Just In
- 11 hrs ago ಸುಜುಕಿ ಹಯಬುಸಾ 25ನೇ ಆನಿವರ್ಸರಿ ಎಡಿಷನ್ ಬಿಡುಗಡೆ: ಬೆಲೆ ಎಷ್ಟು?
- 13 hrs ago Bajaj: ಮುಂಬರಲಿರುವ ಬಜಾಜ್ ಪಲ್ಸರ್ NS 400 ನಿರೀಕ್ಷಿತ ಬೆಲೆ, ವಿಶೇಷತೆಗಳು!
- 13 hrs ago Tata Punch: ಟಾಟಾ ಪಂಚ್ ಕಾರು ಖರೀದಿಸಬೇಕೇ.. ಆನ್-ರೋಡ್ ಬೆಲೆ ಎಷ್ಟು, EMI ಏನು?
- 15 hrs ago 150KM ರೇಂಜ್, ಸುರಕ್ಷತೆಯ ಮೆಟಲ್ ಬಾಡಿಯ ಮಹಿಂದ್ರಾ ಎಲೆಕ್ಟ್ರಿಕ್ ಆಟೋ ಬಿಡುಗಡೆ: ಹೆಚ್ಚು ಲಾಭ
Don't Miss!
- News Gold Price on April 18th: ಬಂಗಾರ ದರ ತುಸು ಇಳಿಕೆ, ನಿಮ್ಮ ನಗರದಲ್ಲಿ ಎಷ್ಟಿದೆ ಪರಿಶೀಲಿಸಿ? ಅಂಕಿಅಂಶಗಳ ವಿವರ ಇಲ್ಲಿದೆ
- Movies ಅನುಷ್ಕಾ ಶೆಟ್ಟಿ ಬ್ಯಾಕ್ ಟು ಬ್ಯಾಕ್ ಯಾಕೆ ಸಿನಿಮಾ ಮಾಡ್ತಿಲ್ಲಾ? ನಿರ್ದೇಶಕರಿ ಕಂಡೀಷನ್ ಹಾಕ್ತಿದ್ದಾರಾ?
- Finance Bullet train: ಮೇಡ್ ಇನ್ ಇಂಡಿಯಾ ಬುಲೆಟ್ ಟ್ರೈನ್ಗೆ ಶೀಘ್ರ ಚಾಲನೆ, ಗಂಟೆಗೆ 250 ವೇಗ
- Lifestyle ಬೇಸಿಗೆಯಲ್ಲಿ ದಿನಾ ಎಳನೀರು ಕುಡಿದರೆ ಏನಾಗುತ್ತೆ? ಯಾವ ಸಮಯದಲ್ಲಿ ಎಳನೀರು ಕುಡಿಯಬೇಕು?
- Sports India's Squad For T20 World Cup: ಟಿ20 ವಿಶ್ವಕಪ್ಗೆ ಸಂಭಾವ್ಯ 20 ಸದಸ್ಯರ ಭಾರತ ತಂಡ
- Technology WhatsApp: ವಾಟ್ಸಾಪ್ಗೆ ಕೆಲವೇ ದಿನಗಳಲ್ಲಿ ಸೇರಲಿವೆ ಬಹುನಿರೀಕ್ಷಿತ ಈ ಫೀಚರ್ಸ್! ಇವುಗಳಿಂದ ಏನೆಲ್ಲಾ ಲಾಭ?
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಗ್ರಾಹಕರಿಗೆ ಹೊಸ ಅನುಭವ ನೀಡಲಿದೆ ಕೆಟಿಡಿಸಿಯ ಇನ್ ಕಾರ್ ಡೈನಿಂಗ್ ಯೋಜನೆ
ಸುಮಾರು ಒಂದೂವರೆ ವರ್ಷದ ಹಿಂದೆ ಕಾಣಿಸಿಕೊಂಡ ಕರೋನಾ ವೈರಸ್ ಮಹಾಮಾರಿ ಜನರ ಜೀವನಶೈಲಿಯಲ್ಲೂ ದೊಡ್ಡ ಬದಲಾವಣೆಯನ್ನು ತಂದಿದೆ. ಹಲವು ವಿಷಯಗಳು ಮೊದಲಿನಂತೆ ಇರಲು ಸಾಧ್ಯವಿಲ್ಲ.
ಜನರು ಮೊದಲಿನಂತೆ ಪ್ರವಾಸ ಕೈಗೊಳ್ಳಲು ಸಹ ಹಿಂದೆ ಮುಂದೆ ನೋಡ ಬೇಕಾಗುತ್ತದೆ. ಕೋವಿಡ್ 19 ಸಾಂಕ್ರಾಮಿಕದ ಸಂದರ್ಭದಲ್ಲಿ ಪ್ರವಾಸ ಕೈಗೊಂಡಾಗ ಊಟ ಮಾಡುವುದು ಸವಾಲಾಗಿ ಪರಿಣಮಿಸಿದೆ.
ಕೋವಿಡ್ 19 ಸಾಂಕ್ರಾಮಿಕದ ಸಂದರ್ಭದಲ್ಲಿ ಕೇರಳ ಪ್ರವಾಸೋದ್ಯಮ ಅಭಿವೃದ್ಧಿ ನಿಗಮವು (ಕೆಟಿಡಿಸಿ) ತಮ್ಮ ವಾಹನಗಳೊಳಗೆ ಪ್ರಯಾಣಿಕರಿಗೆ ಊಟ ನೀಡುವ ಹೊಸ ಯೋಜನೆಯನ್ನು ಆರಂಭಿಸಿದೆ.
ಸಾರ್ವಜನಿಕ ಸ್ಥಳಗಳಲ್ಲಿ ಊಟ ಮಾಡುವಾಗ ಸೋಂಕು ಹರಡುವುದನ್ನು ತಡೆಯಲು ಈ ಯೋಜನೆಯನ್ನು ಆರಂಭಿಸಲಾಗಿದೆ. ಈ ಯೋಜನೆಗೆ ಇನ್ ಕಾರ್ ಡೈನಿಂಗ್ ಎಂಬ ಹೆಸರನ್ನಿಡಲಾಗಿದೆ.
ಈ ಯೋಜನೆಯಡಿಯಲ್ಲಿ ಗ್ರಾಹಕರು ಕೆಟಿಡಿಸಿಯ ಆಹಾರ್ ರೆಸ್ಟೋರೆಂಟ್ಗಳಲ್ಲಿ ಆಹಾರವನ್ನು ಆರ್ಡರ್ ಮಾಡಿ ಪಾರ್ಕಿಂಗ್ ಪ್ರದೇಶಗಳಲ್ಲಿಯೇ ಊಟ ಪಡೆಯಲುಸಾಧ್ಯವಾಗಲಿದೆ.
ಈ ಯೋಜನೆಯಡಿಯಲ್ಲಿ ಕೋವಿಡ್ 19 ಸುರಕ್ಷತಾ ನಿಯಮಗಳನ್ನು ಅನುಸರಿಸುವುದರ ಜೊತೆಗೆ ಬೆಳಗಿನ ಉಪಾಹಾರ, ಊಟ ಹಾಗೂ ಭೋಜನವನ್ನು ಒದಗಿಸಲಾಗುವುದು. ಈ ಯೋಜನೆಯ ಬಗ್ಗೆ ಕೇರಳದ ಪ್ರವಾಸೋದ್ಯಮ ಸಚಿವ ಪಿಎ ಮೊಹಮ್ಮದ್ ರಿಯಾಜ್ ಮಾಹಿತಿ ನೀಡಿದ್ದಾರೆ.
ಈ ಯೋಜನೆಯನ್ನು ಸಾಂಕ್ರಾಮಿಕ ರೋಗದ ಎರಡನೇ ಅಲೆಯ ಅವಧಿಯಲ್ಲಿ ಜಾರಿಗೆ ತರಲಾಗುತ್ತಿದ್ದು, ಪ್ರವಾಸೋದ್ಯಮಕ್ಕೆ ನೆರವಾಗಲಿದೆ. ಜೊತೆಗೆ ಸಾರ್ವಜನಿಕರ ಸುರಕ್ಷತೆಗೂ ಆದ್ಯತೆ ನೀಡಲಾಗುತ್ತದೆ ಎಂದು ಅವರು ಹೇಳಿದರು.
ಈ ಯೋಜನೆ ಆಯ್ದ ಕೆಟಿಡಿಸಿ ರೆಸ್ಟೋರೆಂಟ್ಗಳಲ್ಲಿ ಆರಂಭವಾಗಲಿದೆ. ನಮ್ಮ ಗ್ರಾಹಕರಿಗೆ ಹೊಸ ಅನುಭವವನ್ನು ನೀಡಲು ಇನ್ ಕಾರ್ ಡೈನಿಂಗ್ ಯೋಜನೆ ಶ್ರಮಿಸುತ್ತದೆ ಎಂದು ರಿಯಾಜ್ ತಿಳಿಸಿದರು.
ಇದೇ ವೇಳೆ ಅಸ್ತಿತ್ವದಲ್ಲಿರುವ ಪ್ರವಾಸೋದ್ಯಮ ಯೋಜನೆ ಹಾಗೂ ಕೆಟಿಡಿಸಿಯ ಚಟುವಟಿಕೆಗಳನ್ನು ಸಚಿವರು ಪರಿಶೀಲಿಸಿದರು. ತಿರುವನಂತಪುರಂನ ವೇಲಿ ಸೇರಿದಂತೆ ರಾಜ್ಯದಾದ್ಯಂತ ಆಯ್ದ ಸ್ಥಳಗಳಲ್ಲಿ ಫ್ಲೋಟಿಂಗ್ ರೆಸ್ಟೋರೆಂಟ್ಗಳನ್ನು ಸ್ಥಾಪಿಸಲಾಗುವುದು.
ಅವುಗಳಲ್ಲಿ ಮೊದಲನೆಯದು ಕಡಲುಂಡಿಯಲ್ಲಿದೆ. ಪ್ರವಾಸೋದ್ಯಮ ನಿಗಮದಡಿಯಲ್ಲಿ ಪ್ರಮುಖ ಯೋಜನೆಗಳನ್ನು ಘೋಷಿಸುವುದರ ಜೊತೆಗೆ, ರುಚಿಕರವಾದ ಹಾಗೂ ಸುರಕ್ಷಿತವಾದ ಆಹಾರವನ್ನು ಜನರಿಗೆ ನೀಡಲು ನಮ್ಮ ಇಲಾಖೆ ಬಯಸಿದೆ ಎಂದು ಮೊಹಮ್ಮದ್ ರಿಯಾಜ್ ಹೇಳಿದರು.
ಮಿಷನ್ ಫೇಸ್ಲಿಫ್ಟ್ ಯೋಜನೆಯಡಿ ಕೆಟಿಡಿಸಿ ಹೋಟೆಲ್ ಸರಪಳಿಗಳನ್ನು ಆದ್ಯತೆಯ ಆಧಾರದ ಮೇಲೆ ನವೀಕರಿಸಲಾಗುತ್ತದೆ ಎಂದು ಇದೇ ವೇಳೆ ಮೊಹಮ್ಮದ್ ರಿಯಾಜ್ ಮಾಹಿತಿ ನೀಡಿದರು.