Just In
- 4 hrs ago ಸ್ವಂತ ದುಡಿಮೆಯಲ್ಲಿ ಹೊಸ ಕಾರು ಖರೀದಿಸಿ ಯುವ ನಟಿಯ ಭಾವನಾತ್ಮಕ ಪೋಸ್ಟ್
- 5 hrs ago Suzuki Access Electric: ಸುಜುಕಿ ಆಕ್ಸೆಸ್ ಎಲೆಕ್ಟ್ರಿಕ್ ಸ್ಕೂಟರ್ ಈ ವರ್ಷ ಬಿಡುಗಡೆ ಸಾಧ್ಯತೆ!
- 6 hrs ago Royal Enfield Himalayan ಸುಲಭವಾಗಿ ಖರೀದಿಸುವುದು ಹೇಗೆ?: ಇಲ್ಲಿದೆ ಡೌನ್ಪೇಮೆಂಟ್, EMI ಮಾಹಿತಿಗಳು!
- 6 hrs ago ಮಿಂಚಿನ ವೇಗಕ್ಕೆ ಸರಿಸಾಟಿಯಾಗಿ ಬೆಂಗಳೂರಿನ ಹೊಸ ಅಲ್ಟ್ರಾವೈಲೆಟ್ ಬೈಕ್ ಬಿಡುಗಡೆ: 323KM ರೇಂಜ್
Don't Miss!
- Movies ನೀಲಿ ಪ್ರಪಂಚದ ಕರಾಳ ಸತ್ಯವನ್ನ ಹೇಳಿದ ಲಾನಾ ರೋಡ್ಸ್
- Sports DC vs GT IPL 2024: ಅಕ್ಷರ್, ರಿಷಭ್ ಶೈನಿಂಗ್; ಗುಜರಾತ್ ವಿರುದ್ಧ ಡೆಲ್ಲಿ ಜಯಭೇರಿ
- News ದ್ವೇಷ ಉತ್ತೇಜಿಸುವ ಪೋಸ್ಟ್: ಕರ್ನಾಟಕ ಬಿಜೆಪಿ ವಿರುದ್ಧ ದೂರು ದಾಖಲಿಸಿದ ಚುನಾವಣಾ ಆಯೋಗ
- Technology ಒಪ್ಪೋ ಫೈಂಡ್ X7 ಅಲ್ಟ್ರಾ ಕ್ಯಾಮೆರಾ: ಮೊಬೈಲ್ ಫೋಟೋಗ್ರಫಿಗೆ ಅತ್ಯುತ್ತಮ ಫೋನ್!
- Lifestyle 613 ದಿನ ಕೊರೊನಾ ವಿರುದ್ಧ ಹೋರಾಡಿ ವೃತಪಟ್ಟ ವ್ಯಕ್ತಿ..!
- Finance ರಿಲಯನ್ಸ್ಗೆ 28,607 ಕೋಟಿ ನಷ್ಟ, ಕಾರಣ ಏನು ಗೊತ್ತೆ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಒಂದೇ ದಿನದಲ್ಲಿ ಕೆಎಸ್ಆರ್ಟಿಸಿ ಗಳಿಕೆ ಎಷ್ಟು ಗೊತ್ತಾ?
ಕರ್ನಾಟಕದ ಪ್ರತಿಷ್ಠಿತ ಸರ್ಕಾರಿ ಸಾರ್ವಜನಿಕ ವಾಹನ ಸೇವಾ ಸಂಸ್ಥೆಯಾದ ಕೆಎಸ್ಆರ್ಟಿಸಿಯು ಕೇವಲ ಒಂದೇ ದಿನದಲ್ಲಿ 13.46 ಕೋಟಿ ರೂ.ಗಳಿಸುವ ಮೂಲಕ ಹೊಸ ದಾಖಲೆ ಸೃಷ್ಟಿ ಮಾಡಿದೆ.
ಕರ್ನಾಟಕದ ಪ್ರತಿಷ್ಠಿತ ಸರ್ಕಾರಿ ಸಾರ್ವಜನಿಕ ವಾಹನ ಸೇವಾ ಸಂಸ್ಥೆಯಾದ ಕೆಎಸ್ಆರ್ಟಿಸಿಯು ಕೇವಲ ಒಂದೇ ದಿನದಲ್ಲಿ 13.46 ಕೋಟಿ ರೂ.ಗಳಿಸುವ ಮೂಲಕ ಹೊಸ ದಾಖಲೆ ಸೃಷ್ಟಿ ಮಾಡಿದೆ.
ಹೌದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಮೊನ್ನೆ ನಡೆದ ದಸರಾ ಹಬ್ಬದಂದು ಈ ದಾಖಲೆ ಪ್ರಮಾಣದ ಆದಾಯ ಗಳಿಕೆ ಮಾಡಿದ್ದು, ಈ ಮೂಲಕ ಹೊಸ ಇತಿಹಾಸ ಸೃಷ್ಠಿಸಿದೆ. ಈ ಮೂಲಕ 2015ರಲ್ಲಿದ್ದ ದಾಖಲಾಗಿದ್ದ ಅತ್ಯಧಿಕ ಗಳಿಕೆಯ ದಾಖಲೆಯನ್ನು ಕೆಎಸ್ಆರ್ಟಿಸಿ ಅಳಿಸಿ ಹಾಕಿದೆ.
ವಿಜಯದಶಮಿ, ಆಯುಧಪೂಜೆ, ಗಾಂಧಿ ಜಯಂತಿಯ ಸಾಲು ಸಾಲು ಸರಕಾರಿ ರಜೆ ಬಂದಿದ್ದರಿಂದ ಸಾರ್ವಜನಿಕರು ಹೆಚ್ಚು ಕೆಎಸ್ಆರ್ಟಿಸಿ ಬಸ್ಸುಗಳನ್ನು ಅವಲಂಬಿಸಿದ್ದರ ಪರಿಣಾಮ ಸಂಸ್ಥೆಗೆ ಅಧಿಕ ಆದಾಯ ಬಂದಿದೆ ಎನ್ನಲಾಗಿದೆ.
ಕಳೆದ ವರ್ಷದ ದಸರಾ ಹಬ್ಬದ ಸಂದರ್ಭದಲ್ಲಿ 12.75 ಕೋಟಿ ರೂ.ಗಳ ಸಂಗ್ರಹವೇ ಈವರೆಗಿನ ಒಂದು ದಿನದ ಅತ್ಯದಿಕ ಆದಾಯ ಗಳಿಕೆಯಾಗಿತ್ತು. ಆದರೆ ಈ ವರ್ಷ ಆ ದಾಖಲೆಯನ್ನು ಕೆಎಸ್ಆರ್ಟಿಸಿ ಸಂಸ್ಥೆ ಮುರಿದು ಹಾಕಿದ್ದು, ಇತಿಹಾಸದಲ್ಲೇ ಅತ್ಯಧಿಕ ಗಳಿಕೆಯನ್ನು ಮಾಡಿದೆ.
"ಕೆಎಸ್ಆರ್ಟಿಸಿ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನದಲ್ಲಿ 13.46 ಕೋಟಿ ರೂ. ದಾಖಲೆ ಆದಾಯ ಸಂಗ್ರಹವಾಗಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ, ಏಪ್ರಿಲ್ನಿಂದ ಅಕ್ಟೋಬರ್ ತಿಂಗಳವರೆಗೆ 132.16 ಕೋಟಿ ರೂ. ಅಧಿಕ ಆದಾಯವನ್ನು ಸಂಸ್ಥೆ ಗಳಿಸಿದೆ,''ಎಂದು ವ್ಯವಸ್ಥಾಪಕ ನಿರ್ದೇಶಕ ಎಸ್.ಆರ್.ಉಮಾಶಂಕರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಸರಾ ಟ್ರಿಪ್ನಲ್ಲಿಯೂ 1 ಕೋಟಿ ಹೆಚ್ಚುವರಿ ಆದಾಯ ಪಡೆದ ಕೆಎಸ್ಆರ್ಟಿಸಿ :
ಈ ಬಾರಿ ದಸರಾ ಮಹೋತ್ಸವದ ಅವಧಿಯಲ್ಲಿ ಸರಕಾರಿ ರಜೆಗಳ ಸಂಖ್ಯೆ ಹೆಚ್ಚಾಗಿದ್ದರಿಂದ, ಮೈಸೂರಿನಲ್ಲಿ ನಡೆದ ನಾಡಹಬ್ಬ ದಸರಾ ಮಹೋತ್ಸವದ ಅವಧಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಒಂದು ಕೋಟಿ ರೂ. ಹೆಚ್ಚುವರಿ ಸಾರಿಗೆ ಆದಾಯ ಗಳಿಸಿದೆ.
ಮೈಸೂರಿನ ಸುತ್ತಮುತ್ತಲಿನ ಜಿಲ್ಲೆಗಳ ಜನತೆ ಹಾಗು ಪ್ರವಾಸಿಗರ ಸಂಖ್ಯೆ ಹೆಚ್ಚಾಗಿ ಮೈಸೂರಿನ ಕಡೆ ಹರಿದು ಬಂದ ಕಾರಣ ಬೆಂಗಳೂರು-ಮೈಸೂರಿನ ನಡುವೆ ಸಂಚಾರ ಹೆಚ್ಚಾಗಿದೆ. ಹಾಗಾಗಿ ಕೆಎಸ್ಆರ್ಟಿಸಿಗೆ ಈ ಬಾರಿ ನಿರೀಕ್ಷೆಗೂ ಮೀರಿ ಸಾರಿಗೆ ಆದಾಯ ಬಂದಿದೆ.