂಬ್ ಚಾನೆಲ್ ನಿಂದ ಗಳಿಸಿರುವ ಹಣವನ್ನು ಬಡವರ ಆಹಾರಕ್ಕಾಗಿ ದಾನ ಮಾಡಲು ಬಯಸಿರುವುದಾಗಿ ತಿಳಿಸಿದ್ದಾರೆ. ಆ ಇಬ್ಬರು ಮಕ್ಕಳು ಪೊಲೀಸರಿಗೆ ತಮ್ಮ ಬಳಿಯಿದ್ದ ರೂ.5,000ಗಳನ್ನು ನೀಡಿದ್ದಾರೆ. ಈ ಹಣವನ್ನು ಬಡವರಿಗೆ ಸಹಾಯ ಮಾಡಲು ಬಳಸಲಾಗುವುದೆಂದು ಪೊಲೀಸರು ಮಕ್ಕಳಿಗೆ ಭರವಸೆ ನೀಡಿದ್ದಾರೆ.
ಅಂದ ಹಾಗೆ ಈ ಮಕ್ಕಳು ಚಾಲನೆ ಮಾಡುತ್ತಿದ್ದ ಪಾಕೆಟ್ ಬೈಕುಗಳ ಬಳಕೆ ಭಾರತದಲ್ಲಿ ಕಾನೂನುಬದ್ಧವಲ್ಲ. ಈ ಪಾಕೆಟ್ ಬೈಕ್ಗಳಿಗೆ ಆರ್ಟಿಒಗಳು ಮಾನ್ಯತೆ ನೀಡುವುದಿಲ್ಲ. ಆದರೆ ಈ ಬೈಕ್ಗಳನ್ನು ರೇಸ್ಟ್ರಾಕ್, ಖಾಸಗಿ ಮೈದಾನ, ತೋಟದಮನೆಗಳಂತಹ ಖಾಸಗಿ ಸ್ಥಳಗಳಲ್ಲಿ ಬಳಸಬಹುದು.