Just In
- 44 min ago ಭಾರತದ ರಸ್ತೆಯಲ್ಲಿ ಘರ್ಜಿಸುತ್ತಿರುವ ಪವರ್ಫುಲ್ ಎಪ್ರಿಲಿಯಾ ಬೈಕ್ಗಾಗಿ ಅಕ್ಸೆಸರೀಸ್ ಬಿಡುಗಡೆ
- 52 min ago Mahindra Thar: ಸುಲಭವಾಗಿ ಆಫ್ರೋಡ್ ಕಿಂಗ್ ಖರೀದಿಸಬೇಕೆ?: ಆನ್ರೊಡ್ ಬೆಲೆ, EMI ಸಂಪೂರ್ಣ ಮಾಹಿತಿ!
- 1 hr ago Mahindra: ಫ್ಯಾಮಿಲಿ ಕಾರು ಮಹೀಂದ್ರಾ ಎಕ್ಸ್ಯುವಿ700 ಖರೀದಿಸುವವರಿಗೆ ಸಿಹಿಸುದ್ದಿ.. ಇನ್ನೂ ತಿಂಗಳೇ ಸಾಕು!
- 2 hrs ago Mahindra: ದೊಡ್ಡ ಅಪಘಾತ ತಪ್ಪಿಸಿತು XUV700 ಕಾರಿನ ಈ ಸೇಫ್ಟಿ ಫೀಚರ್: ಎಲ್ಲರೂ ಸೇಫ್!
Don't Miss!
- News Lok Sabha Election: ರಾಜಕೀಯ ಅಖಾಡದಲ್ಲಿ ನಕಲಿ ಅಭ್ಯರ್ಥಿಗಳ ಸೌಂಡ್ ಜೋರು: ಅಖಾಡದಲ್ಲಿ ನಕಲಿ ರಾಹುಲ್ ಗಾಂಧಿ, ಪಿಎಸ್ ಯಡಿಯೂರಪ್ಪ
- Technology ಒಪ್ಪೋ ಸಂಸ್ಥೆಯ ಈ ಫೋನ್ ಬೆಲೆಯಲ್ಲಿ ಭರ್ಜರಿ ಇಳಿಕೆ; ಆಫರ್ಗೆ ಗ್ರಾಹಕರು ಫಿದಾ!
- Sports ಐಪಿಎಲ್ನಿಂದ ದೂರವುಳಿದಿದ್ದ ಟೀಮ್ ಇಂಡಿಯಾ ವೇಗಿ ಟಿ20 ವಿಶ್ವಕಪ್ ಆಡುತ್ತಾರಾ?: ಆಟಗಾರ ಹೇಳಿದ್ದೇನು?
- Movies Sathya ; ಸತ್ಯಾ ತವರು ಮನೆಗೆ ಅವಮಾನ ಮಾಡಿದ ಕೀರ್ತನ..!
- Finance Bengaluru Rain:ಬಿಸಿಗಾಳಿ ಹೆಚ್ಚಳದಿಂದ ಬೆಂಗಳೂರು ನಗರಕ್ಕೆ ಅಧಿಕ ಮಳೆ, ಐಎಂಡಿ ಹೇಳಿದ್ದೇನು?
- Lifestyle ಜೀವ ಸಂಗಾತಿಗೆ ಹುಟ್ಟು ಹಬ್ಬದಂದು ವಿಶ್ ಮಾಡಲು ಸುಂದರ ಸಾಲುಗಳ ಗ್ರೀಟಿಂಗ್ಸ್ ಇಲ್ಲಿದೆ
- Education ವರ್ಧಿತ ಉತ್ಪಾದಕತೆಗಾಗಿ ಪ್ರತಿಯೊಬ್ಬರೂ ಕಲಿಯಬೇಕಾದ 10 ಅಗತ್ಯ ಕೌಶಲ್ಯಗಳು
- Travel Bengaluru to Ayodhya: ಬೆಂಗಳೂರಿನಿಂದ ಅಯೋಧ್ಯೆ ತಲುಪುವುದು ಹೇಗೆ? ನೀವಲ್ಲಿ ನೋಡಲೇಬೇಕಿರುವ ಸ್ಥಳಗಳು ಯಾವವು? ಮಾಹಿತಿ
ಅಟಲ್ ಸುರಂಗದೊಳಗಿನ ಅಪಘಾತಗಳನ್ನು ತಡೆಯಲು ಮುಂದಾದ ಪೊಲೀಸರು
ಪ್ರಧಾನಿ ನರೇಂದ್ರ ಮೋದಿ ಅಕ್ಟೋಬರ್ 3ರಂದು ಹಿಮಾಚಲ ಪ್ರದೇಶದಲ್ಲಿರುವ ವಿಶ್ವದ ಅತಿ ಉದ್ದದ ಅಟಲ್ ಸುರಂಗವನ್ನು ಉದ್ಘಾಟಿಸಿದ್ದರು. ಈ ಭಾಗದ ಜನರ ಕನಸಾಗಿದ್ದ ಈ ಸುರಂಗವು ಜಾಗತಿಕವಾಗಿ ಭಾರತದ ಹೆಮ್ಮೆಯನ್ನು ಮತ್ತಷ್ಟು ಹೆಚ್ಚಿಸಿದೆ.
ಭಾರತದ ಹೆಮ್ಮೆಯಾದ ಈ ಸುರಂಗದೊಳಗೆ ಉದ್ಘಾಟನೆಯಾದ ಮೂರೇ ದಿನಗಳಲ್ಲಿ ಮೂರು ಅಪಘಾತಗಳು ಸಂಭವಿಸಿದೆ. ಅಟಲ್ ಸುರಂಗದೊಳಗೆ ವಾಹನ ಸವಾರರು ಸಂಚಾರ ನಿಯಮಗಳನ್ನು ಉಲ್ಲಂಘಿಸಿ ವಾಹನ ಚಾಲನೆ ಮಾಡಿರುವುದೇ ಈ ಮೂರು ಅಪಘಾತಗಳಿಗೆ ಕಾರಣವಾಗಿದೆ.
ಈ ಅಪಘಾತಗಳು ಸಂಭವಿಸಿದ ನಂತರವೂ ಎಚ್ಚೆತ್ತಿ ಕೊಳ್ಳದ ವಾಹನ ಸವಾರರು ಇನ್ನೂ ಸಹ ಅಟಲ್ ಸುರಂಗದೊಳಗೆ ಅಡ್ಡಾ ದಿಡ್ಡಿಯಾಗಿ ವಾಹನ ಚಾಲನೆ ಮಾಡುತ್ತಿದ್ದಾರೆ ಎಂದು ವರದಿಯಾಗಿದೆ.
MOST READ:ಒಂದು ವರ್ಷದಿಂದ ಚಲಿಸಿದರೂ ಇನ್ನೂ ಗುರಿ ಮುಟ್ಟದ ಟ್ರಕ್
ನಿಯಮಗಳ ಪ್ರಕಾರ ಅಟಲ್ ಸುರಂಗದಲ್ಲಿ ಪ್ರತಿ ಗಂಟೆಗೆ 80 ಕಿ.ಮೀ ವೇಗದಲ್ಲಿ ಸಾಗಬೇಕು. ಆದರೆ ಈ ವೇಗದ ಮಿತಿ ನಿಯಮವನ್ನು ಕಡೆಗಣಿಸಿರುವ ವಾಹನ ಸವಾರರು ಅಜಾಗರೂಕತೆಯಿಂದ ವಾಹನ ಚಲಾಯಿಸುತ್ತಿದ್ದಾರೆಂದು ಹೇಳಲಾಗಿದೆ.
ಇಷ್ಟು ಸಾಲದೆಂಬಂತೆ ಕೆಲವರು ಅಟಲ್ ಸುರಂಗದೊಳಗೆ ವಾಹನಗಳನ್ನು ನಿಲುಗಡೆ ಮಾಡಿ ಸೆಲ್ಫಿ ತೆಗೆದುಕೊಳ್ಳುತ್ತಿರುವ ಬಗ್ಗೆಯೂ ವರದಿಯಾಗಿದೆ. ಈ ಹಿನ್ನೆಲೆಯಲ್ಲಿ 30ಕ್ಕೂ ಹೆಚ್ಚು ಪೊಲೀಸರನ್ನು ಅಟಲ್ ಸುರಂಗದೊಳಗೆ ನಿಯೋಜಿಸಲಾಗಿದೆ.
MOSTREAD: ಇನ್ನು ಮುಂದೆ ಈ ಬಣ್ಣದ ಕಾರುಗಳ ನೋಂದಣಿ ಕಾನೂನುಬದ್ದ
ಸುರಂಗದ ದಕ್ಷಿಣ ಭಾಗದ ಬಾಲ್ಜಾನ್ ಬಳಿ ವಾಹನ ಚಾಲಕರ ಸುರಕ್ಷತೆಗಾಗಿ ಪೊಲೀಸರನ್ನು ನಿಯೋಜಿಸಲಾಗಿದೆ ಎಂದು ಹಿಮಾಚಲ ಪ್ರದೇಶದ ಕುಲು ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಸಿಂಗ್ ತಿಳಿಸಿದ್ದಾರೆ. ಯಾವುದೇ ಕಾರಣಕ್ಕೂ ಯಾವುದೇ ವಾಹನವನ್ನು ಸುರಂಗದೊಳಗೆ ನಿಲ್ಲಿಸುವಂತಿಲ್ಲ.
ಯಾರಾದರೂ ನಿಯಮಗಳನ್ನು ಉಲ್ಲಂಘಿಸುತ್ತಿರುವುದು ಕಂಡುಬಂದಲ್ಲಿ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ ಎಂದು ಗೌರವ್ ಸಿಂಗ್ ಹೇಳಿದರು. ವೇಗವಾಗಿ ಚಲಿಸುವ ವಾಹನಗಳ ಪತ್ತೆಗಾಗಿ ಸುರಂಗದೊಳಗೆ ಡಾಪ್ಲರ್ ರಾಡಾರ್ ಎಂಬ ವಾಹನ ವೇಗ ಪತ್ತೆಕಾರಕವನ್ನು ಬಳಸಲಾಗುವುದು ಎಂದು ಗೌರವ್ ಸಿಂಗ್ ಹೇಳಿದ್ದಾರೆ.
MOSTREAD: ಟೊಯೊಟಾ ಇನೋವಾ ಕ್ರಿಸ್ಟಾ ಕಾರಿನ ರೂಫ್ ಸೀಳಿದ ಬಂಡೆ
ಕುಲು ಹಾಗೂ ಲಾಹಲ್-ಸ್ಪಿಟಿ ನಗರ ಪೊಲೀಸರು ಈ ಕಾರ್ಯಾಚರಣೆಯಲ್ಲಿ ಭಾಗಿಯಾಗಲಿದ್ದಾರೆ. ನಿಯಮಗಳನ್ನು ಉಲ್ಲಂಘಿಸುವವರಿಗೆ ತಕ್ಷಣವೇ ಶಿಕ್ಷೆ ವಿಧಿಸಲು ಬೈಕ್ ಗಳಲ್ಲಿಯೂ ಪೊಲೀಸರು ಗಸ್ತು ತಿರುಗಲಿದ್ದಾರೆ.
ರಸ್ತೆ ಅಪಘಾತ ಹಾಗೂ ಸಂಚಾರಿ ನಿಯಮಗಳ ಉಲ್ಲಂಘನೆಗಳ ಬಗ್ಗೆ ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಲು ಎಸ್ಪಿ ಗೌರವ್ ಸಿಂಗ್ ತಮ್ಮ ದೂರವಾಣಿ ಸಂಖ್ಯೆಯನ್ನು ಸಾರ್ವಜನಿಕರಿಗೆ ನೀಡಿದ್ದಾರೆ.
MOSTREAD: ನ್ಯಾನೋ ಕಾರಿಗೆ ಗುದ್ದಿ ಅಪ್ಪಚ್ಚಿಯಾದ ಹೋಂಡಾ ಸಿಟಿ ಕಾರು
ಸುರಂಗವು ಉದ್ಘಾಟನೆಯಾದ ನಂತರ ಸುರಂಗದೊಳಗೆ ಬೈಕ್ ರೇಸಿಂಗ್ ನಡೆಯುತ್ತಿದೆ ಎಂದು ವರದಿಗಳಾಗಿದ್ದವು. ಈಗ ಅಟಲ್ ಸುರಂಗದಲ್ಲಿ ಅತ್ಯಾಧುನಿಕ ಉಪಕರಣಗಳನ್ನು ಹೊಂದಿರುವ ಪೊಲೀಸರನ್ನು ನಿಯೋಜಿಸಲಾಗಿರುವುದರಿಂದ ಸಂಚಾರಿ ನಿಯಮಗಳ ಉಲ್ಲಂಘನೆಯು ಕಡಿಮೆಯಾಗಿ ಅಪಘಾತಗಳು ತಪ್ಪುವ ನಿರೀಕ್ಷೆಗಳಿವೆ.